ವಿಷಯಕ್ಕೆ ಹೋಗಿ

ಮುಳಕಟ್ಟಮ್ಮನ ಮಡೆಗೆ ಬಾಳೆಹಣ್ಣಿನ ಗುಡ್ಡೆ!

                ಹಳ್ಳಿಗಳಲ್ಲಿ ಇವತ್ತಿಗೂ ಗ್ರಾಮದೇವತೆ ಹಬ್ಬ ಎಂದ್ರೆ ಅದೇನೊ ಸಂಭ್ರಮ.ಪ್ರತಿ ವರ್ಷ ತಪ್ಪದೆ ಆಚರಿಸುವ ಜಾತ್ರೆಗಳಲ್ಲಿ ಒಂದೊಂದು ಊರಲ್ಲೂ ಒಂದೊಂದೊ ರೀತಿಯ ಆಚರಣೆ ಇರುತ್ತೆ.ಹೆಚ್ಚಿನ ಕಡೆ ಪ್ರಾಣಿ ಬಲಿ ಕೊಡುವುದು ಮಾಮೂಲು.
             ಆದ್ರೆ ತುರುವೇಕೆರೆ ಸಮೀಪದ ಕೊಟ್ಟೂರನ ಕೊಟ್ಟಿಗೆ ಯಲ್ಲಿ ಗ್ರಾಮದೇವತೆಗಳ ಹಬ್ಬದಲ್ಲಿ ಮಡೆ ಉತ್ಸವದ ನಡೆಯುವಾಗ ಮಾಡುವ ಬಾಳೆಹಣ್ಣಿನ ಗುಡ್ಡೆ ಆಚರಣೆ ಮಾತ್ರ ವಿಶಿಷ್ಟವಾಗಿದ್ದು ಸುತ್ತಮುತ್ತಲ ಗ್ರಾಮಗಳಲ್ಲಿ ಭಾರೀ ಪ್ರಸಿದ್ಧಿ ಪಡೆದಿದೆ.

              ಈ ಊರಲ್ಲಿ ಗ್ರಾಮ ದೇವರಾಗಿ ಮುತ್ತುರಾಯಸ್ವಾಮಿ ಹಾಗೂ ಕೊಲ್ಲಾಪುರದಮ್ಮ ಹಾಗೂ ಮುಳಕಟ್ಟಮ್ಮನನ್ನು ಗ್ರಾಮದೇವತೆಗಳನ್ನಾಗಿಯೂ ಆರಾಧಿಸುತ್ತಿದ್ದಾರೆ.

           ಯುಗಾದಿ ಹಬ್ಬದ ನಂತರ ಒಂದು ವಾರಕ್ಕೆ ಗ್ರಾಮದಲ್ಲಿ ಗ್ರಾಮ ದೇವತೆಗಳ ಜಾತ್ರೆ, ರಥೋತ್ಸವ ನಡೆಯುತ್ತದೆ. ಈ ಬಾರಿ ಊರ ಹೊರಗಿರುವ ಮುಳಕಟ್ಟಮ್ಮನ ನೆಲೆದೇವಾಲಯಕ್ಕೆ ಪೀಠ ಪ್ರತಿಷ್ಠಾಪನೆ ಮಾಡಿದ್ದರಿಂದ ಚೈತ್ರ ಮಾಸದಲ್ಲಿ ನಡೆಯಬೇಕಿದ್ದ ಊರಹಬ್ಬ ಹಾಗೂ ಮಡೆ ಉತ್ಸವ ಮೊನ್ನೆ ನಡಿತು.


               ಬೆಳಗ್ಗೆ ಗ್ರಾಮ ದೇವತೆಗಳಿಗೆ ಗಂಗಾಸ್ನಾನ, ಊರೊಳಗಿನ ದೇವಾಲಯದಲ್ಲಿ ಪೂಜೆ ನಂತರ ಮುಳಕಟ್ಟಮ್ಮನನ್ನು ಊರಾಚೆ 2 ಕಿ.ಮೀ. ದೂರದ ನೆಲೆ ದೇವಾಲಯಕ್ಕೆ ವಾದ್ಯದೊಂದಿಗೆ ಉತ್ಸವದಲ್ಲಿ ಕರೆದೊಯ್ಯಲಾಗುತ್ತದೆ. ಅಷ್ಟರಲ್ಲೆ ಊರಿನ ಪ್ರತಿ ಮನೆಯ ಎಲ್ಲಾ ಗ್ರಾಮಸ್ಥರು ನೆರೆದು ಅಲ್ಲೇ ಒಲೆ ಹಾಕಿ ದೇವಿಗೆ ಮಡೆ ಅನ್ನ ಸಿದ್ಧಪಡಿಸುತ್ತಾರೆ. ಅಷ್ಟರೊಳಗೆ ಪ್ರತಿ ಮನೆಯಿಂದ ತರುವ ಕನಿಷ್ಠ 3 ಬಾಳೆಗೊನೆ ಹಾಗೂ 9 ತೆಂಗಿನಕಾಯಿ ಯಿಂದ ಬಾಳೆಹಣ್ಣಿನ ಗುಡ್ಡೆ ಆಚರಣೆ ನಡೆಯುತ್ತೆ. . ಗುಡ್ಡೆಗಳಿಂದ ಗ್ರಾಮಸ್ಥರು ನೀಡಿದ ಬಾಳೆಹಣ್ಣು, ತೆಂಗಿನಕಾಯಿ ಮಡೆ ಅನ್ನಕ್ಕೆ ಹಾಕಿ ಬಡವರಿಗೆ ದಾನ ಮಾಡಿ ಮಿಕ್ಕ ಅನ್ನವನ್ನು ಪ್ರಸಾದ ರೂಪದಲ್ಲಿ ಮನೆಗೆ ತರುತ್ತಾರೆ. ಬಾಳೆಹಣ್ಣನ್ನು ಪರಸ್ಪರ ಬಾಗಿನ ನೀಡ್ತಾರೆ.ಅಲ್ಲಿಗೆ ಹಬ್ಬ ಮುಗಿಯುತ್ತೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...