ವಿಷಯಕ್ಕೆ ಹೋಗಿ

ಮದ್ಯದಂಗಡಿ ವಿವಾದ : ಅಬಕಾರಿ ಉಪ ಅಯುಕ್ತರ ಸಮ್ಮುಖದಲ್ಲೇ ಮತ್ತೊಮ್ಮೆ ಅಳತೆ ರಂಗನಾಥಸ್ವಾಮಿ ದೇವಾಲಯಕ್ಕೆ ೯೬.೩ ಮೀ ಅಂತರ

ಪಟ್ಟಣದ ಜನನಿಬಿಡ ಪ್ರದೇಶದಲ್ಲಿರುವ ಶ್ರೀ ರಂಗನಾಥ ಲಿಕ್ಕರ್ ಷಾಪ್ ತೆರವು ವಿವಾದದ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗೆ ತುಮಕೂರು ಜಿಲ್ಲಾ ಅಬಕಾರಿ ಅಯುಕ್ತರೇ ಖುದ್ದು ಸ್ಥಳಕ್ಕೆ ಬಂದು ಮತ್ತೊಮ್ಮೆ ಮರುಆಳತೆ ಮಾಡಿಸಿದ್ದಾರೆ.
ಸಾರ್ವಜನಿಕ ಆಕ್ಷೇಪಣಾರ್ಹ ಸ್ಥಳದಲ್ಲಿನ ಮಧ್ಯದಂಗಡಿಯ ಮರುಅಳತೆ ಕಾರ್ಯ ಅಬಕಾರಿ ಉಪ ಆಯುಕ್ತೆ ಕೆ.ಕೆ.ಸುನಿತಾ ಅವರ ಸಮ್ಮುಖದಲ್ಲಿ ನಡೆಯಿತು.
 ಕಳೆದ ಹಲವಾರು ವರ್ಷಗಳಿಂದ ದಿ ಟೌನ್ ಕೋಪರೇಟಿವ್ ಸೊಸೈಟಿಯ ಕಟ್ಟಡದಲ್ಲಿರುವ ಎನ್.ಜಿ. ನಾಗರಾಜ್ ಎಂಬುವರಿಗೆ ಸೇರಿದ್ದ ಶ್ರೀ ರಂಗನಾಥ ಲಿಕ್ಕರ್ ಷಾಪ್ ನಿಂದ ಪ್ರತಿನಿತ್ಯ ಇಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ಇದಕ್ಕೆ ಹೊಂದಿಕೊಂಡಂತಿರುವ ದೇವಾಲಯಗಳಿಗೆ ಆಗಮಿಸುವ ಭಕ್ತಾಧಿಗಳಿಗೆ ತೊಂದರೆಯಾಗುತ್ತಿದ್ದು, ಇದನ್ನು ಮುಂದಿನ ಅವಧಿಗೆ ನವೀಕರಿಸದೆ ಸ್ಥಳಾಂತರಿಸಬೇಕೆಂದು ಸೊಸೈಟಿಯವರು, ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಹೋರಾಟ ನಡೆಸುತ್ತಲೇ ಬಂದಿದ್ದರು.

ಕಡೆಗೂ ಸಾರ್ವಜನಿಕರ ಒತ್ತಡಕ್ಕೆ ಮಣಿದ ಅಬಕಾರಿ ಇಲಾಖೆ ಅಬಕಾರಿ ಉಪಅಯುಕ್ತರ ಮೂಲಕ ಸ್ಥಳ ಪರಿಶೀಲನೆ ನಡೆಸಿ ಮದ್ಯದಂಗಡಿಯಿಂದ ವಿವಿಧ ದೇವಾಲಯಗಳಿಗೆ ಹಾಗೂ ರಾಜ್ಯ ಹೆದ್ದಾರಿಗೆ ಇರುವ ಅಂತರವನ್ನು ಅಳತೆ ಮಾಡಿಸಿದ್ದರು. ಸ್ಥಳಾಂತರಿಸಲು ಅದೇಶವಾಗಿದಾಗ್ಯೂ ಸಹ ಮದ್ಯದಂಗಡಿಯವರು ತಕರಾರು ಅರ್ಜಿ ಸಲ್ಲಿಸುತ್ತ ಹಾಗೂ ರಾಜಕೀಯ ಒತ್ತಡಗಳ ಮೂಲಕವೇ ಕಳೆದೊಂದು ವರ್ಷದಿಂದ ಲಿಕ್ಕರ್ ಶಾಪ್ ನಡೆಸುತ್ತಾ ಬಂದಿದ್ದರು.
ಈ ಹಿಂದೆ ಅಬಕಾರಿ ಉಪಅಯುಕ್ತರು ಖುದ್ದು ನಡೆಸಿದ ಅಳತೆ ಬಗ್ಗೆಯೂ ತಕರಾರು ತೆಗೆದಿದ್ದರಿಂದ ಆಯುಕ್ತರ ಆದೇಶದ ಮೇರೆಗೆ ಇಂದು ಮತ್ತೊಮ್ಮೆ ಮರು ಅಳತೆ ನಡೆಯಿತು. ಅಬಕಾರಿ ಉಪ ಆಯುಕ್ತೆ ಕೆ.ಕೆ.ಸುನಿತಾ ಸ್ಥಳಕ್ಕಾಗಮಿಸಿ ಅಳತೆ ಕಾರ್ಯ ನಡೆಸಿದರು. ಈ ಬಾರಿಯ ಅಳತೆಯಲ್ಲೂ ಸಹ ಯಾವುದೇ ಬದಲಾವಣೆಯಿಲ್ಲದೆ ಹಿಂದಿನ ಅಳತೆಯಂತೆ ಸರಿಯಿದಿದ್ದು ಕಂಡುಬಂತು. ಅಬಕಾರಿ ನಿಯಮದನ್ವಯ ಯಾವುದೇ ಒಂದು ಮದ್ಯದಂಗಡಿ ದೇವಾಲಯಗಳಿಂದ ೧೦೦ ಮೀ ಹಾಗೂ ರಾಷ್ಟ್ರೀಯಹೆದ್ದಾರಿಯಿಂದ ೨೨೦ ಮೀ ದೂರವಿರಬೇಕೆಂಬ ನಿಯಮಾನುಸಾರ ಈಗಲಾದರೂ ವಿವಾದಿತ ಮದ್ಯದಂಗಡಿಯನ್ನು ಸ್ಥಳಾಂತರಿಸುವಂತೆ ಡಿಸಿ ಅವರಲ್ಲಿ ಸಾರ್ವಜನಿಕರು ಮನವಿ ಮಾಡಿದರು.
ಇದೇ ವೇಳೆ ಪತ್ರಿಕೆಗೆ ಪ್ರತಿಕ್ರಿಯಿಸಿದ ಅಬಕಾರಿ ಡಿಸಿ ಕೋರ್ಟ್ ಆದೇಶದಂತೆ ತಾವು ಮದ್ಯದಂಗಡಿಯಿಂದ ವಿವಿಧ ದೇವಾಲಯಗಳಿರುವ ಅಂತರವನ್ನು ಅಳತೆ ಮಾಡಿಸಿ ಮಾಹಿತಿ ಪಡೆದಿದ್ದು ಅದರ ದಾಖಲೆ ಸಿದ್ದಪಡಿಸಿ ಶೀಘ್ರವೇ ಕೋರ್ಟ್ ಗೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಿಪಟೂರು ಉಪ ಅಧೀಕ್ಷಕ ತಿಪ್ಪೇಸ್ವಾಮಿ, ಅಬಕಾರಿ ನಿರೀಕ್ಷಕ ವಿಜಯ್ ಕುಮಾರ್, ಸೊಸೈಟಿ ಅಧ್ಯಕ್ಷ ಹೆಚ್.ಆರ್.ದೇವಾನಂದ್, ಹೆಚ್.ವಿ.ವಿಜಯಮ್ಮ, ದುರ್ಗಾಪರಮೇಶ್ವರಿ ದೇವಾಲಯದ ಕನ್ವಿನೀಯರ್ ವಿಶ್ವನಾಥ್, ಮಧ್ಯದಂಗಡಿ ಗುತ್ತಿಗೆದಾರ ನಾಗರಾಜ್ ಇನ್ನಿತರರಿದ್ದರು.
--------------------------------

ಮದ್ಯದಂಗಡಿಯಿಂದ ಗ್ರಾಮದೇವತೆ ಹುಳಿಯಾರಮ್ಮ ದೇವಾಲಯಕ್ಕೆ ೪೬.೪ ಮೀ, ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ೯೬.೩ ಮೀ, ಬೀರಲಿಂಗೇಶ್ವರಸ್ವಾಮಿ ದೇವಾಲಯಕ್ಕೆ ೯೩.೭ ಮೀ ಹಾಗೂ ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಗೆ ೧೧೭ ಮೀ ಅಂತರವಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...