ವಿಷಯಕ್ಕೆ ಹೋಗಿ

ಆರಂಭವಾಯ್ತು ಶಾಲೆ : ಶುರುವಾಯ್ತು ಜಾತಿ,ಆದಾಯ ಪ್ರಮಾಣ ಪತ್ರಕ್ಕೆ ನೂಕುನುಗ್ಗಲು

ಎಲ್ಲೆಡೆ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು ಶಾಲೆಯಲ್ಲಿ ಮಕ್ಕಳ ಪ್ರವೇಶಕ್ಕೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಬೇಕಾದ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪಡೆಯಲು ಪಟ್ಟಣದ ನಾಡಕಛೇರಿಯ ಆಟಲ್ ಜನಸ್ನೇಹಿಕೇಂದ್ರ ಪೋಷಕರುಗಳಿಂದ ತುಂಬಿ ತುಳುಕುತ್ತಿತ್ತು.

ವಿದ್ಯಾರ್ಥಿಗಳು ಹಾಗೂ ಅವರ ಪೋಷಕರುಗಳು ಪ್ರಮಾಣ ಪತ್ರಕ್ಕಾಗಿ ಅರ್ಜಿಸಲ್ಲಿಸಲು ನಾಡಕಛೇರಿಗೆ ಅಲೆದಾಡುತ್ತಿರುವ ದೃಶ್ಯ ಕಳೆದೊಂದುವಾರದಿಂದ ಸಾಮಾನ್ಯವಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಅನಾನುಕೂಲಗಳನ್ನು ತಪ್ಪಿಸಲು ಶಾಲೆಗಳಲ್ಲೇ ಅರ್ಜಿ ಪಡೆದು ಪ್ರಮಾಣ ಪತ್ರ ವಿತರಿಸಲು ಸರ್ಕಾರ ವ್ಯವಸ್ಥೆ ಮಾಡಿದ್ದರೂ ಕೂಡ ಕೇವಲ ಸರ್ಕಾರಿ ಶಾಲೆಗೆ ಮಾತ್ರ ಸೀಮಿತವಾಗಿರುವುದರಿಂದ ಖಾಸಗಿಶಾಲೆ ವಿದ್ಯಾರ್ಥಿಗಳು ಹಾಗೂ ಇನ್ನಿತರ ಉದ್ದೇಶಕ್ಕಾಗಿ ಬೇಕಾದ ಪ್ರಮಾಣಪತ್ರ ಪಡೆಯಲು ಅಟಲ್ ಜನಸ್ನೇಹಿ ಕೇಂದ್ರಕ್ಕೆ ಹೋಗಲೇ ಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಜಾತಿ, ಆದಾಯ ಪ್ರಮಾಣ ಪತ್ರಕ್ಕೆ ತಿಂಗಳುಗಟ್ಟಲೇ ಅಲೆದಾಟ ಮತ್ತು ಲಂಚದ ಕಾಟ ತಪ್ಪಿಸಲು ರಾಜ್ಯ ಸರ್ಕಾರ ಕಾಗದ ರಹಿತ ಪ್ರಮಾಣಪತ್ರ ನೀಡುವ ವ್ಯವಸ್ಥೆಯನ್ನು ತಂದಿರುವುದಾಗಿ ಹೇಳಿದರು ಸದ್ಯ ಅದಿನ್ನು ಜಾರಿಗೆ ಬಂದಿಲ್ಲ.
ವಿದ್ಯಾಭ್ಯಾಸಕ್ಕಾಗಿ ನೀಡುವ ಪ್ರಮಾಣ ಪತ್ರ ಅರ್ಜಿಸಲ್ಲಿಸಿದ ೨೧ ದಿನದ ಕಾಲಾವಕಾಶವಿದ್ದರೂ ಸದ್ಯ ೧೦ ದಿನದ ಒಳಗೆ ಪ್ರಮಾಣಪತ್ರ ನೀಡಲಾಗುತ್ತಿದ್ದರು ಸಹ ಕೆಲವೊಮ್ಮೆ ತಡವಾಗುವುದರಿಂದ ಪ್ರವೇಶಕ್ಕೆ ತೊಂದರೆ ಆಗುವುದೆಂಬ ಆತಂಕ ಪೋಷಕರಲ್ಲಿ ಮನೆ ಮಾಡಿದ್ದು , ಇದಕ್ಕಾಗಿ ಬಿಟ್ಟುಕೆಲಸಬಿಟ್ಟು ಬೆಳಿಗ್ಗೆಯಿಂದಲೇ ಕಛೇರಿಯ ಮುಂದೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಮಸ್ಯೆ ಏನು: ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಚೆಕ್ ಲಿಸ್ಟ್ ತೆಗೆಸಲು ಹೋಬಳಿ ವ್ಯಾಪ್ತಿಯ ಹಳ್ಳಿಯ ಪೋಷಕರು ತಮ್ಮ ಒಂದು ದಿನದ ಕೆಲಸವನ್ನು ಬಿಟ್ಟು ಪಟ್ಟಣದ ನಾಢಕಛೇರಿಗೆ ಬಂದರು ಸಹ ನಾಡಕಛೇರಿಯಲ್ಲಿನ ಆಟಲ್ ಜನಸ್ನೇಹಿ ಕೇಂದ್ರದಲ್ಲಿ ಇದನ್ನು ಹೊರತು ಪಡಿಸಿ ವಂಶವೃಕ್ಷ, ಜನನ,ಮರಣ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖಲೆಗಳಿಗೂ ಅರ್ಜಿಗಳನ್ನು ಸ್ವೀಕರಿಸುತ್ತಿರುವುದರಿಂದ ತಡವಾಗುತ್ತಿದೆ. ಇದಕ್ಕಾಗಿ ಮೀಸಲಿರುವ ಒಂದೇ ಕಂಪ್ಯೂಟರ್ ನಲ್ಲಿ ಇರುವ ಒಬ್ಬ ಕಂಪ್ಯೂಟರ್ ಅಪರೇಟರ್ ಎಲ್ಲಾ ದಾಖಲೆಗಳನ್ನು ತೆಗೆದುಕೊಡಬೇಕಾಗಿದೆ. ಆತ ರಜಾ ಹಾಕಿದರೆ ಅನೇಕ ದಾಖಲೆಗಳನ್ನು ತೆಗೆದುಕೊಡಲು ಯಾರು ಇರದೆ ನಾಳೆ ಬನ್ನಿ ಎಂದು ಹೇಳುತ್ತಾರೆ.
ಶಾಲೆ ಪ್ರಾರಂಭಕ್ಕೂ ಮುಂಚೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಾಡಿಸೋಣ ಎಂದರೆ ಶಾಲಾದಾಖಲಾತಿ ಪತ್ರ ತನ್ನಿ ಎಂದು ವಾಪಸ್ಸ್ ಕಳಿಹಿಸುತ್ತಾರೆ. ಒಟ್ಟಾರೆ ಶಾಲಾದಾಖಲಾತಿ ಪತ್ರ ಬರೆಸಿಕೊಂಡು ಬಂದು ಅರ್ಜಿ ಹಾಕಲು ದಿನವಿಡಿ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ, ಈ ಹಿಂದೆ ಗ್ರಾಮಲೆಕ್ಕಿಗರಿಂದ ಕೈಬರಹದಲ್ಲಿಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುತ್ತಿದ್ದೆವು. ಇದೀಗ ವಾರಾನುಗಟ್ಟಲೇ ಕಾಯಬೇಕಿದ್ದು, ಅರ್ಜಿಯಲ್ಲಿ ಒಂದು ತಪ್ಪಾದರೆ, ಅದು ರಿಜೆಕ್ಟ್ ಆಗಿದೆ ಎನ್ನುತ್ತಾರೆ. ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಮತ್ತೆ ಒಂದುವರ ಕಾಯಬೇಕಿದೆ ಎಂದು ಪೋಷಕರು ತಿಳಿಸುತ್ತಾರೆ.

ಇದೀಗ ಅನೇಕ ದಾಖಲೆಗಳನ್ನು ಸರ್ಕಾರ ಗಣಕೀಕೃತವಾಗಿ ತರುವಂತೆ ಹೇಳಿದ್ದು, ಗಣಕೀಕೃತ ದಾಖಲೆ ಪಡೆಯಲು ಹರಸಾಹಕ ಪಡುವಂತಾಗಿದೆ. ಒಂದು ಇನ್ ಕಮ್ ಸರ್ಟಿಫೀಕೇಟ್ ಮಾಡಿಸಲು ೮ ರಿಂದ ೧೦ ದಿನವಾಗುತ್ತಿದೆ. ಪಟ್ಟಣದ ನಾಡಕಛೇರಿಯಲ್ಲಿ ಒಂದು ಕಂಫ್ಯೂಟರ್ ಹಾಗೂ ಒಬ್ಬ ಅಪರೇಟರ್ ಇದ್ದು ಕಾರ್ಯ ವಿಳಂಬವಾಗುತ್ತಿದೆ. ಇದರಿಂದ ದೂರದೂರುಗಳಿಂದ ಬರುವ ಪೋಷಕರು, ಸಾರ್ವಜನಿಕರು ದಿನವಿಡಿ ಕಾಯುವಂತಾಗಿದೆ. ಈ ಬಗ್ಗೆ ತಹಸೀಲ್ದಾರ್ ಅವರು ಶೀಘ್ರವೇ ಗಮನ ಹರಿಸಿ ಮತ್ತೊಂದು ಕಂಪ್ಯೂಟರ್ ಹಾಗೂ ಕಂಪ್ಯೂಟರ್ ಅಪರೇಟರನ್ನು ನೇಮಕ ಮಾಡಿಕೊಟ್ಟು ಈ ಭಾಗದ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಮರಾಠಿಪಾಳ್ಯದ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...