ವಿಷಯಕ್ಕೆ ಹೋಗಿ

ಇನ್ನೂ ತಪ್ಪಿಲ್ಲ ಹುಳಿಯಾರು ಬಸ್ ನಿಲ್ದಾಣದ ಕೆಸರಿನ ಸಮಸ್ಯೆ

ಮಳೆ ಬಂದರೆ ಸಾಕು ಪಟ್ಟಣದ ಬಸ್ ನಿಲ್ದಾಣದ ತುಂಬ ನೀರು ನಿಂತು ಕೆಸರುಂಟಾಗುವುದಿದ್ದು ಈ ಬಗ್ಗೆ ಎಷ್ಟೇ ಬಾರಿ ಪಂಚಾಯ್ತಿಯವರ ಗಮನಕ್ಕೆ ತಂದರೂ ಪ್ರಯೋಜನವಾಗದೆಯಿದ್ದು ಇಂದಿಗೂ ಸಹ ಬಸ್ ನಿಲ್ದಾಣಲ್ಲಿ ಉಂಟಾಗುವ ಕೆಸರಿನ ಸಮಸ್ಯೆ ಜೀವಂತವಾಗಿದ್ದು ಪ್ರಯಾಣಿಕರನ್ನು ಪರದಾಡುವಂತೆ ಮಾಡಿದೆ.
ಬಸ್ ನಿಲ್ದಾಣದಲ್ಲಿರುವ ಚರಂಡಿಯ ತುಂಬೆಲ್ಲಾ ಮಣ್ಣು, ಪ್ಲಾಸ್ಟಿಕ್ , ಕಸಕಡ್ಡಿ ತುಂಬಿದ್ದು ಮಳೆ ಬಂದಾಗ ನೀರು ಸರಾಗವಾಗಿ ಹರಿದು ಹೋಗಲಾರದೆ ಬಸ್ ನಿಲ್ದಾಣದಲ್ಲೇ ನಿಲ್ಲುವಂತಾಗಿದೆ. ನಿಂತ ನೀರಿನ ನಡುವೆಯೇ ಬಸ್ ಗಳು ಸಂಚರಿಸುವುದರಿಂದ ಕೆಸರುಂಟಾಗಿದ್ದು ಪ್ರಯಾಣಿಕರು ಓಡಾಡಲು ಪ್ರಯಾಸ ಪಡುವಂತಾಗಿದೆ. ಬಸ್ ಹತ್ತಲು , ಇಳಿಯಲು ಪ್ರಯಾಸ ಪಡಬೇಕಿದ್ದು, ವೃದ್ದರು, ಮಕ್ಕಳು ಕೆಸರಿನಲ್ಲಿ ಜಾರಿ ಬಿದ್ದು ಮೈಗೆ ಕೆಸರು ಮೆತ್ತಿಸಿಕೊಂಡಿದ್ದಾರೆ.

ನಿಲ್ದಾಣಕ್ಕೆ ಸರ್ಕಾರಿ ಹಾಗೂ ಖಾಸಗಿ ಬಸ್ ಸೇರಿ ಸಾಕಷ್ಟು ಬಸ್ ಬಂದು ಹೋಗುತ್ತಿದ್ದು , ಖಾಸಗಿ ಬಸ್ ನವರಿಂದ ಪಂಚಾಯ್ತಿಯವರು ಸುಂಕ ಕಟ್ಟಿಸಿಕೊಳ್ಳುತ್ತಿದ್ದಾರೆ ಹೊರತು ನಿಲ್ದಾಣದ ಸಮಸ್ಯೆ ಬಗ್ಗೆ ಮಾತ್ರ ಗಮನಹರಿಸಿಲ್ಲ. ಪ್ರಯಾಣಿಕರಿಗೆ ಕುಡಿಯುವ ನೀರಾಗಲಿ, ಕೂರಲು ಆಸನದ ವ್ಯವಸ್ಥೆಯಾಗಲಿ ಇಲ್ಲದೆ ಸಾರ್ವಜನಿಕರು ಪರಿತಪಿಸುವಂತಾಗಿದೆ.
ನಿಲ್ದಾಣದಲ್ಲಿ ನೀರು ನಿಂತಿರುವುದರಿಂದ ಬೈಕ್ ಹಾಗೂ ಆಟೋ ಸಂಚಾರವೂ ದುಸ್ಥರವಾಗಿದ್ದು ಎಲ್ಲಿ ಜಾರಿ ಬಿಡುತ್ತೇವೆ ಎಂಬ ಭಯದಲ್ಲಿ ವಾಹನವನ್ನು ಚಲಾಯಿಸುವಂತಾಗಿದೆ. ಕೆಲ ಆಟೋದವರು ತಮ್ಮ ನಿಲ್ದಾಣದ ಕಡೆಯಿದ್ದ ಗುಂಡಿಗೆ ಮಣ್ಣು ಹಾಕುವ ಕಾರ್ಯ ಮಾಡಿಕೊಳ್ಳಲು ಮುಂದಾಗಿದ್ದರೆ ಬಸ್ ಬಂದು ನಿಲ್ಲುವ ಜಾಗ ಮಾತ್ರ ಕೆಸರಿನಿಂದಲೇ ಕೂಡಿದೆ.
ಪ್ರತಿಬಾರಿ ಮಳೆ ಬಂದಾಗಲೂ ಸಹ ಬಸ್ ನಿಲ್ದಾಣದಲ್ಲಿ ಈ ಸಮಸ್ಯೆ ಉದ್ಭವಿಸುತ್ತಿದ್ದು ಪಂಚಾಯ್ತಿವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ , ನಿಲ್ದಾಣದಲ್ಲಿನ ಗುಂಡಿಗಳನ್ನು ಟಾರ್ ಹಾಕಿ ಶಾಶ್ವತವಾಗಿ ಮುಚ್ಚಿಸದಿದ್ದರೂ ಸಹ ತಾತ್ಕಾಲಿಕವಾಗಿ ಮಣ್ಣುಜೆಲ್ಲಿ ಹಾಕಿ ಕೆಸರು ಉಂಟಾಗುವುದನ್ನಾದರೂ ಪಂಚಾಯ್ತಿಯವರು ತಪ್ಪಿಸಿದರೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಟೀ ಅಂಗಡಿಯ ಮಂಜುನಾಥ ತಿಳಿಸುತ್ತಾರೆ.
ಹುಳಿಯಾರು ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣ ಮಾಡುವುದಾಗಿ ತಿಳಿಸಿದ್ದ ಶಾಸಕರು ನಿಲ್ದಾಣದಲ್ಲಿದ್ದ ಹಳೆ ತಂಗುದಾಣವನ್ನು ತೆಗೆಸಿ ತಗಡಿನ ಶೀಟ್ ಗಳನ್ನು ಹಾಗೂ ನೆಲಕ್ಕೆ ಕಲ್ಲು ಹಾಕಿಸಿರುವುದನ್ನು ಬಿಟ್ಟರೆ ಮತ್ತಾವುದೇ ಕಾರ್ಯ ನಡೆದಿಲ್ಲ. ಇದನ್ನು ಕಂಡ ಸಾರ್ವಜನಿಕರು ಇದೇಕೋ ಶಾಸಕರು ಈ ಬಗ್ಗೆ ತಾತ್ಸಾರ ತೋರಿದ್ದಾರೆ ಎನ್ನುತ್ತಿದ್ದಾರೆ.

ಈ ಹಿಂದೆಯಿದ್ದ ಸದಸ್ಯರುಗಳಿಗೆ ಇಲ್ಲಿನ ಸಂಪೂರ್ಣ ಸಮಸ್ಯೆ ಗೊತ್ತಿದ್ದರೂ ಸಹ ಬಗೆಹರಿಸುವಲ್ಲಿ ಮುಂದಾಗಿರಲಿಲ್ಲ ಈಗ ಹೊಸದಾಗಿ ಸದಸ್ಯರು ಆಯ್ಕೆಯಾಗಿದ್ದು ಇವರೇನಾದರೂ ಈ ಬಗ್ಗೆ ಗಮನಹರಿಸುತ್ತಾರೋ, ಇಲ್ಲವೋ ಎಂದು ಕಾದುನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...