ವಿಷಯಕ್ಕೆ ಹೋಗಿ

ಎಸ್.ಬಿ.ಐ ನಲ್ಲಿ ಖಾತೆ ತೆರೆಯಲು ವಿದ್ಯಾರ್ಥಿಗಳ ಪರದಾಟ ಸೈಬರ್ ಸೆಂಟರ್ ಗೆ ದೂಡುತ್ತಿರುವ ಮ್ಯಾನೇಜರ್

ಹುಳಿಯಾರು  ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರಯಲು ಬರುವ ಹೋಬಳಿಯ ವಿವಿಧ ಭಾಗದ ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಬ್ಯಾಂಕಿನವರು ಸ್ಪಂದಿಸದಿದೆ ಪರದಾಡಿಸುತ್ತಿದ್ದಾರೆ. ಒಂದು ಖಾತೆ ತೆರೆಯಲು ಬೆಳಿಗ್ಗಿನಿಂದ ಸಂಜೆಯವರೆಗೆ ಕಾದುಕೂರುವಂತಾಗಿರುವುದಲ್ಲದೆ , ಉಚಿತ ಫಾರಂಗಳನ್ನು ನೀಡದ ಮ್ಯಾನೇಜರ್ ಸೈಬರ್ ಸೆಂಟರ್ ನಲ್ಲಿ ಆನ್ ಲೈನ್ ಮೂಲಕ ಖಾತೆ ಓಪನ್ ಮಾಡಿಸಿಕೊಂಡು ಬರುವಂತೆ ಹೇಳಿ ಕಳುಹಿಸುತ್ತಿರುವುದು ಸಮಸ್ಯೆಯಾಗಿದೆ.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬರುವ ವಿದ್ಯಾರ್ಥಿ ವೇತನ ಬ್ಯಾಂಕ್ ಖಾತೆಗೆ ಸಂದಾಯವಾಗುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಬ್ಯಾಂಕ್ ಖಾತೆ ಹೊಂದಿರಬೇಕಿದೆ. ಹಾಗಾಗಿ ಪೋಷಕರು ಹಾಗೂ ವಿದ್ಯಾರ್ಥಿಗಳು ಅಕೌಂಟ್ ಮಾಡಿಸಲು ಬ್ಯಾಂಕ್ ನತ್ತ ಮುಗಿಬಿದ್ದಿದ್ದಾರೆ. ಪಟ್ಟಣದಲ್ಲಿ ಎಸ್.ಬಿ.ಐ , ಎಸ್.ಬಿ.ಎಂ ಹಾಗೂ ಕೆನರಾಬ್ಯಾಂಕ್ ಸೇರಿ ಒಟ್ಟು ಮೂರು ರಾಷ್ಟ್ರೀಕೃತ ಬ್ಯಾಂಕ್ ಇವೆ. ಈ ಎಲ್ಲಾ ಬ್ಯಾಂಕ್ ಗಳಲ್ಲೂ ಸಹ ಹೆಚ್ಚುಮಂದಿ ವಿದ್ಯಾರ್ಥಿಗಳೆ ತುಂಬಿರುವುದು ಕಂಡುಬರುತ್ತಿದೆ.
ಕೆನರಾ ಬ್ಯಾಂಕ್ ಹಾಗೂ ಎಸ್.ಬಿ.ಎಂ ಬ್ಯಾಂಕ್ ಗಳಲ್ಲಿ ಬ್ಯಾಂಕ್ ನವರೇ ಆಕೌಂಟ್ ಓಪನಿಂಗ್ ಫಾರಂಗಳನ್ನು ಉಚಿತವಾಗಿ ಕೊಟ್ಟು ಖಾತೆ ತೆರೆಯುತ್ತಿದ್ದರೆ. ಎಸ್.ಬಿ.ಐ ನಲ್ಲಿ ಮಾತ್ರ ವಿನಾಕಾರಣ ಆಕೌಂಟ್ ಓಪನಿಂಗ್ ಫಾರಂ ನೀಡದೆ ಸೈಬರ್ ಸೆಂಟರ್ ಗೆ ಕಳುಹಿಸಿ ಅಲ್ಲಿ ಆನ್ ಲೈನ್ ನಲ್ಲಿ ಖಾತೆ ತೆರೆದು ನಂತರ ಆ ಫಾರಂ ಅನ್ನು ಬ್ಯಾಂಕ್ ಗೆ ತಂದು ಕೊಡುವಂತೆ ಮ್ಯಾನೇಜರ್ ಕಳುಹಿಸುತ್ತಿದ್ದಾರೆ. ಮೊದಲು ಸೂಕ್ತ ದಾಖಲೆಗಳನ್ನು ಮ್ಯಾನೇಜರ್ ಗೆ ತೋರಿಸಿ ಅವರಿಂದ ಸಹಿ ಪಡೆದು ನಂತರ ಅವರು ಸೂಚಿಸುವ ಸೈಬರ್ ಸೆಂಟರ್ ಗೆ ಹೋಗಿ ೭೦ ರೂ ಹಣ ತೆತ್ತು ಆಕೌಂಟ್ ಓಪನ್ ಮಾಡಿಸಿಕೊಂಡು ಬರ ಬೇಕಿದೆ. ಅದರಲ್ಲೂ ಮ್ಯಾನೇಜರ್ ಹೇಳಿದ ಸಮಯದಲ್ಲೇ ಬಂದು ಆ ಫಾರಂಗಳನ್ನು ನೀಡಬೇಕಿದ್ದು ತಡವಾಗಿ ಬಂದಲ್ಲಿ ನಾವು ಹೇಳಿದ ಸಮಯ ಆಗಿದೆ ನಾಳೆ ಬನ್ನಿ ಈಗ ಆಗುವುದಿಲ್ಲ ಎಂದು ಹೇಳಿ ಕಳುಹಿಸುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಹೆಚ್ಚು ತೊಂದರೆಯಾಗುತ್ತಿದೆ ಎಂದು ಖಾತೆ ತೆರೆಯಲು ಬಂದ ಪೋಷಕರು ದೂರುತ್ತಾರೆ.
ಪಟ್ಟಣದಲ್ಲಿ ಹತ್ತಾರೂ ಕಂಪ್ಯೂಟರ್ ಕೇಂದ್ರಗಳಿದ್ದರೂ ಸಹ ಮ್ಯಾನೇಜರ್ ಯಾವುದೋ ಒಂದು ಕೇಂದ್ರಕ್ಕೆ ಮಾತ್ರ ಹೋಗುವಂತೆ ಸೂಚಿಸುತ್ತಿದ್ದಾರೆ. ಅಲ್ಲಿಗೆ ಹೋದರೆ ಅಲ್ಲಿಯೂ ಕಾದುಕೋರುವಂತಾಗಿದೆ. ಬೇರೆ ಕಂಪ್ಯೂಟರ್ ಕೇಂದ್ರಗಳಿಗೆ ಹೋಗಿ ಮಾಡಿಸಿಕೊಂಡು ಬರಬಹುದಾ ಎಂದರೆ ಅದಕ್ಕೆ ಉತ್ತರಿಸದೆ ತಾವು ಹೇಳಿದಲ್ಲಿಗೆ ಹೋಗಿ ಖಾತೆ ತೆರೆಸಿಕೊಂಡು ಬನ್ನಿ ಎಂದು ಕಳುಹಿಸುತ್ತಿದ್ದಾರೆ. ವಿಧಿಯಿಲ್ಲದೆ ಅವರು ಹೇಳುವ ಕಂಪ್ಯೂಟರ್ ಕೇಂದ್ರಕ್ಕೆ ಹೋಗಿ ಆಕೌಂಟ್ ಓಪನ್ ಮಾಡಿಸಿಕೊಂಡು ಬರುವಂತಾಗಿದೆ.
ಆಕೌಂಟ್ ಮಾಡಿಸಲು ಮೊದಲು ಬಂದು ಟೋಕಲ್ ಪಡೆಯಬೇಕಿದ್ದು ಅದು ೧೨ ಮಂದಿಗೆ ಮಾತ್ರ ಅವಕಾಶ ಮಾಡಿದ್ದಾರೆ. ಇದರಿಂದ ಕೆಲ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಬ್ಯಾಂಕ್ ಬಾಗಿಲು ತೆರೆಯುವುದಕ್ಕೂ ಮುಂಚೆಯೇ ಆಗಮಿಸಿ ಬ್ಯಾಂಕ್ ಬಾಗಿಲು ತೆರೆಯುವುದನ್ನೆ ನೋಡುವಂತಾಗಿದೆ. ಖಾತೆ ತೆರೆಯಲು ಬೆಳಿಗ್ಗೆ ಬಂದ ವಿದ್ಯಾರ್ಥಿಗಳು ಬ್ಯಾಂಕ್ ಸಮಯ ಮುಗಿಯುತ್ತಾ ಬಂದರೂ ಸಹ ಖಾತೆ ತೆರೆಯಲು ಪರದಾಡುವಂತಾಗಿದೆ.

ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನಹರಿಸಿ ಗ್ರಾಮೀಣ ಭಾಗದ ಜನರು ಆಕೌಂಟ್ ಓಪನ್ ಮಾಡಿಸಲು ೭೦ ರೂ ಹಣವನ್ನು ವ್ಯರ್ಥವಾಗಿ ನೀಡಬೇಕಿದ್ದು , ಹಿಂದಿನಂತೆ ಬ್ಯಾಂಕ್ ನಿಂದಲೇ ಉಚಿತವಾಗಿ ಖಾತೆ ತೆರೆಯುವ ಫಾರಂಗಳನ್ನು ನೀಡಿ ಖಾತೆ ತೆರೆಯಲು ಅನುಕೂಲ ಮಾಡಿಕೊಡುವಂತೆ ಪೋಷಕರು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...