ವಿಷಯಕ್ಕೆ ಹೋಗಿ

ಕಂಚೀಪುರದ ಶ್ರೀ ಕಂಚೀವರದರಾಜ ಸ್ವಾಮಿ

(ಲೇಖನ:ರಮೇಶ್ ಕಂಚೀಪುರ. ಫೋಟೊ:ಶ್ರೀ ಕಂಚೀವರದರಾಜಸ್ವಾಮಿ ಕಂಚೀಪುರ ಫೇಸ್ ಬುಕ್ಕಿನಿಂದ)
ಕಂಚೀಪುರದ ಶ್ರೀ ಕಂಚೀವರದರಾಜ ಸ್ವಾಮಿ ಬಲು ಪ್ರಸಿದ್ದಿ.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಿಂದ 28 ಕಿ.ಮೀ ದೂರದಲ್ಲಿರುವ ಕಂಚೀಪುರದಲ್ಲಿದೆ ಶ್ರೀ ಕಂಚೀವರದರಾಜ ಸ್ವಾಮಿ ದೇವಾಲಯ.
ಈ ದೇವರ ಉತ್ಸವಮೂರ್ತಿ ಗುಡಿಯಿಂದ ಹೊರ ನಡೆದರೆ ಸಾಕು, ಕಾಂಚಾಣದ ಮಳೆಯೇ ಸುರಿಯುತ್ತದೆ! ಇದು ಈ ದೇವರ ವಿಶೇಷ.

ಎಲ್ಲೆಡೆ ಜಾತ್ರೆ ಅಂದ್ರೆ ದೇವರ ಮೇಲೆ ಬಾಳೆಹಣ್ಣೂ ,ಪುರಿ ತೂರಿದರೆ ಕಂಚೀಪುರದ ಜಾತ್ರೆಯಲ್ಲಿ ಕಂಚೀವರದರಾಜ ಸ್ವಾಮಿಗೆ ಭಕ್ತರು ಹರಕೆ ಮಾಡಿಕೊಂಡ ಹಣವನ್ನು ಚಿಲ್ಲರೆ ರೂಪದಲ್ಲಿ ತೂರುವುದು ವಾಡಿಕೆ. ಭಕ್ತರು ತಮ್ಮ ಶಕ್ತ್ಯಾನುಸಾರ ಐದು ನೂರು ರೂಪಾಯಿಯಿಂದ ಐವತ್ತು ಸಾವಿರ ರೂಪಾಯಿವರೆಗೂ ಚಿಲ್ಲರೆ ಹಣ ತೂರುತ್ತಾರೆ.ಕಾಂಚಣದ ಮಳೆ ಸುರಿದಂತೆ ಭಾಸವಾಗುತ್ತದೆ!

 
ಪೌರಾಣಿಕ ಹಿನ್ನೆಲೆ: ಕಂಚೀವರದರಾಜ ಸ್ವಾಮಿ ಕುರಿತ ಐತಿಹ್ಯವೊಂದು ಜನಪದರಲ್ಲಿ ಹಾಸು ಹೊಕ್ಕಾಗಿದೆ. `ಕಂಚಿ ರಾಜನ ಮಗಳಿಗೆ ಆಟವಾಡಲೆಂದು ಒಬ್ಬ ಆಚಾರಿ, ಭೂತಾಳೆ ಮರದಿಂದ ಗೊಂಬೆಯೊಂದನ್ನು ಮಾಡಿಕೊಟ್ಟ. ಮುಂದೆ ಇದೇ ಈ ಕಂಚೀವರದರಾಜ ಸ್ವಾಮಿ ಆಯಿತು. ಹಗಲು ಹೊತ್ತಿನಲ್ಲಿ ಗೊಂಬೆಯಾಗಿರುತ್ತಿದ್ದ ಇದು ರಾತ್ರಿಯಾಗುತ್ತಲೇ ಹುಡುಗನಾಗಿ ರೂಪಾಂತರವಾಗುತ್ತಿತ್ತು.
ಹೀಗೆ ಕೆಲದಿನ ಕಳೆದ ಮೇಲೆ ರಾಜನ ಮಗಳು ಗರ್ಭಿಣಿಯಾಗುತ್ತಾಳೆ. ಮದುವೆಗೂ ಮುನ್ನ ಮಗಳು ಗರ್ಭಿಣಿಯಾದ ಬಗ್ಗೆ ರಾಜನಿಗೆ ಚಿಂತೆಯಾಯಿತು. ಒಂದು ದಿನ ರಾತ್ರಿ ರಾಜ ಸ್ವತಃ ಪರೀಕ್ಷೆಗೆ ಮುಂದಾಗುತ್ತಾನೆ. ಮಗಳ ಕೊಠಡಿಗೆ ಯಾರು ಹೋಗುತ್ತಾರೆ ಎಂಬುದನ್ನು ಪರೀಕ್ಷಿಸಿದಾಗ, ಗೊಂಬೆ ಯುವಕನಾಗಿ ರಾಜಕುಮಾರಿಯೊಂದಿಗೆ ಚಕ್ಕಂದವಾಡುತ್ತಿದ್ದುದು ಕಾಣುತ್ತದೆ.
ಸಿಟ್ಟಿಗೆದ್ದ ರಾಜ ಆ ಗೊಂಬೆಯನ್ನು ಮುತ್ತು,  ರತ್ನ ಮಾರುವ ವ್ಯಾಪಾರಿಗಳಿಗೆ  ಕೊಟ್ಟು ದೂರದೂರಿಗೆ ಗಡಿಪಾರು ಮಾಡುವಂತೆ ಆಜ್ಞಾಪಿಸುತ್ತಾನೆ. ವ್ಯಾಪಾರಿಗಳು ಆ ಗೊಂಬೆಯನ್ನು ತಂದು ಈ ಗ್ರಾಮದಲ್ಲಿ (ಕಂಚೀಪುರ) ಹಾಕುತ್ತಾರೆ.

ಆಗ ವರದರಾಜನು ವ್ಯಾಪಾರಿಗಳನ್ನು ಕಪಿಗಳನ್ನಾಗಿ ಮಾಡಿ ಅವರಿಂದ ಒಂದು ದೇವಸ್ಥಾನ ಕಟ್ಟಿಸಿಕೊಳ್ಳತ್ತಾನೆ. ಆಗ ವ್ಯಾಪಾರಿಗಳು ವರದರಾಜನನ್ನು ಕುರಿತು `ನೀನು ದೇವರೆಂದು ತಿಳಿಯಲಿಲ್ಲ, ಗೊಂಬೆ ಎಂದುಕೊಂಡಿದ್ದೆವು. ನಮ್ಮನ್ನು ಮೊದಲಿನಂತೆ ಮಾಡು, ನಿನಗೆ ಮುತ್ತುರತ್ನ ತೂರುತ್ತೇವೆ~ ಎಂದು ಬೇಡಿಕೊಂಡರು. ಅದಕ್ಕೆ ಒಪ್ಪಿ ವ್ಯಾಪಾರಿಗಳನ್ನು ಮನುಷ್ಯ ರೂಪಿಗಳನ್ನಾಗಿ ಮಾಡಿದ... ಎಂಬ ಪೌರಾಣಿಕ ಕಥೆಯೊಂದು ಈ ಭಾಗದ ಜನರಲ್ಲಿದೆ ಎನ್ನುತ್ತಾರೆ ಅರ್ಚಕ ದೊಡ್ಡಯ್ಯ.
ಅಂದಿನಿಂದಲೂ ಭಕ್ತರು ಸ್ವಾಮಿಯ ಮೇಲೆ ಹಣ ತೂರಿ ಹರಕೆ ತೀರಿಸುವ ಪದ್ಧತಿ ರೂಢಿಗೆ ಬಂತು. ಸ್ವಾಮಿಯ ಮೇಲೆ ತೂರಿದ ಹಣವನ್ನು ಯಾರು ಬೇಕಾದರೂ ಆರಿಸಿಕೊಳ್ಳಬಹುದು.
ದೇವಸ್ಥಾನದಲ್ಲಿ ನಿತ್ಯ ಎರಡು ಬಾರಿ ಪೂಜೆ ನಡೆಯುತ್ತದೆ. ವಿಜಯದಶಮಿಯ ಸಂದರ್ಭದಲ್ಲಿ ಉತ್ತರೆ ಮಳೆ ಅಂಬಿನೋತ್ಸವ, ಸಂಕ್ರಾಂತಿ ಉತ್ಸವ, ಏಪ್ರಿಲ್ ತಿಂಗಳಿನಲ್ಲಿ ನಡೆಯುವ ರಥೋತ್ಸವವನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

----------------------------------
ಈ ದೇವರು ಹರಕೆಯನ್ನು `ನನ್ನ ಹುಂಡಿಗೆ ಹಾಕಬೇಡಿ; ನನ್ನ ಮೇಲೆಯೇ ಸುರಿಯಿರಿ ಎಂದು ಕೇಳುತ್ತದೆ. ಅದರಂತೆ ದೇವರಿಗೆ ಹಣ ತೂರುವ ಪದ್ಧತಿ ಬೆಳೆದು ಬಂದಿದೆ: ಎಂ. ಪ್ರಸನ್ನಕುಮಾರ್.
 -----------------------------


ಈ ದೇವಸ್ಥಾನದಲ್ಲಿ ನಿರ್ದಿಷ್ಟ ಸೇವೆ, ನಿಗದಿತ ಸೇವಾ ಶುಲ್ಕ ಇಲ್ಲ. ಭಕ್ತರು ತಾವೇ ಸಾಮಗ್ರಿ ತಂದು ಪೂಜೆ ಮಾಡಿಸಿಕೊಂಡು ಶಕ್ತ್ಯಾನುಸಾರ ಕಾಣಿಕೆ ಹಾಕಬಹುದು. ಹೊಸದುರ್ಗದಿಂದ ಕಂಚೀಪುರಕ್ಕೆ 24 ಕಿ.ಮೀ. ಮಾಹಿತಿಗೆ: 89717 73403

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...