ವಿಷಯಕ್ಕೆ ಹೋಗಿ

ನೂತನ ಸದಸ್ಯರ ಚಮತ್ಕಾರ ಸ್ವಂತ ಖರ್ಚಲ್ಲೇ ಕೆಲಸ ಮಾಡಿಸಲು ಮುಂದಾದ ಗ್ರಾ.ಪಂ.ನ ಕೆಲ ಸದಸ್ಯರು

 ಗ್ರಾ.ಪಂ.ಯ ನೂತನ ಸದಸ್ಯರಾಗಿ ಆಯ್ಕೆಯಾದ ಎರಡೇ ದಿನಕ್ಕೆ ತಮ್ಮ ಬ್ಲಾಕ್ ನಲ್ಲಿನ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಗ್ರಾ.ಪಂ.ಯಿಂದ ಬರುವ ಅನುದಾನಕ್ಕೆ ಕಾದುಕೂರದೆ ಸ್ವಂತ ಖರ್ಚಿನಲ್ಲೇ ಕೆಲಸ ಮಾಡುವಲ್ಲಿ ೬ ನೇ ಬ್ಲಾಕ್ ನ ಸದಸ್ಯರಾದ ಕೋಳಿಶ್ರೀನಿವಾಸ್ ಹಾಗೂ ರಾಘವೇಂದ್ರ ಸಾರ್ವಜನಿಕರ ಗಮನ ಸೆಳೆದಿದ್ದಾರೆ.
ಹುಳಿಯಾರಿನ ೬ ನೇ ಬ್ಲಾಕ್ ನಲ್ಲಿ ಆಯ್ಕೆಯಾದ ಸದಸ್ಯರು ತಮ್ಮ ಸ್ವಂತ ಖರ್ಚಿನಲ್ಲಿ ಕೆಲಸ ಮಾಡಿಸಿರುವುದು.
ಪಟ್ಟಣದೆಲ್ಲೆಡೆ ಕಸದ ರಾಶಿರಾಶಿ ಬಿದ್ದಿದ್ದು, ಚರಂಡಿ ತುಂಬ ಹೂಳು ತುಂಬಿ ದುರ್ನಾತ ಬೀರುತ್ತಿದ್ದರೂ ಸಹ ಈ ಹಿಂದೆ ಇದ್ದ ಸದಸ್ಯರು ಗಮನಗೊಡದೆ ಇದ್ದು, ಇದೀಗ ಆಯ್ಕೆಯಾಗಿರುವ ನೂತನವಾಗಿ ಆಯ್ಕೆಯಾದ ಸದಸ್ಯರ ಪೈಕಿ ಕೆಲವರು ಹೊಸಹುಮ್ಮಸ್ಸಿನಿಂದ ತಮ್ಮ ಬ್ಲಾಕ್ ಗಳಲ್ಲಿ ಕೆಲಸ ಕಾರ್ಯ ಮಾಡಿಸಲು ಮುಂದಾಗಿದ್ದಾರೆ.
ಪಟ್ಟಣದ ೬ ನೇ ಬ್ಲಾಕ್ ನಲ್ಲಿ ವಾಸವಿ ಶಾಲೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕ ಕೊಳಯಿಯೊಂದರ ಬಳಿ ನೀರು ಪೋಲಾಗುತ್ತಿದ್ದು ರಸ್ತೆಯಲ್ಲೆಲ್ಲಾ ಹರಿದು ಕೆಸರುಂಟಾಗುತ್ತಿತ್ತು. ಈ ಬಗ್ಗೆ ಗ್ರಾ.ಪಂ.ಯವರ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಪ್ರಯೋಜವಾಗಿರರಿಲ್ಲ. ಇದೀಗ ನೂತನ ಸದಸ್ಯರಾಗಿ ಆಯ್ಕೆಯಾದ ಸದಸ್ಯರು ಈ ಕೊಳಾಯಿಯ ಸುತ್ತ ಪ್ಲಾಟ್ ಫಾರಂ ಕಟ್ಟಿ ನೀರು ವ್ಯರ್ಥವಾಗಿ ರಸ್ತೆಯಲ್ಲಿ ಹರಿಯುವುದನ್ನು ತಪ್ಪಿಸಿದ್ದಾರೆ. ಹೆಚ್ಚಾದ ನೀರು ಪೈಪ್ ಮೂಲಕ ಚರಂಡಿ ಸೇರುವ ವ್ಯವಸ್ಥೆ ಸಹ ಮಾಡಿದ್ದಾರೆ.

ಚುನಾವಣೆಯಲ್ಲಿ ಗೆಲ್ಲುವ ತನಕ ಆ ಕೆಲಸ, ಈ ಕೆಲಸ ಮಾಡಿಸುವುದಾಗಿ ಹೇಳುವ ಅಭ್ಯರ್ಥಿಗಳು ಗೆದ್ದ ನಂತರ ಇತ್ತ ಗಮನ ಹರಿಸುವುದಿಲ್ಲ ಇಂತಹ ಸನ್ನಿವೇಶದಲ್ಲಿ ೬ ನೇ ಬ್ಲಾಕ್ ನ ಸದಸ್ಯರು ಚುನಾವಣೆ ಸಂದರ್ಭದಲ್ಲಿ ಹೇಳಿದಂತೆ ಇದೀಗ ತಮ್ಮ ಬ್ಲಾಕ್ ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ. ಇವರಂತೆಯೇ ಪಟ್ಟಣದ ಆಯಾಯ ಬ್ಲಾಕ್ ನ ಸದಸ್ಯರೂ ಸಹ ಸ್ವಯಂಪ್ರೇರಣೆಯಿಂದ ತಮ್ಮ ಬ್ಲಾಕ್ ಗಳಲ್ಲಿರುವ ಸಮಸ್ಯೆಗಳ ನಿವಾರಣೆಗೆ ಮುಂದಾದರೆ ಪಟ್ಟಣದ ಬಹುತೇಕ ಸಮಸ್ಯೆ ಬಗೆಹರಿಯಲಿದೆ.
ನಾವು ಚುನಾವಣೆಯಲ್ಲಿ ಸ್ಪರ್ಧಿಸುವ ವೇಳೆ ಮತದಾರರಿಗೆ ಭರವಸೆ ನೀಡುವಂತೆ, ಗೆದ್ದ ನಂತರ ಆ ಭರವಸೆಗಳನ್ನು ಈಡೇರಿಸಬೇಕು. ಅದಕ್ಕೆ ಪಂಚಾಯ್ತಿಯಿಂದ ಬರುವ ಅನುದಾನವನ್ನು ಕಾಯುತ್ತಾ ಕೂತರೆ ದಿನಗಳು ಉರುಳುತ್ತವೆ. ಪಂಚಾಯ್ತಿಯಿಂದ ಬರುವ ಅನುದಾನವನ್ನು ಕಾಯುವ ಬದಲು ಸಣ್ಣಪುಟ್ಟ ಕೆಲಸಗಳನ್ನು ತಮ್ಮ ಸ್ವಂತ ಖರ್ಚಿನಲ್ಲೇ ಮಾಡಿ ಜನಕ್ಕೆ ಹೇಳಿದಂತೆ ನಡೆಯಲು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ತಮ್ಮ ೬ ಬ್ಲಾಕ್ ನಲ್ಲಿರುವ ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳು, ಚರಂಡಿ ವ್ಯವಸ್ಥೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಮುಂದಾಗುವುದಾಗಿ ಸದಸ್ಯರಾದ ಕೋಳಿಶ್ರೀನಿವಾಸ್ ತಿಳಿಸುತ್ತಾರೆ.

ಒಟ್ಟಾರೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವವರು ತಮ್ಮ ಬ್ಲಾಕ್ ಗಳಲ್ಲಿ ಹೊಸಹುಮ್ಮಸ್ಸಿನಿಂದ ಕಾರ್ಯ ಮಾಡುತ್ತಿರುವುದು ಸ್ವಾಗತಾರ್ಹವಾಗಿದ್ದು, ಇದೇ ಹುಮ್ಮಸ್ಸು, ಜವಬ್ದಾರಿ ಮುಂದಿನ ೫ ವರ್ಷವೂ ಇರುತ್ತದೆಯೋ, ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...