ವಿಷಯಕ್ಕೆ ಹೋಗಿ

ಶಿರಡಿ ಟ್ರಸ್ಟ್ ನಿಂದ ಜನಪರ ಕಾರ್ಯ: ಸಂಸದ ಶ್ಲಾಘನೆ

ಗ್ರಾಮೀಣ ಪ್ರದೇಶದಲ್ಲಿ ಶಿರಡಿ ಟ್ರಸ್ಟ್ ‘ಾರ್ಮಿಕ,ಸಾಮಾಜಿಕ,ಆರೋಗ್ಯ ಸೇರಿದಂತೆ ಇತರ ಜನಪರ ಯೋಜನೆಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
ಬೋರನಕಣಿವೆ ಬಳಿಯ ಶಿರಿಡಿ ಸಾಯಿಬಾಬಾ ಇಂರ್ಟ ನ್ಯಾಷನಲ್ ಟ್ರಸ್ಟ್ ವತಿಯಿಂದ ‘ಾನುವಾರ ಏರ್ಪಡಿಸಿದ್ದ ಆರೋಗ್ಯ ಚೇತನ ಕಾರ್ಯಕ್ರಮದಡಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಮುಂದೆ ಇಲ್ಲಿ ನಡೆಯುವ ಯಾವುದೇ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ‘ರವಸೆ ನೀಡಿದರು.ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳಿಗೆ ತಮ್ಮ ನೆರವಿನ ಹಸ್ತ ಸದಾಯಿರುತ್ತದೆಂದರು
ಹುಳಿಯಾರು ಹೋಬಳಿ ಬೋರನಕಣಿವೆ ಬಳಿಯ ಶಿರಿಡಿ ಸಾಯಿಬಾಬಾ ಇಂರ್ಟ ನ್ಯಾಷನಲ್ ಟ್ರಸ್ಟ್ ವತಿಯಿಂದ ‘ಾನುವಾರ ಏರ್ಪಡಿಸಿದ್ದ ಆರೋಗ್ಯ ಚೇತನ ಕಾರ್ಯಕ್ರಮವನ್ನು ಸಂಸದ ಎಸ್.ಪಿ.ಮುದ್ದಹನುಮೇಗೌಡ ಉದ್ಘಾಟಿಸಿದರು. ಮುಖಂಡರಾದ ದೇವೇಂದ್ರ, ದಸೂಡಿ ರಂಗಸ್ವಾಮಿ,ಸಾಸಲು ಸತೀಶ್,ರುದ್ರೇಶ್, ವೆಂಕಟೇಶ್, ಶೇಷಾನಾಯ್ಕ, ಶ್ರೀನಿವಾಸಮೂರ್ತಿ ಮುಂತಾದವರಿದ್ದರು.
ಪ್ರಸ್ತುತ ಸನ್ನಿವೇಶದಲ್ಲಿ ನೀರಿನ ವಿಷಯ ಸೂಕ್ಷ್ಮವಾಗಿದ್ದು ಎಲ್ಲರಲ್ಲೂ ಬದ್ಧತೆ ಪ್ರದರ್ಶನ ಬಹು ಮುಖ್ಯವಾಗಿದೆ ಎಂದರು. ಕರ್ನಾಟಕ ಹಾಗೂ ತಮಿಳುನಾಡುವಿನಲ್ಲಿ ವಿವಾದಕ್ಕೆ ಕಾರಣವಾಗಿರುವ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪಿಸಿದ ಅವರು ಕರ್ನಾಟಕದಿಂದ ಹೆಚ್ಚುವರಿಯಾಗಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನು ತಡಗಟ್ಟಿ ಬಳಕೆ ಮಾಡಿಕೊಳ್ಳಲು ತಮಿಳುನಾಡು ತಗಾದೆ ತೆಗೆಯುತ್ತಿರುವುದರಲ್ಲಿ ಅರ್ಥವಿಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸ‘ೆಯಲ್ಲಿ ಪ್ರ‘ಾನಿ ಸೇರಿದಂತೆ ವಿವಿ‘ ಸಚಿವರು ‘ಾಗವಹಿಸಿದ್ದ ವೇಳೆ ರಾಜ್ಯಗಳಲ್ಲಿ ಮೇಕೆದಾಟು ಯೋಜನೆಯ ವಿವಾದವನ್ನು ಬಗೆಹರಿಸಿ ಎಂಬ ನನ್ನ ಮನವಿಗೆ ಅವರು ಕಿವಿಗೊಡಲಿಲ್ಲ ಎಂದು ವಿಷಾದಿಸಿದರು.
ಕಾಂಗ್ರೆಸ್ ಮುಖಂಡ ಸಾಸಲು ಸತೀಶ್, ಡಾ.ರಮೇಶ್ ಬಾಬು ಮಾತನಾಡಿದರು. ವೈದ್ಯರಾದ ರಮೇಶ್ ಬಾಬು, ಸ್ಮಿತಾ ರಮೇಶ್ ಬಾಬು, ಅಜಯ್ ಕುರ್ಮಾ ಅವರುಗಳ ತಂಡ ಕ್ಯಾರ್ನ್ಸ ರೋಗದ ಬಗ್ಗೆ ತಪಾಸಣೆ ನಡೆಸಿದರು. ಶಿರಿಡಿ ಟ್ರಷ್ಟ್ ಕಾರ್ಯದರ್ಶಿ ವಿಠಲ್ ಸ್ವಾಗತಿಸಿ, ಶ್ರೀನಿವಾಸಮೂರ್ತಿ ವಂದಿಸಿದರು. ಟ್ರಸ್ಟ್ ಆರೋಗ್ಯ ಚೇತನ ಸಂಚಾಲಕ ದೇವೇಂದ್ರ ಪ್ರಸ್ತಾವಿಕವಾಗಿ ಮಾತನಾಡಿದರು.

ತಾ.ಪಂ ಸದಸ್ಯೆ ಕವಿತಾ, ಎಪಿಎಂಸಿ ನಿರ್ದೇಶಕರಾದ ಯಳನಡು ಸಿದ್ದರಾಮಯ್ಯ, ಡಿ.ರ್ಆ.ರುದ್ರೇಶ್, ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅ‘್ಯಕ್ಷ ಕೆ.ಜಿ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಶೇಷಾನಾಯ್ಕ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕರಾದ ಕೆ.ಸಿ.ಶಿವಕುರ್ಮಾ, ಬೆಳ್ಳಾರದ ಈರಯ್ಯ, ಬರ್ಗ ಹುಕುಂ ಸಮಿತಿ ಸದಸ್ಯ ಅಶೋಕ್, ತಾಲ್ಲೂಕು ಶಿಕ್ಷಕರ ಸಂಘದ ಅ‘್ಯಕ್ಷ ಹೊಯ್ಸಳಕಟ್ಟೆ ಪ್ರಕಾಶ್, ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ರಾಜಣ್ಣ, ಮಾಜಿ ಜಿ.ಪಂ ಸದಸ್ಯ ರಾಮಚಂದ್ರಯ್ಯ, ಮಾಜಿ ತಾಲ್ಲೂಕ್ ಬೋರ್ಡ್ ಸದಸ್ಯ ದಸೂಡಿ ರಂಗಸ್ವಾಮಿ ಇತರರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...