ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಶ್ರದ್ದಾಭಕ್ತಿಯಿಂದ ನಡೆಯಿತು ಕಾರಬ್ಬ

ರೈತರ ಸಾಂಪ್ರದಾಯ ಆಚರಣೆಯಾದ ಕಾರಹುಣ್ಣಿಮೆಯು ಪಟ್ಟಣದ ವೀರಭದ್ರಸ್ವಾಮಿ ದೇವಾಲಯ ಪಕ್ಕದ ಆವರಣದಲ್ಲಿ ಮಂಗಳವಾರ ರಾತ್ರಿ ಮೂಲನಕ್ಷತ್ರದಲ್ಲಿ ಗ್ರಾಮದೇವತೆ ದುರ್ಗಮ್ಮದೇವಿಯ ಸಮ್ಮುಖದಲ್ಲಿ ಊರಗೌಡರ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು.
ಕಾರಬ್ಬಕ್ಕೆ ಸಿಂಗರಿಸಿರುವ ಕರುಗಲ್ಲು.
ಗ್ರಾಮೀಣ ಭಾಗದ ರೈತರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಕಾರಬ್ಬವೂ ಸಹ ಒಂದಾಗಿದ್ದು , ಇದನ್ನು ಎಲ್ಲಾ ರೈತರು ಆಚರಿಸುತ್ತಾರೆ. ಹುಳಿಯಾರು ಹಾಗೂ ಶೆಟ್ಟಿಕೆರೆಯಲ್ಲಿ ನಡೆಯುವ ಕಾರಬ್ಬದ ಆಚರಣೆ ಚಿ.ನಾ.ಹಳ್ಳಿ ತಾಲ್ಲೂಕಿನಲ್ಲಿ ಪ್ರಾಮುಖ್ಯತೆ ಪಡೆದಿದೆ. ಹಿಂಗಾರು ಬೆಳೆಗಳಾದ ರಾಗಿ,ಹುರುಳಿ ಸೇರಿದಂತೆ ಇನ್ನಿತರ ಬೆಳೆಯನ್ನು ಬಿತ್ತುವ ಮೊದಲು ಯಾವ ಬೆಳೆಯನ್ನು ಬಿತ್ತಿದರೆ ಹೆಚ್ಚು ಫಸಲು ಬರುತ್ತದೆ ಎಂಬುದನ್ನು ತಿಳಿಯುವ ನಿಟ್ಟಿನಲ್ಲಿ ಕಾರಬ್ಬದ ಆಚರಣೆಯನ್ನು ಇಂದಿಗೂ ನಡೆಯುತ್ತಿದೆ.
ಆಚರಣೆ ಹೇಗೆ : ಪಟ್ಟಣದ ವೀರಭದ್ರಸ್ವಾಮಿ ದೇವಾಲಯದ ಪಕ್ಕದ ಜಾಗದಲ್ಲಿ ಈ ಹಿಂದೆಯೇ ಸ್ಥಾಪಿಸಿರುವ ಕರುಗಲ್ಲುಗಳಿದ್ದು ( ೨ ದೊಡ್ಡ ಕಲ್ಲುಗಳನ್ನು ಎದುರು ಬದುರು ನಿಲ್ಲಿಸಿರುವುದು) ಆ ಕಲ್ಲುಗಳ ಮಧ್ಯಭಾಗದಲ್ಲಿ ಕಾರೆಕುಕ್ಕುವ ಕಾರ್ಯ ನಡೆಯಲಿದೆ. ಕರುಗಲ್ಲನ್ನು ಸ್ವಚ್ಚಗೊಳಿಸಿ ಬೇವಿನಸೊಪ್ಪು ಹಾಗೂ ಅಂಬಳ್ಳಿ ಕಟ್ಟಿ ಸಿಂಗರಿಸಿರುತ್ತಾರೆ. ಹೊಸ ಗಡಿಗೆಯಲ್ಲಿ ಹಿಂಗಾರು ಬೆಳೆಗಳಾದ ರಾಗಿ,ಸಾವೆ, ಹುರಳಿ ಸೇರಿದಂತೆ ಇತರ ಬೆಳೆಗಳನ್ನು ಹಿಡಿಯಷ್ಟು ಹಾಕಿ ನೀರು ತುಂಬಿ ಗ್ರಾಮದೇವತೆಯ ದೇವಾಲಯದಲ್ಲಿ ಪೂಜಿಸಿಕೊಂಡು ವಾದ್ಯದೊಂದಿಗೆ ಗ್ರಾಮದೇವತೆ ದುರ್ಗಮ್ಮನೊಂದಿಗೆ ಕರುಗಲ್ಲ್ ಬಳಿ ತರುತ್ತಾರೆ. ನಂತರ ಆ ಕುಂಭವನ್ನು ಕರುಗಲ್ಲಿನ ಮಧ್ಯದಲ್ಲಿಟ್ಟು ಪೂಜಿಸಿ, ಊರಗೌಡರ ಹಾಗೂ ದೇವರ ಅಪ್ಪಣೆ ಪಡೆದು ಜೊಡೆತ್ತುಗಳನ್ನು ಕುಂಟೆಯೊಂದಿಗೆ ಹೂಡಿ ಅವುಗಳಿಂದ ಆ ಕುಂಭವನ್ನು ಹೊಡೆಯುತ್ತಾರೆ. ಹೊಡೆದ ರಭಸಕ್ಕೆ ಯಾವ ಕಾಳು ನೀರಿನಜೊತೆ ಹರಿದು ಮುಂದೆ ಬರುತ್ತದೋ ಆ ಬೆಳೆ ಈ ಬಾರಿ ಹೆಚ್ಚಾಗಿ ಬೆಳೆಯುತ್ತದೆ ಎಂಬ ನಂಬಿಕೆಯಿದೆ. ಅದರಂತೆ ಈ ಭಾಗದ ರೈತರು ಆ ಬೆಳೆಯನ್ನು ಹೆಚ್ಚು ಬಿತ್ತುವುದು ಹಿಂದಿನಿಂದ ನಡೆದುಕೊಂಡುಬಂದಿದೆ.
ಈ ಬಾರಿಯ ಆಚರಣೆಯಲ್ಲಿ ಹೆಸರು ಉತ್ತಮಬೆಳೆ ಬರುವ ನಿರೀಕ್ಷೆಯಿದ್ದು ನಂತರ ಹಿಂಗಾರು ಬೆಳೆಗಳಾದ ರಾಗಿ ಹಾಗೂ ಅಲಸಂದೆ ಕಾಳು ಬೆಳೆಯಬಹುದಾಗಿದೆ.

ಕಾರಬ್ಬದ ಆಚರಣೆ ಪಟ್ಟಣದಲ್ಲಿ ವಿಶೇಷವಾಗಿದ್ದು ಅಂದು ಪಟ್ಟಣದ ಮನೆಗಳಲ್ಲಿ ಸಿಹಿ ಅಡುಗೆ ಮಾಡುವುದಲ್ಲದೆ, ದನಕರು ಇರುವ ಮನೆಯವರು ಅವುಗಳ ಮೈತೊಳೆದು, ಕೊಂಬಿಗೆ ಬಣ್ಣ ಹಾಕಿ ಪೂಜಿಸಿ ನೈವೇದ್ಯ ನೀಡುವುದು ಇಲ್ಲಿ ವಾಡಿಕೆಯಾಗಿದ್ದು ಅದರ ಆಚರಣೆ ಇಂದಿಗೂ ಜೀವಂತವಾಗಿದೆ. ಕಾರೆಕುಕ್ಕುವ ಕಾರ್ಯದಲ್ಲಿ ದೇವಸ್ಥಾನ ಸಮಿತಿಯ ಕನ್ವಿನರ್ ವಿಶ್ವನಾಥ್, ಗುಂಚಿಗೌಡರುಗಳಾದ ಚಂದ್ರಯ್ಯ, ಮಂಜುನಾಥ್, ನೀರಿನಗಾಡಿ ದುರ್ಗಣ್ಣ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...