೧೨ ನೇ ಶತಮಾನದ ಶಿವಶರಣರಲ್ಲಿ ಕಾಯಕಯೋಗಿ ಬಸವಣ್ಣನವರು ತಮ್ಮದೇ ಆದ ಛಾಪು ಮೂಡಿಸಿದ್ದು ಅವರ ವಚನಗಳು ಇಂದಿಗೂ ಪ್ರಸ್ತುತವಾಗಿರುವುದಲ್ಲದೆ, ಅವರ ಕಾಯಕ ತತ್ವದ ಪಾಲನೆ ಮಾಡಬೇಕು ಎಂದು ಬಸವಮಂಟಪದ ಸೋಮಶೇಖರ್ ತಿಳಿಸಿದರು.
![]() |
ಹುಳಿಯಾರು ಹೋಬಳಿ ಯಳನಡು ಗ್ರಾಮದ ಬಸವ ಮಂಟಪದಲ್ಲಿ ಬಸವ ಜಯಂತಿ ಆಚರಣೆ ನಡೆಯಿತು. |
ಹುಳಿಯಾರು ಹೋಬಳಿ ಯಳನಡು ಗ್ರಾಮದ ಬಸವ ಮಂಟಪದಲ್ಲಿ ಕಾರ್ಯಕಾರಿ ಮಂಡಳಿ ಹಾಗೂ ಸಾರ್ವಜನಿಕರು ಸೇರಿ ನಡೆಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಪ್ರವಚನ ನೀಡಿದರು.
ಸಮಾಜದಲ್ಲಿ ಸಮಾನತೆ ತರುವಲ್ಲಿ ಎಲ್ಲರೂ ಸಮಾನರು, ಮೇಲು-ಕೀಳು ಎಂಬ ಯಾವುದೇ ಜಾತಿ ಭೇದವಿಲ್ಲ ಎಂದು ಸಾರಿದ ಮಹಾನ್ ವ್ಯಕ್ತಿ ಬಸವಣ್ಣ, ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅನೇಕ ಕಟ್ಟುಪಾಡುಗಳನ್ನು ಕಿತ್ತೊಗೆಯುವ ಕಾರ್ಯ ಮಾಡಿದವರು ಎಂದರು. ಬಸವಣ್ಣಬವರ ವಚನಗಳನ್ನು ಹಾಡುವ ಮೂಲಕ ಅವುಗಳ ಸಾರ ತಿಳಿಸಿದರು.
ಈ ವೇಳೆ ಬಸವ ಮಂಟಪದ ನಾಗರಾಜು,ಮಹೇಶ್ ಶಾಸ್ತ್ರಿ, ಮಲ್ಲಿಕಾರ್ಜುನಯ್ಯ,ಬಸವರಾಜಪ್ಪ, ಉಮಾಮಹೇಶ್,ಭಾಗ್ಯ ಶಶಿಧರ್,ಮಂಜುಳಾ,ಸಿದ್ದರಾಮಯ್ಯ, ಸ್ಟುಡಿಯೋ ಸುದರ್ಶನ್, ಚಂದ್ರಶೇಖರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ