ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಶ್ರದ್ದಾಭಕ್ತಿಯಿಂದ ನಡೆಯಿತು ಕಾರಬ್ಬ

ರೈತರ ಸಾಂಪ್ರದಾಯ ಆಚರಣೆಯಾದ ಕಾರಹುಣ್ಣಿಮೆಯು ಪಟ್ಟಣದ ವೀರಭದ್ರಸ್ವಾಮಿ ದೇವಾಲಯ ಪಕ್ಕದ ಆವರಣದಲ್ಲಿ ಮಂಗಳವಾರ ರಾತ್ರಿ ಮೂಲನಕ್ಷತ್ರದಲ್ಲಿ ಗ್ರಾಮದೇವತೆ ದುರ್ಗಮ್ಮದೇವಿಯ ಸಮ್ಮುಖದಲ್ಲಿ ಊರಗೌಡರ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು.
ಕಾರಬ್ಬಕ್ಕೆ ಸಿಂಗರಿಸಿರುವ ಕರುಗಲ್ಲು.
ಗ್ರಾಮೀಣ ಭಾಗದ ರೈತರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಕಾರಬ್ಬವೂ ಸಹ ಒಂದಾಗಿದ್ದು , ಇದನ್ನು ಎಲ್ಲಾ ರೈತರು ಆಚರಿಸುತ್ತಾರೆ. ಹುಳಿಯಾರು ಹಾಗೂ ಶೆಟ್ಟಿಕೆರೆಯಲ್ಲಿ ನಡೆಯುವ ಕಾರಬ್ಬದ ಆಚರಣೆ ಚಿ.ನಾ.ಹಳ್ಳಿ ತಾಲ್ಲೂಕಿನಲ್ಲಿ ಪ್ರಾಮುಖ್ಯತೆ ಪಡೆದಿದೆ. ಹಿಂಗಾರು ಬೆಳೆಗಳಾದ ರಾಗಿ,ಹುರುಳಿ ಸೇರಿದಂತೆ ಇನ್ನಿತರ ಬೆಳೆಯನ್ನು ಬಿತ್ತುವ ಮೊದಲು ಯಾವ ಬೆಳೆಯನ್ನು ಬಿತ್ತಿದರೆ ಹೆಚ್ಚು ಫಸಲು ಬರುತ್ತದೆ ಎಂಬುದನ್ನು ತಿಳಿಯುವ ನಿಟ್ಟಿನಲ್ಲಿ ಕಾರಬ್ಬದ ಆಚರಣೆಯನ್ನು ಇಂದಿಗೂ ನಡೆಯುತ್ತಿದೆ.
ಆಚರಣೆ ಹೇಗೆ : ಪಟ್ಟಣದ ವೀರಭದ್ರಸ್ವಾಮಿ ದೇವಾಲಯದ ಪಕ್ಕದ ಜಾಗದಲ್ಲಿ ಈ ಹಿಂದೆಯೇ ಸ್ಥಾಪಿಸಿರುವ ಕರುಗಲ್ಲುಗಳಿದ್ದು ( ೨ ದೊಡ್ಡ ಕಲ್ಲುಗಳನ್ನು ಎದುರು ಬದುರು ನಿಲ್ಲಿಸಿರುವುದು) ಆ ಕಲ್ಲುಗಳ ಮಧ್ಯಭಾಗದಲ್ಲಿ ಕಾರೆಕುಕ್ಕುವ ಕಾರ್ಯ ನಡೆಯಲಿದೆ. ಕರುಗಲ್ಲನ್ನು ಸ್ವಚ್ಚಗೊಳಿಸಿ ಬೇವಿನಸೊಪ್ಪು ಹಾಗೂ ಅಂಬಳ್ಳಿ ಕಟ್ಟಿ ಸಿಂಗರಿಸಿರುತ್ತಾರೆ. ಹೊಸ ಗಡಿಗೆಯಲ್ಲಿ ಹಿಂಗಾರು ಬೆಳೆಗಳಾದ ರಾಗಿ,ಸಾವೆ, ಹುರಳಿ ಸೇರಿದಂತೆ ಇತರ ಬೆಳೆಗಳನ್ನು ಹಿಡಿಯಷ್ಟು ಹಾಕಿ ನೀರು ತುಂಬಿ ಗ್ರಾಮದೇವತೆಯ ದೇವಾಲಯದಲ್ಲಿ ಪೂಜಿಸಿಕೊಂಡು ವಾದ್ಯದೊಂದಿಗೆ ಗ್ರಾಮದೇವತೆ ದುರ್ಗಮ್ಮನೊಂದಿಗೆ ಕರುಗಲ್ಲ್ ಬಳಿ ತರುತ್ತಾರೆ. ನಂತರ ಆ ಕುಂಭವನ್ನು ಕರುಗಲ್ಲಿನ ಮಧ್ಯದಲ್ಲಿಟ್ಟು ಪೂಜಿಸಿ, ಊರಗೌಡರ ಹಾಗೂ ದೇವರ ಅಪ್ಪಣೆ ಪಡೆದು ಜೊಡೆತ್ತುಗಳನ್ನು ಕುಂಟೆಯೊಂದಿಗೆ ಹೂಡಿ ಅವುಗಳಿಂದ ಆ ಕುಂಭವನ್ನು ಹೊಡೆಯುತ್ತಾರೆ. ಹೊಡೆದ ರಭಸಕ್ಕೆ ಯಾವ ಕಾಳು ನೀರಿನಜೊತೆ ಹರಿದು ಮುಂದೆ ಬರುತ್ತದೋ ಆ ಬೆಳೆ ಈ ಬಾರಿ ಹೆಚ್ಚಾಗಿ ಬೆಳೆಯುತ್ತದೆ ಎಂಬ ನಂಬಿಕೆಯಿದೆ. ಅದರಂತೆ ಈ ಭಾಗದ ರೈತರು ಆ ಬೆಳೆಯನ್ನು ಹೆಚ್ಚು ಬಿತ್ತುವುದು ಹಿಂದಿನಿಂದ ನಡೆದುಕೊಂಡುಬಂದಿದೆ.
ಈ ಬಾರಿಯ ಆಚರಣೆಯಲ್ಲಿ ಹೆಸರು ಉತ್ತಮಬೆಳೆ ಬರುವ ನಿರೀಕ್ಷೆಯಿದ್ದು ನಂತರ ಹಿಂಗಾರು ಬೆಳೆಗಳಾದ ರಾಗಿ ಹಾಗೂ ಅಲಸಂದೆ ಕಾಳು ಬೆಳೆಯಬಹುದಾಗಿದೆ.

ಕಾರಬ್ಬದ ಆಚರಣೆ ಪಟ್ಟಣದಲ್ಲಿ ವಿಶೇಷವಾಗಿದ್ದು ಅಂದು ಪಟ್ಟಣದ ಮನೆಗಳಲ್ಲಿ ಸಿಹಿ ಅಡುಗೆ ಮಾಡುವುದಲ್ಲದೆ, ದನಕರು ಇರುವ ಮನೆಯವರು ಅವುಗಳ ಮೈತೊಳೆದು, ಕೊಂಬಿಗೆ ಬಣ್ಣ ಹಾಕಿ ಪೂಜಿಸಿ ನೈವೇದ್ಯ ನೀಡುವುದು ಇಲ್ಲಿ ವಾಡಿಕೆಯಾಗಿದ್ದು ಅದರ ಆಚರಣೆ ಇಂದಿಗೂ ಜೀವಂತವಾಗಿದೆ. ಕಾರೆಕುಕ್ಕುವ ಕಾರ್ಯದಲ್ಲಿ ದೇವಸ್ಥಾನ ಸಮಿತಿಯ ಕನ್ವಿನರ್ ವಿಶ್ವನಾಥ್, ಗುಂಚಿಗೌಡರುಗಳಾದ ಚಂದ್ರಯ್ಯ, ಮಂಜುನಾಥ್, ನೀರಿನಗಾಡಿ ದುರ್ಗಣ್ಣ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.