ವಿಷಯಕ್ಕೆ ಹೋಗಿ

ಆರ್.ಟಿ.ಐ : ಮಾಹಿತಿ ನೀಡದ ಚಿ.ನಾ.ಹಳ್ಳಿ ತಹಸೀಲ್ದಾರ್ ಗೆ ದಂಡ

ಮಾಹಿತಿ ಹಕ್ಕು ಕಾಯ್ದೆ-೨೦೦೫ರಂತೆ ಅಗತ್ಯ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದವರಿಗೆ ಮಾಹಿತಿ ನೀಡದೆ ಕಾಯ್ದೆ ಉಲ್ಲಂಘಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿ ಚಿಕ್ಕನಾಯಕನಹಳ್ಳಿಯ ತಹಸೀಲ್ದಾರ್ ಅವರಿಗೆ ರಾಜ್ಯ ಮಾಹಿತಿ ಅಯೋಗ ೨೫ ಸಾವಿರ ದಂಡ ವಿಧಿಸಿದೆ.

ಹುಳಿಯಾರು ಪಟ್ಟಣದ ಬಸವೇಶ್ವರ ನಗರದ ನಿವಾಸಿ ರವಿಮೂರ್ತಿ ಎಂಬುವವರು ದಿನಾಂಕ ೧೯.೦೨.೨೦೧೪ ರಂದು ಮಾಹಿತಿ ಕೇಳಿ ಚಿ.ನಾ.ಹಳ್ಳಿ ತಾಲ್ಲೂಕ್ ತಹಸೀಲ್ದಾರ್ ಕಾಮಾಕ್ಷಮ್ಮ ಅವರಿಗೆ ಅರ್ಜಿ ಸಲ್ಲಿಸಿದ್ದು, ಅವರ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನುನಿಗದಿತ ಅವಧಿಯೊಳಗೆ ನೀಡಿರುವುದಿಲ್ಲ. ನಂತರ ತಿಪಟೂರು ಉಪವಿಭಾಗಾಧಿಕಾರಿ ಅವರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಿದ್ದರು. ಉಪವಿಭಾಗಾಧಿಕಾರಿಗಳು ಸಹ ಮಾಹಿತಿ ನೀಡುವಂತೆ ತಹಸೀಲ್ದಾರ್ ಅವರಿಗೆ ನಿರ್ದೇಶಿಸಿದ್ದರೂ ಸಹ ಈ ಬಗ್ಗೆ ನಿರ್ಲಕ್ಷಿಸಿದ ತಹಸೀಲ್ದಾರ್ ವಿರುದ್ದ ಮಾಹಿತಿ ಆಯೋಗಕ್ಕೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಅಯೋಗ ಮಾಹಿತಿ ನೀಡುವಂತೆ ತಹಸೀಲ್ದಾರ್ ಅವರಿಗೆ ನಿರ್ದೇಶಿಸಿ ಮಾಹಿತಿ ನೀಡದೆ ಹೋದಲ್ಲಿ ದಂಡ ವಿಧಿಸಲಾಗುವುದೆಂದು ನಿರ್ದೇಶಿಸಿತ್ತು.
ತಹಸೀಲ್ದಾರ್ ಕಾಮಾಕ್ಷಮ್ಮ ಅವರು ಅರ್ಜಿದಾರರಿಗೆ ನಿಗಧಿ ಸಮಯದಲ್ಲಿ ಮಾಹಿತಿ ನೀಡದೆ ಇರುವುದು , ಉಪವಿಭಾಗಾಧಿಕಾರಿಗಳ ಮೆಲ್ಮನವಿ ವಿಚಾರಣೆಯ ನಂತವೂ ಸಹ ಮಾಹಿತಿ ಒದಗಿಸದಿರುವುದು ಹಾಗೂ ದಂಡ ವಿಧಿಸಲಾಗುವುದೆಂದು ನಿರ್ದೇಶನ ನೀಡಿದ್ದರೂ ಸಹ ಯಾವುದೇ ರೀತಿಯ ಲಿಖಿತ ಸಮಜಾಯಿಸಿ ನೀಡದೇ ಇರುವುದರಿಂದ ಮಾಹಿತಿ ಹಕ್ಕು ಅಧಿನಿಯಮ ೨೦೦೫ ರ ಕಾಲಂ೨೦(೧) ರನ್ವಯ ಅರ್ಜಿದಾರರಿಗೆ ಉದ್ದೇಶಪೂರ್ವಕವಾಗಿಯೇ ಮಾಹಿತಿ ನೀಡಿರುವುದಿಲ್ಲವೆಂದು ಅಯೋಗ ಪರಿಗಣಿಸಿದ್ದು ತಹಸೀಲ್ದಾರ್ ಅವರಿಗೆ ೨೫ ಸಾವಿರ ರೂ ದಂಡ ವಿಧಿಸಿದೆ.
ಸಾರ್ವಜನಿಕ ಅಧಿಕಾರಿಯಾಗಿರುವ ತಹಸೀಲ್ದಾರ್ ಕಾಮಾಕ್ಷಮ್ಮಅವರಿಗೆ ಅಯೋಗವು ವಿಧಿಸಿರುವ ದಂಡವನ್ನು ಅವರ ಮುಂದಿನ ೫ ತಿಂಗಳುಗಳ ಸಂಬಳದಲ್ಲಿ ತಲಾ ೫ ಸಾವಿರದಂತೆ ಕಡಿತಗೊಳಿಸುವುದಾಗಿ ತಿಳಿಸಿದೆ.
ಅರ್ಜಿದಾರರು ಕೋರಿದ ಮಾಹಿತಿಯನ್ನು ೩೦ ದಿನಗಳೊಳಗಾಗಿ ಉಚಿತ ನೊಂದಾಯಿತಿ ಅಂಚೆ ಸ್ವೀಕ್ತಿ ಮುಖಾಂತರ ದೃಢೀಕರಿಸಿದ ಮಾಹಿಯನ್ನು ಅರ್ಜಿದಾರರಿಗೆ ಒದಗಿಸುವಂತೆ ಹಾಗೂ ಮುಂದಿನ ವಿಚಾರಣೆ ದಿನಾಂಕದಂದು ವರದಿಯನ್ನು ಸಲ್ಲಿಸುವಂತೆ ಅಯೋಗವು ತಹಸೀಲ್ದಾರ್ ಅವರಿಗೆ ನಿರ್ದೇಶಿಸಿದೆ.

ಒಟ್ಟಾರೆ ಮಾಹಿತಿ ನೀಡದ ಸಾರ್ವಜನಿಕ ಅಧಿಕಾರಿಗೆ ಮಾಹಿತಿ ಹಕ್ಕು ಆಯೋಗ ದಂಡ ವಿಧಿಸಿರುವುದು ಇತರ ಅಧಿಕಾರಿಗಳಿಗೆ ತಕ್ಕ ಪಾಠವಾಗಿದ್ದು . ಇನ್ನಾದರೂ ಸಾರ್ವಜನಿಕ ಅಧಿಕಾರಿಗಳು ಎಚ್ಚೆತ್ತು ಆರ್.ಟಿ.ಐ ನಡಿ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳಿಗೆ ಸೂಕ್ತ ಮಾಹಿತಿ ನೀಡಲು ಮುಂದಾಗಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.