ವಿಷಯಕ್ಕೆ ಹೋಗಿ

ಇಂದು (ಜೂನ್ ೧೪) ವಿಶ್ವ ರಕ್ತದಾನಿಗಳ ದಿನ

ಇಂದು (ಜೂನ್ ೧೪) ವಿಶ್ವ ರಕ್ತದಾನಿಗಳ ದಿನ
--------------------------------------
ರಕ್ತದಾನ - ಮಹಾದಾನ
---------------------------
ಪ್ರತಿ ವರ್ಷದ ಜೂನ್ ೧೪ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸುತ್ತಾರೆ. ನಿಮ್ಮ ಸುತ್ತ-ಮುತ್ತಲಲ್ಲೇ ಎಷ್ಟೊ ಜನಕ್ಕೆ ರಕ್ತದ ಅವಶ್ಯಕತೆ ಇರುತ್ತದೆ, ಹಾದಿ ಬೀದಿಯಲ್ಲಿ ದಿನಕ್ಕೊಬ್ಬರಾದರೂ ರಸ್ತೆ ಅಫಘಾತ, ಮತ್ಯಾವುದೋ ತೊಂದರೆಯಿಂದ ಬಳಲುತ್ತಾ ಇರುವವರಿಗೆ ರಕ್ತದ ಅವಶ್ಯಕತೆ ಇರುತ್ತದೆ, ರಕ್ತದ ಅವಶ್ಯಕತೆ ಇರುವವರಿಗೆ ನಮ್ಮಿಂದ -ನಿಮ್ಮಿಂದ ಸಹಾಯವಾದರೆ ಅದಕ್ಕೆ ಸಿಗುವ ತುಂಬು ಹೃದಯದ ಅಭಿನಂದನೆಯೇ ವರ್ಣಾತೀತ.


ನಿಮಗಿದು ತಿಳಿದಿರಲಿ
-----------------------
* ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ.
* ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ.
* ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು.
* ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿಯಾಗಿ 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.
*ಒಂದೆರಡು ವಾರಗಳಲ್ಲಿ ರಕ್ತದ ಎಲ್ಲಾ ಅಂಶಗಳು ದಾನಿಯ ರಕ್ತದಲ್ಲಿ ಸಂಪೂರ್ಣವಾಗಿ ತುಂಬಿಕೊಳ್ಳುತ್ತದೆ.
* ರಕ್ತದಾನ ಮಾಡುವಾಗ ಒಂದು ಚುಚ್ಚು ಮದ್ದು ತೆಗೆದು ಕೊಂಡಷ್ಟೇ ನೋವಾಗುತ್ತದೆ.
* ರಕ್ತದಾನ ಮಾಡಲು ಮತ್ತು ಸುಧಾರಿಸಿಕೊಳ್ಳಲು ಕೇವಲ 20 ನಿಮಿಷ ಮಾತ್ರ ಸಾಕು. * ರಕ್ತದಾನ ಮಾಡುವಾಗ ಒಮ್ಮೆಗೆ 350ಎಂ. ಎಲ್. ರಕ್ತ ಮಾತ್ರ ತೆಗೆಯಲಾಗುವುದು. ಸಾಮಾನ್ಯವಾಗಿ ಮನುಷ್ಯನ ದೇಹದಲ್ಲಿ 5ರಿಂದ 6 ಲೀಟರ್ ರಕ್ತ ಇರುತ್ತದೆ. * ರಕ್ತದಾನ ಮಹಾದಾನ, ಇದಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ.

ಯಾರು ರಕ್ತದಾನ ಮಾಡಬಹುದು?
-----------------------
*ಹೆಣ್ಣು ಗಂಡೆಂಬ ಭೇದವಿಲ್ಲದೆ 18ರಿಂದ 60ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.
* ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
* ರಕ್ತದಾನಿಯ ತೂಕ ಕನಿಷ್ಠ 45 ಕೆ.ಜಿ.ಗಿಂತ ಜಾಸ್ತಿ ಇರಬೇಕು.
* ರಕ್ತದಾನಿಯ ರಕ್ತದಲ್ಲಿ ಹಿಮೋಗ್ಲೊಬಿನ್ ಅಂಶ 12.5 ಗ್ರಾಂಗಿಂತ ಹೆಚ್ಚಿರಬೇಕು.

ಯಾರು ರಕ್ತದಾನ ಮಾಡಬಾರದು? -
--------------------------------
* ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುವವರು ರಕ್ತದಾನ ಮಾಡಬಾರದು.
* ಮದ್ಯಪಾನ ಮತ್ತು ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು.
* ಮಹಿಳೆಯರು ತಿಂಗಳ ಮುಟ್ಟಿನ ಸಮಯದಲ್ಲಿ, ಗರ್ಭಿಣಿಯರಾಗಿದ್ದಾಗ, ಎದೆಹಾಲು ಉಣಿಸುತ್ತಿರುವಾಗ ಮತ್ತು ಹೆರಿಗೆಯ ನಂತರ 6 ತಿಂಗಳು ರಕ್ತದಾನ ಮಾಡಬಾರದು.
* ಯಾವುದೇ ವ್ಯಕ್ತಿ ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ ಅಂತಹವರು ಲಸಿಕೆ ಪಡೆದ 4 ವಾರಗಳ ವರೆಗೆ ರಕ್ತದಾನ ಮಾಡಬಾರದು.
* ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ ಚಿಕಿತ್ಸೆ ಪಡೆದ ನಂತರ 3 ತಿಂಗಳು ರಕ್ತದಾನ ಮಾಡಬಾರದು * ಹಿಂದಿನ 3 ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು.
*ಕಾಮಾಲೆ, ಎಚ್.ಐ.ವಿ. ಮತ್ತು ಸಿಫಿಲಿಸ್ ಹಾಗೂ ಇನ್ನಿತರ ಯಾವುದೇ ಲೈಗಿಂಕ ರೋಗವಿರುವವರು ರಕ್ತದಾನ ಮಾಡಬಾರದು.
* ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 6 ತಿಂಗಳವರೆಗೆ ಮಾತ್ರ ಚಿಕ್ಕ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾದವರು ಮುಂದಿನ 3 ತಿಂಗಳವರೆಗೆ ರಕ್ತದಾನ ಮಾಡಬಾರದು.
* ಅರ್ಬುದ ರೋಗ. ಹೃದಯ ಸಂಬಂಧಿ ಕಾಯಿಲೆ, ಅಸಹಜ ರಕ್ತಸ್ರಾವ, ಅನಿಯಂತ್ರಿತ ಮಧುಮೇಹ ರೋಗ, ಮೂತ್ರಪಿಂಡದ ಕಾಯಿಲೆ ಮತ್ತು ಯಕೃತ ಸಂಬಂಧಿಸಿದ ಕಾಯಿಲೆ ಇರುವವರು ಹೆಪಟೈಟಿಸ್, ಬಿ ಮತ್ತು ಸಿ ಕಾಯಿಲೆಯಿರುವವರು ರಕ್ತದಾನ ಮಾಡಬಾರದು.


ಪರೀಕ್ಷೆಗೆ ಒಳಪಡದ ರಕ್ತದ ಮೂಲಕ ಹರಡಬಹುದಾದ ರೋಗಗಳು
----------------------------------------------------
*ಮಲೇರಿಯಾ ಲೈಂಗಿಕ ಸಂಪರ್ಕದ ರೋಗಗಳು-ಸಿಫಿಲಿಸ್ ಇತ್ಯಾದಿ
*ಹೆಪಟೈಟಿಸ್ ಬಿ ಮತ್ತು ಸಿ ಸೋಂಕಿನಿಂದುಂಟಾಗುವ ಕಾಯಿಲೆ ರೋಗ.
* ಎಚ್.ಐ.ವಿ. ಸೋಂಕು ಮತ್ತು ಏಡ್ಸ್ ರೋಗ

ರಕ್ತವನ್ನು ಯಾವುದೇ ವ್ಯಕ್ತಿಗೆ ನೀಡುವ ಮೊದಲು ರಕ್ತ ಮೇಲಿನ ಎಲ್ಲಾ ರೋಗಗಳಿಂದ ಮುಕ್ತವಾಗಿದೆ ಎಂದು ತಿಳಿಯಲು ಅಗತ್ಯವಾದ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಕಾರಣಕ್ಕಾಗಿಯೇ ಬದಲಿ ರಕ್ತ ನೀಡಿದರೂ ಒಂದು ಬಾಟಲ್ (350ಎಂ.ಎಲ್) ರಕ್ತಕ್ಕೆ ಕನಿಷ್ಠ 300ರಿಂದ 400ರೂ. ವೆಚ್ಚ ತಗಲುತ್ತದೆ.

ರಕ್ತದಾನ ಮಾಡುವುದರಿಂದ ದಾನಿಗಳಿಗೆ ಆಗುವ ಪ್ರಯೋಜನಗಳು
-------------------------------------------------------
*ರಕ್ತದಾನ ಮಾಡುವುದರಿಂದ ದಾನಿಯ ರಕ್ತದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಸಿಗುತ್ತದೆ. *ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯ ತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. *ದೇಹದಲ್ಲಿ ಕೊಬ್ಬಿನಂಶ (ಕೊಲೆಸ್ಟ್ರೊಲ್) ಕಡಿಮೆ ಮಾಡಲು ಸಹಾಯವಾಗುತ್ತದೆ.
*ಹೃದಯಾಘಾತವನ್ನು ಶೇಕಡಾ 80ಕ್ಕಿಂತ ಜಾಸ್ತಿ ತಡೆಯಲು ಸಹಾಯವಾಗುತ್ತದೆ.
*ರಕ್ತದ ಒತ್ತಡ ಹಾಗೂ ಇತರ ಕೆಲವು ಹೃದಯ ಸಂಬಂಧಿ ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.
ಎಲ್ಲಕ್ಕಿಂತ ಮಿಗಿಲಾಗಿ ಒಂದು ಜೀವ ಉಳಿಸಿದಂತಾಗುತ್ತದೆ.

ನೆನಪಿರಲಿ....


ರಕ್ತದಾನ ಮಹಾದಾನ. ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ. ರಕ್ತದಾನ ಮಾಡಿ ಜೀವದಾನ ನೀಡಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...