ವಿಷಯಕ್ಕೆ ಹೋಗಿ

ಎಸ್.ಬಿ.ಐ ನಲ್ಲಿ ಖಾತೆ ತೆರೆಯಲು ವಿದ್ಯಾರ್ಥಿಗಳ ಪರದಾಟ ಸೈಬರ್ ಸೆಂಟರ್ ಗೆ ದೂಡುತ್ತಿರುವ ಮ್ಯಾನೇಜರ್

ಹುಳಿಯಾರು  ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರಯಲು ಬರುವ ಹೋಬಳಿಯ ವಿವಿಧ ಭಾಗದ ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಬ್ಯಾಂಕಿನವರು ಸ್ಪಂದಿಸದಿದೆ ಪರದಾಡಿಸುತ್ತಿದ್ದಾರೆ. ಒಂದು ಖಾತೆ ತೆರೆಯಲು ಬೆಳಿಗ್ಗಿನಿಂದ ಸಂಜೆಯವರೆಗೆ ಕಾದುಕೂರುವಂತಾಗಿರುವುದಲ್ಲದೆ , ಉಚಿತ ಫಾರಂಗಳನ್ನು ನೀಡದ ಮ್ಯಾನೇಜರ್ ಸೈಬರ್ ಸೆಂಟರ್ ನಲ್ಲಿ ಆನ್ ಲೈನ್ ಮೂಲಕ ಖಾತೆ ಓಪನ್ ಮಾಡಿಸಿಕೊಂಡು ಬರುವಂತೆ ಹೇಳಿ ಕಳುಹಿಸುತ್ತಿರುವುದು ಸಮಸ್ಯೆಯಾಗಿದೆ.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬರುವ ವಿದ್ಯಾರ್ಥಿ ವೇತನ ಬ್ಯಾಂಕ್ ಖಾತೆಗೆ ಸಂದಾಯವಾಗುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಬ್ಯಾಂಕ್ ಖಾತೆ ಹೊಂದಿರಬೇಕಿದೆ. ಹಾಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಅಕೌಂಟ್ ಮಾಡಿಸಲು ಬ್ಯಾಂಕ್ ನತ್ತ ಮುಗಿಬಿದ್ದಿದ್ದಾರೆ. ಪಟ್ಟಣದಲ್ಲಿ ಎಸ್.ಬಿ.ಐ , ಎಸ್.ಬಿ.ಎಂ ಹಾಗೂ ಕೆನರಾಬ್ಯಾಂಕ್ ಸೇರಿ ಒಟ್ಟು ಮೂರು ರಾಷ್ಟ್ರೀಕೃತ ಬ್ಯಾಂಕ್ ಇವೆ. ಈ ಎಲ್ಲಾ ಬ್ಯಾಂಕ್ ಗಳಲ್ಲೂ ಸಹ ಹೆಚ್ಚುಮಂದಿ ವಿದ್ಯಾರ್ಥಿಗಳೆ ತುಂಬಿರುವುದು ಕಂಡುಬರುತ್ತಿದೆ.
ಕೆನರಾ ಬ್ಯಾಂಕ್ ಹಾಗೂ ಎಸ್.ಬಿ.ಎಂ ಬ್ಯಾಂಕ್ ಗಳಲ್ಲಿ ಬ್ಯಾಂಕ್ ನವರೇ ಆಕೌಂಟ್ ಓಪನಿಂಗ್ ಫಾರಂಗಳನ್ನು ಉಚಿತವಾಗಿ ಕೊಟ್ಟು ಖಾತೆ ತೆರೆಯುತ್ತಿದ್ದರೆ. ಎಸ್.ಬಿ.ಐ ನಲ್ಲಿ ಮಾತ್ರ ವಿನಾಕಾರಣ ಆಕೌಂಟ್ ಓಪನಿಂಗ್ ಫಾರಂ ನೀಡದೆ ಸೈಬರ್ ಸೆಂಟರ್ ಗೆ ಕಳುಹಿಸಿ ಅಲ್ಲಿ ಆನ್ ಲೈನ್ ನಲ್ಲಿ ಖಾತೆ ತೆರೆದು ನಂತರ ಆ ಫಾರಂ ಅನ್ನು ಬ್ಯಾಂಕ್ ಗೆ ತಂದು ಕೊಡುವಂತೆ ಮ್ಯಾನೇಜರ್ ಕಳುಹಿಸುತ್ತಿದ್ದಾರೆ. ಮೊದಲು ಸೂಕ್ತ ದಾಖಲೆಗಳನ್ನು ಮ್ಯಾನೇಜರ್ ಗೆ ತೋರಿಸಿ ಅವರಿಂದ ಸಹಿ ಪಡೆದು ನಂತರ ಅವರು ಸೂಚಿಸುವ ಸೈಬರ್ ಸೆಂಟರ್ ಗೆ ಹೋಗಿ ೭೦ ರೂ ಹಣ ತೆತ್ತು ಆಕೌಂಟ್ ಓಪನ್ ಮಾಡಿಸಿಕೊಂಡು ಬರ ಬೇಕಿದೆ. ಅದರಲ್ಲೂ ಮ್ಯಾನೇಜರ್ ಹೇಳಿದ ಸಮಯದಲ್ಲೇ ಬಂದು ಆ ಫಾರಂಗಳನ್ನು ನೀಡಬೇಕಿದ್ದು ತಡವಾಗಿ ಬಂದಲ್ಲಿ ನಾವು ಹೇಳಿದ ಸಮಯ ಆಗಿದೆ ನಾಳೆ ಬನ್ನಿ ಈಗ ಆಗುವುದಿಲ್ಲ ಎಂದು ಹೇಳಿ ಕಳುಹಿಸುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚು ತೊಂದರೆಯಾಗುತ್ತಿದೆ ಎಂದು ಖಾತೆ ತೆರೆಯಲು ಬಂದ ಪೋಷಕರು ದೂರುತ್ತಾರೆ.
ಪಟ್ಟಣದಲ್ಲಿ ಹತ್ತಾರೂ ಕಂಪ್ಯೂಟರ್ ಕೇಂದ್ರಗಳಿದ್ದರೂ ಸಹ ಮ್ಯಾನೇಜರ್ ಯಾವುದೋ ಒಂದು ಕೇಂದ್ರಕ್ಕೆ ಮಾತ್ರ ಹೋಗುವಂತೆ ಸೂಚಿಸುತ್ತಿದ್ದಾರೆ. ಅಲ್ಲಿಗೆ ಹೋದರೆ ಅಲ್ಲಿಯೂ ಕಾದುಕೋರುವಂತಾಗಿದೆ. ಬೇರೆ ಕಂಪ್ಯೂಟರ್ ಕೇಂದ್ರಗಳಿಗೆ ಹೋಗಿ ಮಾಡಿಸಿಕೊಂಡು ಬರಬಹುದಾ ಎಂದರೆ ಅದಕ್ಕೆ ಉತ್ತರಿಸದೆ ತಾವು ಹೇಳಿದಲ್ಲಿಗೆ ಹೋಗಿ ಖಾತೆ ತೆರೆಸಿಕೊಂಡು ಬನ್ನಿ ಎಂದು ಕಳುಹಿಸುತ್ತಿದ್ದಾರೆ. ವಿಧಿಯಿಲ್ಲದೆ ಅವರು ಹೇಳುವ ಕಂಪ್ಯೂಟರ್ ಕೇಂದ್ರಕ್ಕೆ ಹೋಗಿ ಆಕೌಂಟ್ ಓಪನ್ ಮಾಡಿಸಿಕೊಂಡು ಬರುವಂತಾಗಿದೆ.
ಆಕೌಂಟ್ ಮಾಡಿಸಲು ಮೊದಲು ಬಂದು ಟೋಕಲ್ ಪಡೆಯಬೇಕಿದ್ದು ಅದು ೧೨ ಮಂದಿಗೆ ಮಾತ್ರ ಅವಕಾಶ ಮಾಡಿದ್ದಾರೆ. ಇದರಿಂದ ಕೆಲ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಬ್ಯಾಂಕ್ ಬಾಗಿಲು ತೆರೆಯುವುದಕ್ಕೂ ಮುಂಚೆಯೇ ಆಗಮಿಸಿ ಬ್ಯಾಂಕ್ ಬಾಗಿಲು ತೆರೆಯುವುದನ್ನೆ ನೋಡುವಂತಾಗಿದೆ. ಖಾತೆ ತೆರೆಯಲು ಬೆಳಿಗ್ಗೆ ಬಂದ ವಿದ್ಯಾರ್ಥಿಗಳು ಬ್ಯಾಂಕ್ ಸಮಯ ಮುಗಿಯುತ್ತಾ ಬಂದರೂ ಸಹ ಖಾತೆ ತೆರೆಯಲು ಪರದಾಡುವಂತಾಗಿದೆ.

ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನಹರಿಸಿ ಗ್ರಾಮೀಣ ಭಾಗದ ಜನರು ಆಕೌಂಟ್ ಓಪನ್ ಮಾಡಿಸಲು ೭೦ ರೂ ಹಣವನ್ನು ವ್ಯರ್ಥವಾಗಿ ನೀಡಬೇಕಿದ್ದು , ಹಿಂದಿನಂತೆ ಬ್ಯಾಂಕ್ ನಿಂದಲೇ ಉಚಿತವಾಗಿ ಖಾತೆ ತೆರೆಯುವ ಫಾರಂಗಳನ್ನು ನೀಡಿ ಖಾತೆ ತೆರೆಯಲು ಅನುಕೂಲ ಮಾಡಿಕೊಡುವಂತೆ ಪೋಷಕರು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...