ವಿಷಯಕ್ಕೆ ಹೋಗಿ

ಮುಳಕಟ್ಟಮ್ಮನ ಮಡೆಗೆ ಬಾಳೆಹಣ್ಣಿನ ಗುಡ್ಡೆ!

                ಹಳ್ಳಿಗಳಲ್ಲಿ ಇವತ್ತಿಗೂ ಗ್ರಾಮದೇವತೆ ಹಬ್ಬ ಎಂದ್ರೆ ಅದೇನೊ ಸಂಭ್ರಮ.ಪ್ರತಿ ವರ್ಷ ತಪ್ಪದೆ ಆಚರಿಸುವ ಜಾತ್ರೆಗಳಲ್ಲಿ ಒಂದೊಂದು ಊರಲ್ಲೂ ಒಂದೊಂದೊ ರೀತಿಯ ಆಚರಣೆ ಇರುತ್ತೆ.ಹೆಚ್ಚಿನ ಕಡೆ ಪ್ರಾಣಿ ಬಲಿ ಕೊಡುವುದು ಮಾಮೂಲು.
             ಆದ್ರೆ ತುರುವೇಕೆರೆ ಸಮೀಪದ ಕೊಟ್ಟೂರನ ಕೊಟ್ಟಿಗೆ ಯಲ್ಲಿ ಗ್ರಾಮದೇವತೆಗಳ ಹಬ್ಬದಲ್ಲಿ ಮಡೆ ಉತ್ಸವದ ನಡೆಯುವಾಗ ಮಾಡುವ ಬಾಳೆಹಣ್ಣಿನ ಗುಡ್ಡೆ ಆಚರಣೆ ಮಾತ್ರ ವಿಶಿಷ್ಟವಾಗಿದ್ದು ಸುತ್ತಮುತ್ತಲ ಗ್ರಾಮಗಳಲ್ಲಿ ಭಾರೀ ಪ್ರಸಿದ್ಧಿ ಪಡೆದಿದೆ.

              ಈ ಊರಲ್ಲಿ ಗ್ರಾಮ ದೇವರಾಗಿ ಮುತ್ತುರಾಯಸ್ವಾಮಿ ಹಾಗೂ ಕೊಲ್ಲಾಪುರದಮ್ಮ ಹಾಗೂ ಮುಳಕಟ್ಟಮ್ಮನನ್ನು ಗ್ರಾಮದೇವತೆಗಳನ್ನಾಗಿಯೂ ಆರಾಧಿಸುತ್ತಿದ್ದಾರೆ.

           ಯುಗಾದಿ ಹಬ್ಬದ ನಂತರ ಒಂದು ವಾರಕ್ಕೆ ಗ್ರಾಮದಲ್ಲಿ ಗ್ರಾಮ ದೇವತೆಗಳ ಜಾತ್ರೆ, ರಥೋತ್ಸವ ನಡೆಯುತ್ತದೆ. ಈ ಬಾರಿ ಊರ ಹೊರಗಿರುವ ಮುಳಕಟ್ಟಮ್ಮನ ನೆಲೆದೇವಾಲಯಕ್ಕೆ ಪೀಠ ಪ್ರತಿಷ್ಠಾಪನೆ ಮಾಡಿದ್ದರಿಂದ ಚೈತ್ರ ಮಾಸದಲ್ಲಿ ನಡೆಯಬೇಕಿದ್ದ ಊರಹಬ್ಬ ಹಾಗೂ ಮಡೆ ಉತ್ಸವ ಮೊನ್ನೆ ನಡಿತು.


               ಬೆಳಗ್ಗೆ ಗ್ರಾಮ ದೇವತೆಗಳಿಗೆ ಗಂಗಾಸ್ನಾನ, ಊರೊಳಗಿನ ದೇವಾಲಯದಲ್ಲಿ ಪೂಜೆ ನಂತರ ಮುಳಕಟ್ಟಮ್ಮನನ್ನು ಊರಾಚೆ 2 ಕಿ.ಮೀ. ದೂರದ ನೆಲೆ ದೇವಾಲಯಕ್ಕೆ ವಾದ್ಯದೊಂದಿಗೆ ಉತ್ಸವದಲ್ಲಿ ಕರೆದೊಯ್ಯಲಾಗುತ್ತದೆ. ಅಷ್ಟರಲ್ಲೆ ಊರಿನ ಪ್ರತಿ ಮನೆಯ ಎಲ್ಲಾ ಗ್ರಾಮಸ್ಥರು ನೆರೆದು ಅಲ್ಲೇ ಒಲೆ ಹಾಕಿ ದೇವಿಗೆ ಮಡೆ ಅನ್ನ ಸಿದ್ಧಪಡಿಸುತ್ತಾರೆ. ಅಷ್ಟರೊಳಗೆ ಪ್ರತಿ ಮನೆಯಿಂದ ತರುವ ಕನಿಷ್ಠ 3 ಬಾಳೆಗೊನೆ ಹಾಗೂ 9 ತೆಂಗಿನಕಾಯಿ ಯಿಂದ ಬಾಳೆಹಣ್ಣಿನ ಗುಡ್ಡೆ ಆಚರಣೆ ನಡೆಯುತ್ತೆ. . ಗುಡ್ಡೆಗಳಿಂದ ಗ್ರಾಮಸ್ಥರು ನೀಡಿದ ಬಾಳೆಹಣ್ಣು, ತೆಂಗಿನಕಾಯಿ ಮಡೆ ಅನ್ನಕ್ಕೆ ಹಾಕಿ ಬಡವರಿಗೆ ದಾನ ಮಾಡಿ ಮಿಕ್ಕ ಅನ್ನವನ್ನು ಪ್ರಸಾದ ರೂಪದಲ್ಲಿ ಮನೆಗೆ ತರುತ್ತಾರೆ. ಬಾಳೆಹಣ್ಣನ್ನು ಪರಸ್ಪರ ಬಾಗಿನ ನೀಡ್ತಾರೆ.ಅಲ್ಲಿಗೆ ಹಬ್ಬ ಮುಗಿಯುತ್ತೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...