ವಿಷಯಕ್ಕೆ ಹೋಗಿ

ಮತಕೇಂದ್ರದ ಸುತ್ತ ಅಭ್ಯರ್ಥಿಗಳ ದಂಡು ಮತಯಾಚನೆಗೆ ನಾನಾ ಕಸರತ್ತು

ಗ್ರಾಮ ಪಂಚಾಯ್ತಿಯ ೩೯ ಸದಸ್ಯರ ಆಯ್ಕೆಗಾಗಿ ಒಟ್ಟು ೧೬೨ ಮಂದಿ ಅಭ್ಯರ್ಥಿಗಳು ಕಣದಲಿದ್ದು , ಮತಚಲಾಯಿಸಲು ಮತಕೇಂದ್ರಲ್ಲಿಗೆ ಬರುವ ಮತದಾರರಲ್ಲಿ ಮತಯಾಚಿಸಲು ಮತಕೇಂದ್ರದ ಸುತ್ತ ಅಭ್ಯರ್ಥಿಗಳ ಹಾಗೂ ಅವರ ಬೆಂಬಲಿಗರ ಬಾರಿ ಗುಂಪು ಸೇರಿ,ಮತಯಾಚನೆಗೆ ನಾನಾಕಸರತ್ತು ನಡೆಸಿದರು.
ಹುಳಿಯಾರಿನ ಮತಕೇಂದ್ರದ ಸುತ್ತಮತ್ತ ಸೇರಿದ್ದ ಅಭ್ಯರ್ಥಿಗಳ ಹಾಗೂ ಬೆಂಬಲಿಗಲ ದಂಡು.
ಪಟ್ಟಣದ ಪ್ರತಿ ಬ್ಲಾಕ್ ನಲ್ಲೂ ಪ್ರಬಲ ಪೈಪೋಟಿ ಉಂಟಾಗಿ ಅಭ್ಯರ್ಥಿಗಳು ಮತದಾನ ಪ್ರಾರಂಭಕ್ಕೂ ಮುಂಚಿತವಾಗಿಯೇ ಮತಕೇಂದ್ರದ ಬಳಿ ಆಗಮಿಸಿದ್ದು ಮತದಾರು ಆಗಮಿಸುವುದನ್ನು ಕಾಯ್ದು ತಮ್ಮ ಗುರ್ತಿಗೆ ಮತಹಾಕಿ ಎಂದು ಹೇಳುತ್ತಿದ್ದರು. ಎಂಪಿಎಸ್ ಶಾಲೆಯ ಮತಕೇಂದ್ರದಲ್ಲಿ ಮೂರುಕಡೆ ನಿಂತಿದ್ದ ಅಭ್ಯರ್ಥಿಗಳು ಕೈಯ್ಯಲ್ಲಿ ಕರಪತ್ರ ಹಿಡಿದು ತಮ್ಮ ಚಿಹ್ನೆಗಳನ್ನು ಮತದಾರಿಗೆ ತೋರಿಸುತ್ತಿದ್ದರಲ್ಲದೆ , ಕೈ ಮುಗಿದು ನಮಗೆ ತಪ್ಪದೇ ಓಟು ಕೊಡಿ ಎಂದು ಕೇಳಿಕೊಳ್ಳುತ್ತಿದ್ದು ಸಾಮಾನ್ಯವಾಗಿತ್ತು.
ಮಹಿಳಾ ಅಭ್ಯರ್ಥಿಗಳ ಪರವಾಗಿ ಅವರ ಪತಿರಾಯರು ಹಾಗೂ ಗಂಡನ ಪರವಾಗಿ ಮಡದಿ, ಮಕ್ಕಳು ಮತಕೇಂದ್ರದ ಹತ್ತಿರ ನಿಂತು ಮತಯಾಚಿಸಿದರು. ಅಭ್ಯರ್ಥಿಗಳ ಬೆಂಬಲಿಗರು ಸಹ ಅವರೊಂದಿಗಿದ್ದು ಆಗಮಿಸಿದ ಮತದಾರಿಗೆ ಅವರ ಓಟರ್ ಲಿಸ್ಟ್ ನ ಕ್ರಮ ಸಂಖ್ಯೆಯನ್ನು ಬರೆದುಕೊಟ್ಟು ತಮಗೆ ಓಟು ಕೊಡಿ ಎಂದು ಕೇಳುತ್ತಿದ್ದರು. ಅಂಗವಿಕಲರು, ವಯಸ್ಸಾದವರು ಹಾಗೂ ದೂರದ ಮನೆಯವರಲ್ಲಿಗೆ ಕಾರು, ಆಟೋ , ಬೈಕ್ ಕಳುಹಿಸಿ ಕರೆದುಕೊಂಡು ಬಂದು ಮತಹಾಕಿಸಿದರು.

ಕಳೆದ ಚುನಾವಣೆಗಳಲ್ಲಿ ಎಂಪಿಎಸ್ ಶಾಲೆಯ ಕಾಂಪೌಡ್ ಪಕ್ಕದಲ್ಲೇ ನಿಂತು ಮತಯಾಚನೆ ಮಾಡುವ ಕಾರ್ಯ ನಡೆಯುತ್ತಿದ್ದು ಶಾಂತಿಗೆ ಭಂಗತಂದಿದ್ದನು ಅರಿತ ಅರಿತ ಪೋಲಿಸ್ ನವರು ಬದಲಾವಣೆ ಮಾಡಿದ್ದರು. ಪೋಲಿಸ್ ಠಾಣೆಯ ತಿರುವಿನಿಂದ ರಾಜ್ ಕುಮಾರ್ ರಸ್ತೆ ಕೆಲ ದೂರದವರೆಗೆ ಯಾವುದೇ ಅಂಗಡಿಗಳನ್ನು ತೆರೆಯದಂತೆ ಹಾಗೂ ಈ ಜಾಗದಲ್ಲಿ ಯಾರು ಮತಯಾಚಿಸದಂತೆ ಬ್ಯಾರಿ ಕ್ಯಾಡ್ ಗಳನ್ನು ಇಟ್ಟು ಸಂಚಾರವನ್ನು ಸ್ಥಗಿತಗೊಳಿಸಿದ್ದರು. ಇದರಿಂದಾಗಿ ಕೆಲ ಅಭ್ಯರ್ಥಿಗಳು ಬಿ.ಎಚ್.ರಸ್ತೆ ಅಕ್ಕಪಕ್ಕ ನಿಂತು ಮತಯಾಚಿಸಿದರೆ, ಇನ್ನೂ ಕೆಲ ಅಭ್ಯರ್ಥಿಗಳು ಅಂಬೇಡ್ಕರ್ ಭವನ ಮುಂದಿನ ಆವರಣದಲ್ಲಿ ನಿಂತು ಮತಯಾಚನೆ ಮಾಡಿದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...