ವಿಷಯಕ್ಕೆ ಹೋಗಿ

ಕೆಂಕೆರೆ : ಕಳೆದ ೨೦ ವರ್ಷದಿಂದ ಬರಿದಾಗಿದ್ದ ಸಿಹಿನೀರು ಬಾವಿ ಕಳೆದ ಮೂರ್ನಾಲ್ಕು ದಿನದಿಂದ ಬರುತ್ತಿರುವ ನೀರು

ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದಲ್ಲಿ ಕಳೆದ ೨೦ ವರ್ಷದಿಂದ ಬತ್ತಿಹೋಗಿದ್ದ ಪುರಾತ ಕಾಲದ ಬಾವಿಗೆ ಇದೀಗ ನೀರು ಬಂದಿದ್ದು ಗ್ರಾಮದ ಜನರಲ್ಲಿ ಅಶ್ಚರ್ಯದ ಜೊತೆಗೆ ಸಂತಸವನ್ನುಂಟು ಮಾಡಿದೆ.
ಈ ಬಾವಿ ಪುರಾತನಕಾಲದ ಬಾವಿಯಾಗಿದ್ದು ಸಿಹಿನೀರಿನ ಬಾವಿ ಎಂದು ಪ್ರಸಿದ್ದಿ ಪಡೆತಿತ್ತು. ಬಾವಿ ಬತ್ತುವುದಕ್ಕು ಮೊದಲು ಕೆಂಕೆರೆ ಗ್ರಾಮದ ಪ್ರತಿ ಮನೆಯವರು ಈ ಬಾವಿಯಿಂದಲೇ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುತ್ತಿದ್ದರು. ಗ್ರಾಮದೇವತೆ ಕಾಳಮ್ಮನ ಜಾತ್ರೆಯ ಅಂಗವಾಗಿ ನಡೆಯುವ ಅಗ್ನಿಕೊಂಡೋತ್ಸವ ಈ ಬಾವಿ ಬಳಿಯೇ ನಡೆದು ನಂತರ ಈ ಬಾವಿನೀರಿಂದಲೇ ಗಂಗಾಸ್ನಾನ ಮಾಡುತ್ತಿದ್ದರು. ಕಳಸ ಮಹೋತ್ಸವದಂದು ಪಟ್ಟದಕಳಸವನ್ನು ಇಂದಿಗೂ ಸಹ ಈ ಬಾವಿಹತ್ತಿರವೇ ಸ್ಥಾಪಿಸಿ ನಡೆಸಿಕೊಂಡು ಬರುತ್ತಿದ್ದಾರೆ.

ಕಳೆದ ೨೦ ವರ್ಷದ ಹಿಂದೆ ಏಕಾಏಕಿ ಈ ಬಾವಿಯಲ್ಲಿ ನೀರು ಬತ್ತಿದ್ದು ಜನರಲ್ಲಿ ಆತಂಕವನ್ನು ಉಂಟುಮಾಡಿತ್ತು. ಈ ಬಗ್ಗೆ ಗ್ರಾಮದೇವತೆಯನ್ನು ಕೇಳಿ ಹಲವಾರುಬಾರಿ ಬಾವಿಯ ಪುಣ್ಯಾಹಕಾರ್ಯ ಮಾಡಿದ್ದರೂ ಸಹ ನೀರು ಮಾತ್ರ ಬಂದಿರಲಿಲ್ಲ. ಇದನ್ನು ಕಂಡ ಗ್ರಾಮಸ್ಥರು ಬಾವಿ ಬತ್ತಿರುವುದು ಗ್ರಾಮಕ್ಕೆ ಶ್ರೇಯಸ್ಸಲ್ಲ ಇದರಿಂದ ಹೆಚ್ಚು ತೊಂದರೆಗಳಾಗಬಹುದು ಹಾಗೂ ಬರಗಾರವೂ ಉಂಟಾಗಬಹುದು ಎಂಬ ಭಯದಲ್ಲಿದ್ದರು. ಬಾವಿ ಬತ್ತಿದಾಗಿನಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗಿಲ್ಲ ಸದಾ ನೀರು ತುಂಬಿರುತ್ತಿದ್ದ ಕೆರೆಗಳು ಬರಡಾಗಿದ್ದವು. ಅಲ್ಲದೆ ಕಳೆದ ಎರಡು ಮೂರ್ವದ ಹಿಂದೆ ಬರಗಾಲ ಉಂಟಾಗಿ ಕುಡಿಯುವ ನೀರಿಗೂ ಜನ ಕಿ.ಮೀ ದೂರ ಹೋಗುವಂತಾಗಿತ್ತು. ಈರೀತಿ ಆಗುವುದಕ್ಕೆ ಸಿಹಿನೀರು ಬಾವಿ ಬತ್ತಿದ್ದೆ ಕಾರಣ ಎಂದು ಜನ ಪ್ರಬಲವಾಗಿ ನಂಬಿದ್ದರು.
ಇದೀಗ ಈ ಬಾವಿಯಲ್ಲಿ ನಾಲ್ಕೈದು ಅಡಿಯಷ್ಟು ನೀರು ಬಂದಿರುವುದು ಜನರಲ್ಲಿ ಹೆಚ್ಚು ಸಂತಸ ತಂದಿದ್ದು ಕೆಂಕೆರೆಗೆ ಉತ್ತಮ ಕಾಲ ಬಂತು ಮುಂದಿನ ದಿನಗಳಲ್ಲಿ ಹೆಚ್ಚು ಮಳೆ , ಬೆಳೆಯಾಗುವ ನಿರೀಕ್ಷೆಹೊಂದಿದ್ದಾರೆ. ಬಾವಿಗೆ ನೀರು ಬಂದಿದೆ ಎಂಬ ಸುದ್ದಿ ಜನರಬಾಯಿಂದ ಬಾಯಿಗೆ ಗ್ರಾಮದ ತುಂಬೆಲ್ಲಾ ಹರಡಿ ಗ್ರಾಮದ ಸಾಕಷ್ಟು ಮಂದಿ ಬಾವಿ ಹತ್ತಿರ ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಕೆಲವರು ಪೂಜೆ ಸಹ ಸಲ್ಲಿಸಿದ್ದಾರೆ.
--------

ಎಷ್ಟೇ ಬರಗಾಲ ಬಂದರೂ ಸಹ ಸಿನೀರುಬಾವಿ ಮಾತ್ರ ಬತ್ತದೆ ನಮ್ಮೂರ ಜನಕ್ಕೆ ನೀರು ನೀಡುತಿತ್ತು ಎಂದು ನಮ್ಮ ಅಜ್ಜ ಹೇಳುತ್ತಿದ್ದರು ಅದರೆ ಅದೇಕೋ ಏನೋ ಕಳೆದ ೨೦ ವರ್ಷದ ಹಿಂದೆ ಬಾವಿ ಬತ್ತಿತ್ತು, ಇದೀಗ ಮತ್ತೆ ನೀರು ಬಂದಿರುವುದು ಹರ್ಷತಂದಿದ್ದು ಮತ್ತೆ ಯಾವತ್ತೂ ಬತ್ತದೆ ಇರಲೆಂದು ಆ ದೇವರಲ್ಲಿ ಪ್ರಾರ್ಥಿಸುವೆ : ಉಪರಿಗೈಯ್ಯನ ಕುಮಾರಣ್ಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...