ವಿಷಯಕ್ಕೆ ಹೋಗಿ

ಹುಳಿಯಾರು ಪಂಚಾಯ್ತಿ : ಅಖಾಡದಲ್ಲಿ ೧೬೧ ಅಭ್ಯರ್ಥಿಗಳು ೨೬ ಮಂದಿ ನಾಮಪತ್ರ ವಾಪಸ್ಸ್

ಸ್ಥಳೀಯ ಗ್ರಾ.ಪಂ.ಚುನಾವಣೆಗಳಲ್ಲಿ ಕುತೂಹಲ ಕೆರಳಿಸಿರುವ ಹುಳಿಯಾರು ಗ್ರಾ.ಪಂ ಯ ೩೯ ಸದಸ್ಯ ಸ್ಥಾನಗಳಿಗೆ ಒಟ್ಟು ೧೯೦ ಉಮೇದುವಾರಿಕೆ ಸಲ್ಲಿಕೆಯಾಗಿ, ೩ ನಾಮಪತ್ರ ತಿರಸ್ಕೃತವಾಗಿ ಉಳಿದಿದ್ದ ೧೮೭ ಆಕಾಂಕ್ಷಿಗಳ ಪೈಕಿ ಸೋಮವಾರ ೨೬ ಮಂದಿ ತಮ್ಮ ನಾಮಪತ್ರ ವಾಪಸ್ಸ್ ಪಡೆದಿದ್ದು ಅಂತಿಮವಾಗಿ ಒಟ್ಟು ೧೬೧ ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ.
ಹುಳಿಯಾರು ಗ್ರಾ.ಪಂ. ಆವರಣದಲ್ಲಿ ಚಿಹ್ನೆ ಪಡೆಯಲು ಬೆಂಬಲಿಗರೊಂದಿಗೆ ಕಾದುನಿಂತಿದ್ದ ಅಭ್ಯರ್ಥಿಗಳು.
ಹರಸಾಹಸ: ಕಳೆದೆರಡು ದಿನಗಳಿಂದ ತಮ್ಮತಮ್ಮ ವಾರ್ಡ್ ಗಳಲ್ಲಿ ಗೆಲ್ಲಲು ಅಡ್ಡಿಯಾಗಿರುವ ಕೆಲವರ ನಾಮಪತ್ರ ವಾಪಸ್ಸ್ ತೆಗೆಯಲು ಹರಸಾಹಸ ನಡೆಸಿದ್ದ ಕೆಲ ಅಭ್ಯರ್ಥಿಗಳು. ಎದುರಾಳಿಗಳಿಗೆ ನಾನಾರೀತಿಯ ಅಮೀಷವೊಡ್ಡಿ, ಪ್ರಭಾವಿಗಳಿಂದ ಹೇಳಿಸಿ, ರಾಜಕೀಯ ನಾಯಕರುಗಳಿಂದ ಒತ್ತಡ ತರುವ ಮೂಲಕ ಮನವೊಲಿಸಿ ಇಂದು ಪಂಚಾಯ್ತಿಯಲ್ಲಿ ನಾಮಪತ್ರ ವಾಪಸ್ಸ್ ಪಡಿಸುವಂತೆ ಮಾಡುವಲ್ಲಿ ಸಫಲರಾದರು. ಅವರನ್ನು ಎಲ್ಲೂ ಹೋಗದಂತೆ ಕಾಯ್ದುಕೊಂಡಿದ್ದು ಇಂದು ಮಧ್ಯಾಹ್ನ ೩ರರೊಳಗೆ ನಾಮಪತ್ರ ವಾಪಸ್ಸ್ ತೆಗೆಸುವ ಮೂಲಕ ನಿಟ್ಟುಸಿರು ಬಿಟ್ಟರು. ನಾಮಪತ್ರ ವಾಪಸ್ಸ್ ಪಡೆಯುವ ಹಿನ್ನಲೆಯಲ್ಲಿ ಗ್ರಾ.ಪಂ.ಆವರಣ ಬಾರಿ ಜನಸ್ತೋಮದಿಂದ ತುಂಬಿತುಳುಕುತ್ತಿತ್ತು.
ಜಿಲ್ಲೆಯಲ್ಲಿಯೇ ದೊಡ್ಡ ಪಂಚಾಯ್ತಿ ಹಾಗೂ ಹೆಚ್ಚು ಸದಸ್ಯ ಸ್ಥಾನ ಹೊಂದಿರುವ ಖ್ಯಾತಿ ಹೊಂದಿರುವ ಹುಳಿಯಾರು ಗ್ರಾ.ಪಂ. ಚುನಾವಣೆ ಈ ಬಾರಿ ಜಿದ್ದಾಜಿದ್ದಿನಿಂದ ಕೂಡಿದೆ. ಇಂದು ಚಿಹ್ನೆ ಪಡೆದಿರುವ ಅಭ್ಯರ್ಥಿಗಳು ಕರಪತ್ರ ಮಾಡಿಸಲು ಮುಂದಾಗಿದ್ದು ಪ್ರಚಾರಕ್ಕೆ ಶುರುವಿಟ್ಟುಕೊಂಡಿದ್ದಾರೆ. ಪಟ್ಟಣದ ೧೩ ಬ್ಲಾಕ್ ಗಳಲ್ಲಿ ೩೯ ಸ್ಥಾನಕ್ಕೆ ೧ : ೪ ರ ಪ್ರಮಾಣದಲ್ಲಿ ಒಟ್ಟು ೧೬೧ ಅಭ್ಯರ್ಥಿಗಳು ಕಣದಲ್ಲಿದ್ದು ಮತದಾರರಲ್ಲಿ ಈ ಬಾರಿ ಯಾರು ಗೆಲ್ಲುತ್ತಾರೆಂಬ ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.
ನಾಮಪತ್ರ ವಾಪಸ್ಸ್ ಪಡೆದವರು : ೧ ನೇ ಬ್ಲಾಕ್ ನಲ್ಲಿ ಇಬ್ಬರು ( ಜಗದೀಶ್ ಹಾಗೂ ಬಿ.ಎಸ್. ಮೋಹನ್) , ೨ ನೇ ಬ್ಲಾಕ್ ನಲ್ಲಿ ನಾಲ್ವರು (ತಬಸುಂ ಸುಲ್ತಾನ್,ಹೆಚ್.ಎಲ್.ನಾಗರಾಜನ್ ಹೆಚ್.ಪಿ.ರಾಘವೇಂದ್ರ,ರಿಜ್ವಾನ್ ಭಾನು),೩ ನೇ ಬ್ಲಾಕ್ ನಿಂದ ನೂರ್ಜಾನ್ ಬೀ, ೪ ನೇ ಬ್ಲಾಕ್ ನಲ್ಲಿ ಇಬ್ಬರು ( ಹೆಚ್.ಆರ್.ಓಂಕಾರಮೂರ್ತಿ,ಹೆಚ್.ಎನ್.ಗವಿರಂಗನಾಥ್), ೫ ನೇ ಬ್ಲಾಕ್ ನಲ್ಲಿ ಇಬ್ಬರು ( ಇನಾಯತ್, ಎಸ್.ಜಯಮ್ಮ),೬ ನೇ ಬ್ಲಾಕ್ ನಲ್ಲಿ ಮೂವರು( ಹೆಚ್.ಎನ್.ಕುಮಾರ್, ಹೆಚ್.ಎಸ್.ಮೋಹನ್ ಕುಮಾರ್,ಹೆಚ್.ಎಲ್.ನಾಗರಾಜನ್) , ೭ ನೇ ಬ್ಲಾಕ್ ನಲ್ಲಿ ಯಾವುದು ಇಲ್ಲ, ೮ ನೇ ಬ್ಲಾಕ್ ನಲ್ಲಿ ಆರು ಮಂದಿ ( ಗಂಗಮ್ಮ,ಜಯಮ್ಮ,ಫೈರೋಜ್,ಸಿದ್ದಗಂಗಮ್ಮ, ಸಯ್ಯದ್ ಮೊಹಿದ್ದೀನ್, ಸೈಯ್ಯದ್ ಮೆಹಬೂಬ್), ೯ ನೇ ಬ್ಲಾಕ್ ನಲ್ಲಿ ಮೂವರು ( ನಾಗೇಂದ್ರಪ್ಪ,ಮಲ್ಲಿಕ್ ಸಾಬ್, ಸೈಯ್ಯದ್ ಇಂತಾಜ್ ಪಾಷ),೧೦ ನೇ ಬ್ಲಾಕ್ ನಲ್ಲಿ ಇಬ್ಬರು ( ದಯಾಮಣಿ, ಮಹೇಶ್), ೧೧ ಮತ್ತು ೧೨ ನೇ ಬ್ಲಾಕ್ ನಲ್ಲಿ ಯಾವುದು ಇಲ್ಲ , ೧೩ ನೇ ಬ್ಲಾಕ್ ಸೈಯದ್ ಹಫೀಕ್ ಸೇರಿದಂತೆ ಒಟ್ಟು ೨೬ ಮಂದಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.
ನಾಮಪತ್ರ ವಾಪಸ್ಸ್ ಪಡೆದು ಉಳಿದ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ವಿಂಗಡಿಸಲಾಯಿತು.
ಯಾವ ಚಿಹ್ನೆಗೆ ಹೆಚ್ಚು ಬೇಡಿಕೆ : ಸೂಚನಾ ಫಲಕದಲ್ಲಿ ೮೦ಕ್ಕೂ ಅಧಿಕ ಚಿಹ್ನೆಗಳನ್ನು ಹಾಕಿದ್ದರೂ ಸಹ ಕೆಲ ಚಿಹ್ನೆಗಳ ಬೇಡಿಕೆ ಹೆಚ್ಚಿದ್ದು ಕಂಡುಬಂತು. ಆಟೋ, ಟಿವಿ, ಗ್ಯಾಸ್ ಸಿಲಿಂಡರ್,ತೆಂಗಿನಕಾಯಿ, ಹಣ್ಣಿನ ಬುಟ್ಟಿ, ಫ್ರೆಶರ್ ಕುಕ್ಕರ್ ಚಿಹ್ನೆಗಳನ್ನೇ ಹೆಚ್ಚು ಅಭ್ಯರ್ಥಿಗಳು ಸೂಚಿಸಿದ್ದರು.

ಒಟ್ಟಾರೆ ಹುಳಿಯಾರು ಗ್ರಾ.ಪಂ. ಚುನಾವಣೆ ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದು, ಅಭ್ಯರ್ಥಿಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಇದೀಗ ಚುನಾವಣೆ ಕಾವು ಹೆಚ್ಚಾಗಿ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿನಿಂದ ಕೂಡಿದ್ದು ಯಾರುಯಾರು ಗ್ರಾ.ಪಂ. ಸದಸ್ಯ ಸ್ಥಾನವನ್ನು ತಮ್ಮದಾಗಿಸಿಕೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...