ವಿಷಯಕ್ಕೆ ಹೋಗಿ

ಗ್ರಾ.ಪಂ. ಚುನಾವಣೆ ಸ್ಥಗಿತಗೊಳಿಸುವಂತೆ ಒತ್ತಾಯ ಹೈಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ ಪಟ್ಟಣದ ಐವರು

ರಾಜ್ಯದ್ಯಾಂತ ಗ್ರಾಮಪಂಚಾಯ್ತಿಯ ಚುನಾವಣೆ ಕಾವು ಹೆಚ್ಚಿದ್ದು ಅಂತೆಯೇ ಹುಳಿಯಾರಿನಲ್ಲೂ ಸಹ ಒಂದೆಡೆ ಅಭ್ಯರ್ಥಿಗಳು ಚುನಾವಣೆಯ ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಕೆಲ ಸಾರ್ವಜನಿಕರು ಹುಳಿಯಾರು ಗ್ರಾ.ಪಂ.ಚುನಾವಣೆ ನಡೆಸದಂತೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ.

ಹುಳಿಯಾರನ್ನು ಪ.ಪಂ.ಯನ್ನಾಗಿಸುವ ತನಕ ಚುನಾವಣೆ ನಡೆಸದಂತೆ ಒತ್ತಾಯಿಸಿ ಪಟ್ಟಣದ ಎಂಜಿನೀಯರ್ ಲಿಂಗರಾಜು,ಫೈಜಲು ಸಾಬ್,ಟೈಲರ್ ಗೋಪಿ,ಮೈಲಾರಪ್ಪ,ಎಂ.ಆರ್ ನಟರಾಜು ಅವರು ವಕೀಲ ಕೃಷ್ಣಮೂರ್ತಿ ಅವರ ಮೂಲಕ ಹೈಕೋರ್ಟ್ ಗೆ ಮೊರೆಹೋಗಲಿದ್ದಾರೆ.
ಕಾರಣ : ಹುಳಿಯಾರು ಗ್ರಾ.ಪಂ. ಪಟ್ಟಣ ಪಂಚಾಯ್ತಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದರೂ ಸಹ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸುವಲ್ಲಿ ಸರ್ಕಾರ ಹಿಂದೇಟಾಕಿರುವುದನ್ನು ಇಲ್ಲಿನ ಕೆಲ ಸಾರ್ವಜನಿಕರು ಖಂಡಿಸಿದ್ದಾರೆ. ಕಳೆದ ನಾಲ್ಕೈದು ವರ್ಷದಿಂದ ಹುಳಿಯಾರನ್ನು ಪ.ಪಂಯಾಗಿ ಮಾಡುವಂತೆ ಒತ್ತಾಯಿಸಿ ಸಾಕಷ್ಟು ಮನವಿ, ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಲಾಗಿತ್ತು. ೨೦೧೪ರ ಮೇ ತಿಂಗಳಲ್ಲಿ ಬೆಂಗಳೂರಿನ ಪೌರಾಡಾಳಿತ ನಿರ್ದೇಶನಾಲಯದಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು , ತುಮಕೂರು ಜಿಲ್ಲೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು ಕೆಲವೊಂದು ಮಾಹಿತಿಯನ್ನು ಹುಳಿಯಾರು ಪಂಚಾಯ್ತಿಯಿಂದ ತುರ್ತಾಗಿ ತರಿಸಿಕೊಂಡಿದ್ದರಾದರೂ ಸಹ ಇಂದು ಮೇಲ್ದರ್ಜೆಗೇರಿಸಿಲ್ಲವೆಂದು ದೂರಿದ್ದಾರೆ.
ಹುಳಿಯಾರು ಗ್ರಾ.ಪಂ. ೨೮೯೯ ಎಕರೆ ೧೬ ಗುಂಟೆ ವಿಸ್ತೀರ್ಣ ಹೊಂದಿದ್ದು, ೨೦೧೧ರ ಜನಗಣತಿ ಅನ್ವಯ ೧೫೪೧೩ ಜನಸಂಖ್ಯೆಇದ್ದು ಇದೀಗ ಅಂದಾಜು ೨೦ ಸಾವಿರದಷ್ಟಾಗಿದೆ. ಅಲ್ಲದೆ ಜಿಲ್ಲೆಯಲ್ಲಿಯೇ ದೊಡ್ಡ ಗ್ರಾ.ಪಂ ಹಾಗೂ ಬರೋಬರಿ ೩೩( ಈ ಬಾರಿ ಚುನಾವಣೆಯಲ್ಲಿ ೩೯) ಸದಸ್ಯ ಸ್ಥಾನವನ್ನು ಹೊಂದಿರುವ ಹೆಗ್ಗಳಿಕೆ ಹೊಂದಿರುವುದರ ಜೊತೆಗೆ ಹೆಚ್ಚಿನ ಅಂದಾಯ ಹುಳಿಯಾರು ಪಂಚಾಯ್ತಿಯಲ್ಲಿ ಬರುತ್ತಿದೆ. ಇಷ್ಟೇಲ್ಲಾ ಅರ್ಹತೆ ಇದ್ದರೂ ಪ.ಪಂ.ಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದೇಕೆ ಹಾಗೂ ಈ ರೀತಿ ಹಿಂದೇಟಾಕಲು ಕಾರಣವೇನೆಂಬುದು ಕೋರ್ಟ್ ಮೂಲಕವೇ ಬಯಲಿಗೆ ತರುವ ನಿಟ್ಟಿನಲ್ಲಿ ಕೋರ್ಟ್ ಮೆಟ್ಟಿಲೇರಿರುವುದಾಗಿ ಎಂಜಿನೀಯರ್ ಲಿಂಗರಾಜು ತಿಳಿಸುತ್ತಾರೆ.

ಹುಳಿಯಾರು ಪಟ್ಟಣ ಪಂಚಾಯಾದರೆ ಸದಸ್ಯರ ಸ್ಥಾನ ಕಡಿಮೆಯಾಗುತ್ತದೆ ಈಗಿರುವ ಕೆಲ ಗ್ರಾ.ಪಂ.ಸದಸ್ಯರು ನಾವು ಗೆಲ್ಲುತ್ತೇವೆ ಇಲ್ಲವೋ ಎಂಬ ಭಯದಿಂದ ತಮ್ಮ ರಾಜಕೀಯ ತಂತ್ರಬಳಸಿದ್ದಾರೆ. ಹಾಲಿ ಶಾಸಕರಾಗಲಿ, ಮಾಜಿ ಶಾಸಕರಾಗಲಿ ಹಾಗೂ ಸಂಸದರು ಈ ಬಗ್ಗೆ ಮಾತನಾಡುತ್ತಾರೆ ಹೊರತು ಯಾವುದೇ ದೃಢ ನಿರ್ಧಾರಕ್ಕೆ ಮುಂದಾಗಿಲ್ಲ ಇದನ್ನು ಗಮನಿಸಿದರೆ ಇವರುಗಳಿಗೂ ಸಹ ಹುಳಿಯಾರು ಪ.ಪಂ ಆಗುವುದು ಬೇಡವೇನೋ ಎಂಬ ಅಭಿಪ್ರಾಯ ಮೂಡುವಂತೆ ಮಾಡಿದೆ ಎಂದು ಮೈಲಾರಪ್ಪ ದೂರಿದ್ದಾರೆ.
ಯಾವುದೇ ತಾಲ್ಲೂಕು ಕೇಂದ್ರಕ್ಕಿಂತ ಕಡಿಮೆಯಿಲ್ಲದಿರುವ ಗ್ರಾ.ಪಂ.ಗೆ ಸದ್ಯ ಬರುವ ಅನುದಾನದಿಂದ ಯಾವುದೇ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ಸಾಧ್ಯವಾಗುವುದಿಲ್ಲ , ಪ.ಪಂಯಾದರೆ ಹೆಚ್ಚಿನ ಅನುದಾನ ಬರುವುದರ ಜೊತೆಗೆ ಹುಳಿಯಾರು ಇನ್ನೂ ಅಭಿವೃದ್ದಿಯಾಗಲು ಸಹಕಾರಿಯಾಗಲಿದೆ : ಎಂಜಿನೀಯರ್ ಲಿಂಗರಾಜು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...