ವಿಷಯಕ್ಕೆ ಹೋಗಿ

ಕೆಂಕೆರೆ : ಕಳೆದ ೨೦ ವರ್ಷದಿಂದ ಬರಿದಾಗಿದ್ದ ಸಿಹಿನೀರು ಬಾವಿ ಕಳೆದ ಮೂರ್ನಾಲ್ಕು ದಿನದಿಂದ ಬರುತ್ತಿರುವ ನೀರು

ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದಲ್ಲಿ ಕಳೆದ ೨೦ ವರ್ಷದಿಂದ ಬತ್ತಿಹೋಗಿದ್ದ ಪುರಾತ ಕಾಲದ ಬಾವಿಗೆ ಇದೀಗ ನೀರು ಬಂದಿದ್ದು ಗ್ರಾಮದ ಜನರಲ್ಲಿ ಅಶ್ಚರ್ಯದ ಜೊತೆಗೆ ಸಂತಸವನ್ನುಂಟು ಮಾಡಿದೆ.
ಈ ಬಾವಿ ಪುರಾತನಕಾಲದ ಬಾವಿಯಾಗಿದ್ದು ಸಿಹಿನೀರಿನ ಬಾವಿ ಎಂದು ಪ್ರಸಿದ್ದಿ ಪಡೆತಿತ್ತು. ಬಾವಿ ಬತ್ತುವುದಕ್ಕು ಮೊದಲು ಕೆಂಕೆರೆ ಗ್ರಾಮದ ಪ್ರತಿ ಮನೆಯವರು ಈ ಬಾವಿಯಿಂದಲೇ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುತ್ತಿದ್ದರು. ಗ್ರಾಮದೇವತೆ ಕಾಳಮ್ಮನ ಜಾತ್ರೆಯ ಅಂಗವಾಗಿ ನಡೆಯುವ ಅಗ್ನಿಕೊಂಡೋತ್ಸವ ಈ ಬಾವಿ ಬಳಿಯೇ ನಡೆದು ನಂತರ ಈ ಬಾವಿನೀರಿಂದಲೇ ಗಂಗಾಸ್ನಾನ ಮಾಡುತ್ತಿದ್ದರು. ಕಳಸ ಮಹೋತ್ಸವದಂದು ಪಟ್ಟದಕಳಸವನ್ನು ಇಂದಿಗೂ ಸಹ ಈ ಬಾವಿಹತ್ತಿರವೇ ಸ್ಥಾಪಿಸಿ ನಡೆಸಿಕೊಂಡು ಬರುತ್ತಿದ್ದಾರೆ.

ಕಳೆದ ೨೦ ವರ್ಷದ ಹಿಂದೆ ಏಕಾಏಕಿ ಈ ಬಾವಿಯಲ್ಲಿ ನೀರು ಬತ್ತಿದ್ದು ಜನರಲ್ಲಿ ಆತಂಕವನ್ನು ಉಂಟುಮಾಡಿತ್ತು. ಈ ಬಗ್ಗೆ ಗ್ರಾಮದೇವತೆಯನ್ನು ಕೇಳಿ ಹಲವಾರುಬಾರಿ ಬಾವಿಯ ಪುಣ್ಯಾಹಕಾರ್ಯ ಮಾಡಿದ್ದರೂ ಸಹ ನೀರು ಮಾತ್ರ ಬಂದಿರಲಿಲ್ಲ. ಇದನ್ನು ಕಂಡ ಗ್ರಾಮಸ್ಥರು ಬಾವಿ ಬತ್ತಿರುವುದು ಗ್ರಾಮಕ್ಕೆ ಶ್ರೇಯಸ್ಸಲ್ಲ ಇದರಿಂದ ಹೆಚ್ಚು ತೊಂದರೆಗಳಾಗಬಹುದು ಹಾಗೂ ಬರಗಾರವೂ ಉಂಟಾಗಬಹುದು ಎಂಬ ಭಯದಲ್ಲಿದ್ದರು. ಬಾವಿ ಬತ್ತಿದಾಗಿನಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗಿಲ್ಲ ಸದಾ ನೀರು ತುಂಬಿರುತ್ತಿದ್ದ ಕೆರೆಗಳು ಬರಡಾಗಿದ್ದವು. ಅಲ್ಲದೆ ಕಳೆದ ಎರಡು ಮೂರ್ವದ ಹಿಂದೆ ಬರಗಾಲ ಉಂಟಾಗಿ ಕುಡಿಯುವ ನೀರಿಗೂ ಜನ ಕಿ.ಮೀ ದೂರ ಹೋಗುವಂತಾಗಿತ್ತು. ಈರೀತಿ ಆಗುವುದಕ್ಕೆ ಸಿಹಿನೀರು ಬಾವಿ ಬತ್ತಿದ್ದೆ ಕಾರಣ ಎಂದು ಜನ ಪ್ರಬಲವಾಗಿ ನಂಬಿದ್ದರು.
ಇದೀಗ ಈ ಬಾವಿಯಲ್ಲಿ ನಾಲ್ಕೈದು ಅಡಿಯಷ್ಟು ನೀರು ಬಂದಿರುವುದು ಜನರಲ್ಲಿ ಹೆಚ್ಚು ಸಂತಸ ತಂದಿದ್ದು ಕೆಂಕೆರೆಗೆ ಉತ್ತಮ ಕಾಲ ಬಂತು ಮುಂದಿನ ದಿನಗಳಲ್ಲಿ ಹೆಚ್ಚು ಮಳೆ , ಬೆಳೆಯಾಗುವ ನಿರೀಕ್ಷೆಹೊಂದಿದ್ದಾರೆ. ಬಾವಿಗೆ ನೀರು ಬಂದಿದೆ ಎಂಬ ಸುದ್ದಿ ಜನರಬಾಯಿಂದ ಬಾಯಿಗೆ ಗ್ರಾಮದ ತುಂಬೆಲ್ಲಾ ಹರಡಿ ಗ್ರಾಮದ ಸಾಕಷ್ಟು ಮಂದಿ ಬಾವಿ ಹತ್ತಿರ ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಕೆಲವರು ಪೂಜೆ ಸಹ ಸಲ್ಲಿಸಿದ್ದಾರೆ.
--------

ಎಷ್ಟೇ ಬರಗಾಲ ಬಂದರೂ ಸಹ ಸಿನೀರುಬಾವಿ ಮಾತ್ರ ಬತ್ತದೆ ನಮ್ಮೂರ ಜನಕ್ಕೆ ನೀರು ನೀಡುತಿತ್ತು ಎಂದು ನಮ್ಮ ಅಜ್ಜ ಹೇಳುತ್ತಿದ್ದರು ಅದರೆ ಅದೇಕೋ ಏನೋ ಕಳೆದ ೨೦ ವರ್ಷದ ಹಿಂದೆ ಬಾವಿ ಬತ್ತಿತ್ತು, ಇದೀಗ ಮತ್ತೆ ನೀರು ಬಂದಿರುವುದು ಹರ್ಷತಂದಿದ್ದು ಮತ್ತೆ ಯಾವತ್ತೂ ಬತ್ತದೆ ಇರಲೆಂದು ಆ ದೇವರಲ್ಲಿ ಪ್ರಾರ್ಥಿಸುವೆ : ಉಪರಿಗೈಯ್ಯನ ಕುಮಾರಣ್ಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.