ವಿಷಯಕ್ಕೆ ಹೋಗಿ

ಇನ್ನೂ ತಪ್ಪಿಲ್ಲ ಹುಳಿಯಾರು ಬಸ್ ನಿಲ್ದಾಣದ ಕೆಸರಿನ ಸಮಸ್ಯೆ

ಮಳೆ ಬಂದರೆ ಸಾಕು ಪಟ್ಟಣದ ಬಸ್ ನಿಲ್ದಾಣದ ತುಂಬ ನೀರು ನಿಂತು ಕೆಸರುಂಟಾಗುವುದಿದ್ದು ಈ ಬಗ್ಗೆ ಎಷ್ಟೇ ಬಾರಿ ಪಂಚಾಯ್ತಿಯವರ ಗಮನಕ್ಕೆ ತಂದರೂ ಪ್ರಯೋಜನವಾಗದೆಯಿದ್ದು ಇಂದಿಗೂ ಸಹ ಬಸ್ ನಿಲ್ದಾಣಲ್ಲಿ ಉಂಟಾಗುವ ಕೆಸರಿನ ಸಮಸ್ಯೆ ಜೀವಂತವಾಗಿದ್ದು ಪ್ರಯಾಣಿಕರನ್ನು ಪರದಾಡುವಂತೆ ಮಾಡಿದೆ.
ಬಸ್ ನಿಲ್ದಾಣದಲ್ಲಿರುವ ಚರಂಡಿಯ ತುಂಬೆಲ್ಲಾ ಮಣ್ಣು, ಪ್ಲಾಸ್ಟಿಕ್ , ಕಸಕಡ್ಡಿ ತುಂಬಿದ್ದು ಮಳೆ ಬಂದಾಗ ನೀರು ಸರಾಗವಾಗಿ ಹರಿದು ಹೋಗಲಾರದೆ ಬಸ್ ನಿಲ್ದಾಣದಲ್ಲೇ ನಿಲ್ಲುವಂತಾಗಿದೆ. ನಿಂತ ನೀರಿನ ನಡುವೆಯೇ ಬಸ್ ಗಳು ಸಂಚರಿಸುವುದರಿಂದ ಕೆಸರುಂಟಾಗಿದ್ದು ಪ್ರಯಾಣಿಕರು ಓಡಾಡಲು ಪ್ರಯಾಸ ಪಡುವಂತಾಗಿದೆ. ಬಸ್ ಹತ್ತಲು , ಇಳಿಯಲು ಪ್ರಯಾಸ ಪಡಬೇಕಿದ್ದು, ವೃದ್ದರು, ಮಕ್ಕಳು ಕೆಸರಿನಲ್ಲಿ ಜಾರಿ ಬಿದ್ದು ಮೈಗೆ ಕೆಸರು ಮೆತ್ತಿಸಿಕೊಂಡಿದ್ದಾರೆ.

ನಿಲ್ದಾಣಕ್ಕೆ ಸರ್ಕಾರಿ ಹಾಗೂ ಖಾಸಗಿ ಬಸ್ ಸೇರಿ ಸಾಕಷ್ಟು ಬಸ್ ಬಂದು ಹೋಗುತ್ತಿದ್ದು , ಖಾಸಗಿ ಬಸ್ ನವರಿಂದ ಪಂಚಾಯ್ತಿಯವರು ಸುಂಕ ಕಟ್ಟಿಸಿಕೊಳ್ಳುತ್ತಿದ್ದಾರೆ ಹೊರತು ನಿಲ್ದಾಣದ ಸಮಸ್ಯೆ ಬಗ್ಗೆ ಮಾತ್ರ ಗಮನಹರಿಸಿಲ್ಲ. ಪ್ರಯಾಣಿಕರಿಗೆ ಕುಡಿಯುವ ನೀರಾಗಲಿ, ಕೂರಲು ಆಸನದ ವ್ಯವಸ್ಥೆಯಾಗಲಿ ಇಲ್ಲದೆ ಸಾರ್ವಜನಿಕರು ಪರಿತಪಿಸುವಂತಾಗಿದೆ.
ನಿಲ್ದಾಣದಲ್ಲಿ ನೀರು ನಿಂತಿರುವುದರಿಂದ ಬೈಕ್ ಹಾಗೂ ಆಟೋ ಸಂಚಾರವೂ ದುಸ್ಥರವಾಗಿದ್ದು ಎಲ್ಲಿ ಜಾರಿ ಬಿಡುತ್ತೇವೆ ಎಂಬ ಭಯದಲ್ಲಿ ವಾಹನವನ್ನು ಚಲಾಯಿಸುವಂತಾಗಿದೆ. ಕೆಲ ಆಟೋದವರು ತಮ್ಮ ನಿಲ್ದಾಣದ ಕಡೆಯಿದ್ದ ಗುಂಡಿಗೆ ಮಣ್ಣು ಹಾಕುವ ಕಾರ್ಯ ಮಾಡಿಕೊಳ್ಳಲು ಮುಂದಾಗಿದ್ದರೆ ಬಸ್ ಬಂದು ನಿಲ್ಲುವ ಜಾಗ ಮಾತ್ರ ಕೆಸರಿನಿಂದಲೇ ಕೂಡಿದೆ.
ಪ್ರತಿಬಾರಿ ಮಳೆ ಬಂದಾಗಲೂ ಸಹ ಬಸ್ ನಿಲ್ದಾಣದಲ್ಲಿ ಈ ಸಮಸ್ಯೆ ಉದ್ಭವಿಸುತ್ತಿದ್ದು ಪಂಚಾಯ್ತಿವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ , ನಿಲ್ದಾಣದಲ್ಲಿನ ಗುಂಡಿಗಳನ್ನು ಟಾರ್ ಹಾಕಿ ಶಾಶ್ವತವಾಗಿ ಮುಚ್ಚಿಸದಿದ್ದರೂ ಸಹ ತಾತ್ಕಾಲಿಕವಾಗಿ ಮಣ್ಣುಜೆಲ್ಲಿ ಹಾಕಿ ಕೆಸರು ಉಂಟಾಗುವುದನ್ನಾದರೂ ಪಂಚಾಯ್ತಿಯವರು ತಪ್ಪಿಸಿದರೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಟೀ ಅಂಗಡಿಯ ಮಂಜುನಾಥ ತಿಳಿಸುತ್ತಾರೆ.
ಹುಳಿಯಾರು ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣ ಮಾಡುವುದಾಗಿ ತಿಳಿಸಿದ್ದ ಶಾಸಕರು ನಿಲ್ದಾಣದಲ್ಲಿದ್ದ ಹಳೆ ತಂಗುದಾಣವನ್ನು ತೆಗೆಸಿ ತಗಡಿನ ಶೀಟ್ ಗಳನ್ನು ಹಾಗೂ ನೆಲಕ್ಕೆ ಕಲ್ಲು ಹಾಕಿಸಿರುವುದನ್ನು ಬಿಟ್ಟರೆ ಮತ್ತಾವುದೇ ಕಾರ್ಯ ನಡೆದಿಲ್ಲ. ಇದನ್ನು ಕಂಡ ಸಾರ್ವಜನಿಕರು ಇದೇಕೋ ಶಾಸಕರು ಈ ಬಗ್ಗೆ ತಾತ್ಸಾರ ತೋರಿದ್ದಾರೆ ಎನ್ನುತ್ತಿದ್ದಾರೆ.

ಈ ಹಿಂದೆಯಿದ್ದ ಸದಸ್ಯರುಗಳಿಗೆ ಇಲ್ಲಿನ ಸಂಪೂರ್ಣ ಸಮಸ್ಯೆ ಗೊತ್ತಿದ್ದರೂ ಸಹ ಬಗೆಹರಿಸುವಲ್ಲಿ ಮುಂದಾಗಿರಲಿಲ್ಲ ಈಗ ಹೊಸದಾಗಿ ಸದಸ್ಯರು ಆಯ್ಕೆಯಾಗಿದ್ದು ಇವರೇನಾದರೂ ಈ ಬಗ್ಗೆ ಗಮನಹರಿಸುತ್ತಾರೋ, ಇಲ್ಲವೋ ಎಂದು ಕಾದುನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.