ವಿಷಯಕ್ಕೆ ಹೋಗಿ

ಹುಳಿಯಾರು ೩೯ ಸ್ಥಾನಕ್ಕೆ ಬರೋಬರಿ ೧೯೧ ಉಮೇದುವಾರಿಕೆ ಸಲ್ಲಿಕೆ

ಆಯ್ಕೆಗೆ ನಾನಾ ರೀತಿಯ ಕಸರತ್ತು
             ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯ್ತಿಯೆಂದೆ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಗ್ರಾ.ಪಂ ಚುನಾವಣೆಗೆ ರಂಗೇರಿದ್ದು ೩೯ ಸ್ಥಾನಗಳ ಪಂಚಾಯ್ತಿಗೆ ಒಟ್ಟು ೧೯೦ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಕಡೆ ಕ್ಷಣದಲ್ಲಿ ಕಂಡುಬಂದ ಅಭ್ಯರ್ಥಿಗಳು.
         ಹುಳಿಯಾರಿನಲ್ಲಿ ಜೂನ್ ೨ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನಾಮಪತ್ರಸಲ್ಲಿಕೆಗೆ ಆಕಾಂಕ್ಷಿಗಳ ಮಹಾ ಪೂರವೇ ಕಂಡುಬಂದು ಪಂಚಾಯ್ತಿ ಆವರಣ ಅಭ್ಯರ್ಥಿಗಳ ಹಾಗೂ ಬೆಂಬಲಿಗರಿಂದಲೇ ತುಂಬಿತುಳುಕುತ್ತಿತ್ತು. ಕಳೆದ ೧೫ ರಿಂದ ಪ್ರಾರಂಭವಾಗಿದ್ದ ನಾಮಪತ್ರಸಲ್ಲಿಕೆಗೆ ಕಡೆ ದಿನವಾದ ಶುಕ್ರವಾರವೂ ಸೇರಿ ನಿರೀಕ್ಷೆಗೂ ಮೀರಿ ಬರೋಬರಿ ೧೯೦ ಉಮೇದುವಾರಿಕೆಗಳು ಸಲ್ಲಿಕೆಯಾಗಿರುವುದು ಚುನಾವಣೆಯ ತೀವ್ರತೆಗೆ ಸಾಕ್ಷಿಯಾಗಿದೆ.

                         ಇಲ್ಲಿನ ಚುನಾವಣೆ ಎಂದರೆ ರಾಜಕೀಯ ನಾಯಕರುಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು ಹೇಗಾದರೂ ಸರಿ , ಯಾವ ದಾರಿಯಲ್ಲಾದರೂ ಸರಿ ಅಧಿಕಾರದ ಗದ್ದುಗೆ ಏರಬೇಕೆಂಬ ತಹತಹಿಕೆಯಿಂದ ನಾನಾರೀತಿಯ ಕಸರತ್ತಿಗೆ ದಾರಿ ಮಾಡಿಕೊಟ್ಟಿದೆ.ಹಿಂದಿನ ಚುನಾವಣೆಗಳಲ್ಲಿ ಪಂಚಾಯ್ತಿ ಅಧ್ಯಕ್ಷ ಗದ್ದುಗೆ ಏರುವವರಿಗೆ ಬೆಂಬಲಿಸುವ ಸದಸ್ಯರಿಗೆ ಶುಕ್ರದೆಸೆ ತಿರುಗಿದ್ದರೆ, ಅಧ್ಯಕ್ಷ ಸ್ಥಾನದವರಿಗೆ ಲಕ್ಷಾಂತರ ರೂ ವೆಚ್ಚಕ್ಕೆ ದಾರಿ ಮಾಡಿಕೊಟ್ಟಿತ್ತು. ಸದಸ್ಯರಾದವರಿಗೆ ನಾನಾರೀತಿಯ ಆಕಾಂಕ್ಷೆಗಳು ಸರ್ವೆ ಸಾಮಾನ್ಯವಾಗಿದ್ದು ಪ್ರತಿ ಚುನಾವಣೆಯಲ್ಲೂ ಉಮೇದುವಾರಿಕೆದಾರರ ಸಂಖ್ಯೆ ಏರಿಕೆಯಾಗಲು ಕಾರಣವಾಗಿದೆ.
       ಕ್ಷೇತ್ರದ ವ್ಯಾಪ್ತಿ : ಪಟ್ಟಣದ ಜನಸಂಖ್ಯೆ ಈಗಾಗಲೇ ೨೦ಸಾವಿರ ಗಡಿ ತಲುಪಿದ್ದು ೨೦೧೧ ಜನಗಣತಿಯಂತೆ ೧೫,೪೧೩ ಜನಸಂಖ್ಯೆ ಹೊಂದಿರುತ್ತದೆ . ಪಟ್ಟಣ ಪಂಚಾಯ್ತಿ ಆಗಬೇಕಿದ್ದ ಹುಳಿಯಾರು ರಾಜಕೀಯ ಕಾರಣದಿಂದಾಗಿ ಗ್ರಾಮ ಪಂಚಾಯ್ತಿಯಾಗಿ ಮುಂದುವರೆದಿದ್ದು ಅಭಿವೃದ್ದಿಗೆ ಹಿನ್ನಡೆಯಾಗಲು ಕಾರಣವಾಗಿದೆ. ಪಟ್ಟಣವನ್ನು ಒಟ್ಟು ೧೩ ಬ್ಲಾಕ್ ಗಳಾಗಿ ವಿಂಗಡಿಸಲಾಗಿದ್ದು ಇದುವರೆಗೂ ೩೩ ಸದಸ್ಯರು ಪ್ರತಿನಿಧಿಸುತ್ತಿದ್ದರು. ಈ ಬಾರಿ ಹೆಚ್ಚಿನ ಜನಸಂಖ್ಯೆಯ ಬ್ಲಾಕ್ ಗಳನ್ನು ಪುನರ್ ವಿಂಗಡಿಸಿ ೬ ಸದಸ್ಯರುಗಳ ಹೆಚ್ಚಳ ಮಾಡಿದ್ದರಿಂದ ಒಟ್ಟು ೩೯ ಮಂದಿ ಸದಸ್ಯರ ಆಯ್ಕೆ ನಡೆಯಬೇಕಾಗಿದೆ.

ಆಕಾಂಕ್ಷಿಗಳ ಸಂಖ್ಯೆ : ಕಡೆಯ ದಿನ ಕಡೆಯ ಕ್ಷಣದವರೆಗೂ ನಾಮಪತ್ರ ಸಲ್ಲಿಸಲು ಅಭ್ಯರ್ಥಿಗಳು ಕಂಡುಬಂದರು. ಅಂತಿಮವಾಗಿ ಪಟ್ಟಣದ ೧ನೇ ಬ್ಲಾಕ್ ನ ೨ ಸ್ಥಾನಗಳಿಗೆ ೨೦ ಮಂದಿ , ೨ ನೇ ಬ್ಲಾಕ್ ನ ೨ ಸ್ಥಾನಗಳಿಗೆ ೧೩ ಮಂದಿ, ೩ ನೇ ಬ್ಲಾಕ್ ನ ೩ ಸ್ಥಾನಗಳಿಗೆ ೧೩ ಮಂದಿ, ೪ನೇ ಬ್ಲಾಕ್ ನ ೨ ಸ್ಥಾನಗಳಿಗೆ ೮ ಮಂದಿ, ೫ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೧೬ ಮಂದಿ, ೬ ನೇ ಬ್ಲಾಕ್ ನ ೩ ಸ್ಥಾನಗಳಿಗೆ ೧೩ ಮಂದಿ, ೭ ನೇ ಬ್ಲಾಕ್ ನ ೩ ಸ್ಥಾನಗಳಿಗೆ ೧೦ ಮಂದಿ, ೮ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೧೫ ಮಂದಿ, ೯ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೨೧ ಮಂದಿ, ೧೦ನೇ ಬ್ಲಾಕ್ ನ ೪ ಸ್ಥಾನಗಳಿಗೆ ೩೨ ಮಂದಿ, ೧೧ ನೇ ಬ್ಲಾಕ್ ನ ೨ ಸ್ಥಾನಗಳಿಗೆ ೮ ಮಂದಿ, ೧೨ ನೇ ಬ್ಲಾಕ್ ನ ೨ ಸ್ಥಾನಗಳಿಗೆ ೫ ಮಂದಿ, ೧೩ ನೇ ಬ್ಲಾಕ್ ನ ೪ ಸ್ಥಾನಗಳಿಗೆ ೧೬ ಮಂದಿ ನಾಮಪತ್ರಸಲ್ಲಿಸಿದ್ದಾರೆ.
ಪಂಚಾಯ್ತಿಯಲ್ಲಿ ಕಳೆದಬಾರಿ ಸದಸ್ಯರಾಗಿದ್ದವರ ಪೈಕಿ ೨೮ಕ್ಕೂ ಹೆಚ್ಚು ಮಂದಿ ಈ ಬಾರಿ ಕಣದಲ್ಲಿದ್ದು ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿರುವಲ್ಲಿ ಅನುಮಾನವೇ ಇಲ್ಲ. ಒಟ್ಟಾರೆ ಯಾರೇ ಚುನಾಯಿತರಾದರು ಪಟ್ಟಣವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ದರೆ ಸಾಕೆಂಬುದು ಮತದಾರರ ನಿರೀಕ್ಷೆಯಾಗಿದೆ.

----------
ಒಟ್ಟು ೧೩ ಬ್ಲಾಕ್ ಗಳಿಗೆ ೧೯೦ ನಾಮಪತ್ರ ಸಲ್ಲಿಕೆಯಾಗಿದ್ದು ೨೩ರ ಶನಿವಾರ ನಾಮಪತ್ರ ಪರಿಶೀಲನೆ , ೨೫ರ ಸೋಮವಾರ ಉಮೇದುವಾರಿಕೆ ವಾಪಸ್ಸ್ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಂದು ಮಧ್ಯಾಹ್ನ ೩ ಗಂಟೆಗೆ ಕಣದಲ್ಲಿ ಉಳಿಯುವ ಅಭ್ಯರ್ಥಿಗಳಿಗೆ ಚಿಹ್ನೆ ವಿತರಿಸಲಾಗುವುದು :  ಶಿವಾನಂದ್ , ರಿಟರ್ನಿಂಗ್ ಅಫೀಸರ್ .
------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...