ವಿಷಯಕ್ಕೆ ಹೋಗಿ

ಅಧ್ಯಕ್ಷರ ಗದ್ದುಗೆಗೆ ಕಸರತ್ತು:ಗ್ರಾಪಂ ಸದಸ್ಯರಿಗೆ ಪ್ರವಾಸ ಭಾಗ್ಯ

                      ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷಗಳ ಹುದ್ದೆಗೆ ಮೀಸಲಾತಿ ಪಟ್ಟಿ ಪ್ರಕಟಗೊಂಡಿದ್ದೆ ತಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಮ್ಮ ಬೆಂಬಲ ನೀಡಲಿರುವ ಚುನಾಯಿತ ಸದಸ್ಯರುಗಳನ್ನು ಒಗ್ಗೂಡಿಸಿಕೊಂಡು ಪ್ರವಾಸದ ನೆಪದಲ್ಲಿ ಅಜ್ಞಾತ ಸ್ಥಳದ ಹಾದಿ ಹಿಡಿದಿದ್ದಾರೆ.
                           ಹುಳಿಯಾರು ಗ್ರಾ.ಪಂ. ಬರೋಬರಿ ೩೯ ಸದಸ್ಯರನ್ನೊಳಗೊಂಡು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸದಸ್ಯ ಸ್ಥಾನ ಹೊಂದಿರುವ ಪಂಚಾಯ್ತಿ ಎಂಬ ಹೆಗ್ಗಳಿಕೆ ಹೊಂದಿದೆ. ಪಂಚಾಯ್ತಿಯ ಒಟ್ಟು ೩೯ ಸದಸ್ಯರ ಪೈಕಿ ಪುರುಷ ಸದಸ್ಯರು ೧೯ ಮಂದಿಯಿದ್ದರೆ, ಮಹಿಳಾ ಸದಸ್ಯರು ೨೦ ಮಂದಿಯಿದ್ದಾರೆ. ಅಧ್ಯಕ್ಷರ ಸ್ಥಾನ ಸಾಮಾನ್ಯ ಮಹಿಳೆಗೊಲಿದರೆ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟಜಾತಿಗೆ ದಕ್ಕಿದೆ.
                        ಅಧ್ಯಕ್ಷ ಸ್ಥಾನ ಈ ಬಾರಿ ಸಾಮನ್ಯಕ್ಕೆ ಬರಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಪುರುಷ ಸದಸ್ಯರುಗಳು ತೆರೆಮರೆಯ ಕಸರತ್ತು ನಡೆಸಿದ್ದರು.ಪಕ್ಷದ ಚಿಹ್ನೆ ಮೂಲಕ ಗೆಲ್ಲದಿದ್ದರೂ ಪಕ್ಷದ ಬೆಂಬಲದಿಂದ ಗೆದಿದ್ದ ಅಭ್ಯರ್ಥಿಗಳು ತಮ್ಮದೆ ಆದ ಲೆಕ್ಕಾಚಾರದಲ್ಲಿ ತೊಡಗಿಕೊಂಡು ಬಹುಮತ ಸಾಬೀತುಪಡಿಸಲು ಬೇಕಾದ 20 ಸದಸ್ಯರ ಬೆಂಬಲ ಪಡೆಯಲು ನಾನಾರೀತಿಯ ಹಾದಿ ಹಿಡಿದಿದ್ದರು. ಆದರೆ ಎಲ್ಲರ ನಿರೀಕ್ಷೆ ತಲೆಕೆಳಗಾಗಿ ಅಧ್ಯಕ್ಷರ ಸ್ಥಾನ ಈ ಬಾರಿಯೂ ಮಹಿಳೆಗೆ ಒಲಿದಿದ್ದರಿಂದ ಹೆಚ್ಚಿನ ಪೈಪೋಟಿ ತಪ್ಪಿದಂತಾಗಿದೆ.
ಪಂಚಾಯ್ತಿಯಲ್ಲಿ ಒಟ್ಟು ೨೦ ಮಂದಿ ಮಹಿಳಾ ಸದಸ್ಯರಿದ್ದು ಈ ಪೈಕಿ ಯಾರಿಗೆ ಅಧ್ಯಕ್ಷ ಗಾದಿ ಒಲಿಯಲಿದೆ ಎಂಬುದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.ತಮ್ಮ ಪಕ್ಷ ಅಧಿಕಾರದಲ್ಲಿರಲಿ ಎಂದು ರಾಜಕೀಯ ಪಕ್ಷಗಳ ನೇತಾರರು ಸಹ ನೇರ ಅಖಾಡಕಿಳಿದಿದ್ದು ಚುನಾಯಿತರಾಗಿರುವ ಸದಸ್ಯರನ್ನೂ ತಾವೇ ಭೇಟಿಯಾಗಿ ಮನವೊಲಿಸಿ ಒಗ್ಗೂಡಿಸುತ್ತಿದ್ದಾರೆ.
ಹುಳಿಯಾರು ಗ್ರಾ.ಪಂ.ಗೆ ಆಯ್ಕೆಯಾದ ಸದಸ್ಯರೊಂದಿಗೆ ಶಾಸಕ ಸುರೇಶ್ ಬಾಬು
                        ಅಧ್ಯಕ್ಷ ಗದ್ದುಗೆ ಏರಲು ಎರಡನೇ ಬಾರಿ ಸದಸ್ಯರಾಗಿರುವ ಗೀತಾ ಅಶೋಕ್ ಬಾಬು,ಸಿದ್ದಗಂಗಮ್ಮ ,ಶಶಿಕಲಾ ಅಲ್ಲದೆ ಹೆಚ್.ಎಸ್.ಗೀತಾ,ಲತಾ ಮುಂತಾದವರು ಕಣದಲ್ಲಿದ್ದಾರೆ. ಬಿಜೆಪಿ ಬಣದಿಂದ ರಾಜಕೀಯ ಕುಟುಂಬದ ಹಿನ್ನಲೆ ಹೊಂದಿರುವ ವಕೀಲ ರಮೇಶ್ ಬಾಬು ಅವರ ಪತ್ನಿ ಬಿಂಧು ಪೈಪೋಟಿಯಲ್ಲಿದ್ದಾರೆ.ಇವರು ಕೂಡ ವಕೀಲ ವೃತ್ತಿಯಲ್ಲಿದ್ದು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರ ನಡುವೆ ಪೈಪೋಟಿಯಿದ್ದು ಇವರುಗಳ ಪೈಕಿ ಯಾರು ಅಧ್ಯಕ್ಷೆಯಾಗಿ ಗದ್ದುಗೆ ಏರಲಿದ್ದಾರೆ ಎಂಬುದು ತಿಳಿಯದಾಗಿದೆ.
ಇನ್ನುಳಿದಂತೆ ಉಪಾಧ್ಯಕ್ಷ ಸ್ಥಾನ ಎಸ್ ಸಿ ಗೆ ಮೀಸಲಾಗಿದ್ದು ಆಯ್ಕೆಯಾದ ಸದಸ್ಯರಲ್ಲಿ ಕೇವಲ ಮೂರು ಮಂದಿ ಮಾತ್ರ ಎಸ್ ಸಿ ಸದಸ್ಯರುಗಳಿದ್ದು ಗಣೇಶ್ ಹೆಸರು ಮುಂಚೂಣಿಯಲ್ಲಿದೆ.
ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನ ಹಿಡಿಯಲು ಇವರೆಲ್ಲರೂ ತೀವ್ರ ಕಸರತ್ತು ನಡೆಸಿದ್ದು, ಬಹುಮತ ಸಾಬೀತಿಗೆ ಅವಶ್ಯವಿರುವ ಬಲವನ್ನು ಜತೆಯಲ್ಲಿ ಇಟ್ಟುಕೊಳ್ಳಲು ಪ್ರವಾಸ ದಾರಿ ಹುಡುಕಿದ್ದಾರೆ. ಹುದ್ದೆ ಆಕಾಂಕ್ಷಿಗಳಿಂದ ಚುನಾಯಿತ ಸದಸ್ಯರಿಗೆ ಡಿಮ್ಯಾಂಡ್ ಶುರುವಾಗಿದ್ದು,ಶಾಸಕರ ನೆರವಿನೊಂದಿಗೆ ತಮ್ಮ ಆಯ್ಕೆಗೆ ಅವಶ್ಯವಿರುವ ಸಂಖ್ಯೆಯಷ್ಟು ಸದಸ್ಯರನ್ನು ಕೂಡಿಸಿಕೊಂಡು ಅಜ್ಞಾತ ಸ್ಥಳಕ್ಕೆ ಶುಕ್ರವಾರ ರಾತ್ರಿಯೆ ಪ್ರವಾಸ ಹೋಗಿದ್ದಾರೆ.
                   ಅಧ್ಯಕ್ಷರ ಚುನಾವಣೆ ಘೋಷಣೆಯಾಗಿ ಚುನಾವಣೆ ದಿನದಂದೇ ನೇರವಾಗಿ ಪಂಚಾಯ್ತಿ ಹಾಲ್ ಗೆ ಆಗಮಿಸುವ ಇವರುಗಳು ಅಲ್ಲಿಯವರೆಗೂ ನಾಟ್ ರೀಚಬಲ್.
                      ಈ ಬಾರಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯನ್ನು 5 ವರ್ಷಕ್ಕೆ ನಿಗದಿಗೊಳಿಸಿರುವುದು ಮತ್ತು ಆಯ್ಕೆಯಾದವರ ವಿರುದ್ಧ ಎರಡೂವರೆ ವರ್ಷದವರೆಗೆ ಅವಿಶ್ವಾಸ ಮಂಡಿಸುವಂತಿಲ್ಲ ಎಂಬ ಹೊಸ ನಿಯಮ ತಂದಿರುವುದೆ ಆಕಾಂಕ್ಷಿಗಳಲ್ಲಿ ಹೆಚ್ಚಿನ ಆಸೆಗೆ ಕಾರಣವಾಗಿದೆ. ಯಾವ ರೀತಿಯಲ್ಲಾದರೂ ಸರಿ ,ಹೇಗಾದರೂ ಸರಿ ಅಧಿಕಾರ ಗಿಟ್ಟಿಸಿಕೊಳ್ಳಲೇಬೇಕು ಎಂಬ ನಿರ್ಧಾರದಿಂದ ತೀವ್ರ ಪೈಪೋಟಿ ಎದುರಾಗಿದೆ. ಒಟ್ಟಾರೆ ನಾನಾ ರೀತಿಯ ಲೆಕ್ಕಾಚಾರದ ಮೇಲೆ ಆಯ್ಕೆಯಾದ ಸದಸ್ಯರನ್ನು ಮನವೊಲಿಸಿ ಒಂದುಕಡೆ ಒಗ್ಗಟ್ಟಾಗಿಹಿಡಿ ದಿಟ್ಟುಕೊಳ್ಳುವ ಪ್ರಯತ್ನಕ್ಕೆ ಪ್ರವಾಸ ದಾರಿಮಾಡಿಕೊಟ್ಟಿರಿವುದು ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ.
--

ನಮ್ಮ ಪಕ್ಷದಲ್ಲಿ ಹೆಚ್ಚಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿದ್ದು ಎಲ್ಲರೂ ಒಟ್ಟಾಗಿ ಪ್ರವಾಸಕ್ಕೆ ಹೊರಟ್ಟಿದ್ದೇವೆ.ನಮಗಂತೂ ಪೈಸದ್ದೂ ಖರ್ಚಿಲ್ಲ.ಯಾರಿಗೆ ಬೆಂಬಲ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಚುನಾವಣೆ ದಿನಯ ದಿನವೇ ನಾವೆಲ್ಲ ಮತ್ತೆ ವಾಪಸ್ ಬರುವುದು.-ಹೆಸರು ಹೇಳಲಿಚ್ಛಿಸದ ಗ್ರಾ.ಪಂ.ಸದಸ್ಯ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...