ವಿಷಯಕ್ಕೆ ಹೋಗಿ

ರಾಗಿಕೊಳ್ಳುವಿಕೆ ನಿಲ್ಲಿಸಿದ ರಾಗಿ ಖರೀದಿ ಕೇಂದ್ರ ಒಂದೇ ದಿನದಲ್ಲಿ ಕ್ವಿಂಟಾಲ್ ರಾಗಿಗೆ ೮೦೦ರೂ ಇಳಿತ

ವರದಿ:ಡಿ.ಆರ್.ನರೇಂದ್ರಬಾಬು
--------
ಹುಳಿಯಾರು : ರಾಗಿ ಬೆಲೆಯ ಕುಸಿತದ ಹಿನ್ನಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರಾರಂಭವಾಗಿದ್ದ ರಾಗಿ ಖರೀದಿ ಕೇಂದ್ರದ ಅವಧಿ ಮಾರ್ಚ್ ೩೧ಕ್ಕೆ ಮುಗಿಯುತ್ತಿದ್ದಂತೆ ಎಪಿಎಂಸಿ ಮಾರುಕಟ್ಟೆಯ ವರ್ತಕರು ರಾಗಿ ಬೆಲೆಯನ್ನು ಒಂದೇದಿನದಲ್ಲಿ ಸುಮಾರು ೮೦೦ರೂ ದಿಢೀರ್ ಇಳಿಕೆ ಮಾಡಿದ್ದಾರೆ.
ರೂಪಾಯಿ ಎರಡುಸಾವಿರಕ್ಕೆ ಖರೀದಿ ಕೇಂದ್ರಗಳಲ್ಲಿ ಕೊಳ್ಳಲಾಗುತ್ತಿದ್ದ ರಾಗಿಗೆ ಮಾರ್ಚ್ ೩೧ ರಂದು ಅಂತಿಮ ಖರೀದಿ ನಡೆದು ಕೇಂದ್ರ ಬಾಗಿಲು ಮುಚ್ಚಿದ ಬೆನ್ನಲ್ಲೆ ಒಂದೇ ದಿನದಲ್ಲಿ ರಾಗಿ ಬೆಲೆ ಕುಸಿತಕಂಡು ಕ್ವಿಂಟಲ್ ೧೩೦೦-೧೪೦೦ರ ಅಸುಪಾಸಿನಲ್ಲಿದೆ. ದಿಢೀರ್ ಕುಸಿತದಿಂದ ಕಂಗಾಲಾಗಿರುವ ರೈತ ಮತ್ತೆ ಖರೀದಿ ಕೇಂದ್ರದ ಅವಧಿ ವಿಸ್ತರಣೆಯ ನಿರೀಕ್ಷೆಯಲ್ಲಿದ್ದಾನೆ.
ಹಿನ್ನಲೆ : ರಾಗಿ ಬೆಲೆ ತೀವ್ರ ಕುಸಿತಕಂಡ ಹಿನ್ನಲೆಯಲ್ಲಿ ಸರ್ಕಾರ ಕಳೆದ ಡಿಸೆಂಬರ್ ೧೫ ರಂದೇ ಜಿಲ್ಲೆಯ ೧೦ ಎಪಿಎಂಸಿಗಳಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸಿ ರೈತರ ಬೆಂಬಲಕ್ಕೆ ಮುಂದಾಗಿತ್ತು. ಉತ್ತಮ ಗುಣಮಟ್ಟದ ರಾಗಿಗೆ ಪ್ರತಿ ಕ್ವಿಂಟಲ್ ಗೆ ರೂ.೧೫೫೦ ಹಾಗೂ ಪ್ರೋತ್ಸಾಹ ಧನ ರೂ.೪೫೦ ನೀಡಿ ಪ್ರತಿ ಕ್ವಿಂಟಾಲ್ ಗೆ ರೂ.೨೦೦೦ ದಂತೆ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಮೂಲಕ ಖರೀದಿ ಪ್ರಾರಂಭಿಸಿತು.
ಮಾರುಕಟ್ಟೆ ದರ ೧೨೦೦ ರಿಂದ ೧೪೦೦ರ ಆಸುಪಾಸಿನಲ್ಲಿದ್ದಾಗ ಕೇಂದ್ರದಲ್ಲಿ ೨೦೦೦ ರೂಪಾಯಿನಂತೆ ಕೊಳ್ಳಲು ಆರಂಭಿಸಿದ್ದರಿಂದ ರೈತರು ಖರೀದಿ ಕೇಂದ್ರದತ್ತ ಮುಖಮಾಡಿದರು. ಪ್ರಾರಂಭದಲ್ಲಿ ಬೆಳೆ ಪಹಣಿ, ರಾಗಿ ಇಳುವರಿ ದೃಢೀಕರಣ ಪತ್ರ, ರಾಗಿ ಮಾದರಿ ದೃಢೀಕರಣ, ಬ್ಯಾಂಕ್ ಖಾತೆ ಸಂಖ್ಯೆ ಮುಂತಾದ ಸಮಸ್ಯೆಗಳಿಂದಾಗಿ ಪ್ರಾರಂಭದ ಕೆಲ ದಿನಗಳು ಖರೀದಿ ಕುಂಟುತ್ತಾ ಸಾಗಿತ್ತು.
ರಾಗಿ ಖರೀದಿ ಕೇಂದ್ರ ಮುಚ್ಚಿದ್ದು ಕಡಿಮೆ ಬೆಲೆಗೆ ಮಾರಾಟ ಮಾಡಲು ರೈತರು ಮುಂದಾಗದೆ ಹಿನ್ನಲೆಯಲ್ಲಿ ಎಪಿಎಂಸಿ ಬಣಗುಟ್ಟುತ್ತಿರುವುದು.
ನಂತರದ ದಿನದಲ್ಲಿ ಖರೀದಿ ಹೆಚ್ಚಾಗುತ್ತಾ ಕಡೆದಿನಗಳಲ್ಲಿ ಸಂಜೆವರೆಗೂ ಕೊಂಡರೂ ಕುಗಿಯದಷ್ಟು ರಾಗಿ ಕೇಂದ್ರಕ್ಕೆ ಬಂದಿತ್ತು. ಸಮಯ ಮುಗಿದಿದ್ದರಿಂದ ಹೆಚ್ಚಿನ ರೈತರು ವಾಪಸ್ಸಾದ ಘಟನೆ ಕೂಡ ನಡೆಯಿತು.
ಸಾಮಾನ್ಯವಾಗಿ ಬೆಲೆ ಕುಸಿತಕಂಡಾಗ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಮುಂದಾಗುವ ಸರ್ಕಾರ ಸೀಮಿತ ಅವಧಿಯವರೆಗೆ ಖರೀದಿ ಕೇಂದ್ರ ತೆರೆದಿರುತ್ತದೆ.ಅಷ್ಟರೊಳಗೆ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗುವುದರಿಂದ ಖರೀದಿ ಕೇಂದ್ರ ಮುಚ್ಚಲ್ಪಟ್ಟರು ರೈತರಿಗೆ ಸಮಸ್ಯೆ ಎದುರಾಗುವುದಿಲ್ಲ. ಇದೀಗ ಖರೀದಿ ಕೇಂದ್ರ ನಿಂತ ಒಂದೇ ದಿನದಲ್ಲಿ ಬೆಲೆ ಸ್ಥಿರವಾಗುವ ಬದಲು ತೀವ್ರ ಇಳಿಕೆಯಾಗಿರುವುದು ರೈತರ ಆತಂಕಕ್ಕೀಡು ಮಾಡಿದೆ. ಇನ್ನೂ ಕೆಲ ದಿನ ವಿಸ್ತರಣೆ ಮಾಡಲಿ ಎಂಬ ಒತ್ತಾಯಕ್ಕೆ ಕಾರಣವಾಗಿದೆ.
ಮಧ್ಯವರ್ತಿಗಳ ಹಾವಳಿ : ಖರೀದಿ ಕೇಂದ್ರದಲ್ಲಿ ಗುಣಮಟ್ಟ ಹಾಗೂ ದಾಖಲೆಗಳ ನೀಡುವಿಕೆಯಲ್ಲಿ ಹೈರಾಣಾಗುವ ರೈತರು ಮಧ್ಯವರ್ತಿಗಳನ್ನು ಅವಲಂಭಿಸುವುದು ಸಹಜವಾಗಿದ್ದು ಇದನ್ನೇ ಮಧ್ಯವರ್ತಿಗಳು ಬಂಡವಾಳ ಮಾಡಿಕ್ಕೊಂಡಿದ್ದು, ರೈತರ ದಾಖಲೆಗಳನ್ನು ಪಡೆಯುವ ಇವರು ಇದರೊಂದಿಗೆ ತಮ್ಮ ರಾಗಿಯನ್ನು ಮಾರಾಟಮಾಡಿಕೊಂಡಿರುವುದು ಇಲ್ಲಿ ಗುಟ್ಟಾಗಿಯೇನು ಉಳಿದಿಲ್ಲ.
ಒತ್ತಾಯ : ಈ ಬಾರಿ ಉತ್ತಮ ಮಳೆಯಾಗಿ ರಾಗಿ ಹುಲುಸಾಗಿ ಬೆಳೆದ ಹಿನ್ನಲೆಯಲ್ಲಿ ಸಾಕಷ್ಟು ರೈತರಲ್ಲಿ ರಾಗಿ ಯತೇಚ್ಚವಾಗಿದೆ ಇದೆ.ಕಳೆದೆರಡು ದಿನಗಳಿಂದ ಮಾರುಕಟ್ಟೆಯಲ್ಲಿ ಮಿರಿಮಿರಿ ಮಿಂಚುವ ಉತ್ತಮ ರಾಗಿಗೆ ೧೪೦೦ ರೂ ಬೆಲೆಯಿದ್ದು ಸಾಮಾನ್ಯರಾಗಿಗೆ ೧೨೦೦ರೂ ನಂತೆ ಮಾರಾಟವಾಗುತ್ತಿದೆ. ಸಾಗಾಣಿಕವೆಚ್ಚ ,ಕೂಲಿ ಲೆಖ್ಖಹಾಕಿದಲ್ಲಿ ರೈತರಿಗೆ ಚಿಕ್ಕಾಸು ಉಳಿಯುವುದು ಕಷ್ಟವಾಗಿದೆ. ವರ್ತಕರ ಕಪಿಮುಷ್ಟಿಯಲ್ಲಿರುವ ಹುಳಿಯಾರು ಎಪಿಎಂಸಿಯಲ್ಲಿ ರೈತರಿಗೆ ಬಾರಿ ಅನ್ಯಾಯವಾಗುತ್ತಿದ್ದು ಸರ್ಕಾರ ಕನಿಷ್ಠ ಹದಿನೈದು ದಿನಗಳವರೆಗಾದರೂ ಖರೀದಿ ಕೇಂದ್ರದ ಅವಧಿ ವಿಸ್ತರಣೆ ಮಾಡಿದಲ್ಲಿ ರೈತರಿಗೆ ಅನುಕೂಲವಾಗಲಿದೆ.
------------------------
ಮಾರುಕಟ್ಟೆಯಲ್ಲಿ ವಸ್ತುಗಳು ದಿನೇದಿನೇ ಏರು ಮುಖವಾಗುತ್ತಿದ್ದರೆ ರೈತರು ಬೆಳೆಯುವ ರಾಗಿಗೆ ಮಾತ್ರ ಉತ್ತಮ ಬೆಲೆ ಸಿಗುತ್ತಿಲ್ಲ. ಸರ್ಕಾರ ಎಷ್ಟೇ ಬಿಗಿ ಮಾಡಿದರೂ ಖರೀದಿ ಕೇಂದ್ರಗಳಲ್ಲಿ ರೈತರಿಗಿಂತ ವರ್ತಕರಿಗೆ ಹೆಚ್ಚು ಅನುಕೂಲ. ವರ್ತಕರು ರೈತರ ಹೆಸರಿನಲ್ಲಿ ತರುವ ರಾಗಿಯನ್ನು ಸಬೂಬಿಲ್ಲದೆ ಕೊಳ್ಳುವ ಅಧಿಕಾರಿಗಳು, ಖುದ್ದು ರೈತರೇ ಮಾರಾಟ ಮಾಡಲು ಹೋದಾಗ ಗುಣಮಟ್ಟ ಸರಿಯಿಲ್ಲ ಎಂದು ತಿರಸ್ಕರಿಸುವುದು ಸರಿಯಲ್ಲ : ಶಿವಣ್ಣ ರೈತ.
---------------
ಖರೀದಿ ಕೇಂದ್ರದಲ್ಲಿ ಜನವರಿ ೨೨ರಿಂದ ಮಾರ್ಚ್ ೩೧ರವರೆಗೂ ನಡೆದ ಖರೀದಿಯಲ್ಲಿ ೧೨,೫೪೨ ಕ್ವಿಂಟಾಲ್ ರಾಗಿ ಖರೀದಿ ನಡೆದಿದೆ. ೫೬೯ ರೈತರು ಇದರ ಪ್ರಯೋಜನ ಪಡೆದಿದ್ದಾರೆ : ಕೇಂದ್ರದ ಮೇಲ್ವಿಚಾರಕ ಬಸವರಾಜು.
----------------------------

ಹೋಬಳಿಯ ಹುಳಿಯಾರು,ದೊಡ್ಡಬಿದರೆ,ತಿರುಮಲಾಪುರ,ಯಳನಡು,ಕೆಂಕೆರೆ, ಗಾಣಧಾಳು, ದಸೂಡಿ, ದಬ್ಬಗುಂಟೆ, ಬರಕನಾಹಾಲ್,ಕೋರಗೆರೆ,ಸೀಗೆಬಾಗಿ ಮುಂತಾದ ಭಾಗದಲ್ಲಿ ಬಂಪರ್ ಬೆಳೆಯಾಗಿದೆ. ಕೃಷಿ ಇಲಾಖೆ ಮೂಲದ ಪ್ರಕಾರ ೮೫೦೦ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಬಂದಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.