ವಿಷಯಕ್ಕೆ ಹೋಗಿ

ವೈಭವಯುತ ದುರ್ಗಮ್ಮನ ಬ್ರಹ್ಮರಥೋತ್ಸವ

ಹುಳಿಯಾರು  ಪಟ್ಟಣದ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಿಯ ೪೫ನೇ ವರ್ಷ ಬ್ರಹ್ಮ ರಥೋತ್ಸವ ಶುಕ್ರವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತಾಧಿಗಳ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ಜರುಗಿತು.
ಹುಳಿಯಾರಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಿಯ ೪೫ನೇ ವರ್ಷ ಬ್ರಹ್ಮ ರಥೋತ್ಸವ ಶುಕ್ರವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತಾಧಿಗಳ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ಜರುಗಿತು.
ರಥೋತ್ಸವದ ಅಂಗವಾಗಿ ಶುಕ್ರವಾರ ಮುಂಜಾನೆ ರಥಕ್ಕೆ ಪುಣ್ಯಾಹ,ದಿಗ್ಬಲಿ ಸೇರಿದಂತೆ ವಿವಿಧ ಪೂಜೆಗಳು ನಡೆಯಿತು. ನಂತರ ರಥವನ್ನು ವಿವಿಧ ಹೂ,ಹಾರ,ಬಣ್ಣಬಣ್ಣದ ಬಾವುಟದಿಂದ ಅಲಂಕರಿಸಲಾಯಿತು. ಬೆಳಿಗ್ಗೆ ೧೧ರ ವೇಳೆಗೆ ಸೋಮನ್ನೊಂದಿಗೆ ಬೀರದೇವರಗುಡಿಯಲ್ಲಿಗೆ ಹೋಗಿ ಪೂಜೆ ಮಾಡಿಸಿಕೊಂಡು ಪಾನಕದ ಗಾಡಿಯನ್ನು ಸೋಮನಕುಣಿತದೊಂದಿಗೆ ಕರೆತಂದು ಸೋಮನನ್ನು ಗದ್ದುಗೆ ಮಾಡಲಾಯಿತು . ದೇವಾಲಯದಲ್ಲಿ ದುರ್ಗಮ್ಮನಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಿದ ನಂತರ ಸರ್ವಾಲಂಕೃತ ದುರ್ಗಮ್ಮದೇವಿಯನ್ನು ಹುಳಿಯಾರಮ್ಮ, ತಿರುಮಲಾಪುರದ ಕೊಲ್ಲಾಪುರದಮ್ಮ, ಹೊಸಹಳ್ಳಿಪಾಳ್ಯದ ಅಂತರಘಟ್ಟೆಅಮ್ಮ,ಗೌಡಗೆರೆ ದುರ್ಗಮ್ಮ, ದೇವರುಗಳೊಂದಿಗೆ ಹೊರಡಿಸಿ ದೇವಾಲಯವನ್ನು ಪ್ರದಕ್ಷಿಣೆ ಹಾಕಿ,ಪಾನಕದ ಗಾಡಿಗಳಿಗೆ ಫೂಜೆಸಲ್ಲಿಸಲಾಯಿತು. ರಥದ ಬಳಿ ಆಗಮಿಸಿ ರಥಕ್ಕೆ ಪೂಜೆ ಸಲ್ಲಿಸಿ ಸಾವಿರಾರು ಭಕ್ತರ ಜೈಕಾರದೊಂದಿಗೆ ದುರ್ಗಮ್ಮದೇವಿಯನ್ನು ಸಜ್ಜುಗೊಂಡಿದ್ದ ರಥದಲ್ಲಿ ಕುಳ್ಳಿರಿಸಿ ತೇರನ್ನು ಎಳೆಯಲಾಯಿತು. ಸುಡುಬಿಸಿಲನ್ನು ಲೆಕ್ಕಿಸದೆ ತೇರನ್ನೆಳೆದು ಸಂಭ್ರಮಿಸಿದರು. ಆಗಮಿಸಿದ್ದ ಕೆಲಭಕ್ತರು ತೇರಿನತ್ತ ಬಾಳೆಹಣ್ಣು ತೂರಿದರೆ ಮತ್ತೆಕೆಲವರು ಕಳಸದ ನೆತ್ತಿಯಲ್ಲಿದ್ದ ನಿಂಬೆಹಣ್ಣಿಗೆ ಗುರಿಯಿಟ್ಟಿದ್ದರು. ರಥೋತ್ಸವದ ನಂತರ ಮಹಿಳೆಯರು ರಥದ ಮೇಲಿದ್ದ ದೇವಿಗೆ ಹಣ್ಣುಕಾಯಿ ಮಾಡಿಸಲು ಮುಗಿಬಿದ್ದರು. ದೇವಾಲಯ ಸಮಿತಿ ವತಿಯಿಂದ ದೇವಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ಹಾಗೂ ಸೀತಾರಾಮ ಕಲ್ಯಾಣ ಮಂದಿರದಲ್ಲಿ ವಿಪ್ರ ಸಮುದಾಯದವರು ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಲಿಂಗಾಯಿತ ಸಮುದಾಯ, ರೇವಣಸಿದ್ದೇಶ್ವರ ಕುರುಬರ ಸಂಘ ಮತ್ತು ಮೀಸೆರಂಗಪ್ಪ ಮತ್ತು ಮಕ್ಕಳ ಸೇವಾರ್ಥದಲ್ಲಿ ಪಾನಕ ಪನಿವಾರ ವಿತರಣೆ ಮಾಡಲಾಯಿತು. ರಥೋತ್ಸವ ನೋಡಲು ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಯವರು ಆಗಮಿಸಿದ್ದು ದೇವಾಲಯದ ಆವರಣದಲ್ಲಿ ಎತ್ತಕಣ್ಣುಹಾಯಿಸಿದರೂ ಜನವೇ ತುಂಬಿದ್ದರು. ಈ ವೇಳೆ ಕಮಿಟಿಯ ಧರ್ಮದರ್ಶಿ ಹೆಚ್.ಶಿವಕುಮಾರ್,ಕನ್ವಿನರ್ ಹೆಚ್.ಕೆ.ವಿಶ್ವನಾಥ್,ಪಟೇಲ್ ರಾಜ್ ಕುಮಾರ್,ಗಾಡಿದುರ್ಗಪ್ಪ,ಕುಮಾರ್, ಸುಭ್ರಮಣ್ಯ,ಈಶ್ವರ್,ರಮೇಶಾಚಾರ್, ಸೇರಿದಂತೆ ವಿವಿಧ ಗುಂಚಿ ಗೌಡರುಗಳು ಹಾಜರಿದ್ದರು.

ದುರ್ಗಮ್ಮನ ಸಿಡಿ : ಶನಿವಾರದಂದು ಹುಳಿಯಾರಮ್ಮ, ಕೊಲ್ಲಾಪುರದಮ್ಮ,ಕೆಂಚಮ್ಮ, ಗೌಡಗೆರೆ ದುರ್ಗಮ್ಮ,ಅಂತಘಟ್ಟೆಅಮ್ಮ ನವರುಗಳ ಸಮ್ಮುಖದಲ್ಲಿ ಸಿಡಿಕಾರ್ಯ ನಡೆಯಲಿದೆ.
ಹುಳಿಯಾರಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮ ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ಲಿಂಗಾಯಿತ ಸಮುದಾಯ, ರೇವಣಸಿದ್ದೇಶ್ವರ ಕುರುಬರ ಸಂಘ ಮತ್ತು ಮೀಸೆರಂಗಪ್ಪ ಮತ್ತು ಮಕ್ಕಳ ಸೇವಾರ್ಥದಲ್ಲಿ ಪಾನಕ ಪನಿವಾರ ವಿತರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...