ವಿಷಯಕ್ಕೆ ಹೋಗಿ

ರಸ್ತೆ ಬದಿಯ ತ್ಯಾಜ್ಯದ ತೆರವಿಗೆ ಮುಂದಾದ ಗ್ರಾ.ಪಂ. ಸದಸ್ಯ

ಹುಳಿಯಾರು ಪಟ್ಟಣದ ಒಂದನೇ ಬ್ಲಾಕ್ ನಿಂದ ಆಯ್ಕೆಯಾಗಿರುವ ಸದಸ್ಯ ಎಲ್.ಆರ್.ಚಂದ್ರಶೇಕರ್ ತಮ್ಮ ಬ್ಲಾಕ್ ನ ರಸ್ತೆ ಬದಿಯಲ್ಲಿ ಬಿದಿದ್ದ ತ್ಯಾಜ್ಯವನ್ನು ಜೆಸಿಬಿ ಬಳಸಿ ತೆಗೆದು ಹಾಕಿಸುವ ಮೂಲಕ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದಾರೆ.

ಒಂದನೇ ಬ್ಲಾಕ್ ನ ಗಾಂಧಿಪೇಟೆ ರಸ್ತೆ , ಮಾಜಿ ಛೇರ್ಮನ್ ವೆಂಕಟಾಚಲಪತಿ ಶೆಟ್ಟಿಯವರ ಮನೆಯ ರಸ್ತೆ, ವಿವೇಕಾನಂದ ರಸ್ತೆ ಸೇರಿದಂತೆ ಇನ್ನಿತರ ರಸ್ತೆ ಬದಿಯ ಚರಂಡಿಗೆ ಹೊಂದಿಕೊಂಡಂತೆ ರಾಶಿರಾಶಿ ಕಸ,ಕಡ್ಡಿ, ಮಣ್ಣು ಬಿದ್ದಿತ್ತು. ಅಲ್ಲದೆ ಚರಂಡಿ ಸ್ವಚ್ಚಗೊಳಿಸುವಾಗಿನ ತ್ಯಾಜ್ಯ ಸಹ ಚರಂಡಿ ಪಕ್ಕದಲ್ಲೇ ಹಾಕಿದ್ದು ರಸ್ತೆಯನ್ನು ಕಿರಿದಾಗಿಸಿತ್ತು. ಇದರಿಂದಾಗಿ ಇಲ್ಲಿ ಸಂಚರಿಸುವರಿಗೆ ಕಿರಿಕಿರಿಯಾಗುತ್ತಿತ್ತಲ್ಲದೆ ವಾಹನಗಳು ಸಂಚರಿಸಲು ಪರದಾಡುವಂತಾಗಿತ್ತು. ಚರಂಡಿ ಪಕ್ಕದಲ್ಲೇ ಇದ್ದ ಮಣ್ಣು ಚರಂಡಿಯಲ್ಲಿ ಬಿದ್ದು ನೀರು ನಿಂತು ದುರ್ವಾಸನೆ ಉಂಟುಮಾಡಿತ್ತು.
ಇಂತಹ ಹತ್ತಾರೂ ಸಮಸ್ಯೆಗಳನ್ನು ಕಂಡಿದ್ದ ಇದೇ ಬ್ಲಾಕ್ ನವರೇ ಆದ ಎಲ್.ಆರ್.ಚಂದ್ರಶೇಖರ್ ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸಿ, ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ವೇಳೆ ಮತದಾರಿಗೆ ನೀಡಿದ ಭರವಸೆಯಂತೆ ಕಾರ್ಯಗಳನ್ನು ಮಾಡಿಸಲು ಮುಂದಾಗಿದ್ದಾರೆ. ಈ ಕಾರ್ಯ ಮಾಡಿಸಲು ಪಂಚಾಯ್ತಿಂದ ಬರುವ ಹಣವನ್ನು ಕಾದುಕೂತರೆ ತಡವಾಗುತ್ತದೆ ಅವರು ಹಣಕೊಡಲಿ ಬಿಡಲಿ ತಮ್ಮ ಖರ್ಚಿನಲ್ಲಿ ಕೆಲಸ ಮಾಡಿಸಲು ಹೊರಟಿರುವುದು ಅಲ್ಲಿನ ನಿವಾಸಿಗಳ ಪ್ರಶಂಸೆಗೆ ಕಾರಣವಾಗಿದೆ.
ಪಂಚಾಯ್ತಿಯ ೩೯ ಸದಸ್ಯರ ಪೈಕಿ ೩೦ಕ್ಕೂ ಅಧಿಕ ಮಂದಿ ಸದಸ್ಯರು ಚುನಾವಣೆಯಲ್ಲಿ ಗೆದ್ದ ಬಳಿಕ ತಮ್ಮ ಬ್ಲಾಕ್ ಗಳನ್ನು ಮರೆತು ಅಧ್ಯಕ್ಷರ ಆಯ್ಕೆಯ ಹಿನ್ನಲೆಯಲ್ಲಿ ಪ್ರವಾಸ ಹೋಗಿ ಮೋಜಿನಲ್ಲಿದ್ದರೆ, ಇವರು ಇದರ ಗೋಜು ಬೇಡವೆಂದಿದ್ದಾರೆ. ಯಾರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ ಅಂತಹವರನ್ನು ಅಧ್ಯಕ್ಷರಾಗಿ ಮಾಡಬೇಕಿದ್ದು ಅಧ್ಯಕ್ಷ ಆಯ್ಕೆಯ ದಿನಾಂಕದಂದು ನೋಡವೆಂದು ತಮ್ಮ ಬ್ಲಾಕ್ ನಲ್ಲಿ ಪ್ರಮುಖವಾಗಿ ಆಗಬೇಕಾದ ಕಾರ್ಯಗಳತ್ತ ಗಮನ ಮಾಡಿದ್ದಾರೆ.
-----------

ಚುನಾವಣೆಯ ಪ್ರಚಾರದ ಸಮಯದಲ್ಲಿ ಮತದಾರರಿಗೆ ಮಾತುಕೊಟ್ಟಂತೆ ಕೆಲಸ ಮಾಡಿಸುತ್ತಿದ್ದು , ಮೊದಲು ತಮ್ಮ ಬ್ಲಾಕ್ ನ ಎಲ್ಲಾ ರಸ್ತೆ,ಚರಂಡಿಗಳನ್ನು ಸ್ವಚ್ಚಗೊಳಿಸಿ ನಂತರ ಪಟ್ಟಣದ ಎಲ್ಲಾ ಪ್ರಮುಖ ರಸ್ತೆ ಹಾಗೂ ಚರಂಡಿಯ ಸ್ವಚ್ಚತಾ ಕಾರ್ಯ ಮಾಡಿಸುವ ಗುರಿ ಹೊಂದಿದ್ದೇನೆ : ಗ್ರಾ.ಪಂ.ಸದಸ್ಯ ಎಲ್.ಆರ್.ಚಂದ್ರಶೇಖರ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...