ವಿಷಯಕ್ಕೆ ಹೋಗಿ

ಮದ್ಯದಂಗಡಿ ಸನ್ನದುದಾರರು ಹಾಕಿದ್ದ ತಕರಾರು ಅರ್ಜಿ ವಜಾ ಅಬಕಾರಿ ಡಿಸಿಯವವರ ಆದೇಶ ಎತ್ತಿಹಿಡಿದ ಕೋರ್ಟ್

ಇಲ್ಲಿನ ಗ್ರಾಮದೇವತೆ ಶ್ರೀಹುಳಿಯಾರಮ್ಮ ಹಾಗೂ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಸಮೀಪವಿರುವ ಹಾಗೂ ಅಕ್ಷೇಪಣಾರ್ಹ ಸ್ಥಳದಲ್ಲಿರುವ ಶ್ರಿರಂಗನಾಥ ಮದ್ಯದಂಗಡಿಯನ್ನು ತೆರವುಗೊಳಿಸುವ ವಿಚಾರವಾಗಿ ಮದ್ಯದಂಗಡಿ ಮಾಲೀಕ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಮಾನ್ಯ ಅಬಕಾರಿ ನ್ಯಾಯಾಲಯ ವಜಾಗೊಳಿಸಿದೆ.
ಸನ್ನದುದಾರರು ಹಾಕಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿರುವ ಬಗ್ಗೆ ಅಬಕಾರಿ ನ್ಯಾಯಾಲಯ ನೀಡಿರುವ ಆದೇಶಪತ್ರ.
ಪಟ್ಟಣದ ದಿ.ಟೌನ್ ಕೋಅಪರೇಟೀವ್ ಸೊಸೈಟಿಗೆ ಸೇರಿದ ಕಟ್ಟಡದಲ್ಲಿ ಎನ್.ಜಿ.ನಾಗರಾಜ್ ಅವರಿಗೆ ಸೇರಿದ ರಂಗನಾಥ ಲಿಕ್ಕರ್ ಶಾಪ್ ಇದೆ. ಈ ಮದ್ಯದಂಗಡಿ ಜನ ನಿಬಿಡ ಪ್ರದೇಶದಲ್ಲಿರುವುದಲ್ಲದೆ, ಇದರ ಸಮೀಪವೇ ಗ್ರಾಮದೇವತೆ ಹುಳಿಯಾರಮ್ಮ ದೇವಾಲಯ, ಶ್ರೀರಂಗನಾಥಸ್ವಾಮಿ ದೇವಾಲಯ, ಬೀರಲಿಂಗೇಶ್ವರಸ್ವಾಮಿ ದೇವಾಲಯ ಹಾಗೂ ಸರ್ಕಾರಿ ಆಸ್ಪತ್ರೆಯಿದ್ದು ನಿತ್ಯ ನೂರಾರು ಮಂದಿ ಸಂಚರಿಸುತ್ತಿರುತ್ತಾರೆ. ಈ ಮದ್ಯದಂಗಡಿಯಿಂದ ನಿತ್ಯ ಇಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ದೇವಾಲಯಕ್ಕೆ ಬರುವವರಿಗೆ ತೊಂದರೆಯಾಗುತ್ತಿದ್ದು ಮದ್ಯದಂಗಡಿಯನ್ನು ತೆರವುಗೊಳಿಸುವಂತೆ ಸೊಸೈಟಿಯವರು, ಪಟ್ಟಣದ ವಿವಿಧ ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಕಳೆದ ಕೆಲ ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದರು.
ಸಾರ್ವಜನಿಕ ಒತ್ತಾಯದಂತೆ ಅಬಕಾರಿ ಡಿಸಿ ಮೋಹನ್ ಕುಮಾರ್ ಅವರ ಸಮಕ್ಷಮದಲ್ಲಿ ೨೦೧೪ರ ಆಗಸ್ಟ್ ನಲ್ಲಿ ಮದ್ಯದಂಗಡಿಯಿಂದ ವಿವಿಧ ದೇವಾಲಯ ಹಾಗೂ ಹೆದ್ದಾರಿಗೆ ಇರುವ ಅಂತರವನ್ನು ಅಳತೆ ಮಾಡಿದ್ದು, ಮದ್ಯದಂಗಡಿಯಿಂದ ಗ್ರಾಮದೇವತೆ ಹುಳಿಯಾರಮ್ಮ ದೇವಸ್ಥಾನಕ್ಕೆ 46.೪ ಮೀ , ಅನಂತಶಯನರಂಗನಾಥಸ್ವಾಮಿ ದೇವಸ್ಥಾನಕ್ಕೆ 96.3 ಮೀ , ಬೀರಲಿಂಗೇಶ್ವರ ದೇವಸ್ಥಾನ ೯೩.೭ ಮೀ, ಕೆಂಚಮ್ಮ ದೇವಸ್ಥಾನಕ್ಕೆ ೧೫೩.೫ಮೀ, ಸಾರ್ವಜನಿಕ ಆಸ್ಪತ್ರೆಗೆ ೧೦೭ ಮೀ ಹಾಗೂ ರಾಜ್ಯ ಹೆದ್ದಾರಿಗೆ ೧೧೬ ಮೀ ಆಳತೆಯಿದ್ದು ಮಹಜರ್ ಮಾಡಲಾಗಿತ್ತು. ಈ ಅಳತೆಯ ಜೊತೆಗೆ ಅಬಕಾರಿ ಡಿಸಿಯವರು ತಹಸೀಲ್ದಾರ್ ವರದಿ, ತಾಲ್ಲೂಕು ಹಾಗೂ ಜಿಲ್ಲಾ ನೊಂದಣಾಕಾರಿಗಳ ವರದಿ, ಚಿ.ನಾ.ಹಳ್ಳಿ ಅಬಕಾರಿ ನಿರೀಕ್ಷಕರ ವರದಿ,ತಿಪಟೂರು ಅಬಕಾರಿ ಉಪಈಕ್ಷಕರ ವರದಿ, ಹೆದ್ದಾರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಇವರುಗಳ ವರದಿಯನ್ನು ಆದರಿಸಿ ಅಂತಿಮವಾಗಿ ಡಿಸೆಂಬರ್ ೨೮ರ ಒಳಗೆ ಮದ್ಯದಂಗಡಿಯನ್ನು ಬೇರೊಂದು ನಿರಾಕ್ಷೇಪಣಾ ಸ್ಥಳಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರು ಆದೇಶ ಸಹ ಹೊರಡಿಸಿ ನೋಟಿಸ್ ನೀಡಿದ್ದರು.

ಅಂಗಡಿ ಮಾಲೀಕರಿಗೆ ಸನ್ನದನ್ನು ಸ್ಥಳಾಂತರಿಸುವಂತೆ ನೋಟಿಸ್ ನೀಡಿದ್ದಾಗ್ಯೂ ಸಹ ಮದ್ಯದಂಗಡಿಯಿಂದ ರಂಗನಾಥಸ್ವಾಮಿ ದೇವಾಲಯಕ್ಕೆ ನೂರು ಮೀ.ಗೂ ಹೆಚ್ಚು ಅಂತರವಿದೆ ಎಂದು ಮತ್ತೆ ತಕರಾರು ತೆಗೆದು ಕೋರ್ಟ್ ಗೆ ಅರ್ಜಿ ಹಾಕಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಅಬಕಾರಿ ನ್ಯಾಯಾಲಯ ಮತ್ತೊಮ್ಮೆ ಅಳತೆಕಾರ್ಯ ಮಾಡಿಸಿ, ವರದಿ ಪಡೆದು ಈ ಹಿಂದೆ ಜಿಲ್ಲಾ ಅಬಕಾರಿ ಉಪಆಯುಕ್ತರು ಹೊರಡಿಸಿದ್ದ ಸ್ಥಳಾಂತರದ ಆದೇಶವನ್ನು ಎತ್ತಿಹಿಡಿದಿದ್ದು ಸನ್ನದುದಾರರು ಹಾಕಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶಹೊರಡಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.