ವಿಷಯಕ್ಕೆ ಹೋಗಿ

ಹಳ್ಳಿಹಳ್ಳಿಗಳಲ್ಲೂ ಹೆಚ್ಚಿದ ಪ್ರಚಾರದ ಕಾವು : ಬಾಡೂಟಕ್ಕೆ ಬಂತು ಡಿಮ್ಯಾಂಡ್

ಮತಯಾಚನೆಯಲ್ಲಿ ಗುರ್ತಿನ ಚಿಹ್ನೆಗೆ ಒತ್ತು
---------
ವರದಿ: ಡಿ.ಆರ್.ನರೇಂದ್ರಬಾಬು
---------
ಹುಳಿಯಾರು : ಹೋಬಳಿ ವ್ಯಾಪ್ತಿಯ ಎಲ್ಲಾ ಪಂಚಾಯ್ತಿಗಳಲ್ಲಿ ಚುನಾವಣೆ ರಂಗೇರಿದ್ದು ಪ್ರಚಾರ ಭರದಿಂದ ಸಾಗಿದೆ. ಪಂಚಾಯ್ತಿಯ ಚುನಾವಣೆಯ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಹೆಸರು ಹಾಗೂ ಅವರ ಚಿಹ್ನೆಗಳನ್ನು ನೀಡಿದ್ದೆ ತಡ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಹಾಗೂ ಚಿಹ್ನೆಯನ್ನೊಳಗೊಂಡ ಕರಪತ್ರ ಮುದ್ರಿಸಿಕೊಂಡು ತಮ್ಮತಮ್ಮ ಬ್ಲಾಕ್ ಗಳ ಮನೆಮನೆ ಬಾಗಿಲಿಗೆ ತೆರಳಿ ತಮಗೆ ಓಟು ಕೊಡಿ ಎಂದು ನಾಮೇಲು ತಾಮೇಲು ಎಂಬಂತೆ ಮತಯಾಚನೆ ಮಾಡುತ್ತಿದ್ದಾರೆ. ತಮ್ಮದೇ ಆದ ಲೆಕ್ಕಾಚಾರದಂತೆ ಸಂಬಂಧಪಟ್ಟ ಮತದಾರರ ಮನೆಗಳಿಗೆ ಎಡತಾಕುತ್ತಿರುವ ಅಭ್ಯರ್ಥಿಗಳು ಮತದಾರರ ಮನಗೆಲ್ಲಲ್ಲು ಹರಸಾಹಸ ಮಾಡುತ್ತಿದ್ದಾರೆ.
ಹುಳಿಯಾರಿನಲ್ಲಿ ಅಭ್ಯರ್ಥಿಯೊಬ್ಬರು ಮುಂಜಾನೆಯೇ ಬಸ್ ನಿಲ್ದಾಣದಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿರುವುದು.
ಪಟ್ಟಣದಲ್ಲಿ ಬೆಳಿಗ್ಗೆಯೇ ಪ್ರಚಾರ ಕೈಗೊಳ್ಳುತ್ತಿರುವ ಅಭ್ಯರ್ಥಿಗಳು ಕೈಯ್ಯಲ್ಲಿ ಮತದಾರರ ಪಟ್ಟಿ ಹಾಗೂ ಕರಪತ್ರ ಹಿಡಿದು ಮತದಾರರ ಭೇಟಿಯಲ್ಲಿ ತೊಡಗಿದ್ದಾರೆ. ಮತದಾರರ ಪಟ್ಟಿಯಂತೆ ಮನೆಯಲ್ಲಿರುವ ಎಲ್ಲರನ್ನೂ ಸಂಪರ್ಕಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಜನ ಮಧ್ಯಾಹ್ನದ ವೇಳೆ ತೋಟದ ಕೆಲಸಗಳಿಗೆ ಹೋಗಿರುತ್ತಾರೆಂಬುದನ್ನು ಅರಿತ ಕೆಲ ಸದಸ್ಯರು ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಅವರುಗಳ ಮನೆಗಳಿಗೆ ತೆರಳಿ ಮತಯಾಚಿಸುತ್ತಿದ್ದಾರೆ
ಜಾತಿ ಲೆಕ್ಕಾಚಾರ : ಸ್ಥಳೀಯ ಚುನಾವಣೆಗಳಲ್ಲಿ ಅಭ್ಯರ್ಥಿಯ ಪ್ರತಿಷ್ಠೆ ಹಾಗೂ ಜಾತಿಯ ಮತಗಳೇ ನಿರ್ಣಾಯಕವಾಗಲಿದ್ದು ಹೆಚ್ಚಿನ ಅಭ್ಯರ್ಥಿಗಳು ಅಯಾಯಾ ಬ್ಲಾಕ್ ಗಳಲ್ಲಿರುವ ತಮ್ಮದೇ ಜಾತಿಯ ಮತಗಳ ಆಧಾರದ ಮೇಲೆ ಸ್ಪರ್ಧೆಗಿಳಿದಿದ್ದಾರೆ. ಇನ್ನುಳಿದ ಜಾತಿಯವರ ಮತಗಳನ್ನು ಸೆಳೆಯಲು ಅಯಾಯಾ ಜಾತಿ ಮುಖಂಡರುಗಳ ಬೆಂಬಲಕೋರುತ್ತಾ ಅವರೊಂದಿಗೆ ತೆರಳಿ ಇನ್ನುಳಿದ ಜಾತಿಯಲ್ಲೂ ಮತಯಾಚಿಸುತ್ತಿದ್ದಾರೆ.
ರಾಜಕೀಯ ತಂತ್ರಗಾರಿಕೆಯೊಂದಿಗೆ ಕಣಕಿಳಿದಿರುವ ಅಭ್ಯರ್ಥಿಗಳು ಮದ್ಯ , ಮಾಂಸದ ಬಾಡೂಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ನಾನ್ ವೆಜ್ ಹೋಟೆಲ್ ಗಳಲ್ಲಿ ಬಿರಿಯಾನಿ , ಕಬಾಬ್ ಗೆ ಬಾರಿ ಬೇಡಿಕೆ ಏರಿದ್ದು ಮೀನೂಟಕ್ಕೂ ಇನ್ನಿಲ್ಲದ ಬೇಡಿಕೆ ಕಂಡುಬಂದಿದೆ. ಗುಟ್ಕಾ, ಬೀಡಾ, ಸಿಗರೇಟ್ ಗೂ ಡಿಮ್ಯಾಂಡ್ ಉಂಟಾಗಿದ್ದು ಬೀಡಿಸೇದುವರ ಬಾಯಲ್ಲೂ ಕೂಡ ಕಿಂಗ್ ಸಿಗರೇಟ್ ಉರಿಯುತ್ತಿದೆ.
ಪಟ್ಟಣದ ೫ ನೇ ಬ್ಲಾಕ್ ನಲ್ಲಿ ಕಾಲೋನಿ, ೬ ನೇ ಬ್ಲಾಕ್ ನ ಶಂಕರಪುರದ ಕೆರೆ ಜಾಗದಲ್ಲಿರುವವರಿಗೆ ಹಾಗೂ ೧೦ ನೇ ಬ್ಲಾಕ್ ವಠಾರಗಳಲ್ಲಿ ಬಾಡೂಟದ ಓಲೈಕೆಯೊಂದಿಗೆ ಮತಯಾಚನೆ ಕಂಡುಬಂದರೆ, ೧ ನೇ ಬ್ಲಾಕ್ ನ ಗಾಂಧೀಪೇಟೆಯ ಶೆಟ್ರು ಬೀದಿಯಲ್ಲಿ , ೭ ನೇ ಬ್ಲಾಕ್ ನ ಬ್ರಾಹ್ಮಣ ಬೀದಿಗಳಲ್ಲಿ ಮತಯಾಚನೆ ಚಿಕ್ಕಾಸು ಖರ್ಚಿಲ್ಲದೆ ಕೇವಲ ಕೈಮುಗಿಯುವುದಕಷ್ಟೆ ಸೀಮಿತವಾಗಿದೆ.
ಚಿಹ್ನೆಗೆ ಮಹತ್ವ : ಆಟೋವನ್ನು ಚಿಹ್ನೆಯಾಗಿ ಪಡೆದವರು ಆಟೋದಲ್ಲಿ ಸಂಚರಿಸುತ್ತಾ ಮತಯಾಚಿಸಿದರೆ, ವಿಶಲ್ , ಹಣ್ಣಿನಬುಟ್ಟಿ , ಪೋನ್,ಉಂಗುರ,ಟಾರ್ಚ್ ನಂತಹ ಗುರುತುಳ್ಳ ಅಭ್ಯರ್ಥಿಗಳು ಅವುಗಳನ್ನು ಪ್ರದರ್ಶಿಸಿಕೊಂಡು ಸಾಗುತ್ತಾ ಮತದಾರರ ಗಮನ ಸೆಳೆಯುತ್ತಿದ್ದಾರೆ. ಗ್ರಾಮದ ಯಾವುದೇ ಮನೆ , ಅಂಗಡಿಗಳಲ್ಲಿ ಹತ್ತಾರೂ ಅಭ್ಯರ್ಥಿಗಳ ಕರಪತ್ರಗಳೇ ರಾರಾಜಿಸುತ್ತಿರುವುದು ಕಂಡುಬರುತ್ತಿದೆ.
ಗೆಲುವಿನ ಲೆಕ್ಕಾಚಾರ : ಹಳ್ಳಿಗಳ ಅರಳಿಕಟ್ಟೆ, ಟೀ ಅಂಗಡಿಗಳಲ್ಲಿ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದ ಮಾತುಗಳದ್ದೆ ಸದ್ದಾಗಿದ್ದು, ತಮ್ಮತಮ್ಮಲ್ಲೇ ಅಭ್ಯರ್ಥಿಗಳ ಬಗ್ಗೆ ಮಾತಾಡುತ್ತಾ ಆತನ ಜಾತಿ, ಈ ಹಿಂದೆ ಮಾಡಿದ ಕಾರ್ಯಗಳು ಹಾಗೂ ಅಭ್ಯರ್ಥಿಯ ಹಿಂದಿನ ಬೆಂಬಲಿಗರು ಸೇರಿದಂತೆ ಇನ್ನಿತರ ವಿಷಯಗಳನ್ನು ಕ್ರೂಡೀಕರಿಸಿ ಆ ಅಭ್ಯರ್ಥಿ ಗೆಲ್ಲುತ್ತಾನೆ , ಇಲ್ಲ ಈ ಅಭ್ಯರ್ಥಿ ಗೆಲ್ಲುತ್ತಾನೆ ಎಂದು ಹೇಳುತ್ತಿರುವುದು ಕಂಡುಬರುತ್ತಿದೆ.
ಬ್ಯುಸಿಯಾದ ಹೋಟೆಲ್ ಗಳು : ಹುಳಿಯಾರು ಪಟ್ಟಣದಲ್ಲಿ ಸದಾಕಾಲ ವಿರಳ ಗ್ರಾಹಕರಿಂದ ಕೂಡಿರುತ್ತಿದ್ದ ಹೋಟೆಲ್ ಗಳು ಹರಟೆಕಟ್ಟೆಗಳಾಗಿ ಬ್ಯುಸಿಯಾಗಿದ್ದು ಕಂಡುಬರುತ್ತಿದೆ. ಪಟ್ಟಣದಲ್ಲಿ ಪ್ರಚಾರ ನಡೆಸುತ್ತಿರುವ ಅಭ್ಯರ್ಥಿಗಳು ತಮ್ಮ ಬೆಂಬಲಿಗರಿಗೆ ಊಟ, ತಿಂಡಿ ವ್ಯವಸ್ಥೆಯನ್ನು ಹೋಟೆಲ್ ಗಳಲ್ಲಿ ಮಾಡಿಸಿದ್ದಾರೆ. ಕೆಲ ಹಳ್ಳಿಕಡೆಯ ಅಭ್ಯರ್ಥಿಗಳು ಸಹ ತಮ್ಮ ಹಿಂಬಾಲಕರನ್ನು ಹುಳಿಯಾರಿನ ಹೋಟೆಲ್ ಗಳಿಗೆ ಕರೆದುಕೊಂಡು ಬಂದು ಊಟ ಕೊಡಿಸಿಕೊಡು ವಾಪಸ್ಸ್ ಹಳ್ಳಿಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ.

ಒಟ್ಟಾರೆ ಹಣ ಖರ್ಚು ಮಾಡುವುದಕ್ಕೆ ಜಗ್ಗದ ಅಭ್ಯರ್ಥಿಗಳು ಗೆದ್ದೇ, ಗೆಲ್ಲಲು ಸಾಕಷ್ಟು ತಂತ್ರಗಾರಿಕೆ ಹೂಡುತ್ತಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...