ವಿಷಯಕ್ಕೆ ಹೋಗಿ

ಹುಳಿಯಾರು ೩೯ ಸ್ಥಾನಕ್ಕೆ ಬರೋಬರಿ ೧೯೧ ಉಮೇದುವಾರಿಕೆ ಸಲ್ಲಿಕೆ

ಆಯ್ಕೆಗೆ ನಾನಾ ರೀತಿಯ ಕಸರತ್ತು
             ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯ್ತಿಯೆಂದೆ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಗ್ರಾ.ಪಂ ಚುನಾವಣೆಗೆ ರಂಗೇರಿದ್ದು ೩೯ ಸ್ಥಾನಗಳ ಪಂಚಾಯ್ತಿಗೆ ಒಟ್ಟು ೧೯೦ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಕಡೆ ಕ್ಷಣದಲ್ಲಿ ಕಂಡುಬಂದ ಅಭ್ಯರ್ಥಿಗಳು.
         ಹುಳಿಯಾರಿನಲ್ಲಿ ಜೂನ್ ೨ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನಾಮಪತ್ರಸಲ್ಲಿಕೆಗೆ ಆಕಾಂಕ್ಷಿಗಳ ಮಹಾ ಪೂರವೇ ಕಂಡುಬಂದು ಪಂಚಾಯ್ತಿ ಆವರಣ ಅಭ್ಯರ್ಥಿಗಳ ಹಾಗೂ ಬೆಂಬಲಿಗರಿಂದಲೇ ತುಂಬಿತುಳುಕುತ್ತಿತ್ತು. ಕಳೆದ ೧೫ ರಿಂದ ಪ್ರಾರಂಭವಾಗಿದ್ದ ನಾಮಪತ್ರಸಲ್ಲಿಕೆಗೆ ಕಡೆ ದಿನವಾದ ಶುಕ್ರವಾರವೂ ಸೇರಿ ನಿರೀಕ್ಷೆಗೂ ಮೀರಿ ಬರೋಬರಿ ೧೯೦ ಉಮೇದುವಾರಿಕೆಗಳು ಸಲ್ಲಿಕೆಯಾಗಿರುವುದು ಚುನಾವಣೆಯ ತೀವ್ರತೆಗೆ ಸಾಕ್ಷಿಯಾಗಿದೆ.

                         ಇಲ್ಲಿನ ಚುನಾವಣೆ ಎಂದರೆ ರಾಜಕೀಯ ನಾಯಕರುಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು ಹೇಗಾದರೂ ಸರಿ , ಯಾವ ದಾರಿಯಲ್ಲಾದರೂ ಸರಿ ಅಧಿಕಾರದ ಗದ್ದುಗೆ ಏರಬೇಕೆಂಬ ತಹತಹಿಕೆಯಿಂದ ನಾನಾರೀತಿಯ ಕಸರತ್ತಿಗೆ ದಾರಿ ಮಾಡಿಕೊಟ್ಟಿದೆ.ಹಿಂದಿನ ಚುನಾವಣೆಗಳಲ್ಲಿ ಪಂಚಾಯ್ತಿ ಅಧ್ಯಕ್ಷ ಗದ್ದುಗೆ ಏರುವವರಿಗೆ ಬೆಂಬಲಿಸುವ ಸದಸ್ಯರಿಗೆ ಶುಕ್ರದೆಸೆ ತಿರುಗಿದ್ದರೆ, ಅಧ್ಯಕ್ಷ ಸ್ಥಾನದವರಿಗೆ ಲಕ್ಷಾಂತರ ರೂ ವೆಚ್ಚಕ್ಕೆ ದಾರಿ ಮಾಡಿಕೊಟ್ಟಿತ್ತು. ಸದಸ್ಯರಾದವರಿಗೆ ನಾನಾರೀತಿಯ ಆಕಾಂಕ್ಷೆಗಳು ಸರ್ವೆ ಸಾಮಾನ್ಯವಾಗಿದ್ದು ಪ್ರತಿ ಚುನಾವಣೆಯಲ್ಲೂ ಉಮೇದುವಾರಿಕೆದಾರರ ಸಂಖ್ಯೆ ಏರಿಕೆಯಾಗಲು ಕಾರಣವಾಗಿದೆ.
       ಕ್ಷೇತ್ರದ ವ್ಯಾಪ್ತಿ : ಪಟ್ಟಣದ ಜನಸಂಖ್ಯೆ ಈಗಾಗಲೇ ೨೦ಸಾವಿರ ಗಡಿ ತಲುಪಿದ್ದು ೨೦೧೧ ಜನಗಣತಿಯಂತೆ ೧೫,೪೧೩ ಜನಸಂಖ್ಯೆ ಹೊಂದಿರುತ್ತದೆ . ಪಟ್ಟಣ ಪಂಚಾಯ್ತಿ ಆಗಬೇಕಿದ್ದ ಹುಳಿಯಾರು ರಾಜಕೀಯ ಕಾರಣದಿಂದಾಗಿ ಗ್ರಾಮ ಪಂಚಾಯ್ತಿಯಾಗಿ ಮುಂದುವರೆದಿದ್ದು ಅಭಿವೃದ್ದಿಗೆ ಹಿನ್ನಡೆಯಾಗಲು ಕಾರಣವಾಗಿದೆ. ಪಟ್ಟಣವನ್ನು ಒಟ್ಟು ೧೩ ಬ್ಲಾಕ್ ಗಳಾಗಿ ವಿಂಗಡಿಸಲಾಗಿದ್ದು ಇದುವರೆಗೂ ೩೩ ಸದಸ್ಯರು ಪ್ರತಿನಿಧಿಸುತ್ತಿದ್ದರು. ಈ ಬಾರಿ ಹೆಚ್ಚಿನ ಜನಸಂಖ್ಯೆಯ ಬ್ಲಾಕ್ ಗಳನ್ನು ಪುನರ್ ವಿಂಗಡಿಸಿ ೬ ಸದಸ್ಯರುಗಳ ಹೆಚ್ಚಳ ಮಾಡಿದ್ದರಿಂದ ಒಟ್ಟು ೩೯ ಮಂದಿ ಸದಸ್ಯರ ಆಯ್ಕೆ ನಡೆಯಬೇಕಾಗಿದೆ.

ಆಕಾಂಕ್ಷಿಗಳ ಸಂಖ್ಯೆ : ಕಡೆಯ ದಿನ ಕಡೆಯ ಕ್ಷಣದವರೆಗೂ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳು ಕಂಡುಬಂದರು. ಅಂತಿಮವಾಗಿ ಪಟ್ಟಣದ ೧ನೇ ಬ್ಲಾಕ್ ನ ೨ ಸ್ಥಾನಗಳಿಗೆ ೨೦ ಮಂದಿ , ೨ ನೇ ಬ್ಲಾಕ್ ನ ೨ ಸ್ಥಾನಗಳಿಗೆ ೧೩ ಮಂದಿ, ೩ ನೇ ಬ್ಲಾಕ್ ನ ೩ ಸ್ಥಾನಗಳಿಗೆ ೧೩ ಮಂದಿ, ೪ನೇ ಬ್ಲಾಕ್ ನ ೨ ಸ್ಥಾನಗಳಿಗೆ ೮ ಮಂದಿ, ೫ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೧೬ ಮಂದಿ, ೬ ನೇ ಬ್ಲಾಕ್ ನ ೩ ಸ್ಥಾನಗಳಿಗೆ ೧೩ ಮಂದಿ, ೭ ನೇ ಬ್ಲಾಕ್ ನ ೩ ಸ್ಥಾನಗಳಿಗೆ ೧೦ ಮಂದಿ, ೮ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೧೫ ಮಂದಿ, ೯ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೨೧ ಮಂದಿ, ೧೦ನೇ ಬ್ಲಾಕ್ ನ ೪ ಸ್ಥಾನಗಳಿಗೆ ೩೨ ಮಂದಿ, ೧೧ ನೇ ಬ್ಲಾಕ್ ನ ೨ ಸ್ಥಾನಗಳಿಗೆ ೮ ಮಂದಿ, ೧೨ ನೇ ಬ್ಲಾಕ್ ನ ೨ ಸ್ಥಾನಗಳಿಗೆ ೫ ಮಂದಿ, ೧೩ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೧೬ ಮಂದಿ ನಾಮಪತ್ರಸಲ್ಲಿಸಿದ್ದಾರೆ.
ಪಂಚಾಯ್ತಿಯಲ್ಲಿ ಕಳೆದಬಾರಿ ಸದಸ್ಯರಾಗಿದ್ದವರ ಪೈಕಿ ೨೮ಕ್ಕೂ ಹೆಚ್ಚು ಮಂದಿ ಈ ಬಾರಿ ಕಣದಲ್ಲಿದ್ದು ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿರುವಲ್ಲಿ ಅನುಮಾನವೇ ಇಲ್ಲ. ಒಟ್ಟಾರೆ ಯಾರೇ ಚುನಾಯಿತರಾದರು ಪಟ್ಟಣವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ದರೆ ಸಾಕೆಂಬುದು ಮತದಾರರ ನಿರೀಕ್ಷೆಯಾಗಿದೆ.

----------
ಒಟ್ಟು ೧೩ ಬ್ಲಾಕ್ ಗಳಿಗೆ ೧೯೦ ನಾಮಪತ್ರ ಸಲ್ಲಿಕೆಯಾಗಿದ್ದು ೨೩ರ ಶನಿವಾರ ನಾಮಪತ್ರ ಪರಿಶೀಲನೆ , ೨೫ರ ಸೋಮವಾರ ಉಮೇದುವಾರಿಕೆ ವಾಪಸ್ಸ್ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂದು ಮಧ್ಯಾಹ್ನ ೩ ಗಂಟೆಗೆ ಕಣದಲ್ಲಿ ಉಳಿಯುವ ಅಭ್ಯರ್ಥಿಗಳಿಗೆ ಚಿಹ್ನೆ ವಿತರಿಸಲಾಗುವುದು :  ಶಿವಾನಂದ್ , ರಿಟರ್ನಿಂಗ್ ಅಫೀಸರ್ .
------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.