ವಿಷಯಕ್ಕೆ ಹೋಗಿ

ಕಂಚೀಪುರದ ಶ್ರೀ ಕಂಚೀವರದರಾಜ ಸ್ವಾಮಿ

(ಲೇಖನ:ರಮೇಶ್ ಕಂಚೀಪುರ. ಫೋಟೊ:ಶ್ರೀ ಕಂಚೀವರದರಾಜಸ್ವಾಮಿ ಕಂಚೀಪುರ ಫೇಸ್ ಬುಕ್ಕಿನಿಂದ)
ಕಂಚೀಪುರದ ಶ್ರೀ ಕಂಚೀವರದರಾಜ ಸ್ವಾಮಿ ಬಲು ಪ್ರಸಿದ್ದಿ.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಿಂದ 28 ಕಿ.ಮೀ ದೂರದಲ್ಲಿರುವ ಕಂಚೀಪುರದಲ್ಲಿದೆ ಶ್ರೀ ಕಂಚೀವರದರಾಜ ಸ್ವಾಮಿ ದೇವಾಲಯ.
ಈ ದೇವರ ಉತ್ಸವಮೂರ್ತಿ ಗುಡಿಯಿಂದ ಹೊರ ನಡೆದರೆ ಸಾಕು, ಕಾಂಚಾಣದ ಮಳೆಯೇ ಸುರಿಯುತ್ತದೆ! ಇದು ಈ ದೇವರ ವಿಶೇಷ.

ಎಲ್ಲೆಡೆ ಜಾತ್ರೆ ಅಂದ್ರೆ ದೇವರ ಮೇಲೆ ಬಾಳೆಹಣ್ಣೂ ,ಪುರಿ ತೂರಿದರೆ ಕಂಚೀಪುರದ ಜಾತ್ರೆಯಲ್ಲಿ ಕಂಚೀವರದರಾಜ ಸ್ವಾಮಿಗೆ ಭಕ್ತರು ಹರಕೆ ಮಾಡಿಕೊಂಡ ಹಣವನ್ನು ಚಿಲ್ಲರೆ ರೂಪದಲ್ಲಿ ತೂರುವುದು ವಾಡಿಕೆ. ಭಕ್ತರು ತಮ್ಮ ಶಕ್ತ್ಯಾನುಸಾರ ಐದು ನೂರು ರೂಪಾಯಿಯಿಂದ ಐವತ್ತು ಸಾವಿರ ರೂಪಾಯಿವರೆಗೂ ಚಿಲ್ಲರೆ ಹಣ ತೂರುತ್ತಾರೆ.ಕಾಂಚಣದ ಮಳೆ ಸುರಿದಂತೆ ಭಾಸವಾಗುತ್ತದೆ!

 
ಪೌರಾಣಿಕ ಹಿನ್ನೆಲೆ: ಕಂಚೀವರದರಾಜ ಸ್ವಾಮಿ ಕುರಿತ ಐತಿಹ್ಯವೊಂದು ಜನಪದರಲ್ಲಿ ಹಾಸು ಹೊಕ್ಕಾಗಿದೆ. `ಕಂಚಿ ರಾಜನ ಮಗಳಿಗೆ ಆಟವಾಡಲೆಂದು ಒಬ್ಬ ಆಚಾರಿ, ಭೂತಾಳೆ ಮರದಿಂದ ಗೊಂಬೆಯೊಂದನ್ನು ಮಾಡಿಕೊಟ್ಟ. ಮುಂದೆ ಇದೇ ಈ ಕಂಚೀವರದರಾಜ ಸ್ವಾಮಿ ಆಯಿತು. ಹಗಲು ಹೊತ್ತಿನಲ್ಲಿ ಗೊಂಬೆಯಾಗಿರುತ್ತಿದ್ದ ಇದು ರಾತ್ರಿಯಾಗುತ್ತಲೇ ಹುಡುಗನಾಗಿ ರೂಪಾಂತರವಾಗುತ್ತಿತ್ತು.
ಹೀಗೆ ಕೆಲದಿನ ಕಳೆದ ಮೇಲೆ ರಾಜನ ಮಗಳು ಗರ್ಭಿಣಿಯಾಗುತ್ತಾಳೆ. ಮದುವೆಗೂ ಮುನ್ನ ಮಗಳು ಗರ್ಭಿಣಿಯಾದ ಬಗ್ಗೆ ರಾಜನಿಗೆ ಚಿಂತೆಯಾಯಿತು. ಒಂದು ದಿನ ರಾತ್ರಿ ರಾಜ ಸ್ವತಃ ಪರೀಕ್ಷೆಗೆ ಮುಂದಾಗುತ್ತಾನೆ. ಮಗಳ ಕೊಠಡಿಗೆ ಯಾರು ಹೋಗುತ್ತಾರೆ ಎಂಬುದನ್ನು ಪರೀಕ್ಷಿಸಿದಾಗ, ಗೊಂಬೆ ಯುವಕನಾಗಿ ರಾಜಕುಮಾರಿಯೊಂದಿಗೆ ಚಕ್ಕಂದವಾಡುತ್ತಿದ್ದುದು ಕಾಣುತ್ತದೆ.
ಸಿಟ್ಟಿಗೆದ್ದ ರಾಜ ಆ ಗೊಂಬೆಯನ್ನು ಮುತ್ತು,  ರತ್ನ ಮಾರುವ ವ್ಯಾಪಾರಿಗಳಿಗೆ  ಕೊಟ್ಟು ದೂರದೂರಿಗೆ ಗಡಿಪಾರು ಮಾಡುವಂತೆ ಆಜ್ಞಾಪಿಸುತ್ತಾನೆ. ವ್ಯಾಪಾರಿಗಳು ಆ ಗೊಂಬೆಯನ್ನು ತಂದು ಈ ಗ್ರಾಮದಲ್ಲಿ (ಕಂಚೀಪುರ) ಹಾಕುತ್ತಾರೆ.

ಆಗ ವರದರಾಜನು ವ್ಯಾಪಾರಿಗಳನ್ನು ಕಪಿಗಳನ್ನಾಗಿ ಮಾಡಿ ಅವರಿಂದ ಒಂದು ದೇವಸ್ಥಾನ ಕಟ್ಟಿಸಿಕೊಳ್ಳತ್ತಾನೆ. ಆಗ ವ್ಯಾಪಾರಿಗಳು ವರದರಾಜನನ್ನು ಕುರಿತು `ನೀನು ದೇವರೆಂದು ತಿಳಿಯಲಿಲ್ಲ, ಗೊಂಬೆ ಎಂದುಕೊಂಡಿದ್ದೆವು. ನಮ್ಮನ್ನು ಮೊದಲಿನಂತೆ ಮಾಡು, ನಿನಗೆ ಮುತ್ತುರತ್ನ ತೂರುತ್ತೇವೆ~ ಎಂದು ಬೇಡಿಕೊಂಡರು. ಅದಕ್ಕೆ ಒಪ್ಪಿ ವ್ಯಾಪಾರಿಗಳನ್ನು ಮನುಷ್ಯ ರೂಪಿಗಳನ್ನಾಗಿ ಮಾಡಿದ... ಎಂಬ ಪೌರಾಣಿಕ ಕಥೆಯೊಂದು ಈ ಭಾಗದ ಜನರಲ್ಲಿದೆ ಎನ್ನುತ್ತಾರೆ ಅರ್ಚಕ ದೊಡ್ಡಯ್ಯ.
ಅಂದಿನಿಂದಲೂ ಭಕ್ತರು ಸ್ವಾಮಿಯ ಮೇಲೆ ಹಣ ತೂರಿ ಹರಕೆ ತೀರಿಸುವ ಪದ್ಧತಿ ರೂಢಿಗೆ ಬಂತು. ಸ್ವಾಮಿಯ ಮೇಲೆ ತೂರಿದ ಹಣವನ್ನು ಯಾರು ಬೇಕಾದರೂ ಆರಿಸಿಕೊಳ್ಳಬಹುದು.
ದೇವಸ್ಥಾನದಲ್ಲಿ ನಿತ್ಯ ಎರಡು ಬಾರಿ ಪೂಜೆ ನಡೆಯುತ್ತದೆ. ವಿಜಯದಶಮಿಯ ಸಂದರ್ಭದಲ್ಲಿ ಉತ್ತರೆ ಮಳೆ ಅಂಬಿನೋತ್ಸವ, ಸಂಕ್ರಾಂತಿ ಉತ್ಸವ, ಏಪ್ರಿಲ್ ತಿಂಗಳಿನಲ್ಲಿ ನಡೆಯುವ ರಥೋತ್ಸವವನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

----------------------------------
ಈ ದೇವರು ಹರಕೆಯನ್ನು `ನನ್ನ ಹುಂಡಿಗೆ ಹಾಕಬೇಡಿ; ನನ್ನ ಮೇಲೆಯೇ ಸುರಿಯಿರಿ ಎಂದು ಕೇಳುತ್ತದೆ. ಅದರಂತೆ ದೇವರಿಗೆ ಹಣ ತೂರುವ ಪದ್ಧತಿ ಬೆಳೆದು ಬಂದಿದೆ: ಎಂ. ಪ್ರಸನ್ನಕುಮಾರ್.
 -----------------------------


ಈ ದೇವಸ್ಥಾನದಲ್ಲಿ ನಿರ್ದಿಷ್ಟ ಸೇವೆ, ನಿಗದಿತ ಸೇವಾ ಶುಲ್ಕ ಇಲ್ಲ. ಭಕ್ತರು ತಾವೇ ಸಾಮಗ್ರಿ ತಂದು ಪೂಜೆ ಮಾಡಿಸಿಕೊಂಡು ಶಕ್ತ್ಯಾನುಸಾರ ಕಾಣಿಕೆ ಹಾಕಬಹುದು. ಹೊಸದುರ್ಗದಿಂದ ಕಂಚೀಪುರಕ್ಕೆ 24 ಕಿ.ಮೀ. ಮಾಹಿತಿಗೆ: 89717 73403

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.