ವಿಷಯಕ್ಕೆ ಹೋಗಿ

ಕುತೂಹಲ ಮೂಡಿಸಿದ ಹುಳಿಯಾರು ಗ್ರಾ.ಪಂ. ಮತಎಣಿಕೆ

ಜಿಲ್ಲೆಯಲ್ಲಿಯೇ ಅತಿ ದೊಡ್ಡ ಪಂಚಾಯ್ತಿಯಾಗಿರುವ ಬರೋಬರಿ ೩೯ ಸದಸ್ಯರನ್ನು ಹೊಂದಿರುವ ಹುಳಿಯಾರು ಗ್ರಾ.ಪಂ. ಮತಎಣಿಕೆ ಕೇಂದ್ರ ಬೆಳಿಗ್ಗೆಯಿಂದಲೂ ಭರ್ತಿ ಅಭ್ಯರ್ಥಿಗಳಿಂದ ತುಂಬಿ ಎಲ್ಲರ ಗಮನ ಸೆಳೆಯುತ್ತಿತ್ತು.
  
ಬಿಸಿಲನ್ನೂ ಲೆಕ್ಕಿಸದೆ ಅಭ್ಯರ್ಥಿಗಳ ಫಲಿತಾಂಶಕ್ಕೆ ಕುತೂಹಲದಿಂದ ಎದುರು ನೋಡುತ್ತಿದ್ದ ಬೆಂಬಲಿಗರು.

ಹುಳಿಯಾರು ಪಂಚಾಯ್ತಿಯ ಮತಎಣಿಕೆ ತಾಲ್ಲೂಕು ಕೇಂದ್ರವಾದ ಚಿಕ್ಕನಾಯಕನಹಳ್ಳಿಯ ಸರ್ಕಾರಿ ಕಾಲೇಜಿನಲ್ಲಿ ನಡೆದಿದ್ದು, ಇದಕ್ಕಾಗಿ ಎರಡು ಕೊಠಡಿಗಳಲ್ಲಿ ಮತಎಣಿಕೆ ವ್ಯವಸ್ಥೆ ಮಾಡಲಾಗಿತ್ತು. ಹೋಬಳಿ ವ್ಯಾಪ್ತಿಯ ೧೦ ಪಂಚಾಯ್ತಿಯ ಮತಎಣಿಕೆಯೂ ಚಿ.ನಾ.ಹಳ್ಳಿಯಲ್ಲಿ ನಡೆದಿದ್ದರಿಂದ ಬೆಳಿಗ್ಗೆಯೇ ಕಾಲೇಜಿನ ಸುತ್ತಮುತ್ತ ಆವರಣ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರಿಂದ ತುಂಬಿ ತುಳುಕುತ್ತಿತ್ತು. ಹುಳಿಯಾರಿನ ೧೩ ಬ್ಲಾಕ್ ಗಳ ಪೈಕಿ ಎರಡೆರಡು ಬ್ಲಾಕ್ ಗಳಂತೆ ಏಕಕಾಲಕ್ಕೆ ೪ ಬ್ಲಾಕ್ ಗಳ ಮತಎಣಿಕೆ ನಡೆಸಲಾಯಿತು. ಬೆಳಿಗ್ಗೆ ೮ ರಿಂದ ಪ್ರಾರಂಭವಾದ ಮತಎಣಿಕೆ ಕಾರ್ಯದಲ್ಲಿ ೧ ಗಂಟೆಯ ಸಮಯಕ್ಕೆ ೪ ಬ್ಲಾಕ್ ಗಳ ಮತಎಣಿಕೆ ಸಂಪೂರ್ಣಗೊಂಡು ವಿಜೇತರನ್ನು ಘೋಷಿಸಲಾಯಿತು. ಒಟ್ಟು ೧೬೨ ಮಂದಿ ಸ್ಪರ್ಧಿಸಿರುವುದರಿಂದ ಮತ ಎಣಿಕೆ ಕಾರ್ಯಕ್ಕೆ ಹೆಚ್ಚಿನ ಸಮಯ ಹಿಡಿದು ಸಂಜೆಯಾದರೂ ಮುಂದುವರೆದಿತ್ತು. ಹೆಚ್ಚಿನ ಬ್ಲಾಕ್ ಗಳಲ್ಲಿ ೧೦ಕ್ಕೂ ಮೇಲ್ಪಟ್ಟು ಅಭ್ಯರ್ಥಿಗಳಿದ್ದು ೧೦ ನೇ ಬ್ಲಾಕ್ ನಲ್ಲಿ ೨೮ ಅಭ್ಯರ್ಥಿಗಳಿದಿದ್ದು ಎಣಿಕೆಕಾರ್ಯ ವಿಳಂಬವಾಗುವಂತಾಯಿತು. ಅಭ್ಯರ್ಥಿಗಳ ಪರ ಮತಎಣಿಕೆ ಏಜೆಂಟರ್ ಗಳೂ ಹಾಗೂ ಮತಎಣಿಕೆಕಾರ್ಯ ಸಿಬ್ಬಂದಿಗಳು ಸೇರಿದ್ದರಿಂದ ಕೊಠಡಿಗಳು ಜನದಟ್ಟಣೆಯಿಂದ ಕೂಡಿತ್ತು. ಪ್ರತಿಯೊಬ್ಬರಿಗೂ ಮತಪತ್ರಗಳನ್ನು ತೋರಿಸಿ ಮತಎಣಿಕೆ ಮಾಡುತ್ತಿದ್ದರಿಂದ ಯಾವುದೇ ಗೊಂದಲ , ಗಲಾಟೆಯಿಲ್ಲದೆ ಮತಎಣೆಕೆ ಸುಗಮವಾಗಿ ನಡೆಯಿತು. ಒಂದೆರಡು ಬ್ಲಾಕ್ ಗಳನ್ನು ಹೊರತುಪಡಿಸಿದರೆ ಎಲ್ಲಾ ಬ್ಲಾಕ್ ಗಳಲ್ಲೂ ತೀವ್ರ ಪೈಪೋಟಿಯ ಚುನಾವಣೆ ನಡೆದಿದ್ದರಿಂದ ಮತಎಣಿಕೆ ಕಾರ್ಯ ಕುತೂಹಲ ಕೆರಳಿಸಿತ್ತು.ಕೆಲವೊಂದೆರಡು ಅಭ್ಯರ್ಥಿಗಳು ನಿರೀಕ್ಷಿಸಿದಂತೆ ಗೆಲುವು ಸಾಧಿಸಿದರೆ, ತೀವ್ರ ಪೈಪೋಟಿ ನೀಡುತ್ತಾರೆಂದು ಭಾವಿಸಿದ್ದ ಅಭ್ಯರ್ಥಿಗಳು ಹೇಳ ಹೆಸರಿಲ್ಲದಂತೆ ಸೋತಿದ್ದಾರೆ. ಈ ಬಾರಿ ಅಭಿವೃದ್ದಿ ಹೆಸರಿನಲ್ಲಿ ಮತಯಾಚಿಸಿದವರು ಗೆಲ್ಲಲು ತಿಣುಕಿದರೆ, ಹಣ ಹಾಗೂ ಮತ್ತಿತರ ಆಮಿಷವೊಡ್ಡಿದ್ದ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ವ್ಯಂಗ್ಯವೆನಿಸಿದೆ.

ಒಟ್ಟಾರೆ ಈ ಬಾರಿ ಪಂಚಾಯ್ತಿಗೆ ಹೆಚ್ಚು ಹೊಸಮುಖಗಳು ಆಯ್ಕೆಯಾಗುತ್ತಾರೆಂಬ ನಿರೀಕ್ಷೆ ಹುಸಿಯಾಗಿದ್ದು ಈ ಹಿಂದೆ ಸದಸ್ಯರೇ ಹೆಚ್ಚು ಆಯ್ಕೆಯಾಗಿದ್ದು ಹುಳಿಯಾರು ಗ್ರಾ.ಪಂ. ಈ ಹಿಂದಿನಂತೆಯೇ ಉಳಿಯುತ್ತದೆಯೋ ಅಥವಾ ಅಭಿವೃದ್ದಿಪಥದತ್ತ ಸಾಗುತ್ತದೆಯೋ ಎಂಬುದನ್ನು ಕಾದುನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...