ವಿಷಯಕ್ಕೆ ಹೋಗಿ

ಮತಯಾಚನೆಗೆ ಅಭ್ಯರ್ಥಿಗಳ ವಿವಿಧ ಕಸರತ್ತು ಫೇಸ್ ಬುಕ್ ನಲ್ಲೂ ಶುರುವಾಯ್ತು ಮತಯಾಚನೆ

ಎಂಎಲ್ ಎ ಹಾಗೂ ಎಂಪಿ ಚುನಾವಣೆಗಳಿಗಿಂತ ಗ್ರಾ.ಪಂ ಚುನಾವಣೆ ಹೆಚ್ಚು ಬಿರುಸಿನಿಂದ ನಡೆಯಲಿದ್ದು , ಇಲ್ಲಿ ಪ್ರತಿಯೊಂದು ಮತಕ್ಕು ಹೆಚ್ಚು ಮನ್ನಣೆಯಿದೆ. ಒಂದೊಂದು ಮತ ಪಡೆಯಲು ಅಭ್ಯರ್ಥಿಗಳು ವಿವಿಧ ಕಸರತ್ತುಗಳನ್ನು ಮಾಡುವಂತಾಗಿದೆ.
ಜೂನ್ ೨ ರಂದು ನಡೆಯಲಿರುವ ಚುನಾವಣೆಗೆ ಮಂಗಳವಾರದಿಂದ ಮೂರ್ನಾಲ್ಕು ದಿನ ಬಹಿರಂಗ ಪ್ರಚಾರಕ್ಕೆ ಅವಕಾಶವಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಮತದಾರರ ಮನವೊಲಿಸಲು ಮುಂದಾಗಿದ್ದಾರೆ. ಕೆಲ ಅಭ್ಯರ್ಥಿಗಳು ತಾವು ಈ ಹಿಂದೆ ಮಾಡಿದ ಕಾರ್ಯಗಳನ್ನು ಹೇಳುತ್ತಾ ಮತಯಾಚಿಸಿದರೆ, ಮತ್ತೆ ಕೆಲವರು ತಮ್ಮದೇ ಆದ ಧ್ಯೇಯಗಳನ್ನೊಳಗೊಂಡ ಕರಪತ್ರಗಳನ್ನು ಮಾಡಿಸಿ ಮತದಾರರಿಗೆ ನೀಡುವ ಮೂಲಕ ಮತಯಾಚಿಸುತ್ತಿದ್ದಾರೆ.ಇನ್ನುಳಿದ ಅಭ್ಯರ್ಥಿಗಳು ಸದಾ ತಮ್ಮ ಕೈಲಿ ಕರಪತ್ರಗಳನ್ನು ಹಿಡಿದು ತಮ್ಮ ಬ್ಲಾಕ್ ನವರು ಎಲ್ಲಾದರೂ ಕಂಡರೆ ಸಾಕು ತಮಗೊಂದು ಓಟು ಕೊಡಿ, ಮರೆಯಬೇಡಿ ನಮ್ಮ ಗುರುತು ಗೊತ್ತಲ್ಲ ಎಂದು ಕೇಳಿಕೊಳ್ಳುತ್ತಿದ್ದಾರೆ.
ಹುಳಿಯಾರು ಗ್ರಾ.ಪಂ. ಚುನಾವಣೆಯಲ್ಲಿ ಫೇಸ್ ಬುಕ್ , ವಾಟ್ಸ್ ಅಪ್ ಕೂಡ ಬಳಕೆಯಾಗುತ್ತಿದ್ದು ಅಭ್ಯರ್ಥಿಗಳು ವಾಟ್ಸ್ ಅಪ್ ನಲ್ಲಿ ಮತಯಾಚನೆ ಮಾಡಿರುವ ಚಿತ್ರ.
ಹುಳಿಯಾರಿನ ೭ ನೇ ಬ್ಲಾಕ್ ನ ಅಭ್ಯರ್ಥಿ ಬಿ.ಎಸ್.ಮೋಹನ್ ಅವರು ತಮ್ಮದೇ ಆದ ಧ್ಯೇಯಗಳನ್ನೊಳಗೊಂಡ ಕರಪತ್ರ ಮಾಡಿಸಿ , ಅದನ್ನು ಮತದಾರರಿಗೆ ನೀಡುವ ಮೂಲಕ ಮತಯಾಚನೆ ಮಾಡಿದ್ದಾರೆ. ಅವರು ಮಾಡಿಸಿರುವ ಕರಪತ್ರದಲ್ಲಿ ಸೌರದೀಪದ ಅಳವಡಿಕೆ, ಗುಣಮಟ್ಟದ ಸಿಮೆಂಟ್ ರಸ್ತೆ ಹಾಗೂ ಚರಂಡಿ ವ್ಯವಸ್ಥೆ, ರಸ್ತೆ ಹಾಗೂ ಚರಂಡಿ ಸ್ವಚ್ಚತೆಗೆ ಹೆಚ್ಚು ಪ್ರಾತಿನಿಧ್ಯ, ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಂದರ ಉದ್ಯಾನವನ ನಿರ್ಮಾಣ, ರಸ್ತೆ ಬದಿ ವ್ಯಾಪ್ರಿಗಳಿಗೆ ಕಾನೂನು ಚೌಕಟ್ಟಿನಲ್ಲಿ ರಕ್ಷಣೆ, ಗ್ರಾ.ಪಂ.ಗೆ ಬರುವ ಅನುದಾನವನ್ನು ಸಾರ್ವಜನಿಕ ಕಾರ್ಯಕ್ಕೆ ವಿನಿಯೋಗಿಸುವುದು, ಶುದ್ದ ಕುಡಿಯುವ ನೀರಿನ ಸಮರ್ಪಕ ವಿತರಣೆ, ಹುಳಿಯಾರನ್ನು ಪಟ್ಟಣ ಪಂಚಾಯ್ತಿಯನ್ನಾಗಿಸಲು ಹೋರಾಟ, ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು ಹಾಗೂ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇಂತಹ ಹತ್ತಾರು ಅಭಿವೃದ್ದಿ ಕಾರ್ಯಗಳನ್ನು ತಾವು ಮಾಡಿಸುವುದಾಗಿ ತಿಳಿಸುತ್ತಾ ಮತದಾರರ ಮನವೊಲಿಸುತ್ತಿದ್ದಾರೆ.
ಹೈಟೆಕ್ ಪ್ರಚಾರ : ಮನೆಮನೆ ಪ್ರಚಾರದೊಂದಿಗೆ ಈ ಬಾರಿ ಹೈಟೆಕ್ ಪ್ರಚಾರಕ್ಕೂ ಕೆಲವರು ಮೊರೆಹೋಗಿದ್ದಾರೆ. ಹಳ್ಳಿಗಳಲ್ಲೂ ಕೂಡ ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಪೋನ್ ಇರುವುದರಿಂದ ಫೇಸ್ ಬುಕ್ ಹಾಗೂ ವಾಟ್ಸ್ ಅಪ್ ಅನ್ನು ಸಮರ್ಥವಾಗಿ ಬಳಸಿಕೊಂಡು ಸುಲಭವಾಗಿ ಅವರುಗಳನ್ನು ತಲುಪುವಂತಾಗಿದೆ. ಈ ನಿಟ್ಟಿನಲ್ಲಿ ಕೆಲವರು ಫೇಸ್ ಬುಕ್ ನಲ್ಲಿ ಹಾಗೂ ವಾಟ್ಸ್ ಅಪ್ ಗ್ರೂಪ್ ಗಳಲ್ಲಿ ಕರಪತ್ರ ಸೇರಿದಂತೆ ಮತಯಾಚನೆಯ ಹಾಗೂ ತಮ್ಮ ಚಿಹ್ನೆ ,ಭಾವಚಿತ್ರವುಳ್ಳ ಚಿತ್ರಗಳನ್ನು ಅಪ್ ಲೋಡ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ.

ಒಟ್ಟಾರೆ ಮತದಾರರ ಮನವೊಲಿಸಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಿದ್ದು ಪಟ್ಟಣದ ಟೀ ಅಂಗಡಿ ಸೇರಿದಂತೆ ಇನ್ನಿತರ ಅಂಗಡಿಗಳಲ್ಲಿ ಚುನಾವಣೆಯದ್ದೆ ಸದ್ದಾಗಿದೆ.ಯಾವ ಬ್ಲಾಕ್ ನಲ್ಲಿ ಯಾರು ನಿಂತಿದ್ದಾರೆ, ಯಾರ ವರ್ಚಸ್ಸು ಹೆಚ್ಚಿದೆ ಯಾರಯಾರ ನಡುವೆ ಹೆಚ್ಚಿನ ಪೈಪೋಟಿಯಿದೆ ಎಂಬ ಮಾತುಗಳೇ ಕೇಳಿ ಬರುತ್ತಿದೆ.
---------

ಹಿಂದಿನ ಅವಧಿಯ ಅಭಿವೃದ್ದಿಕಾರ್ಯದ ಬಗ್ಗೆ ಯಾರ ಚಕಾರವೆತ್ತುತ್ತಿಲ್ಲ ಗೆದ್ದರೆ ಏನು ಮಾಡುತ್ತೀವೆ ಎಂದು ಹೇಳುತ್ತಾರೆ ಹೊರತು ಗೆದ್ದ ನಂತರ ಯಾರೊಬ್ಬರು ತಿರುಗಿ ನೋಡುವುದಿಲ್ಲ, ಅದರೂ ಕೂಡ ಚುನಾವಣೆಗೆ ಪೈಪೋಟಿ ನಡೆಯುವುದು ಸಾಮಾನ್ಯವಾಗಿದೆ : ಸತೀಶ್, ೬ನೇ ಬ್ಲಾಕ್ ಮತದಾರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.