ವಿಷಯಕ್ಕೆ ಹೋಗಿ

ಇನ್ನೂ ತಪ್ಪಿಲ್ಲ ಹುಳಿಯಾರು ಬಸ್ ನಿಲ್ದಾಣದ ಕೆಸರಿನ ಸಮಸ್ಯೆ

ಮಳೆ ಬಂದರೆ ಸಾಕು ಪಟ್ಟಣದ ಬಸ್ ನಿಲ್ದಾಣದ ತುಂಬ ನೀರು ನಿಂತು ಕೆಸರುಂಟಾಗುವುದಿದ್ದು ಈ ಬಗ್ಗೆ ಎಷ್ಟೇ ಬಾರಿ ಪಂಚಾಯ್ತಿಯವರ ಗಮನಕ್ಕೆ ತಂದರೂ ಪ್ರಯೋಜನವಾಗದೆಯಿದ್ದು ಇಂದಿಗೂ ಸಹ ಬಸ್ ನಿಲ್ದಾಣಲ್ಲಿ ಉಂಟಾಗುವ ಕೆಸರಿನ ಸಮಸ್ಯೆ ಜೀವಂತವಾಗಿದ್ದು ಪ್ರಯಾಣಿಕರನ್ನು ಪರದಾಡುವಂತೆ ಮಾಡಿದೆ.
ಬಸ್ ನಿಲ್ದಾಣದಲ್ಲಿರುವ ಚರಂಡಿಯ ತುಂಬೆಲ್ಲಾ ಮಣ್ಣು, ಪ್ಲಾಸ್ಟಿಕ್ , ಕಸಕಡ್ಡಿ ತುಂಬಿದ್ದು ಮಳೆ ಬಂದಾಗ ನೀರು ಸರಾಗವಾಗಿ ಹರಿದು ಹೋಗಲಾರದೆ ಬಸ್ ನಿಲ್ದಾಣದಲ್ಲೇ ನಿಲ್ಲುವಂತಾಗಿದೆ. ನಿಂತ ನೀರಿನ ನಡುವೆಯೇ ಬಸ್ ಗಳು ಸಂಚರಿಸುವುದರಿಂದ ಕೆಸರುಂಟಾಗಿದ್ದು ಪ್ರಯಾಣಿಕರು ಓಡಾಡಲು ಪ್ರಯಾಸ ಪಡುವಂತಾಗಿದೆ. ಬಸ್ ಹತ್ತಲು , ಇಳಿಯಲು ಪ್ರಯಾಸ ಪಡಬೇಕಿದ್ದು, ವೃದ್ದರು, ಮಕ್ಕಳು ಕೆಸರಿನಲ್ಲಿ ಜಾರಿ ಬಿದ್ದು ಮೈಗೆ ಕೆಸರು ಮೆತ್ತಿಸಿಕೊಂಡಿದ್ದಾರೆ.

ನಿಲ್ದಾಣಕ್ಕೆ ಸರ್ಕಾರಿ ಹಾಗೂ ಖಾಸಗಿ ಬಸ್ ಸೇರಿ ಸಾಕಷ್ಟು ಬಸ್ ಬಂದು ಹೋಗುತ್ತಿದ್ದು , ಖಾಸಗಿ ಬಸ್ ನವರಿಂದ ಪಂಚಾಯ್ತಿಯವರು ಸುಂಕ ಕಟ್ಟಿಸಿಕೊಳ್ಳುತ್ತಿದ್ದಾರೆ ಹೊರತು ನಿಲ್ದಾಣದ ಸಮಸ್ಯೆ ಬಗ್ಗೆ ಮಾತ್ರ ಗಮನಹರಿಸಿಲ್ಲ. ಪ್ರಯಾಣಿಕರಿಗೆ ಕುಡಿಯುವ ನೀರಾಗಲಿ, ಕೂರಲು ಆಸನದ ವ್ಯವಸ್ಥೆಯಾಗಲಿ ಇಲ್ಲದೆ ಸಾರ್ವಜನಿಕರು ಪರಿತಪಿಸುವಂತಾಗಿದೆ.
ನಿಲ್ದಾಣದಲ್ಲಿ ನೀರು ನಿಂತಿರುವುದರಿಂದ ಬೈಕ್ ಹಾಗೂ ಆಟೋ ಸಂಚಾರವೂ ದುಸ್ಥರವಾಗಿದ್ದು ಎಲ್ಲಿ ಜಾರಿ ಬಿಡುತ್ತೇವೆ ಎಂಬ ಭಯದಲ್ಲಿ ವಾಹನವನ್ನು ಚಲಾಯಿಸುವಂತಾಗಿದೆ. ಕೆಲ ಆಟೋದವರು ತಮ್ಮ ನಿಲ್ದಾಣದ ಕಡೆಯಿದ್ದ ಗುಂಡಿಗೆ ಮಣ್ಣು ಹಾಕುವ ಕಾರ್ಯ ಮಾಡಿಕೊಳ್ಳಲು ಮುಂದಾಗಿದ್ದರೆ ಬಸ್ ಬಂದು ನಿಲ್ಲುವ ಜಾಗ ಮಾತ್ರ ಕೆಸರಿನಿಂದಲೇ ಕೂಡಿದೆ.
ಪ್ರತಿಬಾರಿ ಮಳೆ ಬಂದಾಗಲೂ ಸಹ ಬಸ್ ನಿಲ್ದಾಣದಲ್ಲಿ ಈ ಸಮಸ್ಯೆ ಉದ್ಭವಿಸುತ್ತಿದ್ದು ಪಂಚಾಯ್ತಿವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ , ನಿಲ್ದಾಣದಲ್ಲಿನ ಗುಂಡಿಗಳನ್ನು ಟಾರ್ ಹಾಕಿ ಶಾಶ್ವತವಾಗಿ ಮುಚ್ಚಿಸದಿದ್ದರೂ ಸಹ ತಾತ್ಕಾಲಿಕವಾಗಿ ಮಣ್ಣುಜೆಲ್ಲಿ ಹಾಕಿ ಕೆಸರು ಉಂಟಾಗುವುದನ್ನಾದರೂ ಪಂಚಾಯ್ತಿಯವರು ತಪ್ಪಿಸಿದರೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಟೀ ಅಂಗಡಿಯ ಮಂಜುನಾಥ ತಿಳಿಸುತ್ತಾರೆ.
ಹುಳಿಯಾರು ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣ ಮಾಡುವುದಾಗಿ ತಿಳಿಸಿದ್ದ ಶಾಸಕರು ನಿಲ್ದಾಣದಲ್ಲಿದ್ದ ಹಳೆ ತಂಗುದಾಣವನ್ನು ತೆಗೆಸಿ ತಗಡಿನ ಶೀಟ್ ಗಳನ್ನು ಹಾಗೂ ನೆಲಕ್ಕೆ ಕಲ್ಲು ಹಾಕಿಸಿರುವುದನ್ನು ಬಿಟ್ಟರೆ ಮತ್ತಾವುದೇ ಕಾರ್ಯ ನಡೆದಿಲ್ಲ. ಇದನ್ನು ಕಂಡ ಸಾರ್ವಜನಿಕರು ಇದೇಕೋ ಶಾಸಕರು ಈ ಬಗ್ಗೆ ತಾತ್ಸಾರ ತೋರಿದ್ದಾರೆ ಎನ್ನುತ್ತಿದ್ದಾರೆ.

ಈ ಹಿಂದೆಯಿದ್ದ ಸದಸ್ಯರುಗಳಿಗೆ ಇಲ್ಲಿನ ಸಂಪೂರ್ಣ ಸಮಸ್ಯೆ ಗೊತ್ತಿದ್ದರೂ ಸಹ ಬಗೆಹರಿಸುವಲ್ಲಿ ಮುಂದಾಗಿರಲಿಲ್ಲ ಈಗ ಹೊಸದಾಗಿ ಸದಸ್ಯರು ಆಯ್ಕೆಯಾಗಿದ್ದು ಇವರೇನಾದರೂ ಈ ಬಗ್ಗೆ ಗಮನಹರಿಸುತ್ತಾರೋ, ಇಲ್ಲವೋ ಎಂದು ಕಾದುನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...