ವಿಷಯಕ್ಕೆ ಹೋಗಿ

ಮುಳಕಟ್ಟಮ್ಮನ ಮಡೆಗೆ ಬಾಳೆಹಣ್ಣಿನ ಗುಡ್ಡೆ!

                ಹಳ್ಳಿಗಳಲ್ಲಿ ಇವತ್ತಿಗೂ ಗ್ರಾಮದೇವತೆ ಹಬ್ಬ ಎಂದ್ರೆ ಅದೇನೊ ಸಂಭ್ರಮ.ಪ್ರತಿ ವರ್ಷ ತಪ್ಪದೆ ಆಚರಿಸುವ ಜಾತ್ರೆಗಳಲ್ಲಿ ಒಂದೊಂದು ಊರಲ್ಲೂ ಒಂದೊಂದೊ ರೀತಿಯ ಆಚರಣೆ ಇರುತ್ತೆ.ಹೆಚ್ಚಿನ ಕಡೆ ಪ್ರಾಣಿ ಬಲಿ ಕೊಡುವುದು ಮಾಮೂಲು.
             ಆದ್ರೆ ತುರುವೇಕೆರೆ ಸಮೀಪದ ಕೊಟ್ಟೂರನ ಕೊಟ್ಟಿಗೆ ಯಲ್ಲಿ ಗ್ರಾಮದೇವತೆಗಳ ಹಬ್ಬದಲ್ಲಿ ಮಡೆ ಉತ್ಸವದ ನಡೆಯುವಾಗ ಮಾಡುವ ಬಾಳೆಹಣ್ಣಿನ ಗುಡ್ಡೆ ಆಚರಣೆ ಮಾತ್ರ ವಿಶಿಷ್ಟವಾಗಿದ್ದು ಸುತ್ತಮುತ್ತಲ ಗ್ರಾಮಗಳಲ್ಲಿ ಭಾರೀ ಪ್ರಸಿದ್ಧಿ ಪಡೆದಿದೆ.

              ಈ ಊರಲ್ಲಿ ಗ್ರಾಮ ದೇವರಾಗಿ ಮುತ್ತುರಾಯಸ್ವಾಮಿ ಹಾಗೂ ಕೊಲ್ಲಾಪುರದಮ್ಮ ಹಾಗೂ ಮುಳಕಟ್ಟಮ್ಮನನ್ನು ಗ್ರಾಮದೇವತೆಗಳನ್ನಾಗಿಯೂ ಆರಾಧಿಸುತ್ತಿದ್ದಾರೆ.

           ಯುಗಾದಿ ಹಬ್ಬದ ನಂತರ ಒಂದು ವಾರಕ್ಕೆ ಗ್ರಾಮದಲ್ಲಿ ಗ್ರಾಮ ದೇವತೆಗಳ ಜಾತ್ರೆ, ರಥೋತ್ಸವ ನಡೆಯುತ್ತದೆ. ಈ ಬಾರಿ ಊರ ಹೊರಗಿರುವ ಮುಳಕಟ್ಟಮ್ಮನ ನೆಲೆದೇವಾಲಯಕ್ಕೆ ಪೀಠ ಪ್ರತಿಷ್ಠಾಪನೆ ಮಾಡಿದ್ದರಿಂದ ಚೈತ್ರ ಮಾಸದಲ್ಲಿ ನಡೆಯಬೇಕಿದ್ದ ಊರಹಬ್ಬ ಹಾಗೂ ಮಡೆ ಉತ್ಸವ ಮೊನ್ನೆ ನಡಿತು.


               ಬೆಳಗ್ಗೆ ಗ್ರಾಮ ದೇವತೆಗಳಿಗೆ ಗಂಗಾಸ್ನಾನ, ಊರೊಳಗಿನ ದೇವಾಲಯದಲ್ಲಿ ಪೂಜೆ ನಂತರ ಮುಳಕಟ್ಟಮ್ಮನನ್ನು ಊರಾಚೆ 2 ಕಿ.ಮೀ. ದೂರದ ನೆಲೆ ದೇವಾಲಯಕ್ಕೆ ವಾದ್ಯದೊಂದಿಗೆ ಉತ್ಸವದಲ್ಲಿ ಕರೆದೊಯ್ಯಲಾಗುತ್ತದೆ. ಅಷ್ಟರಲ್ಲೆ ಊರಿನ ಪ್ರತಿ ಮನೆಯ ಎಲ್ಲಾ ಗ್ರಾಮಸ್ಥರು ನೆರೆದು ಅಲ್ಲೇ ಒಲೆ ಹಾಕಿ ದೇವಿಗೆ ಮಡೆ ಅನ್ನ ಸಿದ್ಧಪಡಿಸುತ್ತಾರೆ. ಅಷ್ಟರೊಳಗೆ ಪ್ರತಿ ಮನೆಯಿಂದ ತರುವ ಕನಿಷ್ಠ 3 ಬಾಳೆಗೊನೆ ಹಾಗೂ 9 ತೆಂಗಿನಕಾಯಿ ಯಿಂದ ಬಾಳೆಹಣ್ಣಿನ ಗುಡ್ಡೆ ಆಚರಣೆ ನಡೆಯುತ್ತೆ. . ಗುಡ್ಡೆಗಳಿಂದ ಗ್ರಾಮಸ್ಥರು ನೀಡಿದ ಬಾಳೆಹಣ್ಣು, ತೆಂಗಿನಕಾಯಿ ಮಡೆ ಅನ್ನಕ್ಕೆ ಹಾಕಿ ಬಡವರಿಗೆ ದಾನ ಮಾಡಿ ಮಿಕ್ಕ ಅನ್ನವನ್ನು ಪ್ರಸಾದ ರೂಪದಲ್ಲಿ ಮನೆಗೆ ತರುತ್ತಾರೆ. ಬಾಳೆಹಣ್ಣನ್ನು ಪರಸ್ಪರ ಬಾಗಿನ ನೀಡ್ತಾರೆ.ಅಲ್ಲಿಗೆ ಹಬ್ಬ ಮುಗಿಯುತ್ತೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...