ವಿಷಯಕ್ಕೆ ಹೋಗಿ

ಕಸ ತೆರವಿಗೆ ಮುಂದಾದ ಗ್ರಾ.ಪಂ

ಹುಳಿಯಾರು  ಪಟ್ಟಣದ ಬಸ್ ನಿಲ್ದಾಣದಲ್ಲಿ, ಆಸ್ಪತ್ರೆ ಆವರಣ ಸೇರಿದಂತೆ ಎಲ್ಲೆಂದರಲ್ಲಿ ಕಳೆದ ಕೆಲ ದಿನಗಳಿಂದ ಕಸ ತೆಗೆಯದೆ ಬಿಟ್ಟು ಸಾರ್ವಜನಿಕರ ಅಸಹನೆಗೂ ಕಾರಣವಾಗಿ ತೊಂದರೆ ಬಗ್ಗೆ ಪತ್ರಿಕೆಗಳಲ್ಲಿ ಗಮನ ಸೆಳೆದ ನಂತರ ಎಚ್ಚೆತ್ತ ಗ್ರಾ.ಪಂ.ಯವರು ಇದೀಗ ಕಸ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಹುಳಿಯಾರು ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಕಸದ ತೆರವು ಕಾರ್ಯ ಮಾಡುತ್ತಿರುವ ಪೌರ ಕಾರ್ಮಿಕರು.
ಪಟ್ಟಣದ ಬಸ್ ನಿಲ್ದಾಣಕ್ಕೆ ನಿತ್ಯ ಹಲವು ಬಸ್ ಹಾಗೂ ನೂರಾರು ಪ್ರಯಾಣಿಕರು ಬಂದೋಗುತ್ತಾರೆ. ಅಲ್ಲದೆ ನಿಲ್ದಾಣದ ಫ್ಲಾಟ್ ಫಾರಂ ನಲ್ಲಿ ಪೆಟ್ಟಿಗೆ ಅಂಗಡಿಗಳಿದ್ದು ನಿತ್ಯ ಪ್ಲಾಸ್ಟಿಕ್ , ಕಾಗದ, ಟೀಗ್ಲಾಸ್ ಸೇರಿದಂತೆ ಇನ್ನಿತರ ವಸ್ತುಗಳ ತ್ಯಾಜ್ಯ ಉಂಟಾಗುತ್ತದೆ. ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಕಾಪಾಡಬೇಕಿದ್ದ ಗ್ರಾ.ಪಂ.ನವರು ಇತ್ತ ಗಮನ ಹರಿಸದೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡುವಂತೆ ಮಾಡಿದ್ದರು. ಆಸ್ಪತ್ರೆ ಪ್ರವೇಶ ದ್ವಾರದಲ್ಲಿ ರಾಶಿರಾಶಿ ಕಸ ಬಿದ್ದು ಆಸ್ಪತ್ರೆಗೆ ಬರುವವರ ಹಿಡಿಶಾಪಕ್ಕೆ ಗುರಿಯಾಗಿತ್ತು. ಇಷ್ಟು ಸಾಲದೆಂಬಂತೆ ಪಟ್ಟಣದ್ದೆಲ್ಲೆಡೆ ಕಸದ ರಾಶಿಯೇ ಕಂಡುಬರುತ್ತಿದ್ದು ಸದಸ್ಯರೇ ಸಮಸ್ಯೆ ಬಗ್ಗೆ ಗಮನಹರಿಸಿ ಸ್ವಚ್ಚತೆಗೆ ನಿಂತ ಪರಿಣಾಮ ಇದೀಗ ಇಲ್ಲಿನ ಪಂಚಾಯ್ತಿ ಆಡಳಿತವೂ ಕೂಡ ಮೈಕೊಡವಿ ನಿಂತಿದೆ.

ಪಂಚಾಯ್ತಿಯಲ್ಲಿ ಪೌರಕಾರ್ಮಿಕರಿದ್ದರೂ ಸಹ ಅವರಿಂದ ಕೆಲಸ ಮಾಡಿಸಲು ಸಂಬಳ ಕೊಡದಿರುವುದು ಕಾರಣವಾಗಿದೆ. ಸದ್ಯ ಹೊಸ ಸದಸ್ಯರ ಅಧಿಕಾರ ಸ್ವೀಕರಿಸುವವರೆಗೂ ಪಿಡಿಓ ಅವರೇ ಉಸ್ತುವಾರಿ ವಹಿಸುತ್ತಿದ್ದು ಅವರು ಪರಸ್ಥಳದಿಂದ ಬರುವ ಕಾರಣ ಇತ್ತಗಮನ ಹರಿಸಲು ಸಮಯ ಸಾಲದೆ ಈ ದುಸ್ಥಿತಿ ಉಂಟಾಗುವಂತಾಗಿದೆ. ಅಂತೂಇಂತೂ ಕಡೆಗೂ ಪಂಚಾಯ್ತಿ ಆಡಳಿತ ಎಚ್ಚೆತ್ತಿದ್ದರಿಂದ ಸ್ವಚ್ಚತಾ ಕಾರ್ಯ ನಡೆಯುವಂತಾಗಿದೆ. ನಿಲ್ದಾಣ ಸೇರಿದಂತೆ ಅಲ್ಲಲ್ಲಿ ಬಿದ್ದಿದ್ದ ಕಸವನ್ನು ಟ್ಯ್ರಾಕ್ಟರ್ ಗೆ ತುಂಬಿಸಿ ಪಟ್ಟಣದಿಂದ ಹೊರಗೆ ಸಾಗಿಸುವ ಕಾರ್ಯ ಮಾಡುವ ಮೂಲಕ ಸ್ವಚ್ಚತೆ ಮಾಡಿದ್ದಾರೆ. ಇದೇ ರೀತಿ ಪ್ರತಿ ದಿನ ಬಸ್ ನಿಲ್ದಾಣದಲ್ಲಿ ಉಂಟಾಗುವ ಕಸವನ್ನು ಒಂದೆಡೆ ಗುಡಿಸಿ ತೆರವು ಮಾಡಿದರೆ ಪ್ರಯಾಣಿಕರಿಗೆ ಆಗುವ ಕಿರಿಕಿರಿಯನ್ನು ತಪ್ಪಿಸಿದಂತಾಗುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...