ವಿಷಯಕ್ಕೆ ಹೋಗಿ

ರಾಸಾಯನಿಕ ಗೊಬ್ಬರ ಬಳಕೆಯಿಂದ ಮಣ್ಣಿನಸಾರ ನಾಶ

ಪ್ರಸ್ತುತದಲ್ಲಿ ಸಾಕಷ್ಟು ರೈತರು ಹೆಚ್ಚು ಇಳುವರಿ ಪಡೆಯುವ ಹಂಬಲದಲ್ಲಿ ಏತೆಚ್ಚವಾಗಿ ರಾಸಾಯನಿಕ ಗೊಬ್ಬರ, ಕೀಟಾನಾಶಕವನ್ನು ಭೂಮಿಗೆ ಹಾಕುತ್ತಿರುವುದರಿಂದ ಭೂಮಿಯ ಫಲವತ್ತತೆಯ ಸಾರ ನಾಶವಾಗುತ್ತಿದೆ ಎಂದು ತಾಲ್ಲೂಕು ಸಹಾಯಕ ಕೃಷಿನಿರ್ದೇಶಕ ಡಾ.ಹೆಚ್.ಹೊನ್ನದಾಸೇಗೌಡ ವಿಷಾದಿಸಿದರು.
ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಶನಿವಾರ ಕೃಷಿ ಇಲಾಖೆ ಅಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕಿಟ್ಟಿದ್ದ ಕೃಷಿ ಪರಿಕರಗಳ ಸ್ಟಾಲ್ ಗಳನ್ನು ಜಿ.ಪಂ.ಸದಸ್ಯೆ ಮಂಜುಳಾ ಉದ್ಘಾಟಿಸಿದರು. ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ, ಎಡಿಓ ಹೊನ್ನದಾಸೇಗೌಡ ಇತರರಿದ್ದಾರೆ.

ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ನಡೆದ ಕೃಷಿ ಅಭಿಯಾನ ಸಂವಾದ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿನಿರ್ದೇಶಕ ಡಾ.ಹೆಚ್.ಹೊನ್ನದಾಸೇಗೌಡ ಮಾತನಾಡಿದರು.

"ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ" ಎಂಬ ಧ್ಯೇಯದೊಂದಿಗೆ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ತಾಲ್ಲೂಕ್ ಪಂಚಾಯ್ತಿ, ಕಂದಾಯ ಇಲಾಖೆ, ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ರೇಷ್ಮೆ,ಮೀನುಗಾರಿಕೆ,ಕೃಷಿ ಮಾರುಕಟ್ಟೆ,ಲೀಡ್ ಬ್ಯಾಂಕ್ ಹಾಗೂ ಆರಕ್ಷಕ ಇಲಾಖೆಯ ಸಹಭಾಗಿತ್ವದಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರದಂದು ಅಯೋಜಿಸಿದ್ದ " ಕೃಷಿ ಅಭಿಯಾನ-೨೦೧೫-೧೬" ರ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ರೈತರು ರಾಸಯನಿಕ ಗೊಬ್ಬರ ಹಾಕುವ ಬದಲು ಸಾವಯವ ಎರೆಹುಳು ಗೊಬ್ಬರ, ಕೊಟ್ಟಿಗೆ ಗೊಬ್ಬರವನ್ನು ಪೈರುಗಳಿಗೆ ಹಾಕುವುದರಿಂದ ಉತ್ತಮ ಇಳುವರಿ ತೆಗೆಯಬಹುದಾಗಿದೆ ಎಂದರು. ಕೃಷಿ ಇಲಾಖೆಯಲ್ಲಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹತ್ತಾರೂ ಯೋಜನೆಗಳಿವೆ. ಸಬ್ಸಿಡಿ ದರದಲ್ಲಿ ಬಿತ್ತನೆಬೀಜ, ಗೊಬ್ಬರ ಹಾಗೂ ಕೀಟನಾಶಕ, ಯಂತ್ರೋಪಕರಣಗಳು ದೊರೆಯುವುದಿದ್ದು ಸೂಕ್ತ ದಾಖಲಾತಿ ನೀಡಿ ಪಡೆಯಬಹುದಾಗಿದೆ.
ಇದೀಗ ಕೃಷಿ ಇಲಾಖೆಯಲ್ಲಿನ ಸೌಲಭ್ಯಪಡೆಯಲು ಆನ್ ಲೈನ್ ನಲ್ಲಿ ಅರ್ಜಿ ಹಾಕಬೇಕಿದ್ದು , ಅದಕ್ಕೆ ಸಂಬಂಧಪಟ್ಟ ದಾಖಲೆಯನ್ನು ಒಮ್ಮೆ ಇಲಾಖೆಗೆ ಕೊಟ್ಟು ಇಲಾಖೆಯು ಕೊಡುವ ಕೆ-ಕಿಸಾನ್ ಕಾರ್ಡ್ ಪಡೆದು ಆ ಮೂಲಕ ಎಲ್ಲಾ ಸೌಲಭ್ಯ ಪಡೆಯಿರಿ ಎಂದರು. ಹೋಬಳಿಯಾದ್ಯಂತ ಎರಡು ದಿನಗಳಕಾಲ ನಡೆದ ಕೃಷಿ ಅಭಿಯಾನದಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ತಿಳಿಸಿದ್ದು ಅವುಗಳ ಪರಿಹಾರಕ್ಕೆ ಮುಂದಾಗುವುದಾಗಿ ತಿಳಿಸಿದರು.

ಕೃಷಿ ವಿಜ್ಞಾನಿಗಳಾದ ಚನ್ನಪ್ಪಗೌಡ ಹಾಗೂ ದರ್ಶನ್ ಕೃಷಿಕಾರ್ಯದಲ್ಲಿ ಎದುರಾಗುವ ತೊಡಕುಗಳು ಹಾಗೂ ಅವುಗಳ ನಿರ್ವಹಣೆ, ತಾಂತ್ರಿಕತೆಯ ಅಳವಡಿಕೆ ಬಗ್ಗೆ ತಿಳಿಸಿದರು. ಜಿ.ಪಂ.ಸದಸ್ಯೆ ಮಂಜುಳಾ ಕಾರ್ಯಕ್ರಮ ಉದ್ಘಾಟಿಸಿದರು. ಎಪಿಎಂಸಿ ಅಧ್ಯಕ್ಷ ಸಣ್ಣಯ್ಯ, ತಾ.ಪಂ.ಸದಸ್ಯೆ ಜಯಲಕ್ಷ್ಮಮ್ಮ, ತೋಟಗಾರಿಕೆ ಇಲಾಖೆಯ ಮಹಾಲಕ್ಷ್ಮಿ, ಆರಣ್ಯ ಇಲಾಖೆಯ ತಾರಕೇಶ್ವರಿ,ರೇಷ್ಮೆ ಇಲಾಖೆಯ ಇಂದಿರಾ ತಮ್ಮ ಇಲಾಖೆಯಲ್ಲಿನ ಸೌಲಭ್ಯಗಳ ಬಗ್ಗೆ ತಿಳಿಸಿದರು. ಸಾವಯವ ಕೃಷಿಕ ರಾಮಕೃಷ್ಣಪ್ಪ, ಕೃಷಿ ಇಲಾಖೆಯ ಕರಿಬಸವಯ್ಯ, ನೂರುಲ್ಲಾ,ರಂಗನಾಥ್, ತಿಪ್ಪೇಸ್ವಾಮಿ, ಶಿವಣ್ಣ, ಮಲ್ಲಿಕಾರ್ಜುನ್,ರಮೇಶ್ , ರೈತ ಅನುವುಗಾರರು ಸೇರಿದಂತೆ ಹೋಬಳಿಯ ವಿವಿಧ ಹಳ್ಳಿಯ ರೈತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...