ವಿಷಯಕ್ಕೆ ಹೋಗಿ

ಮದ್ಯದಂಗಡಿ ಸನ್ನದುದಾರರು ಹಾಕಿದ್ದ ತಕರಾರು ಅರ್ಜಿ ವಜಾ ಅಬಕಾರಿ ಡಿಸಿಯವವರ ಆದೇಶ ಎತ್ತಿಹಿಡಿದ ಕೋರ್ಟ್

ಇಲ್ಲಿನ ಗ್ರಾಮದೇವತೆ ಶ್ರೀಹುಳಿಯಾರಮ್ಮ ಹಾಗೂ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಸಮೀಪವಿರುವ ಹಾಗೂ ಅಕ್ಷೇಪಣಾರ್ಹ ಸ್ಥಳದಲ್ಲಿರುವ ಶ್ರಿರಂಗನಾಥ ಮದ್ಯದಂಗಡಿಯನ್ನು ತೆರವುಗೊಳಿಸುವ ವಿಚಾರವಾಗಿ ಮದ್ಯದಂಗಡಿ ಮಾಲೀಕ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಮಾನ್ಯ ಅಬಕಾರಿ ನ್ಯಾಯಾಲಯ ವಜಾಗೊಳಿಸಿದೆ.
ಸನ್ನದುದಾರರು ಹಾಕಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿರುವ ಬಗ್ಗೆ ಅಬಕಾರಿ ನ್ಯಾಯಾಲಯ ನೀಡಿರುವ ಆದೇಶಪತ್ರ.
ಪಟ್ಟಣದ ದಿ.ಟೌನ್ ಕೋಅಪರೇಟೀವ್ ಸೊಸೈಟಿಗೆ ಸೇರಿದ ಕಟ್ಟಡದಲ್ಲಿ ಎನ್.ಜಿ.ನಾಗರಾಜ್ ಅವರಿಗೆ ಸೇರಿದ ರಂಗನಾಥ ಲಿಕ್ಕರ್ ಶಾಪ್ ಇದೆ. ಈ ಮದ್ಯದಂಗಡಿ ಜನ ನಿಬಿಡ ಪ್ರದೇಶದಲ್ಲಿರುವುದಲ್ಲದೆ, ಇದರ ಸಮೀಪವೇ ಗ್ರಾಮದೇವತೆ ಹುಳಿಯಾರಮ್ಮ ದೇವಾಲಯ, ಶ್ರೀರಂಗನಾಥಸ್ವಾಮಿ ದೇವಾಲಯ, ಬೀರಲಿಂಗೇಶ್ವರಸ್ವಾಮಿ ದೇವಾಲಯ ಹಾಗೂ ಸರ್ಕಾರಿ ಆಸ್ಪತ್ರೆಯಿದ್ದು ನಿತ್ಯ ನೂರಾರು ಮಂದಿ ಸಂಚರಿಸುತ್ತಿರುತ್ತಾರೆ. ಈ ಮದ್ಯದಂಗಡಿಯಿಂದ ನಿತ್ಯ ಇಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ದೇವಾಲಯಕ್ಕೆ ಬರುವವರಿಗೆ ತೊಂದರೆಯಾಗುತ್ತಿದ್ದು ಮದ್ಯದಂಗಡಿಯನ್ನು ತೆರವುಗೊಳಿಸುವಂತೆ ಸೊಸೈಟಿಯವರು, ಪಟ್ಟಣದ ವಿವಿಧ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಕಳೆದ ಕೆಲ ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದರು.
ಸಾರ್ವಜನಿಕ ಒತ್ತಾಯದಂತೆ ಅಬಕಾರಿ ಡಿಸಿ ಮೋಹನ್ ಕುಮಾರ್ ಅವರ ಸಮಕ್ಷಮದಲ್ಲಿ ೨೦೧೪ರ ಆಗಸ್ಟ್ ನಲ್ಲಿ ಮದ್ಯದಂಗಡಿಯಿಂದ ವಿವಿಧ ದೇವಾಲಯ ಹಾಗೂ ಹೆದ್ದಾರಿಗೆ ಇರುವ ಅಂತರವನ್ನು ಅಳತೆ ಮಾಡಿದ್ದು, ಮದ್ಯದಂಗಡಿಯಿಂದ ಗ್ರಾಮದೇವತೆ ಹುಳಿಯಾರಮ್ಮ ದೇವಸ್ಥಾನಕ್ಕೆ 46.೪ ಮೀ , ಅನಂತಶಯನರಂಗನಾಥಸ್ವಾಮಿ ದೇವಸ್ಥಾನಕ್ಕೆ 96.3 ಮೀ , ಬೀರಲಿಂಗೇಶ್ವರ ದೇವಸ್ಥಾನ ೯೩.೭ ಮೀ, ಕೆಂಚಮ್ಮ ದೇವಸ್ಥಾನಕ್ಕೆ ೧೫೩.೫ಮೀ, ಸಾರ್ವಜನಿಕ ಆಸ್ಪತ್ರೆಗೆ ೧೦೭ ಮೀ ಹಾಗೂ ರಾಜ್ಯ ಹೆದ್ದಾರಿಗೆ ೧೧೬ ಮೀ ಆಳತೆಯಿದ್ದು ಮಹಜರ್ ಮಾಡಲಾಗಿತ್ತು. ಈ ಅಳತೆಯ ಜೊತೆಗೆ ಅಬಕಾರಿ ಡಿಸಿಯವರು ತಹಸೀಲ್ದಾರ್ ವರದಿ, ತಾಲ್ಲೂಕು ಹಾಗೂ ಜಿಲ್ಲಾ ನೊಂದಣಾಕಾರಿಗಳ ವರದಿ, ಚಿ.ನಾ.ಹಳ್ಳಿ ಅಬಕಾರಿ ನಿರೀಕ್ಷಕರ ವರದಿ,ತಿಪಟೂರು ಅಬಕಾರಿ ಉಪಈಕ್ಷಕರ ವರದಿ, ಹೆದ್ದಾರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಇವರುಗಳ ವರದಿಯನ್ನು ಆದರಿಸಿ ಅಂತಿಮವಾಗಿ ಡಿಸೆಂಬರ್ ೨೮ರ ಒಳಗೆ ಮದ್ಯದಂಗಡಿಯನ್ನು ಬೇರೊಂದು ನಿರಾಕ್ಷೇಪಣಾ ಸ್ಥಳಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರು ಆದೇಶ ಸಹ ಹೊರಡಿಸಿ ನೋಟಿಸ್ ನೀಡಿದ್ದರು.

ಅಂಗಡಿ ಮಾಲೀಕರಿಗೆ ಸನ್ನದನ್ನು ಸ್ಥಳಾಂತರಿಸುವಂತೆ ನೋಟಿಸ್ ನೀಡಿದ್ದಾಗ್ಯೂ ಸಹ ಮದ್ಯದಂಗಡಿಯಿಂದ ರಂಗನಾಥಸ್ವಾಮಿ ದೇವಾಲಯಕ್ಕೆ ನೂರು ಮೀ.ಗೂ ಹೆಚ್ಚು ಅಂತರವಿದೆ ಎಂದು ಮತ್ತೆ ತಕರಾರು ತೆಗೆದು ಕೋರ್ಟ್ ಗೆ ಅರ್ಜಿ ಹಾಕಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಅಬಕಾರಿ ನ್ಯಾಯಾಲಯ ಮತ್ತೊಮ್ಮೆ ಅಳತೆಕಾರ್ಯ ಮಾಡಿಸಿ, ವರದಿ ಪಡೆದು ಈ ಹಿಂದೆ ಜಿಲ್ಲಾ ಅಬಕಾರಿ ಉಪಆಯುಕ್ತರು ಹೊರಡಿಸಿದ್ದ ಸ್ಥಳಾಂತರದ ಆದೇಶವನ್ನು ಎತ್ತಿಹಿಡಿದಿದ್ದು ಸನ್ನದುದಾರರು ಹಾಕಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶಹೊರಡಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...