ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾ.ಪಂ. ಚುನಾವಣೆ ಫಲಿತಾಂಶ ೧೬೨ ಮಂದಿಯಲ್ಲಿ ಗೆದ್ದ ೩೯ ಮಂದಿ

ಎಲ್ಲೆಡೆ ಕುತೂಹಲ ಮೂಡಿಸಿದ್ದ ಹುಳಿಯಾರು ಗ್ರಾಮ ಪಂಚಾಯ್ತಿ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬಿದಿದ್ದು , ಇಷ್ಟು ದಿನ ಯಾರು ಗೆಲ್ಲುತ್ತಾರೆ, ಸೋಲುತ್ತಾರೆಂಬ ಕುತೂಹಲಕ್ಕೆ ತೆರೆಬಿದ್ದಿದೆ.
ಮುಂಜಾನೆ ೮ ಗಂಟೆಯಿಂದ ಚಿ.ನಾ.ಹಳ್ಳಿಯ ಸರ್ಕಾರಿ ಕಾಲೇಜಿನಲ್ಲಿ ಮತಎಣಿಕೆ ಪ್ರಾರಂಭವಾಗಿದ್ದು ಸಂಜೆಯಾದರೂ ಮತಎಣಿಕೆ ಮುಂದುವರೆದಿತ್ತು. ಹುಳಿಯಾರಿನ ಒಟ್ಟು ೧೩ ಬ್ಲಾಕ್ ಗಳಿಗೆ ೧೬೨ ಮಂದಿ ಸ್ಪರ್ಧಿಸಿದ್ದರಿಂದ ಸಂಜೆ ೬ ರವರೆಗೆ ೮ ಬ್ಲಾಕ್ ನ ಮತಎಣಿಕೆ ಮಾತ್ರ ಮುಗಿದಿತ್ತು.
ಹುಳಿಯಾರು ಗ್ರಾ.ಪಂ.ಯ ವಿವಿಧ ಬ್ಲಾಕ್ ಗಳ ಮತ ಎಣಿಕೆ ಕಾರ್ಯ ಚಿ.ನಾ.ಹಳ್ಳಿಯಲ್ಲಿ ಶುಕ್ರವಾರ ನಡೆಯಿತು.
1 ನೇ ಬ್ಲಾಕ್ ನ ೨ ಸ್ಥಾನಕ್ಕೆ ( ಎಸ್.ಸಿ ೧ , ಸಾಮಾನ್ಯ ೧ ) ಒಟ್ಟು ೧೮ ಮಂದಿ ಸ್ಪರ್ಧಿಸಿದ್ದು ಎಲ್.ಆರ್.ಚಂದ್ರಶೇಖರ್ (160ಮತ, ಸಾಮಾನ್ಯ ) ಹಾಗೂ ಗಣೇಶ್ (125 ಮತ, ಎಸ್.ಸಿ) ಜಯಗಳಿಸಿದ್ದಾರೆ. 2 ನೇ ಬ್ಲಾಕ್ ನ ೨ ಸ್ಥಾನಕ್ಕೆ (ಸಾಮಾನ್ಯ ,ಬಿಸಿಎಂ-ಎ ಮಹಿಳೆ) ಒಟ್ಟು ೯ ಮಂದಿ ಸ್ಪರ್ಧಿಸಿದ್ದು ಸೈಯ್ಯದ್ ಜಬೀಉಲ್ಲಾ (230 ಮತ, ಸಾಮಾನ್ಯ ) ಸಿದ್ದಗಂಗಮ್ಮ (158 ಮತ ಬಿಸಿಎಂ-ಎ) ಗೆದ್ದರೆ. 3 ನೇ ಬ್ಲಾಕ್ ನ ೩ ಸ್ಥಾನಕ್ಕೆ( ಎಸ್.ಸಿ ಮಹಿಳೆ, ಬಿಸಿಎಂ-ಎ ಮಹಿಳೆ, ಸಾಮಾನ್ಯ ಮಹಿಳೆ) ಒಟ್ಟು ೧೨ ಮಂದಿ ಸ್ಪರ್ಧಿಸಿದ್ದು ಗೀತಾ (332), ನೂರ್ ಜಾನ್ ಬೀ (235), ರೇಣುಕಮ್ಮ (175) ವಿಜೇತರಾಗಿದ್ದಾರೆ. 4 ನೇ ಬ್ಲಾಕ್ ನ ೨ ಸ್ಥಾನಕ್ಕೆ (ಬಿಸಿಎಂ-ಎ , ಸಾಮಾನ್ಯ) ಒಟ್ಟು ೬ ಮಂದಿ ಸ್ಪರ್ಧಿಸಿದ್ದು ಶಂಕರ್ (255) ಧನುಷ್ ರಂಗನಾಥ್ (238) ಜಯಗಳಿಸಿದ್ದಾರೆ. 6 ನೇ ಬ್ಲಾಕ್ ನ ೩ ಸ್ಥಾನಕ್ಕೆ(ಬಿಸಿಎಂ-ಎ , ಸಾಮಾನ್ಯ ಮಹಿಳೆ, ಸಾಮಾನ್ಯ) ಒಟ್ಟು ೧೦ ಮಂದಿ ಸ್ಪರ್ಧಿಸಿದ್ದು ಕೋಳಿಶ್ರೀನಿವಾಸ್ (273), ರಾಘವೇಂದ್ರ (26೦), ಎಚ್.ಅರ್.ದುರ್ಗಮ್ಮ (169), 7 ನೇ ಬ್ಲಾಕ್ ನ ೩ ಸ್ಥಾನಕ್ಕೆ (ಬಿಸಿಎಂ-ಎ, ಸಾಮಾನ್ಯ, ಸಾಮಾನ್ಯ ಮಹಿಳೆ) ಒಟ್ಟು ೧೦ ಮಂದಿ ಸ್ಪರ್ಧಿಸಿದ್ದು ಪಟಾಕಿಶಿವಣ್ಣ (239), ಹೇಮಂತ್ (307), ಜೆ.ಇಂದ್ರಕಲಾ (201), ೮ ನೇ ಬ್ಲಾಕ್ ೪ ಸ್ಥಾನಕ್ಕೆ (ಸಾಮಾನ್ಯ, ಸಾಮಾನ್ಯ ಮಹಿಳೆ, ಬಿಸಿಎಂ-ಎ ಮಹಿಳೆ, ಬಿಸಿಎಂ-ಬಿ ಮಹಿಳೆ)ಒಟ್ಟು ೯ ಮಂದಿ ಸ್ಪರ್ಧಿಸಿದ್ದು ಪುಟ್ಟರಾಜು ಬಡ್ಡಿ (677), ಕೆಂಪಮ್ಮ (254), ಮಾಮಾಜಿಗ್ನಿ (236), ಜಯಮ್ಮ (121) ಆಯ್ಕೆಯಾಗಿದ್ದಾರೆ.
ತೀವ್ರ ಪೈಪೋಟಿ ನಡೆದಿದ್ದ ೫ ನೇ ಬ್ಲಾಕ್ ನಲ್ಲಿ ಇಬ್ಬರೂ ಸ್ಪರ್ಧಿಗಳು ಸಮಾನವಾಗಿ ಮತಪಡೆದಿದ್ದಾರೆಂದು ಘೋಷಣೆಯಾಗುತ್ತಿದ್ದಂತೆ ಇಡಿಸಿ ಮತದ ಗೊಂದಲವೇರ್ಪಟ್ಟು ಮರು ಎಣಿಕೆಗೆ ಮುಂದಾಗಿದ್ದಾರೆ.

ಹುಳಿಯಾರು ಗ್ರಾಮ ಪಂಚಾಯ್ತಿಯ ಪ್ರಥಮವಾಗಿ ಪ್ರಕಟಗೊಂಡ ಎರಡನೇ ಬ್ಲಾಕ್ ನ ಅಭ್ಯರ್ಥಿ ಸೈಯದ್ ಜಬೀಉಲ್ಲಾ ಅವರು ತಮ್ಮ ಬೆಂಬಲಿಗರೊಂದಿಗೆ ಸಂಭ್ರಮಿಸಿದ ಕ್ಷಣ.
ಇನ್ನುಳಿದ ಬ್ಲಾಕ್ ಗಳ ಮತಎಣಿಕೆ ಸಂಜೆಯ ನಂತರವೂ ಮುಂದುವರೆದಿದ್ದು ರಾತ್ರಿ ವೇಳೆಗೆ ಫಲಿತಾಂಶ ಹೊರಬೀಳಲಿದೆ.. ವಿಜೇತರಾಗಿದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ತಂತಮ್ಮ ಬ್ಲಾಕ್ ಗಳಲ್ಲಿ ಮೆರವಣಿಗೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.
ಹುಳಿಯಾರು ಗ್ರಾ.ಪಂ.ಯ ಸದಸ್ಯರಾಗಿ 6 ನೇ ಬ್ಲಾಕ್ ನಿಂದ ಇದೇ ಪ್ರಥಮಬಾರಿಗೆ ಆಯ್ಕೆಯಾದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೋಳಿ ಶ್ರೀನಿವಾಸ್ ಅವರನ್ನು ಕರವೇ ಕಾರ್ಯಕರ್ತರು ಅಭಿನಂಧಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...