ವಿಷಯಕ್ಕೆ ಹೋಗಿ

ಮತಕೇಂದ್ರದ ಸುತ್ತ ಅಭ್ಯರ್ಥಿಗಳ ದಂಡು ಮತಯಾಚನೆಗೆ ನಾನಾ ಕಸರತ್ತು

ಗ್ರಾಮ ಪಂಚಾಯ್ತಿಯ ೩೯ ಸದಸ್ಯರ ಆಯ್ಕೆಗಾಗಿ ಒಟ್ಟು ೧೬೨ ಮಂದಿ ಅಭ್ಯರ್ಥಿಗಳು ಕಣದಲಿದ್ದು , ಮತಚಲಾಯಿಸಲು ಮತಕೇಂದ್ರಲ್ಲಿಗೆ ಬರುವ ಮತದಾರರಲ್ಲಿ ಮತಯಾಚಿಸಲು ಮತಕೇಂದ್ರದ ಸುತ್ತ ಅಭ್ಯರ್ಥಿಗಳ ಹಾಗೂ ಅವರ ಬೆಂಬಲಿಗರ ಬಾರಿ ಗುಂಪು ಸೇರಿ,ಮತಯಾಚನೆಗೆ ನಾನಾಕಸರತ್ತು ನಡೆಸಿದರು.
ಹುಳಿಯಾರಿನ ಮತಕೇಂದ್ರದ ಸುತ್ತಮತ್ತ ಸೇರಿದ್ದ ಅಭ್ಯರ್ಥಿಗಳ ಹಾಗೂ ಬೆಂಬಲಿಗಲ ದಂಡು.
ಪಟ್ಟಣದ ಪ್ರತಿ ಬ್ಲಾಕ್ ನಲ್ಲೂ ಪ್ರಬಲ ಪೈಪೋಟಿ ಉಂಟಾಗಿ ಅಭ್ಯರ್ಥಿಗಳು ಮತದಾನ ಪ್ರಾರಂಭಕ್ಕೂ ಮುಂಚಿತವಾಗಿಯೇ ಮತಕೇಂದ್ರದ ಬಳಿ ಆಗಮಿಸಿದ್ದು ಮತದಾರು ಆಗಮಿಸುವುದನ್ನು ಕಾಯ್ದು ತಮ್ಮ ಗುರ್ತಿಗೆ ಮತಹಾಕಿ ಎಂದು ಹೇಳುತ್ತಿದ್ದರು. ಎಂಪಿಎಸ್ ಶಾಲೆಯ ಮತಕೇಂದ್ರದಲ್ಲಿ ಮೂರುಕಡೆ ನಿಂತಿದ್ದ ಅಭ್ಯರ್ಥಿಗಳು ಕೈಯ್ಯಲ್ಲಿ ಕರಪತ್ರ ಹಿಡಿದು ತಮ್ಮ ಚಿಹ್ನೆಗಳನ್ನು ಮತದಾರಿಗೆ ತೋರಿಸುತ್ತಿದ್ದರಲ್ಲದೆ , ಕೈ ಮುಗಿದು ನಮಗೆ ತಪ್ಪದೇ ಓಟು ಕೊಡಿ ಎಂದು ಕೇಳಿಕೊಳ್ಳುತ್ತಿದ್ದು ಸಾಮಾನ್ಯವಾಗಿತ್ತು.
ಮಹಿಳಾ ಅಭ್ಯರ್ಥಿಗಳ ಪರವಾಗಿ ಅವರ ಪತಿರಾಯರು ಹಾಗೂ ಗಂಡನ ಪರವಾಗಿ ಮಡದಿ, ಮಕ್ಕಳು ಮತಕೇಂದ್ರದ ಹತ್ತಿರ ನಿಂತು ಮತಯಾಚಿಸಿದರು. ಅಭ್ಯರ್ಥಿಗಳ ಬೆಂಬಲಿಗರು ಸಹ ಅವರೊಂದಿಗಿದ್ದು ಆಗಮಿಸಿದ ಮತದಾರಿಗೆ ಅವರ ಓಟರ್ ಲಿಸ್ಟ್ ನ ಕ್ರಮ ಸಂಖ್ಯೆಯನ್ನು ಬರೆದುಕೊಟ್ಟು ತಮಗೆ ಓಟು ಕೊಡಿ ಎಂದು ಕೇಳುತ್ತಿದ್ದರು. ಅಂಗವಿಕಲರು, ವಯಸ್ಸಾದವರು ಹಾಗೂ ದೂರದ ಮನೆಯವರಲ್ಲಿಗೆ ಕಾರು, ಆಟೋ , ಬೈಕ್ ಕಳುಹಿಸಿ ಕರೆದುಕೊಂಡು ಬಂದು ಮತಹಾಕಿಸಿದರು.

ಕಳೆದ ಚುನಾವಣೆಗಳಲ್ಲಿ ಎಂಪಿಎಸ್ ಶಾಲೆಯ ಕಾಂಪೌಡ್ ಪಕ್ಕದಲ್ಲೇ ನಿಂತು ಮತಯಾಚನೆ ಮಾಡುವ ಕಾರ್ಯ ನಡೆಯುತ್ತಿದ್ದು ಶಾಂತಿಗೆ ಭಂಗತಂದಿದ್ದನು ಅರಿತ ಅರಿತ ಪೋಲಿಸ್ ನವರು ಬದಲಾವಣೆ ಮಾಡಿದ್ದರು. ಪೋಲಿಸ್ ಠಾಣೆಯ ತಿರುವಿನಿಂದ ರಾಜ್ ಕುಮಾರ್ ರಸ್ತೆ ಕೆಲ ದೂರದವರೆಗೆ ಯಾವುದೇ ಅಂಗಡಿಗಳನ್ನು ತೆರೆಯದಂತೆ ಹಾಗೂ ಈ ಜಾಗದಲ್ಲಿ ಯಾರು ಮತಯಾಚಿಸದಂತೆ ಬ್ಯಾರಿ ಕ್ಯಾಡ್ ಗಳನ್ನು ಇಟ್ಟು ಸಂಚಾರವನ್ನು ಸ್ಥಗಿತಗೊಳಿಸಿದ್ದರು. ಇದರಿಂದಾಗಿ ಕೆಲ ಅಭ್ಯರ್ಥಿಗಳು ಬಿ.ಎಚ್.ರಸ್ತೆ ಅಕ್ಕಪಕ್ಕ ನಿಂತು ಮತಯಾಚಿಸಿದರೆ, ಇನ್ನೂ ಕೆಲ ಅಭ್ಯರ್ಥಿಗಳು ಅಂಬೇಡ್ಕರ್ ಭವನ ಮುಂದಿನ ಆವರಣದಲ್ಲಿ ನಿಂತು ಮತಯಾಚನೆ ಮಾಡಿದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.