ವಿಷಯಕ್ಕೆ ಹೋಗಿ

ಆರಂಭವಾಯ್ತು ಶಾಲೆ : ಶುರುವಾಯ್ತು ಜಾತಿ,ಆದಾಯ ಪ್ರಮಾಣ ಪತ್ರಕ್ಕೆ ನೂಕುನುಗ್ಗಲು

ಎಲ್ಲೆಡೆ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು ಶಾಲೆಯಲ್ಲಿ ಮಕ್ಕಳ ಪ್ರವೇಶಕ್ಕೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಬೇಕಾದ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪಡೆಯಲು ಪಟ್ಟಣದ ನಾಡಕಛೇರಿಯ ಆಟಲ್ ಜನಸ್ನೇಹಿಕೇಂದ್ರ ಪೋಷಕರುಗಳಿಂದ ತುಂಬಿ ತುಳುಕುತ್ತಿತ್ತು.

ವಿದ್ಯಾರ್ಥಿಗಳು ಹಾಗೂ ಅವರ ಪೋಷಕರುಗಳು ಪ್ರಮಾಣ ಪತ್ರಕ್ಕಾಗಿ ಅರ್ಜಿಸಲ್ಲಿಸಲು ನಾಡಕಛೇರಿಗೆ ಅಲೆದಾಡುತ್ತಿರುವ ದೃಶ್ಯ ಕಳೆದೊಂದುವಾರದಿಂದ ಸಾಮಾನ್ಯವಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಅನಾನುಕೂಲಗಳನ್ನು ತಪ್ಪಿಸಲು ಶಾಲೆಗಳಲ್ಲೇ ಅರ್ಜಿ ಪಡೆದು ಪ್ರಮಾಣ ಪತ್ರ ವಿತರಿಸಲು ಸರ್ಕಾರ ವ್ಯವಸ್ಥೆ ಮಾಡಿದ್ದರೂ ಕೂಡ ಕೇವಲ ಸರ್ಕಾರಿ ಶಾಲೆಗೆ ಮಾತ್ರ ಸೀಮಿತವಾಗಿರುವುದರಿಂದ ಖಾಸಗಿಶಾಲೆ ವಿದ್ಯಾರ್ಥಿಗಳು ಹಾಗೂ ಇನ್ನಿತರ ಉದ್ದೇಶಕ್ಕಾಗಿ ಬೇಕಾದ ಪ್ರಮಾಣಪತ್ರ ಪಡೆಯಲು ಅಟಲ್ ಜನಸ್ನೇಹಿ ಕೇಂದ್ರಕ್ಕೆ ಹೋಗಲೇ ಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಜಾತಿ, ಆದಾಯ ಪ್ರಮಾಣ ಪತ್ರಕ್ಕೆ ತಿಂಗಳುಗಟ್ಟಲೇ ಅಲೆದಾಟ ಮತ್ತು ಲಂಚದ ಕಾಟ ತಪ್ಪಿಸಲು ರಾಜ್ಯ ಸರ್ಕಾರ ಕಾಗದ ರಹಿತ ಪ್ರಮಾಣಪತ್ರ ನೀಡುವ ವ್ಯವಸ್ಥೆಯನ್ನು ತಂದಿರುವುದಾಗಿ ಹೇಳಿದರು ಸದ್ಯ ಅದಿನ್ನು ಜಾರಿಗೆ ಬಂದಿಲ್ಲ.
ವಿದ್ಯಾಭ್ಯಾಸಕ್ಕಾಗಿ ನೀಡುವ ಪ್ರಮಾಣ ಪತ್ರ ಅರ್ಜಿಸಲ್ಲಿಸಿದ ೨೧ ದಿನದ ಕಾಲಾವಕಾಶವಿದ್ದರೂ ಸದ್ಯ ೧೦ ದಿನದ ಒಳಗೆ ಪ್ರಮಾಣಪತ್ರ ನೀಡಲಾಗುತ್ತಿದ್ದರು ಸಹ ಕೆಲವೊಮ್ಮೆ ತಡವಾಗುವುದರಿಂದ ಪ್ರವೇಶಕ್ಕೆ ತೊಂದರೆ ಆಗುವುದೆಂಬ ಆತಂಕ ಪೋಷಕರಲ್ಲಿ ಮನೆ ಮಾಡಿದ್ದು , ಇದಕ್ಕಾಗಿ ಬಿಟ್ಟುಕೆಲಸಬಿಟ್ಟು ಬೆಳಿಗ್ಗೆಯಿಂದಲೇ ಕಛೇರಿಯ ಮುಂದೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಮಸ್ಯೆ ಏನು: ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಚೆಕ್ ಲಿಸ್ಟ್ ತೆಗೆಸಲು ಹೋಬಳಿ ವ್ಯಾಪ್ತಿಯ ಹಳ್ಳಿಯ ಪೋಷಕರು ತಮ್ಮ ಒಂದು ದಿನದ ಕೆಲಸವನ್ನು ಬಿಟ್ಟು ಪಟ್ಟಣದ ನಾಢಕಛೇರಿಗೆ ಬಂದರು ಸಹ ನಾಡಕಛೇರಿಯಲ್ಲಿನ ಆಟಲ್ ಜನಸ್ನೇಹಿ ಕೇಂದ್ರದಲ್ಲಿ ಇದನ್ನು ಹೊರತು ಪಡಿಸಿ ವಂಶವೃಕ್ಷ, ಜನನ,ಮರಣ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖಲೆಗಳಿಗೂ ಅರ್ಜಿಗಳನ್ನು ಸ್ವೀಕರಿಸುತ್ತಿರುವುದರಿಂದ ತಡವಾಗುತ್ತಿದೆ. ಇದಕ್ಕಾಗಿ ಮೀಸಲಿರುವ ಒಂದೇ ಕಂಪ್ಯೂಟರ್ ನಲ್ಲಿ ಇರುವ ಒಬ್ಬ ಕಂಪ್ಯೂಟರ್ ಅಪರೇಟರ್ ಎಲ್ಲಾ ದಾಖಲೆಗಳನ್ನು ತೆಗೆದುಕೊಡಬೇಕಾಗಿದೆ. ಆತ ರಜಾ ಹಾಕಿದರೆ ಅನೇಕ ದಾಖಲೆಗಳನ್ನು ತೆಗೆದುಕೊಡಲು ಯಾರು ಇರದೆ ನಾಳೆ ಬನ್ನಿ ಎಂದು ಹೇಳುತ್ತಾರೆ.
ಶಾಲೆ ಪ್ರಾರಂಭಕ್ಕೂ ಮುಂಚೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಾಡಿಸೋಣ ಎಂದರೆ ಶಾಲಾದಾಖಲಾತಿ ಪತ್ರ ತನ್ನಿ ಎಂದು ವಾಪಸ್ಸ್ ಕಳಿಹಿಸುತ್ತಾರೆ. ಒಟ್ಟಾರೆ ಶಾಲಾದಾಖಲಾತಿ ಪತ್ರ ಬರೆಸಿಕೊಂಡು ಬಂದು ಅರ್ಜಿ ಹಾಕಲು ದಿನವಿಡಿ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ, ಈ ಹಿಂದೆ ಗ್ರಾಮಲೆಕ್ಕಿಗರಿಂದ ಕೈಬರಹದಲ್ಲಿಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುತ್ತಿದ್ದೆವು. ಇದೀಗ ವಾರಾನುಗಟ್ಟಲೇ ಕಾಯಬೇಕಿದ್ದು, ಅರ್ಜಿಯಲ್ಲಿ ಒಂದು ತಪ್ಪಾದರೆ, ಅದು ರಿಜೆಕ್ಟ್ ಆಗಿದೆ ಎನ್ನುತ್ತಾರೆ. ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಮತ್ತೆ ಒಂದುವರ ಕಾಯಬೇಕಿದೆ ಎಂದು ಪೋಷಕರು ತಿಳಿಸುತ್ತಾರೆ.

ಇದೀಗ ಅನೇಕ ದಾಖಲೆಗಳನ್ನು ಸರ್ಕಾರ ಗಣಕೀಕೃತವಾಗಿ ತರುವಂತೆ ಹೇಳಿದ್ದು, ಗಣಕೀಕೃತ ದಾಖಲೆ ಪಡೆಯಲು ಹರಸಾಹಕ ಪಡುವಂತಾಗಿದೆ. ಒಂದು ಇನ್ ಕಮ್ ಸರ್ಟಿಫೀಕೇಟ್ ಮಾಡಿಸಲು ೮ ರಿಂದ ೧೦ ದಿನವಾಗುತ್ತಿದೆ. ಪಟ್ಟಣದ ನಾಡಕಛೇರಿಯಲ್ಲಿ ಒಂದು ಕಂಫ್ಯೂಟರ್ ಹಾಗೂ ಒಬ್ಬ ಅಪರೇಟರ್ ಇದ್ದು ಕಾರ್ಯ ವಿಳಂಬವಾಗುತ್ತಿದೆ. ಇದರಿಂದ ದೂರದೂರುಗಳಿಂದ ಬರುವ ಪೋಷಕರು, ಸಾರ್ವಜನಿಕರು ದಿನವಿಡಿ ಕಾಯುವಂತಾಗಿದೆ. ಈ ಬಗ್ಗೆ ತಹಸೀಲ್ದಾರ್ ಅವರು ಶೀಘ್ರವೇ ಗಮನ ಹರಿಸಿ ಮತ್ತೊಂದು ಕಂಪ್ಯೂಟರ್ ಹಾಗೂ ಕಂಪ್ಯೂಟರ್ ಅಪರೇಟರನ್ನು ನೇಮಕ ಮಾಡಿಕೊಟ್ಟು ಈ ಭಾಗದ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಮರಾಠಿಪಾಳ್ಯದ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...