ವಿಷಯಕ್ಕೆ ಹೋಗಿ

ಹೋಬಳಿಯಾದ್ಯಂತ ಮುಂಗಾರು ಬಿತ್ತನೆ ಪ್ರಗತಿ

ವರದಿ ; ಡಿ.ಆರ್.ನರೇಂದ್ರಬಾಬು
ಹುಳಿಯಾರು : ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಹತ್ತದಿನೈದು ದಿನಗಳಿಂದ ಹದ ಮಳೆಯಾದ ಹಿನ್ನಲೆಯಲ್ಲಿ ಈ ಭಾಗದ ಮುಂಗಾರಿನ ಪ್ರಮುಖ ಬೆಳೆಯಾದ ಹೆಸರು ಸೇರಿದಂತೆ ತೊಗರಿ,ಎಳ್ಳು ಹಾಗೂ ಇತರ ಬೆಳೆಗಳ ಬಿತ್ತನೆ ಕಾರ್ಯ ಹೆಚ್ಚು ಪ್ರಗತಿಯಲ್ಲಿದ್ದು , ಎಲ್ಲೆಡೆ ಹೆಸರು,ಎಳ್ಳಿನ ಗಿಡಗಳು ಚಿಗುರೊಡೆದು ನಳನಳಿಸುತ್ತಿವೆ.
ಈ ಬಾರಿ ಪೂರ್ವ ಮುಂಗಾರಿನಲ್ಲಿ ಹದಮಳೆಯಾದ್ದರಿಂದ ರೈತರು ತಮ್ಮ ಜಮೀನುಗಳಲ್ಲಿ ಹೆಸರುಬಿತ್ತನೆ ಮಾಡಲು ಮುಂದಾಗಿದ್ದರು. ಹೋಬಳಿಯ ದಸೂಡಿ,ರಂಗನಕೆರೆ, ಹೊಯ್ಸಳಕಟ್ಟೆ, ಗಾಣಧಾಳು,ಕೆಂಕೆರೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಬಿತ್ತನೆ ಮಾಡಿದ್ದು ಇದೀಗ ಹೆಸರು ಸೊಗಸಾಗಿ ಚಿಗುರೊಡೆದು ನಿಂತಿದ್ದರೆ, ಹೋಬಳಿಯ ಯಳನಡು, ತಿರುಮಲಾಪುರ, ಸೀಗೆಬಾಗಿ, ಬರಕನಹಾಳ್ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಕಳೆದೊಂದು ವಾರದಿಂದ ಬಿತ್ತನೆ ಮಾಡುತ್ತಿದ್ದಾರೆ.

ಹೋಬಳಿ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು ೧೧೨೫ ಹೆಕ್ಟೇರ್ ನಷ್ಟು ಹೆಸರು, ೧೧೦ ಹೆಕ್ಟೇರ್ ತೊಗರಿ, ೫೪ ಹೆಕ್ಟೇರ್ ಅಲಸಂದೆ, ೫೧ ಹೆಕ್ಟರ್ ಎಳ್ಳು, ೫೦ ಹೆಕ್ಟೇರ್ ಜೋಳದ ಬಿತ್ತನೆಯಾಗಿದೆ. ಮೇ ತಿಂಗಳ ಅಂತ್ಯದವರೆಗೆ ಮುಂಗಾರು ಬೆಳೆಗಳನ್ನು ಬಿತ್ತುವುದಿದ್ದು ಇನ್ನೂ ಹಲವು ಮಂದಿ ರೈತರು ಬಿತ್ತನೆ ಮಾಡುತ್ತಿದ್ದಾರೆ.
ಕಳೆದ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿತ್ತಾದರೂ ಸಹ ಹೆಸರು ಕಾಯಿಕಟ್ಟುವ ಸಮಯದಲ್ಲಿ ಮಳೆ ಕೈಕೊಟ್ಟು ಹೆಸರಿನ ಇಳುವರಿ ಕುಂಠಿತವಾಗುವಂತೆ ಮಾಡಿತ್ತು. ರೈತರು ಹಾಕಿದ ಬೀಜ,ಗೊಬ್ಬರ, ಬೇಸಾಯದ ಕೂಲಿಗೆ ಸಮನಾಗುವಂತೆ ಹೆಸರುಕಾಳು ಕೈಸೇರಿದ್ದವು. ಈ ಬಾರಿ ಸೂಕ್ತ ಸಮಯದಲ್ಲಿ ಮಳೆಯಾಗುತ್ತಿದ್ದು ಅದೇ ರೀತಿ ಮುಂದೆಯೂ ಸಹ ಮಳೆ ಬಂದರೆ ಹೆಸರು ಹುಲುಸಾಗಿ ಬೆಳೆದು ಕಾಯಿಕಟ್ಟುವುದಲ್ಲದೆ, ಯಾವುದೇ ಕೀಟಬಾಧೆಯಿಲ್ಲದೆ ಹೆಚ್ಚಿನ ಇಳುವರಿಯಾಗುವ ಮೂಲಕ ರೈತರ ಕೈ ಸೇರಲಿದೆ.
ಕಾರ್ಮಿಕರ ಕೊರತೆ: ಕೃಷಿ ಕೆಲಸಕ್ಕೆ ಕೂಲಿ ಕಾರ್ಮಿಕರ ಕೊರತೆ ಹಾಗೂ ರೈತರ ಬಳಿ ಜಾನುವಾರುಗಳ ಸಂಖ್ಯೆ ಕೂಡ ಸಾಕಷ್ಟು ಕಡಿಮೆ ಇದೆ. ಹೀಗಾಗಿ ಟ್ರಾಕ್ಟರ್‌ಗಳ ಮೊರೆ ಹೋಗುತ್ತಿದ್ದಾರೆ. ಕೆಲವರು ಹೊಲವನ್ನು ಸ್ವಚ್ಛಗೊಳಿಸದೆ ಹಾಗೆಯೇ ಹೆಸರು ಕಾಳು ಚೆಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಉಳುಮೆ ಮಾಡಿಸುತ್ತಿದ್ದಾರೆ.
ಎಲ್ಲೆಡೆ ಹೆಸರು ಬಿತ್ತನೆ ಬರದಿಂದ ಸಾಗುತ್ತಿದ್ದು ಕೆಲ ರೈತರು ಈ ಹಿಂದೆ ಸಂಗ್ರಹಿಟ್ಟುಕೊಂಡಿದ್ದ ಹೆಸರುಕಾಳುಗಳನ್ನು ಬಿತ್ತನೆಗೆ ಬಳಸುತ್ತಿದ್ದರೆ ಮತ್ತೆ ಕೆಲ ರೈತರು ಬಿತ್ತನೆ ಬೀಜದ ಹೆಸರು ಕಾಳುಗಳ ಹುಡುಕಾಟ ನಡೆಸಿದ್ದಾರೆ. ಬೀಜದ ಹೆಸರುಕಾಳು ಮಾರುಕಟ್ಟೆಯಲ್ಲಿ ಸಿಗಬಹುದೆಂದು ಕೆಲ ರೈತರು ಮುಖ ಮಾಡಿದ್ದು ಪ್ರತಿ ಕೆಜಿ ಹೆಸರು ಕಾಳಿಗೆ ೭೦ ರಿಂದ ೧೦೦ ಬೆಲೆ ಕೇಳಿ ವಾಪಸ್ಸಾಗುತ್ತಿದ್ದಾರೆ. ತಾವು ಹೆಸರು ಕಾಳನ್ನು ಬೆಳೆದು ಮಾರಲು ಬಂದಾಗ ಮಾತ್ರ ಕೆಜಿಗೆ ೨೫ ರಿಂದ ೩೦ ರೂ ಇರುತ್ತೆ ಆದರೆ ಇದೀಗ ದುಪ್ಪಟ್ಟು ಬೆಲೆಯಾಗಿದ್ದು ನಾವು ಬೆಳೆದು ಮಾರಿದ ಬೆಳೆಗೆ ದುಪ್ಪಟ್ಟು ಹಣಕೊಡುವಂತಾಗಿದೆಯಲ್ಲಾ ಎಂಬುದು ರೈತರ ಮಾತಾಗಿದೆ.
ಒಟ್ಟಾರೆ ಪೂರ್ವ ಮುಂಗಾರು ಉತ್ತವಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಎಲ್ಲೆಡೆ ಮುಂಗಾರು ಬೆಳೆ ಹೆಸರನ್ನು ಚೆಲ್ಲಿಸಿರುವಂತೆ ಮುಂದೆ ಬರಲಿರುವ ಮಳೆಗಳೂ ಸಹ ಸೂಕ್ತ ಸಮಯಕ್ಕೆ ಬಂದರೆ ಬಿತ್ತಿದ ಹೆಸರು ರೈತರ ಕೈಸೇರಿ ರೈತರ ಬಾಳು ಹಸನಾಗಲಿದೆ.
---------------
ಹೆಸರುಕಾಳು ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಇಲ್ಲಿನ ಹೆಸರಿಗೆ ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಬೇಡಿಕೆಯಿದ್ದು, ಹುಳಿಯಾರು ಎಪಿಎಂಸಿಯಲ್ಲಿ ಹೆಚ್ಚಿನ ಪ್ರಮಾಣದ ಹೆಸರು ಖರೀದಿ ಆಗುತ್ತದೆ : ಬಾಲಾಜಿ, ಧಾನ್ಯ ರವಾನೆದಾರ, ಹುಳಿಯಾರು.
--------------

ರೈತರಿಗಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಬಿಜಿಎಸ್-೯ ತಳಿಯ ಬಿತ್ತನೆ ಬೀಜದ ಹೆಸರಿನ ೫ ಕೆಜಿ ಬ್ಯಾಗ್ ಗೆ ಸಬ್ಸಿಡಿದರ ೩೯೦ಕ್ಕೆ ನೀಡುತ್ತಿದ್ದು, ಇದರ ಜೊತೆಗೆ ಬಿಆರ್ ಜಿ-೧ ತಳಿಯ ತೊಗರಿ, ಸಿ೧೫೨ ತಳಿಯ ಅಲಸಂದೆಯನ್ನು ಸಬ್ಸಿಡಿ ದರದಲ್ಲಿ ವಿತರಿಸುತ್ತಿದ್ದೇವೆ : ತಿಫ್ಫೇಸ್ವಾಮಿ, ಸಹಾಯಕ ಕೃಷಿ ಅಧಿಕಾರಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.