ವಿಷಯಕ್ಕೆ ಹೋಗಿ

ಹುಳಿಯಾರು ಸುತ್ತಮುತ್ತ ಬಾರಿ ಗಾಳಿ ಸಹಿತ ಮಳೆ

ಹುಳಿಯಾರು : ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಸೋಮವಾರ ಸಂಜೆ ಬಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದ್ದು, ರಸ್ತೆ ಬದಿಯ ಗುಂಡಿ, ತೋಟ ತುಡಿಕೆಗಳಲ್ಲಿ ನೀರು ತುಂಬಿಕೊಂಡಿದ್ದು, ಕೆಲವೆಡೆ ತೆಂಗಿನ ಮರ, ಲೈಟ್ ಕಂಬಗಳು ಧರೆಗುರುಳಿವೆ.
 ಹುಳಿಯಾರಿನ ಗಾಂಧಿಪೇಟೆಯ ಪಶುಆಸ್ಪತ್ರೆಯ ಪಕ್ಕದ ಮನೆಯೊಂದರ ಮೇಲೆ ಬುಡ ಸಮೇತ ಬಿದ್ದಿರುವ ಮರ. ಅದರಡಿ ಸಿಲುಕಿರುವ ಸ್ವೀಟ್ ಗಾಡಿ.
ಸೋಮವಾರ ಬೆಳಿಗ್ಗಿನಿಂದ ಬಿಸಿಲ ಝಳ ಹೆಚ್ಚಿ ಸೆಕೆಯುಂಟಾಗಿತ್ತು ಮಧ್ಯಾಹ್ನದ ನಂತರ ದಟ್ಟ ಮೋಡ ಉಂಟಾಗಿ ಸಂಜೆ ವೇಳೆಗೆ ಬಾರಿಗಾಳಿ ಸಹಿತ ಮಳೆ ಸುರಿಯಲಾರಂಭಿಸಿತು. ಗಾಳಿಯ ಅರ್ಭಟ ಹೆಚ್ಚಿದ್ದು ಜನರಲ್ಲಿ ಆತಂಕವನ್ನುಂಟು ಮಾಡಿತ್ತು. ಪಟ್ಟಣದ ಗಾಂಧಿಪೇಟೆಯ ಪಶು ಆಸ್ಪತ್ರೆಯ ಕಾಂಪೌಂಡ್ ನ ಹೊರ ಭಾಗದಲಿದ್ದ ಬಾರಿ ಮರವೊಂದು ಕೆಂಕೆರೆಯ ರವಿ ಅವರಿಗೆ ಸೇರಿದ ಮನೆಯ ಮೇಲೆ ಬಿದ್ದಿದೆ. ಆ ಮನೆಯಲ್ಲಿ ಅಶೋಕ್ , ಮಂಜುನಾಥ್ ಹಾಗೂ ಮುನಿಸ್ವಾಮಿ ಎಂಬುವರಿಗೆ ಬಾಡಿಗೆಗಿದ್ದರು. ಮನೆ ಮುಂದೆಯೇ ಇದ್ದ ಮರ ಗಾಳಿಯ ರಭಸಕ್ಕೆ ಬುಡ ಸಮೇತ ಮನೆ ಮೇಲೆ ಉರುಳಿದ್ದು ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್ ಗಳು ಜಖಂಗೊಂಡಿದೆ. ಅಶೋಕ್ ಅವರು ಸ್ವೀಟ್ ವ್ಯಾಪಾರ ಮಾಡಲು ಬಳಸುತ್ತಿದ್ದ ತಳ್ಳುಗಾಡಿ ಮರದ ಬುಡಕ್ಕೆ ಸಿಕ್ಕಿ ಜಖಂ ಆಗಿದೆ. ಮುನಿಸ್ವಾಮಿ ಹಾಗೂ ಮಂಜುನಾಥ್ ಅವರ ಮನೆಯೊಳಗೆ ನೀರು ನುಗ್ಗಿದ್ದು, ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಂಪನಹಳ್ಳಿಯ ಮಸೀದಿಯ ಗೋಪುರ ರಸ್ತೆ ಬಿದ್ದ ಪರಿಣಾಮ ಹುಳಿಯಾರು- ಶಿರಾ ಸಂಚಾರ ಅಸ್ಥವೆಸ್ಥಗೊಂಡು ಬಸ್ ಗಳು ಬೇರೆ ಮಾರ್ಗವಾಗಿ ಸಂಚರಿಸುವಂತಾಗಿತ್ತು. ಗೌಡಗೆರೆ ದುರ್ಗಮ್ಮದೇವಿ ದೇವಾಲಯದ ಮುಂಭಾಗ ಕುರಿಹಟ್ಟಿ ರಸ್ತೆ ಬದಿಯಲ್ಲಿದ್ದ ಬಾರಿ ಗಾತ್ರದ ಆರಳಿಮರವೊಂದು ಎರಡು ಭಾಗವಾಗಿ ಸೀಳಿಕೊಂಡು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಕೋರಗೆರೆ ಬಳಿ ವಿದ್ಯುತ್ ಪರಿವರ್ತಕ ಸೇರಿದಂತೆ ಸುಮಾರು ೨೦ಕ್ಕೂ ಹೆಚ್ಚು ಲೈಟ್ ಕಂಬಗಳು ಸಹ ಧರಗೆ ಬಿದ್ದಿವೆ ಎಂದು ಸೆಕ್ಷನ್ ಅಫೀಸರ್ ಉಮೇಶ್ ನಾಯಕ್ ತಿಳಿಸಿದ್ದಾರೆ. ಕಾರೆಹಳ್ಳಿ ಸಮೀಪದ ಶೋಭಾ ಎಂಬುವರಿಗೆ ಸೇರಿದ ಇಟ್ಟಿಗೆ ಕಾರ್ಖಾನೆ ಗಾಳಿಯ ಹೊಡೆತಕ್ಕೆ ಸಂಪೂರ್ಣ ಶಿಥಿಲಗೊಂಡಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.

ಹೋಬಳಿಯ ಕೆಲ ತೋಟಗಳಲ್ಲಿ ತೆಂಗಿನ ಮರಗಳು ಸಹ ನೆಲಕ್ಕುರುಳಿದ್ದು ಸಂಜೆ ಬಂದ ಮಳೆಯಿಂದಾಗಿ ಹೆಚ್ಚು ನಷ್ಟ ಸಂಭವಿಸುವಂತಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...