ವಿಷಯಕ್ಕೆ ಹೋಗಿ

ಹುಳಿಯಾರು: ರಾತ್ರಿವರೆಗೂ ನಡೆದ ಮತಎಣಿಕೆ

 ಗ್ರಾಮಪಂಚಾಯ್ತಿಯ ನೂತನ ಸದಸ್ಯರ ಆಯ್ಕೆಗಾಗಿ ನಡೆದ ಚುನಾವಣೆಯ ಮತಎಣಿಕೆಯ ಸಂಪೂರ್ಣ ಫಲಿತಾಂಶ ಶುಕ್ರವಾರ ರಾತ್ರಿ ಫಲಿತಾಂಶ ಹೊರಬಿದ್ದಿದೆ.
ಹುಳಿಯಾರಿನ ೫ನೇ ಬ್ಲಾಕ್ ನಿಂದ ಸ್ಪರ್ಧಿಸಿ ೫೦೩ ಮತಗಳನ್ನು ಪಡೆದು ಸತತ ೨ನೇಬಾರಿ ಆಯ್ಕೆಯಾದ ಗೀತಾಅಶೋಕ್ ಬಾಬು ಚುನಾವಣಾಧಿಕಾರಿಯಿಂದ ಪ್ರಮಾಣಪತ್ರ ಪಡೆಯುತ್ತಿರುವುದು.
ಶುಕ್ರವಾರ ಬೆಳಿಗ್ಗಿನಿಂದ ಸಂಜೆ ವರೆಗೆ ೧ ನೇ ಬ್ಲಾಕ್ ನಿಂದ ೮ ನೇ ಬ್ಲಾಕ್ ವರೆಗೆ ಮಾತ್ರ ಮತಎಣಿಕೆ ನಡೆದು ಫಲಿತಾಂಶ ಹೊರಬಿದ್ದಿತ್ತು. ಸಂಜೆ ನಂತರ ಇನ್ನುಳಿದ ಬ್ಲಾಕ್ ಗಳ ಎಣಿಕೆ ಕಾರ್ಯ ನಡೆದು ರಾತ್ರಿ ೯.೩೦ರ ಸುಮಾರಿಗೆ ಎಲ್ಲಾ ಬ್ಲಾಕ್ ಗಳ ಫಲಿತಾಂಶದ ಘೋಷಣೆಯಾಯಿತು.

೫ ನೇ ಬ್ಲಾಕ್ ನ ೪ ಸ್ಥಾನಕ್ಕೆ (ಎಸ್ ಟಿ ಮಹಿಳೆ, ಬಿಸಿಎಂ-ಎ, ಬಿಸಿಎಂ-ಎ ಮಹಿಳೆ, ಸಾಮಾನ್ಯ ಮಹಿಳೆ) ಒಟ್ಟು ೧೪ ಮಂದಿ ಕಣದಲ್ಲಿದ್ದು ಎಸ್ಆರ್ ಎಸ್ ದಯಾನಂದ್(೪೧೯), ಗೀತಾಬಾಬು (50೩), ನಗೀನಾಬಾನು (2೫೭), ರಂಗಮ್ಮ (25೬) ವಿಜೇತರಾಗಿದ್ದಾರೆ. ೯ ನೇ ಬ್ಲಾಕ್ ನ ೪ ಸ್ಥಾನಕ್ಕೆ (ಬಿಸಿಎಂ-ಎ, ಬಿಸಿಎಂ-ಬಿ, ಸಾಮಾನ್ಯ, ಸಾಮಾನ್ಯ ಮಹಿಳೆ) ಒಟ್ಟು ೧೮ ಮಂದಿ ಸ್ಪರ್ಧಿಸಿದ್ದು ಎಚ್.ಆರ್.ವೆಂಕಟೇಶ್(೨೯೨),ಡಿಶ್ ಬಾಬು(೩೦೫), ಡಾಬಾ ಸುರೇಶ್(೩೫೮), ಬಿಂದುರಮೇಶ್ ಬಾಬು(೩೨೬), ೧೦ ನೇ ಬ್ಲಾಕ್ ನ ೪ ಸ್ಥಾನಕ್ಕೆ (ಎಸ್.ಸಿ.ಮಹಿಳೆ, ಬಿಸಿಎಂ-ಎ ಮಹಿಳೆ, ಸಾಮಾನ್ಯ, ಸಾಮಾನ್ಯ ಮಹಿಳೆ) ಒಟ್ಟು ೨೮ ಮಂದಿ ಸ್ಪರ್ಧಿಸಿದ್ದು ಅಹಮದ್ ಖಾನ್(೩೬೩), ಶಶಿಕಲಾ(೨೩೨), ಜಾನಕಮ್ಮ(೨೩೦), ಪುಟ್ಟಿಬಾಯಿ(೧೬೪), ೧೧ ನೇ ಬ್ಲಾಕ್ (೨ ಸ್ಥಾನಕ್ಕೆ ) ಸಾಮಾನ್ಯ,ಸಾಮಾನ್ಯ ಮಹಿಳೆ, ಒಟ್ಟು ೮ ಮಂದಿ ಸ್ಪರ್ಧಿಸಿದ್ದು ಎಸ್.ಹೆಚ್.ಲತಾ(೨೨೩),ನಾಗರಾಜ(೧೬೯), ೧೨ ನೇ ಬ್ಲಾಕ್ ನ ೨ ಸ್ಥಾನಕ್ಕೆ (ಬಿಸಿಎಂ-ಎ, ಸಾಮಾನ್ಯ ಮಹಿಳೆ) ಒಟ್ಟು ೫ ಮಂದಿ ಸ್ಪರ್ಧಿಸಿದ್ದು ಕಾಯಿಕುಮಾರಸ್ವಾಮಿ(೩೯೧), ಚಂದ್ರಮ್ಮ(೩೧೫), ೧೩ ನೇ ಬ್ಲಾಕ್ ನ ೪ ಸ್ಥಾನಕ್ಕೆ (ಬಿಸಿಎಂ-ಎ ಮಹಿಳೆ, ಬಿಸಿಎಂ-ಬಿ ಮಹಿಳೆ, ಸಾಮಾನ್ಯ ೨) ಒಟ್ಟು ೧೫ ಮಂದಿ ಸ್ಪರ್ಧಿಸಿದ್ದು ಸುಭದ್ರಬಾಯಿ(೩೨೪),ವಿ.ಎನ್.ಶಿವಾಜಿರಾವ್(೩೧೪), ಜಬೀನ್ ತಾಜ್(೨೨೦),ಹೆಚ್.ಚಂದ್ರಶೇಖರ್ ರಾವ್(೩೪೭) ಮತಗಳನ್ನು ಪಡೆಯುವ ಮೂಲಕ ವಿಜೇತರಾಗಿದ್ದಾರೆ.ರಾತ್ರಿ ೧೦ ಗಂಟೆಗೆ ಹುಳಿಯಾರಿಗೆ ಬಂದ ವಿಜೇತ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ತಮ್ಮ ಬ್ಲಾಕ್ ಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...