ವಿಷಯಕ್ಕೆ ಹೋಗಿ

ಕರ ಪತ್ರ ಮುದ್ರಣಕ್ಕೆ ಪ್ರಿಂಟಿಂಗ್ ಪ್ರೆಸ್ ಗೆ ಮುಗಿಬಿದ್ದ ಅಭ್ಯರ್ಥಿಗಳು

ಗ್ರಾ.ಪಂ.ಯ ಚುನಾವಣೆಯಲ್ಲಿ ಅಂತಿಮವಾಗಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿ ಹಾಗೂ ಚಿಹ್ನೆಯನ್ನು ಚುನಾವಣಾಧಿಕಾರಿಗಳು ಸೋಮವಾರ ಪ್ರಕಟಗೊಳಿಸುತ್ತಿದ್ದಂತೆಯೆ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಕರಪತ್ರ ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ ಗಳಲ್ಲಿಗೆ ಮುಗಿಬಿದಿದ್ದಾರೆ.
ಹುಳಿಯಾರಿನ ಪ್ರಿಂಟಿಂಗ್ ಪ್ರೆಸ್ ಒಂದರ ಮುಂದೆ ಬೈಕ್ ಗಳು ಸಾಲುಗಟ್ಟಿ ನಿಂತಿರುವುದು.
ಕಳೆದ ತಿಂಗಳೆಲ್ಲಾ ಮದುವೆ ಹಾಗೂ ಜಾತ್ರಾ ಆಹ್ವಾನ ಪತ್ರಿಕೆಗಳನ್ನು ಪುರುಸೊತ್ತಿಲ್ಲದೆ ಮುದ್ರಿಸಿದ್ದ ಪ್ರಿಂಟಿಂಗ್ ಪ್ರೆಸ್ ನವರಿಗೆ ಇದೀಗ ಬಂದ ಚುನಾವಣೆ ಹಬ್ಬವಾಗಿ ಮತ್ತೊಂದು ಅವಕಾಶ ಕಲ್ಪಿಸಿದೆ. ಕಳೆದೊಂದು ವಾರದಿಂದ ಚುನಾವಣಾ ಕಾವು ಏರುತ್ತಲೇ ಬಂದಿದ್ದರೂ ಸಹ ಗುರುತಿನ ಚಿಹ್ನೆ ಇರುವ ಕರಪತ್ರವಿಲ್ಲದೆ ಪ್ರಚಾರದ ಅಬ್ಬರ ಅಷ್ಟಾಗಿ ಕಂಡುಬಂದಿರಲಿಲ್ಲ. ಇದೀಗ ಚಿಹ್ನೆ ಕೈಗೆ ಸಿಗುತ್ತಿದ್ದಂತೆಯೆ ಸೋಮವಾರ ಸಂಜೆಯೇ ಅಭ್ಯರ್ಥಿಗಳು ಪ್ರೆಂಟಿಂಗ್ ಪ್ರೆಸ್ ಗೆ ಧಾವಿಸಿ ತಮ್ಮ ಹೆಸರು , ಚಿಹ್ನೆ ಹಾಗೂ ಪೋಟೋವನ್ನು ನೀಡಿ ಶೀಘ್ರವೇ ಸಿದ್ದಪಡಿಸಿಕೊಡುವಂತೆ ಪ್ರೆಸ್ ನವರ ಹಿಂದೆ ಬಿದಿದ್ದಾರೆ. ನಾಳೆವರೆಗೂ ಕಾಯಲು ತಯಾರಿಲ್ಲದ ಕೆಲ ಅಭ್ಯರ್ಥಿಗಳು ಹಣ ಎಷ್ಟಾದರೂ ಸರಿ ಈ ಕೂಡಲೇ ಮುದ್ರಿಸಿ ಕೊಡಿ ಎಂದು ದುಂಬಾಲು ಬಿದಿದ್ದು, ಪ್ರೆಸ್ ನವರಿಗೆ ತಲೆನೋವಾಗಿ ಪರಿಣಮಿಸಿದೆ. ಕರಪತ್ರ ಕೈಗೆ ಸಿಗುವುದು ತಡವಾದಲ್ಲಿ ಪ್ರಚಾರಕ್ಕೂ ಅಡಚಣೆಯಾಗುತ್ತದೆಂದು ಪಟ್ಟಣದ ಶ್ರೀಕಾಳಿಕಾಂಬ , ಶ್ರೀಮಾರುತಿ ಹಾಗೂ ದುರ್ಗಾಂಬ ಪ್ರಿಂಟಿಂಗ್ ಪ್ರೆಸ್ ಗಳಲ್ಲಿ ಅಭ್ಯರ್ಥಿಗಳು ಅಲ್ಲಾಡದಂತೆ ಕಾದುಕೂತಿದ್ದರು.
ಹುಳಿಯಾರು ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯ್ತಿಯ ಅಭ್ಯರ್ಥಿಗಳು ಸೇರಿದಂತೆ ಬುಕ್ಕಾಪಟ್ಟಣ, ಪಂಚನಹಳ್ಳಿ ಭಾಗದಿಂದಲೂ ಸಹ ಅಭ್ಯರ್ಥಿಗಳು ಹುಳಿಯಾರಿಗೆ ಬಂದು ಕರಪತ್ರ ಮಾಡಿಸುತ್ತಿದ್ದು, ಎಲ್ಲಾ ಪ್ರಿಂಟಿಂಗ್ ಪ್ರೆಸ್ ಗಳಲ್ಲೂ ಚುನಾವಣೆಯ ಕರಪತ್ರಗಳು ಬಿಡುವಿಲ್ಲದಂತೆ ಮುದ್ರಣವಾಗುತ್ತಿದೆ. ಮದುವೆ, ನಾಮಕರಣ ಹಾಗೂ ಇನಿತರ ಕಾರ್ಯಗಳ ಪತ್ರಿಕೆಗಳನ್ನು ಮಾಡಿಸುವವರಿಗೆ ಅವಕಾಶವೇ ಇಲ್ಲದಂತಾಗಿ ಎಲೆಕ್ಷನ್ ಸೀಸನ್ ಮುಗಿದ ಮೇಲೆ ಏನಿದ್ದರು ಬನ್ನಿ ಎಂದು ವಾಪಸ್ಸ್ ಕಳುಹಿಸುತ್ತಿದ್ದಾರೆ. ಪ್ರತಿನಿತ್ಯ ಸಂಜೆ ೭ ಗಂಟೆ ವೇಳೆಗೆ ಬಾಗಿಲು ಮುಚ್ಚುತ್ತಿದ್ದ ಪ್ರಿಂಟಿಂಗ್ ಪ್ರೆಸ್ ಗಳು ಸೋಮವಾರದಂದು ರಾತ್ರಿ ಪೂರ ಬಿಡುವಿಲ್ಲದೆ ಕೆಲಸ ನಿರ್ವಹಿಸಿ ಅಭ್ಯರ್ಥಿಗಳ ಕರಪತ್ರ ಮುದ್ರಿಸಿಕೊಡುವಷ್ಟರಲ್ಲಿ ಹೈರಾಣೆದ್ದು ಹೋಗಿದೆ.
--------

ಚುನಾವಣೆಯ ಕರಪತ್ರಗಳ ಮುದ್ರಣಕ್ಕಾಗಿ ಬೇಕಾದ ಕಾಗದ ಹಾಗೂ ಇಂಕ್ ಅನ್ನು ಈ ಮೊದಲೇ ತಂದು ದಾಸ್ತಾನು ಮಾಡಿಕೊಂಡಿದ್ದು ಎಷ್ಟೇ ಬೇಡಿಕೆ ಬಂದರೂ ಪೂರೈಸಲು ಸಿದ್ದರಿದೇವೆ. ತರಾತುರಿಯಲ್ಲಿ ಬರುವ ಅಭ್ಯರ್ಥಿಗಳ ಪೈಕಿ ಕೆಲವರು ತಮ್ಮಲ್ಲೇ ಗೊಂದಲ ಮಾಡಿಕೊಂಡು ನಮಗೂ ಗೊಂದಲ ಉಂಟು ಮಾಡುತ್ತಾರೆ : ಚಿದಾನಂದಮೂರ್ತಿ, ಮಾರುತಿ ಪ್ರಿಂಟಿಂಗ್ ಪ್ರೆಸ್, ಹುಳಿಯಾರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...