ವಿಷಯಕ್ಕೆ ಹೋಗಿ

ಅನಧಿಕೃತ ಸಂಪರ್ಕ ಮೌನವಹಿರುವ ಇಲಾಖೆ ರೈತರಿಂದ ಠೇವಣಿ ವಸೂಲಿ ಹುನ್ನಾರ : ಪಂಪ್ ಸೆಟ್ ದಾರರ ಆರೋಪ

ವರದಿ : ಡಿ.ಆರ್.ನರೇಂದ್ರಬಾಬು
------------
ಹುಳಿಯಾರು : ಆಕ್ರಮ-ಸಕ್ರಮದಡಿ ಅನಧಿಕೃತ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗಳಿಸಿಕೊಳ್ಳುವಂತೆ ಮಾರ್ಚ್ ೩೧ ಅಂತಿಮ ಗಡುವು ನೀಡಿ ಮತ್ತೆ ವಿಸ್ತರಣೆ ಪ್ರಶ್ನೆಯೇ ಇಲ್ಲ ನಂತರದ ದಿನದಿಂದಲೆ ಸಕ್ರಮ ಮಾಡಿಕೊಳ್ಳದವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಬೆಸ್ಕಾಂ ಇದೀಗ ಮತ್ತೆ ಮೇ.೧೫ರ ವರೆಗೆ ಸಕ್ರಮಕ್ಕೆ ಗಡುವು ನೀಡಿದೆ.

ಆಕ್ರಮ-ಸಕ್ರಮದಡಿ ರೈತರು ಅರ್ಜಿಸಲ್ಲಿಸಿ ತಮ್ಮ ಬೋರ್ ವೆಲ್ ಗಳನ್ನು ಸಕ್ರಮಗಳಿಸಿಕೊಂಡಲ್ಲಿ ಸಮರ್ಪಕ ವಿದ್ಯುತ್ ಸಂಪರ್ಕ ಕೊಡುವುದಾಗಿ ಹೇಳುತ್ತಾ ಸಾಗುತ್ತಿದ್ದಾರೆ ಹೊರತು ಇದುವರೆಗೂ ಸಕ್ರಮಗಳಿಕೊಂಡವರಿಗೆ ಯಾವುದೇ ರೀತಿಯ ಸೌಲಭ್ಯ ಮಾತ್ರ ದೊರೆತಿಲ್ಲ.ಜೊತೆಗೆ ಆಕ್ರಮ ಸಂಪರ್ಕ ಪಡೆದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡ ಉದಾಹರಣೆಯಿಲ್ಲ. ಬಹುತೇಕ ಮಂದಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡು ಪಂಪ್ ಸೆಟ್ ಗಳನ್ನು ಓಡಿಸುತ್ತಿದ್ದು ಗೊತ್ತಿದ್ದರೂ ಕಂಡುಕಾಣದಂತೆ ಇಲಾಖೆ ವರ್ತಿಸುತ್ತಿದೆ.
ಪ್ರಸ್ತುತದಲ್ಲಿ ಮಳೆಯ ಕೊರತೆಯಿಂದಾಗಿ ರೈತರು ಹೊಲ,ಗದ್ದೆ,ತೋಟಗಳಿಗೆ ಬೋರ್ ವೆಲ್ ಗಳನ್ನೆ ಆಶ್ರಯಿಸಿದ್ದಾರೆ. ಇಂತಹ ಸನ್ನಿವೇಶದಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡುವಲ್ಲಿ ಇಲಾಖೆ ವಿಫಲವಾಗಿದ್ದು ಕೇವಲ ೨ ರಿಂದ ೩ ಗಂಟೆ ಅದೂ ರಾತ್ರಿ ಸಮಯದಲ್ಲಿ ಕೊಡಲಷ್ಟೆ ಶಕ್ತವಾಗಿದೆ. ಹಳ್ಳಿಪ್ರದೇಶಗಳಲ್ಲಿ ಒಂದೊಂದು ಟಿಸಿ ಗಳಲ್ಲೂ ಮೂರ್ನಾಲ್ಕು ಸಂಪರ್ಕ ಸಕ್ರಮವಿದ್ದರೆ ಹತ್ತಕ್ಕು ಹೆಚ್ಚು ಆಕ್ರಮ ಸಂಪರ್ಕವಿದೆ. ಆಕ್ರಮ ಸಕ್ರಮಡಿ ಹಣ ಪಾವತಿ ಮಾಡಿದವರೂ ಹಾಗೂ ಹಣಕಟ್ಟದ ಇಬ್ಬರೂ ಸಹ ಒಂದೇ ಟಿಸಿಯಲ್ಲಿ ಸಂಪರ್ಕ ಹೊಂದಿದ್ದಾರೆ. ಆಕ್ರಮ-ಸಕ್ರಮದಡಿ ಹಣಕಟ್ಟಿದ್ದರ ಪ್ರಯೋಜನ ಮಾತ್ರ ಏನು ಎಂಬುದು ತಿಳಿಯಾದಾಗಿ ಎನ್ನುತ್ತಾರೆ ಕೆಲ ರೈತರು. ಈ ಬಗ್ಗೆ ಇಲಾಖೆಯವರು ಜಾಣಕುರುಡು ಪ್ರದರ್ಶಿಸಿ ಮೌನವಹಿಸಿದ್ದಾರೆ.
ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ಆಕ್ರಮ-ಸಕ್ರಮದಡಿ ಜುಲೈ೨೦೧೩ ರಿಂದ ಮಾರ್ಚ್ ೨೦೧೫ ರವರ ಅವಧಿಯಲ್ಲಿ ಒಟ್ಟು ೪೫೬ ಜನ ಮಾತ್ರ ಹಣಕಟ್ಟಿ ಸಕ್ರಮಗೊಳಿಸಿಕೊಂಡಿದ್ದು, ಇನ್ನೂ ಸಾವಿರಾರು ಮಂದಿ ಆಕ್ರಮವಾಗಿ ವಿದ್ಯುತ್ ಸಂಪರ್ಕ ಹೊಂದಿದ್ದಾರೆ. ಹಲವಾರು ಬಾರಿ ಆಕ್ರಮ-ಸಕ್ರಮದಡಿ ಪಂಪ್ ಸೆಟ್ ಗಳನ್ನು ನೊಂದಾಯಿಸಿಕೊಳ್ಳಿ ಎಂದು ಇಲಾಖೆ ಹಣ ಕಟ್ಟಿಸಿಕೊಳ್ಳುತ್ತಿದೆ ಹೊರತು ಆಕ್ರಮವಾಗಿ ಸಂಪರ್ಕ ಹೊಂದಿದವರ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ.
ಆಕ್ರಮ-ಸಕ್ರಮದಡಿ ಹಣ ಕಟ್ಟಿದರೆ ಉತ್ತಮ ವಿದ್ಯುತ್ ನೀಡುತ್ತೇವೆ, ಹಣಕಟ್ಟದಿದ್ದರೆ ವಿದ್ಯುತ್ ಸಂಪರ್ಕ ಕಟ್ ಮಾಡುವುದಾಗಿ ತಿಳಿಸುವ ಅಧಿಕಾರಿಗಳು, ನಮ್ಮಿಂದ ಹಣಕಟ್ಟಿಸಿಕೊಂಡಿದ್ದರೂ ಸಹ ಇದುವರೆಗೂ ಉತ್ತಮ ವೋಲ್ಟೇಜ್ ನ ವಿದ್ಯುತ್ ನೀಡಿಲ್ಲ, ಹಣಕಟ್ಟಿದವರೂ ,ಹಣಕಟ್ಟದವರೂ ಇಬ್ಬರೂ ಒಂದೇ ಟಿಸಿಗಳಲ್ಲಿ ಕನೆಕ್ಷನ್ ಹಾಕಿಕೊಂಡು ಪಂಪ್ ಸೆಟ್ ಚಲಾಯಿಸುತ್ತಿದ್ದು ಹಣಕಟ್ಟುವುದು ವ್ಯರ್ಥವಾಯಿತೇನೊ ಎಂಬುದು ಹಣಕಟ್ಟಿರುವ ರೈತರು ಪ್ರಶ್ನೆಯಾಗಿದೆ.
ಆಕ್ರಮ ಸಂಪರ್ಕದವರ ವಿರುದ್ದ ಕ್ರಮ ಏನು ಎಂದು ಬೆಸ್ಕಾಂನವರನ್ನು ಕೇಳಿದರೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮೇಲಾಧಿಕಾರಿಗಳು ಏನು ಹೇಳುತ್ತಾರೋ ಆ ರೀತಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಹತ್ತಾರು ವರ್ಷಗಳಿಂದ ಅನಧಿಕೃತವಾಗಿ ಪಂಪ್ ಸೆಟ್ ಗಳು ಓಡುತ್ತಲೆ ಇವೆ. ಈ ಬಾರಿಯೂ ಸಹ ಅದೇ ಪುನರಾವರ್ತನೆಯಾಗುತ್ತದೆಯೋ ಏನೋ. ನಾವು ಸಾವಿರಾರು ರೂ ಹಣ ಕಟ್ಟಿದ್ದು ವ್ಯರ್ಥವೆನೋ ಎಂದು ಈಗಾಗಲೇ ಹಣ ಕಟ್ಟಿ ನೋಂದಣಿ ಮಾಡಿಸಿಕೊಂಡವರು ಕೇಳುತ್ತಿದ್ದಾರೆ.
-------------

ಆಕ್ರಮ-ಸಕ್ರಮದಡಿ ಪಂಪ್ ಸೆಟ್ ಗಳನ್ನು ಸಕ್ರಮ ಮಾಡಿಕೊಳ್ಳುವ ಬಗ್ಗೆ ನಮಗೆ ಯಾವುದೇ ಮಾಹಿತಿ ಸರಿಯಾಗಿ ದೊರೆತಿಲ್ಲ. ಇದಕ್ಕಾಗಿ ೧೫ ಸಾವಿರ ಕಟ್ಟಬೇಕೆಂದು ಅವರಿವರು ಹೇಳಿದ್ದರು. ಈಗಾಗಲೇ ಸಾಲ ಮಾಡಿ ಬೋರ್ ಹಾಕಿಸಿರುವ ರೈತ ಬಳಿ ಅಷ್ಟೊಂದು ಹಣವೆಲ್ಲಿರುತ್ತೆ, ವಿದ್ಯುತ್ ಉಚಿತ ಎಂದು ಸರ್ಕಾರ ಹೇಳಿದ್ದು ಹಣಕಟ್ಟಿ ಎನ್ನುವುದು ರೈತರ ಮೇಲೆ ಗದಾಪ್ರಹಾರ ಮಾಡಿದಂತಾಗುತ್ತದೆ : ಕೃಷ್ಣಮೂರ್ತಿ ,ಗೂಬೆಹಳ್ಳಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...