ವಿಷಯಕ್ಕೆ ಹೋಗಿ

ಪಟ್ಟಣದೆಲ್ಲೆಡೆ ಗೆಲುವಿನ ಲೆಕ್ಕಾಚಾರ ಯಾರು ಗೆಲ್ಲುತ್ತಾರೆಂಬುದೇ ಕುತೂಹಲ

ಗ್ರಾಮ ಪಂಚಾಯ್ತಿಯ ಚುನಾವಣೆಯ ಮತದಾನ ಮಂಗಳವಾರ ಮುಗಿದಿದ್ದು ಚುನಾವಣೆಯ ಕಾವು ಸ್ವಲ್ಪ ಕಡಿಮೆಯಾದಂತೆ ಕಂಡರೂ ಸಹ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಯಾರು ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳ ಸೋಲುಗೆಲುವಿನ ಫಲಿತಾಂಶ ಇದೇ ೫ ರ ಶುಕ್ರವಾರದಂದು ಪ್ರಕಟವಾಗಲಿದ್ದು, ಅಲ್ಲಿಯವರೆಗೂ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಹುಳಿಯಾರು ಗ್ರಾ.ಪಂ.ಚುನಾವಣೆಯಲ್ಲಿ ಯಾರುಗೆಲ್ಲುತ್ತಾರೆಂಬುದರ ಬಗ್ಗೆ ಬುಧವಾರ ಬೆಳಿಗ್ಗೆ ಬಸ್ ನಿಲ್ದಾಣ ಸ್ವಚ್ಚಗೊಳಿಸಲು ಬಂದ ಪೌರಕಾರ್ಮಿಕರಲ್ಲೂ ಕುತೂಹಲ ಮೂಡಿಸಿದ್ದು ಅವರುಗಳು ಸಹ ಚರ್ಚೆಯಲ್ಲಿ ತೊಡಗಿರುವುದು.
ಹುಳಿಯಾರು ಗ್ರಾ.ಪಂ. ಚುನಾವಣೆ ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚು ಕುತೂಹಲ ಕೆರಳಿಸಿದ್ದು ಒಟ್ಟು ೧೬೨ ಅಭ್ಯರ್ಥಿಗಳು ಕಣದಲಿದ್ದು ೩೯ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿದೆ. ಚುನಾವಣೆಗಾಗಿ ಕಳೆದೊಂದು ತಿಂಗಳಿನಿಂದ ನಾನಾರೀತಿಯಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಸದ್ಯ ನಿರಾಳರಾಗಿದ್ದಾರೆ.
ಲೆಕ್ಕಾಚಾರ: ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಅವರ ಪರ ಬೆಂಬಲಿಗರು ತಾವು ಮಾಡಿದ ಖರ್ಚು ವೆಚ್ಚ ಯಾವರೀತಿ ಗೆಲುವು ತರಲಿದೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದರೆ. ಮತದಾರರು ತಾವು ಬೆಂಬಲಿಸಿದ ಅಭ್ಯರ್ಥಿ ಸೋಲುವನೋ , ಗೆಲ್ಲುವನೋ ಎಂದು ಗುಣಾಕಾರ, ಭಾಗಾಕಾರದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಮುಂಜಾನೆಯಿಂದ ನಿನ್ನೆಯ ಬ್ಲಾಕ್ ವಾರು ಮತಚಲಾವಣೆಯ ಪಟ್ಟಿ ಕೈಯ್ಯಲಿಡಿದಿರುವ ಕೆಲ ಅಭ್ಯರ್ಥಿಗಳು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಾವಿಗಾಗಲೇ ಗೆಲುವಿನ ಹಾದಿಯಲ್ಲಿದ್ದೇವೆಂದು ಬೀಗುತ್ತಿದ್ದಾರೆ. ಕಾಫಿ,ಟೀ ಅಂಗಡಿಯಿಂದ ಹಿಡಿದು ಕ್ಷೌರದ ಅಂಗಡಿಯವರೆಗೆ, ಜನನಿಬಿಡ ಪ್ರದೇಶದಿಂದ ಹಿಡಿದು ಅರಳಿಕಟ್ಟೆಯವರೆಗೆ ಎಲ್ಲೆಂದರೆಲ್ಲಿ ಚುನಾವಣೆಯ ವಿಚಾರವೇ ಮಾತಾಗಿದೆ. ಈಗಾಗಲೇ ಅಭ್ಯರ್ಥಿಗಳು ಮತದಾರರಿಗೆ ಖರ್ಚು ಮಾಡಿರುವ ಆಧಾರದ ಮೇಲೆ ಸೋಲುಗೆಲುವಿನ ನಿಷ್ಕರ್ಷೆಯಾಗುತ್ತಿದ್ದು, ಇಂತವರೇ ಗೆಲ್ಲುತ್ತಾರೆಂಬ ಬೆಟಿಂಗ್ ಕೂಡ ಶುರುವಾಗಿದೆ.
ಕೆಲವರು ಈಗಾಗಲೇ ಗೆದ್ದಿದ್ದೇವೆಂದು ಬೀಗುತ್ತಿದ್ದು ಎಲ್ಲಾ ಅವರವರ ಊಹೆಗೆ ತಕ್ಕಂತೆ ಚರ್ಚಿಸುತ್ತಿದ್ದಾರೆ.ಕೆಲವರಿಗೆ ತಮ್ಮ ಹಿನ್ನಡೆ ಈಗಾಗಲೇ ಅರಿವಿಗೆ ಬಂದಿದ್ದು ಫಲಿತಾಂಶ ಬರುವವರೆಗೂ ಇಲ್ಲಿರುವುದೇ ಬೇಡವೆಂದು ಸ್ಥಳಬಿಟ್ಟು ಬೇರೆಡೆಗೆ ತೆರಳಿದ್ದಾರೆ. ಮತ ಎಣಿಕೆ ದಿನಕ್ಕೆ ಬೆಂಬಲಿಗರೊಂದಿಗೆ ತೆರಳ ಬೇಕಿರುವ ಅಭ್ಯರ್ಥಿಗಳು ಅನಿವಾರ್ಯವಾಗಿ ಆ ದಿನದ ಖರ್ಚುವೆಚ್ಚವನ್ನು ಭರಿಸಬೇಕಿದ್ದು ಸೋತರೆ ಹೇಗಪ್ಪ ಎಂಬ ಚಿಂತೆ ಕೆಲವರಲ್ಲಿ ಮನೆಮಾಡಿದೆ.

ಕಳೆದ ಬಾರಿಗಿಂತ ಈ ಬಾರಿ ಮತದಾನದಲ್ಲಿ ಏರಿಕೆಯಾಗಿದ್ದು ನೂತನವಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದನ್ನು ಮತದಾರರು ಮತಪೆಟ್ಟಿಗೆಯಲ್ಲಿ ಗೌಪ್ಯವಾಗಿಟ್ಟಿದ್ದಾರೆ. ಫಲಿತಾಂಶಕ್ಕೆ ಇನ್ನೊಂದು ದಿನವಷ್ಟೆ ಬಾಕಿ ಉಳಿದಿದ್ದು ಸೋಲುಗೆಲುವಿನ ನಿರ್ಧಾರವಾಗಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...