ವಿಷಯಕ್ಕೆ ಹೋಗಿ

ಮತಯಾಚನೆಗೆ ಅಭ್ಯರ್ಥಿಗಳ ವಿವಿಧ ಕಸರತ್ತು ಫೇಸ್ ಬುಕ್ ನಲ್ಲೂ ಶುರುವಾಯ್ತು ಮತಯಾಚನೆ

ಎಂಎಲ್ ಎ ಹಾಗೂ ಎಂಪಿ ಚುನಾವಣೆಗಳಿಗಿಂತ ಗ್ರಾ.ಪಂ ಚುನಾವಣೆ ಹೆಚ್ಚು ಬಿರುಸಿನಿಂದ ನಡೆಯಲಿದ್ದು , ಇಲ್ಲಿ ಪ್ರತಿಯೊಂದು ಮತಕ್ಕು ಹೆಚ್ಚು ಮನ್ನಣೆಯಿದೆ. ಒಂದೊಂದು ಮತ ಪಡೆಯಲು ಅಭ್ಯರ್ಥಿಗಳು ವಿವಿಧ ಕಸರತ್ತುಗಳನ್ನು ಮಾಡುವಂತಾಗಿದೆ.
ಜೂನ್ ೨ ರಂದು ನಡೆಯಲಿರುವ ಚುನಾವಣೆಗೆ ಮಂಗಳವಾರದಿಂದ ಮೂರ್ನಾಲ್ಕು ದಿನ ಬಹಿರಂಗ ಪ್ರಚಾರಕ್ಕೆ ಅವಕಾಶವಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಮತದಾರರ ಮನವೊಲಿಸಲು ಮುಂದಾಗಿದ್ದಾರೆ. ಕೆಲ ಅಭ್ಯರ್ಥಿಗಳು ತಾವು ಈ ಹಿಂದೆ ಮಾಡಿದ ಕಾರ್ಯಗಳನ್ನು ಹೇಳುತ್ತಾ ಮತಯಾಚಿಸಿದರೆ, ಮತ್ತೆ ಕೆಲವರು ತಮ್ಮದೇ ಆದ ಧ್ಯೇಯಗಳನ್ನೊಳಗೊಂಡ ಕರಪತ್ರಗಳನ್ನು ಮಾಡಿಸಿ ಮತದಾರರಿಗೆ ನೀಡುವ ಮೂಲಕ ಮತಯಾಚಿಸುತ್ತಿದ್ದಾರೆ.ಇನ್ನುಳಿದ ಅಭ್ಯರ್ಥಿಗಳು ಸದಾ ತಮ್ಮ ಕೈಲಿ ಕರಪತ್ರಗಳನ್ನು ಹಿಡಿದು ತಮ್ಮ ಬ್ಲಾಕ್ ನವರು ಎಲ್ಲಾದರೂ ಕಂಡರೆ ಸಾಕು ತಮಗೊಂದು ಓಟು ಕೊಡಿ, ಮರೆಯಬೇಡಿ ನಮ್ಮ ಗುರುತು ಗೊತ್ತಲ್ಲ ಎಂದು ಕೇಳಿಕೊಳ್ಳುತ್ತಿದ್ದಾರೆ.
ಹುಳಿಯಾರು ಗ್ರಾ.ಪಂ. ಚುನಾವಣೆಯಲ್ಲಿ ಫೇಸ್ ಬುಕ್ , ವಾಟ್ಸ್ ಅಪ್ ಕೂಡ ಬಳಕೆಯಾಗುತ್ತಿದ್ದು ಅಭ್ಯರ್ಥಿಗಳು ವಾಟ್ಸ್ ಅಪ್ ನಲ್ಲಿ ಮತಯಾಚನೆ ಮಾಡಿರುವ ಚಿತ್ರ.
ಹುಳಿಯಾರಿನ ೭ ನೇ ಬ್ಲಾಕ್ ನ ಅಭ್ಯರ್ಥಿ ಬಿ.ಎಸ್.ಮೋಹನ್ ಅವರು ತಮ್ಮದೇ ಆದ ಧ್ಯೇಯಗಳನ್ನೊಳಗೊಂಡ ಕರಪತ್ರ ಮಾಡಿಸಿ , ಅದನ್ನು ಮತದಾರರಿಗೆ ನೀಡುವ ಮೂಲಕ ಮತಯಾಚನೆ ಮಾಡಿದ್ದಾರೆ. ಅವರು ಮಾಡಿಸಿರುವ ಕರಪತ್ರದಲ್ಲಿ ಸೌರದೀಪದ ಅಳವಡಿಕೆ, ಗುಣಮಟ್ಟದ ಸಿಮೆಂಟ್ ರಸ್ತೆ ಹಾಗೂ ಚರಂಡಿ ವ್ಯವಸ್ಥೆ, ರಸ್ತೆ ಹಾಗೂ ಚರಂಡಿ ಸ್ವಚ್ಚತೆಗೆ ಹೆಚ್ಚು ಪ್ರಾತಿನಿಧ್ಯ, ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಂದರ ಉದ್ಯಾನವನ ನಿರ್ಮಾಣ, ರಸ್ತೆ ಬದಿ ವ್ಯಾಪ್ರಿಗಳಿಗೆ ಕಾನೂನು ಚೌಕಟ್ಟಿನಲ್ಲಿ ರಕ್ಷಣೆ, ಗ್ರಾ.ಪಂ.ಗೆ ಬರುವ ಅನುದಾನವನ್ನು ಸಾರ್ವಜನಿಕ ಕಾರ್ಯಕ್ಕೆ ವಿನಿಯೋಗಿಸುವುದು, ಶುದ್ದ ಕುಡಿಯುವ ನೀರಿನ ಸಮರ್ಪಕ ವಿತರಣೆ, ಹುಳಿಯಾರನ್ನು ಪಟ್ಟಣ ಪಂಚಾಯ್ತಿಯನ್ನಾಗಿಸಲು ಹೋರಾಟ, ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು ಹಾಗೂ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇಂತಹ ಹತ್ತಾರು ಅಭಿವೃದ್ದಿ ಕಾರ್ಯಗಳನ್ನು ತಾವು ಮಾಡಿಸುವುದಾಗಿ ತಿಳಿಸುತ್ತಾ ಮತದಾರರ ಮನವೊಲಿಸುತ್ತಿದ್ದಾರೆ.
ಹೈಟೆಕ್ ಪ್ರಚಾರ : ಮನೆಮನೆ ಪ್ರಚಾರದೊಂದಿಗೆ ಈ ಬಾರಿ ಹೈಟೆಕ್ ಪ್ರಚಾರಕ್ಕೂ ಕೆಲವರು ಮೊರೆಹೋಗಿದ್ದಾರೆ. ಹಳ್ಳಿಗಳಲ್ಲೂ ಕೂಡ ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಪೋನ್ ಇರುವುದರಿಂದ ಫೇಸ್ ಬುಕ್ ಹಾಗೂ ವಾಟ್ಸ್ ಅಪ್ ಅನ್ನು ಸಮರ್ಥವಾಗಿ ಬಳಸಿಕೊಂಡು ಸುಲಭವಾಗಿ ಅವರುಗಳನ್ನು ತಲುಪುವಂತಾಗಿದೆ. ಈ ನಿಟ್ಟಿನಲ್ಲಿ ಕೆಲವರು ಫೇಸ್ ಬುಕ್ ನಲ್ಲಿ ಹಾಗೂ ವಾಟ್ಸ್ ಅಪ್ ಗ್ರೂಪ್ ಗಳಲ್ಲಿ ಕರಪತ್ರ ಸೇರಿದಂತೆ ಮತಯಾಚನೆಯ ಹಾಗೂ ತಮ್ಮ ಚಿಹ್ನೆ ,ಭಾವಚಿತ್ರವುಳ್ಳ ಚಿತ್ರಗಳನ್ನು ಅಪ್ ಲೋಡ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ.

ಒಟ್ಟಾರೆ ಮತದಾರರ ಮನವೊಲಿಸಲು ನಾನಾ ರೀತಿಯ ಕಸರತ್ತುಗಳು ನಡೆಯುತ್ತಿದ್ದು ಪಟ್ಟಣದ ಟೀ ಅಂಗಡಿ ಸೇರಿದಂತೆ ಇನ್ನಿತರ ಅಂಗಡಿಗಳಲ್ಲಿ ಚುನಾವಣೆಯದ್ದೆ ಸದ್ದಾಗಿದೆ.ಯಾವ ಬ್ಲಾಕ್ ನಲ್ಲಿ ಯಾರು ನಿಂತಿದ್ದಾರೆ, ಯಾರ ವರ್ಚಸ್ಸು ಹೆಚ್ಚಿದೆ ಯಾರಯಾರ ನಡುವೆ ಹೆಚ್ಚಿನ ಪೈಪೋಟಿಯಿದೆ ಎಂಬ ಮಾತುಗಳೇ ಕೇಳಿ ಬರುತ್ತಿದೆ.
---------

ಹಿಂದಿನ ಅವಧಿಯ ಅಭಿವೃದ್ದಿಕಾರ್ಯದ ಬಗ್ಗೆ ಯಾರ ಚಕಾರವೆತ್ತುತ್ತಿಲ್ಲ ಗೆದ್ದರೆ ಏನು ಮಾಡುತ್ತೀವೆ ಎಂದು ಹೇಳುತ್ತಾರೆ ಹೊರತು ಗೆದ್ದ ನಂತರ ಯಾರೊಬ್ಬರು ತಿರುಗಿ ನೋಡುವುದಿಲ್ಲ, ಅದರೂ ಕೂಡ ಚುನಾವಣೆಗೆ ಪೈಪೋಟಿ ನಡೆಯುವುದು ಸಾಮಾನ್ಯವಾಗಿದೆ : ಸತೀಶ್, ೬ನೇ ಬ್ಲಾಕ್ ಮತದಾರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...