ವಿಷಯಕ್ಕೆ ಹೋಗಿ

ಕರ ಪತ್ರ ಮುದ್ರಣಕ್ಕೆ ಪ್ರಿಂಟಿಂಗ್ ಪ್ರೆಸ್ ಗೆ ಮುಗಿಬಿದ್ದ ಅಭ್ಯರ್ಥಿಗಳು

ಗ್ರಾ.ಪಂ.ಯ ಚುನಾವಣೆಯಲ್ಲಿ ಅಂತಿಮವಾಗಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿ ಹಾಗೂ ಚಿಹ್ನೆಯನ್ನು ಚುನಾವಣಾಧಿಕಾರಿಗಳು ಸೋಮವಾರ ಪ್ರಕಟಗೊಳಿಸುತ್ತಿದ್ದಂತೆಯೆ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಕರಪತ್ರ ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ ಗಳಲ್ಲಿಗೆ ಮುಗಿಬಿದಿದ್ದಾರೆ.
ಹುಳಿಯಾರಿನ ಪ್ರಿಂಟಿಂಗ್ ಪ್ರೆಸ್ ಒಂದರ ಮುಂದೆ ಬೈಕ್ ಗಳು ಸಾಲುಗಟ್ಟಿ ನಿಂತಿರುವುದು.
ಕಳೆದ ತಿಂಗಳೆಲ್ಲಾ ಮದುವೆ ಹಾಗೂ ಜಾತ್ರಾ ಆಹ್ವಾನ ಪತ್ರಿಕೆಗಳನ್ನು ಪುರುಸೊತ್ತಿಲ್ಲದೆ ಮುದ್ರಿಸಿದ್ದ ಪ್ರಿಂಟಿಂಗ್ ಪ್ರೆಸ್ ನವರಿಗೆ ಇದೀಗ ಬಂದ ಚುನಾವಣೆ ಹಬ್ಬವಾಗಿ ಮತ್ತೊಂದು ಅವಕಾಶ ಕಲ್ಪಿಸಿದೆ. ಕಳೆದೊಂದು ವಾರದಿಂದ ಚುನಾವಣಾ ಕಾವು ಏರುತ್ತಲೇ ಬಂದಿದ್ದರೂ ಸಹ ಗುರುತಿನ ಚಿಹ್ನೆ ಇರುವ ಕರಪತ್ರವಿಲ್ಲದೆ ಪ್ರಚಾರದ ಅಬ್ಬರ ಅಷ್ಟಾಗಿ ಕಂಡುಬಂದಿರಲಿಲ್ಲ. ಇದೀಗ ಚಿಹ್ನೆ ಕೈಗೆ ಸಿಗುತ್ತಿದ್ದಂತೆಯೆ ಸೋಮವಾರ ಸಂಜೆಯೇ ಅಭ್ಯರ್ಥಿಗಳು ಪ್ರೆಂಟಿಂಗ್ ಪ್ರೆಸ್ ಗೆ ಧಾವಿಸಿ ತಮ್ಮ ಹೆಸರು , ಚಿಹ್ನೆ ಹಾಗೂ ಪೋಟೋವನ್ನು ನೀಡಿ ಶೀಘ್ರವೇ ಸಿದ್ದಪಡಿಸಿಕೊಡುವಂತೆ ಪ್ರೆಸ್ ನವರ ಹಿಂದೆ ಬಿದಿದ್ದಾರೆ. ನಾಳೆವರೆಗೂ ಕಾಯಲು ತಯಾರಿಲ್ಲದ ಕೆಲ ಅಭ್ಯರ್ಥಿಗಳು ಹಣ ಎಷ್ಟಾದರೂ ಸರಿ ಈ ಕೂಡಲೇ ಮುದ್ರಿಸಿ ಕೊಡಿ ಎಂದು ದುಂಬಾಲು ಬಿದಿದ್ದು, ಪ್ರೆಸ್ ನವರಿಗೆ ತಲೆನೋವಾಗಿ ಪರಿಣಮಿಸಿದೆ. ಕರಪತ್ರ ಕೈಗೆ ಸಿಗುವುದು ತಡವಾದಲ್ಲಿ ಪ್ರಚಾರಕ್ಕೂ ಅಡಚಣೆಯಾಗುತ್ತದೆಂದು ಪಟ್ಟಣದ ಶ್ರೀಕಾಳಿಕಾಂಬ , ಶ್ರೀಮಾರುತಿ ಹಾಗೂ ದುರ್ಗಾಂಬ ಪ್ರಿಂಟಿಂಗ್ ಪ್ರೆಸ್ ಗಳಲ್ಲಿ ಅಭ್ಯರ್ಥಿಗಳು ಅಲ್ಲಾಡದಂತೆ ಕಾದುಕೂತಿದ್ದರು.
ಹುಳಿಯಾರು ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯ್ತಿಯ ಅಭ್ಯರ್ಥಿಗಳು ಸೇರಿದಂತೆ ಬುಕ್ಕಾಪಟ್ಟಣ, ಪಂಚನಹಳ್ಳಿ ಭಾಗದಿಂದಲೂ ಸಹ ಅಭ್ಯರ್ಥಿಗಳು ಹುಳಿಯಾರಿಗೆ ಬಂದು ಕರಪತ್ರ ಮಾಡಿಸುತ್ತಿದ್ದು, ಎಲ್ಲಾ ಪ್ರಿಂಟಿಂಗ್ ಪ್ರೆಸ್ ಗಳಲ್ಲೂ ಚುನಾವಣೆಯ ಕರಪತ್ರಗಳು ಬಿಡುವಿಲ್ಲದಂತೆ ಮುದ್ರಣವಾಗುತ್ತಿದೆ. ಮದುವೆ, ನಾಮಕರಣ ಹಾಗೂ ಇನಿತರ ಕಾರ್ಯಗಳ ಪತ್ರಿಕೆಗಳನ್ನು ಮಾಡಿಸುವವರಿಗೆ ಅವಕಾಶವೇ ಇಲ್ಲದಂತಾಗಿ ಎಲೆಕ್ಷನ್ ಸೀಸನ್ ಮುಗಿದ ಮೇಲೆ ಏನಿದ್ದರು ಬನ್ನಿ ಎಂದು ವಾಪಸ್ಸ್ ಕಳುಹಿಸುತ್ತಿದ್ದಾರೆ. ಪ್ರತಿನಿತ್ಯ ಸಂಜೆ ೭ ಗಂಟೆ ವೇಳೆಗೆ ಬಾಗಿಲು ಮುಚ್ಚುತ್ತಿದ್ದ ಪ್ರಿಂಟಿಂಗ್ ಪ್ರೆಸ್ ಗಳು ಸೋಮವಾರದಂದು ರಾತ್ರಿ ಪೂರ ಬಿಡುವಿಲ್ಲದೆ ಕೆಲಸ ನಿರ್ವಹಿಸಿ ಅಭ್ಯರ್ಥಿಗಳ ಕರಪತ್ರ ಮುದ್ರಿಸಿಕೊಡುವಷ್ಟರಲ್ಲಿ ಹೈರಾಣೆದ್ದು ಹೋಗಿದೆ.
--------

ಚುನಾವಣೆಯ ಕರಪತ್ರಗಳ ಮುದ್ರಣಕ್ಕಾಗಿ ಬೇಕಾದ ಕಾಗದ ಹಾಗೂ ಇಂಕ್ ಅನ್ನು ಈ ಮೊದಲೇ ತಂದು ದಾಸ್ತಾನು ಮಾಡಿಕೊಂಡಿದ್ದು ಎಷ್ಟೇ ಬೇಡಿಕೆ ಬಂದರೂ ಪೂರೈಸಲು ಸಿದ್ದರಿದೇವೆ. ತರಾತುರಿಯಲ್ಲಿ ಬರುವ ಅಭ್ಯರ್ಥಿಗಳ ಪೈಕಿ ಕೆಲವರು ತಮ್ಮಲ್ಲೇ ಗೊಂದಲ ಮಾಡಿಕೊಂಡು ನಮಗೂ ಗೊಂದಲ ಉಂಟು ಮಾಡುತ್ತಾರೆ : ಚಿದಾನಂದಮೂರ್ತಿ, ಮಾರುತಿ ಪ್ರಿಂಟಿಂಗ್ ಪ್ರೆಸ್, ಹುಳಿಯಾರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.