ವಿಷಯಕ್ಕೆ ಹೋಗಿ

ಪ.ಪಂ.ಅಗಲೇ ಬೇಕಾಗಿದ್ದ ಹುಳಿಯಾರು ಗ್ರಾ.ಪಂ. ಆಗಿಯೇ ಉಳಿಯಿತು

ಈ ಸಲವೂ ಈಡೇರದ ನಿರೀಕ್ಷೆ
-------------
ವರದಿ : ಡಿ.ಆರ್.ನರೇಂದ್ರಬಾಬು
                  ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ಅತಿದೊಡ್ಡ ಗ್ರಾಮ ಪಂಚಾಯ್ತಿ ಎಂಬ ಹೆಗ್ಗಳಿಕೆ ಹೊಂದಿ ಈ ಬಾರಿ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಬೇಕಾಗಿದ್ದ ಹುಳಿಯಾರು ಈ ಚುನಾವಣೆಯಲ್ಲೂ ಗ್ರಾಮ ಪಂಚಾಯ್ತಿಯಾಗಿಯೇ ಮುಂದುವರಿದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
                   ಸರ್ಕಾರ ಎಸ್‌.ಜಿ. ನಂಜ­ಯ್ಯನ­ಮಠ ನೇತೃತ್ವದ ಸಮಿತಿ ಶಿಫಾರಸಿನಂತೆ ರಾಜ್ಯದ 40 ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯ್ತಿ­ಗಳಾಗಿ ಮೇಲ್ದರ್ಜೆ­ಗೇರಿಸ­ಲು ಪ್ರಸ್ತಾಪಮಾಡಿದೆ. ಆದರೆ ಈ ಪಟ್ಟಿಯಲ್ಲಿ ಜಿಲ್ಲೆಯ ಹುಳಿಯಾರನ್ನು ಮೇಲ್ದರ್ಜೆಗೇರಿಸದೆ ನಿರ್ಲಕ್ಷವಹಿಸಿದ್ದು, ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರುವ ಅವಕಾಶ ಈ ಬಾರಿಯೂ ಬಾರದೆ ಬಹುದಿನಗಳಿಂದ ಈ ಅವಕಾಶಕ್ಕೆ ಕಾಯುತ್ತಿದ್ದ ಜನ ನಿರಾಶರಾಗಿದ್ದಾರೆ.
ಹುಳಿಯಾರು ಗ್ರಾಮ ಪಂಚಾಯ್ತಿ

                  ವ್ಯಾಪ್ತಿ: ಹುಳಿಯಾರು ಗ್ರಾ.ಪಂ ೧೩ ಬ್ಲಾಕ್ ಆಗಿ ವಿಂಗಡಣೆಯಾಗಿದ್ದು ಇದುವರೆಗಿನ ೩೩ ಜನ ಸದಸ್ಯರ ಬದಲು ಈ ಬಾರಿ ೩೯ ಮಂದಿ ಸದಸ್ಯರನ್ನೊಳಗೊಂಡಿದೆ. ಭೌಗೋಳಿಕ ವಿಸ್ತೀರ್ಣ ೨೮೯೯ ಎಕರೆ ೧೬ ಗುಂಟೆ ಇದ್ದು ಯಾಕೂಬ್ ಸಾಬ್, ಸೋಮಜ್ಜನಪಾಳ್ಯ,ಕಾಮಶೆಟ್ಟಿಪಾಳ್ಯ, ಕೋಡಿಪಾಳ್ಯ,ವಳಗೆರೆಹಳ್ಳಿ, ಕೆರೆಕೋಡಿ ತಿರುಮಲಾಪುರ, ಅಮಾನಿಕೆರೆ, ತಿಪಟೂರು ರಸ್ತೆಯನ್ನೊಳಗೊಂಡು ಚುನಾವಣಾ ಕ್ಷೇತ್ರದ ವ್ಯಾಪ್ತಿ ಹೊಂದಿದೆ.
                   ಹುಳಿಯಾರು ಹೋಬಳಿ ಕೇಂದ್ರವಾಗಿದ್ದರೂ ಸಹ ತಾಲ್ಲೂಕಿಗೂ ಮೀರಿ ವಹಿವಾಟು ನಡೆಸುತ್ತಿದೆ. ವ್ಯವಹಾರ ವಹಿವಾಟಿನಿಂದ ಚಿ.ನಾ.ಹಳ್ಳಿ ತಾಲ್ಲೂಕನ್ನೇ ಹಿಂದಿಕ್ಕಿರುವ ಹುಳಿಯಾರನ್ನು ತಾಲ್ಲೂಕು ಕೇಂದ್ರವಾಗಿಸಲು ಕಳೆದ ನಾಲ್ಕೈದು ವರ್ಷದಿಂದ ಒಂದೆಡೆ ಹೋರಾಟ ನಡೆದರೆ, ಮತ್ತೊಂದೆಡೆ ಸದ್ದಿಲ್ಲದೆ ಪ.ಪಂ. ಆಗಿಸಲು ಕ್ರಮ ನಡೆದಿತ್ತು. 

ಅರ್ಹತೆ ಏನು : ಯಾವುದೇ ಒಂದು ಪಂಚಾಯ್ತಿಯನ್ನು ಪ.ಪಂ.ಯಾಗಿ ಮೇಲ್ದರ್ಜೆಗೇರಿಸಲು ಪುರಸಭೆಯ ಅಧಿನಿಯಮದ ಪ್ರಕಾರ ಗ್ರಾ.ಪಂ. ಜನಸಂಖ್ಯೆ 10,000ಕ್ಕೆ ಕಡಿಮೆಯಿಲ್ಲದಂತೆ ಹಾಗೂ 20,000ಕ್ಕೆ ಹೆಚ್ಚಿಲ್ಲದಂತೆ ಇರಬೇಕು. ಜನಸಾಂದ್ರತೆಯು ಆ ಪ್ರದೇಶದ ಒಂದು ಚ.ಕಿ.ಮೀ ವೀಸ್ತೀರ್ಣಕ್ಕೆ 400ಕ್ಕಿಂತ ಕಡಿಮೆ ಇಲ್ಲದಿರುವುದು ಹಾಗೂ ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗಾವಕಾಶಗಳ ಶೇಕಡವಾರು ಪ್ರಮಾಣ ಒಟ್ಟು ಉದ್ಯೋಗದ ಪ್ರಮಾಣದ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಇರಬೇಕು. ಈ ಹಿನ್ನೆಲೆಯಲ್ಲಿ ಹುಳಿಯಾರು ಗ್ರಾ.ಪಂ.ವ್ಯಾಪ್ತಿಯಲ್ಲಿ 2011ರ ಜನಗಣತಿ ಅನ್ವಯ 15,413 ಜನಸಂಖ್ಯೆ ಹೊಂದಿ ಈ ಸಾಲಿನಲ್ಲಿ ಅಂದಾಜು ಇಪ್ಪತ್ತು ಸಾವಿರ ಜನ ಸಂಖ್ಯೆ ತಲುಪಿರುವ ಹುಳಿಯಾರು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರುವ ಎಲ್ಲಾ ಲಕ್ಷಣಗಳನ್ನು ಹೊಂದಿದ್ದು ,ಕಳೆದ ಐದು ವರ್ಷಗಳಿಂದ ಈ ಬಗ್ಗೆ ಹಲವಾರು ಬಾರಿ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.
ಸದಸ್ಯರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

                     ಜಿಲ್ಲೆಯ ಇತರ ಗ್ರಾ.ಪಂ ಗಳಿಗಿಂತ ಹೋಲಿಸಿದಲ್ಲಿ ವಾರ್ಷಿಕ ಅಂದಾಜು ೫೦ಲಕ್ಷ ರೂರೆಗೂ ಆದಾಯ ಹೊಂದಿರುವ ಹುಳಿಯಾರು ಆದಾಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯನ್ನಾಗಿಸುವ ನಿಟ್ಟಿನಲ್ಲಿ ಪೌರಾಡಾಳಿತ ನಿರ್ದೇಶನಾಲಯದ ಹತ್ತು ಹಲವು ದಾಖಲೆಗಳನ್ನು ತರಿಸಿಕೊಂಡರು ಸಹ ಪ್ರಗತಿ ಮಾನ್ಯ ಶೂನ್ಯ.
ಹುಳಿಯಾರನ್ನು ಪ.ಪಂಯನ್ನಾಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಗರಾಭಿವೃದ್ದಿ ಸಚಿವರಿಗೆ ನೀಡಿರುವ ನಡವಳಿ ಪತ್ರ.


ಇಚ್ಚಾ ಶಕ್ತಿ ಕೊರತೆ: ಹುಳಿಯಾರು ಪ.ಪಂ ಆಗದಿರಲು ರಾಜಕೀಯ ಇಚ್ಚಾಶಕ್ತಿ ಕಾರಣ ಎನ್ನಲಾಗಿದೆ. ಶಾಸಕ ಸಿ.ಬಿ.ಸುರೇಶ್ ಬಾಬು ಈ ಬಗ್ಗೆ ಮುಂಚಿನಿಂದಲೂ ನಿರಾಸಕ್ತಿ ಹೊಂದಿದ್ದು ಉಸ್ತುವಾರಿ ಸಚಿವ ಜಯಚಂದ್ರ ಮಾತ್ರ ಆಸಕ್ತಿವಹಿಸಿದ್ದು ,ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ, ಪೌರಾಡಾಳಿತ ಸಚಿವ ಖಮರುಲ್ಲಾ ಇಸ್ಲಾಂ ಅವರುಗಳಿಗೆ ಪಟ್ಟಣ ಪಂಚಾಯ್ತಿ ಮಾಡಲು ಒತ್ತಾಯಿಸಿದ್ದರು. ಇತ್ತೀಚೆಗೆ ಸಂಸದ ಮುದ್ದುಹನುಮೇಗೌಡರು ಸಹ ಈ ಬಗ್ಗೆ ಗಮನ ಹರಿಸಿದ್ದು ಪ.ಪಂ.ಆಗಿ ಮಾಡೇ ತಿರುವುದಾಗಿ ಘೋಷಣೆ ಮಾಡಿದ್ದು ಜನರ ನಂಬಿಕೆ ಹೆಚ್ಚು ಮಾಡಿತ್ತು.
ಹುಳಿಯಾರನ್ನು ಪ.ಪಂಯಾಗಿ ಮೇಲ್ದರ್ಜೇಗೇರಿಸುವಂತೆ ಗ್ರಾ.ಪಂ.ಯ ಸದಸ್ಯರ ನಿಯೋಗದಿಂದ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾಯೋಜನಾಧಿಕಾರಿ ಗೀತಾ ಅವರಿಗೆ ದಾಖಲೆಗಳ ಸಲ್ಲಿಕೆ

                                    ಚುನಾವಣೆ ಘೋಷಣೆಯಾಗುವವರೆಗು ಹುಳಿಯಾರು ಪ.ಪಂ. ಆಗೇ ತೀರುತ್ತದೆಂಬ ಭರವಸೆ ಹೊಂದಿದ್ದ ಇಲ್ಲಿನ ಜನತೆಗೆ ಇದೀಗ ಗ್ರಾ.ಪಂಯಾಗಿಯೇ ಮುಂದುವರೆದಿರುವುದು ಭ್ರಮನಿರಸನಕ್ಕೆ ಕಾರಣವಾಗಿದೆ. ಪ.ಪಂ ಆಗದಿರಲು ಹಾಲಿ ಇದ್ದ ಕೆಲವು ಸದಸ್ಯರ ರಾಜಕೀಯ ಆಕಾಂಕ್ಷೆಯೇ ಕಾರಣ ಎನ್ನುವ ಮಾತು ಸಹ ಕೇಳಿಬಂದಿದ್ದು, ಪ.ಪಂ ಆದಲ್ಲಿ ಸದಸ್ಯರ ಸಂಖ್ಯೆ ೩೩ರ ಬದಲು ೧೨ , ೧೩ರ ಆಸುಪಾಸಿಗೆ ಬರುವುದರಿಂದ ಕೆಲವರಿಗೆ ಅಧಿಕಾರ ದೊರೆಯದಿರುವುದರಿಂದ ಅವರುಗಳೇ ಇದಕ್ಕೆ ಅಡ್ಡಗಾಲು ಹಾಕಿರಬಹುದು ಎಂದು ಹೇಳಲಾಗುತ್ತಿದೆ.
                     ಜನಸಂಖ್ಯೆ ಅಧಾರದ ಮೇಳೆ ಹುಳಿಯಾರಿಗಿಂತ ಕಡಿಮೆ ಜನಸಂಖ್ಯೆಯಿರುವ ಅನೇಕ ಗ್ರಾಮ ಪಂಚಾಯಿತಿಗಳು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ ಏರಿದ್ದರೂ ಕೂಡ ಹುಳಿಯಾರಿಗೆ ಪಟ್ಟಣ ಪಂಚಾಯ್ತಿ ಆಗುವ ಭಾಗ್ಯ ಇಲ್ಲದಿರುವುದು ದುರಂತ. ಒಟ್ಟಾರೆ ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ಹುಳಿಯಾರು ಪ.ಪಂ ಆಗಲು ಮತ್ತೆ ೫ ವರ್ಷ ಕಾಯುವ ಅನಿವಾರ್ಯತೆ ಎದುರಾಗಿದೆ.
---------------------------------
ಹುಳಿಯಾರು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ್ದರೆ ಇನ್ನೂ ಹೆಚ್ಚು ಅಭಿವೃದ್ದಿಯಾಗುತ್ತಿತ್ತು. ಕೇವಲ ಸದಸ್ಯರ ಸಂಖ್ಯೆ ಮಾತ್ರ ಜಾಸ್ತಿಯಾಗಿದ್ದು ಬಿಟ್ಟರೆ ಬೇರೆನೂ ಆಗಿಲ್ಲ .ಅಭಿವೃದ್ದಿ ದೃಷ್ಠಿಯಿಂದ ಹುಳಿಯಾರು ಗ್ರಾ.ಪಂ.ಯನ್ನು ಉನ್ನತೀಕರಿಸಿ ಪ.ಪಂ.ಯಾಗಿ ಮಾಡಬೇಕಾದ ಅವಶ್ಯಕತೆ ಇವತ್ತಿಗೂ ಕೂಡ ಇದ್ದೇಯಿದೆ
                                 ಬಡಗಿರಾಮಣ್ಣ. ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ.

----------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.