ವಿಷಯಕ್ಕೆ ಹೋಗಿ

ಆರಂಭವಾಯ್ತು ಶಾಲೆ : ಶುರುವಾಯ್ತು ಜಾತಿ,ಆದಾಯ ಪ್ರಮಾಣ ಪತ್ರಕ್ಕೆ ನೂಕುನುಗ್ಗಲು

ಎಲ್ಲೆಡೆ ಶಾಲಾ-ಕಾಲೇಜುಗಳು ಆರಂಭಗೊಂಡಿದ್ದು ಶಾಲೆಯಲ್ಲಿ ಮಕ್ಕಳ ಪ್ರವೇಶಕ್ಕೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಬೇಕಾದ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪಡೆಯಲು ಪಟ್ಟಣದ ನಾಡಕಛೇರಿಯ ಆಟಲ್ ಜನಸ್ನೇಹಿಕೇಂದ್ರ ಪೋಷಕರುಗಳಿಂದ ತುಂಬಿ ತುಳುಕುತ್ತಿತ್ತು.

ವಿದ್ಯಾರ್ಥಿಗಳು ಹಾಗೂ ಅವರ ಪೋಷಕರುಗಳು ಪ್ರಮಾಣ ಪತ್ರಕ್ಕಾಗಿ ಅರ್ಜಿಸಲ್ಲಿಸಲು ನಾಡಕಛೇರಿಗೆ ಅಲೆದಾಡುತ್ತಿರುವ ದೃಶ್ಯ ಕಳೆದೊಂದುವಾರದಿಂದ ಸಾಮಾನ್ಯವಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಅನಾನುಕೂಲಗಳನ್ನು ತಪ್ಪಿಸಲು ಶಾಲೆಗಳಲ್ಲೇ ಅರ್ಜಿ ಪಡೆದು ಪ್ರಮಾಣ ಪತ್ರ ವಿತರಿಸಲು ಸರ್ಕಾರ ವ್ಯವಸ್ಥೆ ಮಾಡಿದ್ದರೂ ಕೂಡ ಕೇವಲ ಸರ್ಕಾರಿ ಶಾಲೆಗೆ ಮಾತ್ರ ಸೀಮಿತವಾಗಿರುವುದರಿಂದ ಖಾಸಗಿಶಾಲೆ ವಿದ್ಯಾರ್ಥಿಗಳು ಹಾಗೂ ಇನ್ನಿತರ ಉದ್ದೇಶಕ್ಕಾಗಿ ಬೇಕಾದ ಪ್ರಮಾಣಪತ್ರ ಪಡೆಯಲು ಅಟಲ್ ಜನಸ್ನೇಹಿ ಕೇಂದ್ರಕ್ಕೆ ಹೋಗಲೇ ಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಜಾತಿ, ಆದಾಯ ಪ್ರಮಾಣ ಪತ್ರಕ್ಕೆ ತಿಂಗಳುಗಟ್ಟಲೇ ಅಲೆದಾಟ ಮತ್ತು ಲಂಚದ ಕಾಟ ತಪ್ಪಿಸಲು ರಾಜ್ಯ ಸರ್ಕಾರ ಕಾಗದ ರಹಿತ ಪ್ರಮಾಣಪತ್ರ ನೀಡುವ ವ್ಯವಸ್ಥೆಯನ್ನು ತಂದಿರುವುದಾಗಿ ಹೇಳಿದರು ಸದ್ಯ ಅದಿನ್ನು ಜಾರಿಗೆ ಬಂದಿಲ್ಲ.
ವಿದ್ಯಾಭ್ಯಾಸಕ್ಕಾಗಿ ನೀಡುವ ಪ್ರಮಾಣ ಪತ್ರ ಅರ್ಜಿಸಲ್ಲಿಸಿದ ೨೧ ದಿನದ ಕಾಲಾವಕಾಶವಿದ್ದರೂ ಸದ್ಯ ೧೦ ದಿನದ ಒಳಗೆ ಪ್ರಮಾಣಪತ್ರ ನೀಡಲಾಗುತ್ತಿದ್ದರು ಸಹ ಕೆಲವೊಮ್ಮೆ ತಡವಾಗುವುದರಿಂದ ಪ್ರವೇಶಕ್ಕೆ ತೊಂದರೆ ಆಗುವುದೆಂಬ ಆತಂಕ ಪೋಷಕರಲ್ಲಿ ಮನೆ ಮಾಡಿದ್ದು , ಇದಕ್ಕಾಗಿ ಬಿಟ್ಟುಕೆಲಸಬಿಟ್ಟು ಬೆಳಿಗ್ಗೆಯಿಂದಲೇ ಕಛೇರಿಯ ಮುಂದೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಮಸ್ಯೆ ಏನು: ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಚೆಕ್ ಲಿಸ್ಟ್ ತೆಗೆಸಲು ಹೋಬಳಿ ವ್ಯಾಪ್ತಿಯ ಹಳ್ಳಿಯ ಪೋಷಕರು ತಮ್ಮ ಒಂದು ದಿನದ ಕೆಲಸವನ್ನು ಬಿಟ್ಟು ಪಟ್ಟಣದ ನಾಢಕಛೇರಿಗೆ ಬಂದರು ಸಹ ನಾಡಕಛೇರಿಯಲ್ಲಿನ ಆಟಲ್ ಜನಸ್ನೇಹಿ ಕೇಂದ್ರದಲ್ಲಿ ಇದನ್ನು ಹೊರತು ಪಡಿಸಿ ವಂಶವೃಕ್ಷ, ಜನನ,ಮರಣ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ದಾಖಲೆಗಳಿಗೂ ಅರ್ಜಿಗಳನ್ನು ಸ್ವೀಕರಿಸುತ್ತಿರುವುದರಿಂದ ತಡವಾಗುತ್ತಿದೆ. ಇದಕ್ಕಾಗಿ ಮೀಸಲಿರುವ ಒಂದೇ ಕಂಪ್ಯೂಟರ್ ನಲ್ಲಿ ಇರುವ ಒಬ್ಬ ಕಂಪ್ಯೂಟರ್ ಅಪರೇಟರ್ ಎಲ್ಲಾ ದಾಖಲೆಗಳನ್ನು ತೆಗೆದುಕೊಡಬೇಕಾಗಿದೆ. ಆತ ರಜಾ ಹಾಕಿದರೆ ಅನೇಕ ದಾಖಲೆಗಳನ್ನು ತೆಗೆದುಕೊಡಲು ಯಾರು ಇರದೆ ನಾಳೆ ಬನ್ನಿ ಎಂದು ಹೇಳುತ್ತಾರೆ.
ಶಾಲೆ ಪ್ರಾರಂಭಕ್ಕೂ ಮುಂಚೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಾಡಿಸೋಣ ಎಂದರೆ ಶಾಲಾದಾಖಲಾತಿ ಪತ್ರ ತನ್ನಿ ಎಂದು ವಾಪಸ್ಸ್ ಕಳಿಹಿಸುತ್ತಾರೆ. ಒಟ್ಟಾರೆ ಶಾಲಾದಾಖಲಾತಿ ಪತ್ರ ಬರೆಸಿಕೊಂಡು ಬಂದು ಅರ್ಜಿ ಹಾಕಲು ದಿನವಿಡಿ ಸರದಿ ಸಾಲಿನಲ್ಲಿ ನಿಲ್ಲುವಂತಾಗಿದೆ, ಈ ಹಿಂದೆ ಗ್ರಾಮಲೆಕ್ಕಿಗರಿಂದ ಕೈಬರಹದಲ್ಲಿಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುತ್ತಿದ್ದೆವು. ಇದೀಗ ವಾರಾನುಗಟ್ಟಲೇ ಕಾಯಬೇಕಿದ್ದು, ಅರ್ಜಿಯಲ್ಲಿ ಒಂದು ತಪ್ಪಾದರೆ, ಅದು ರಿಜೆಕ್ಟ್ ಆಗಿದೆ ಎನ್ನುತ್ತಾರೆ. ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಮತ್ತೆ ಒಂದುವರ ಕಾಯಬೇಕಿದೆ ಎಂದು ಪೋಷಕರು ತಿಳಿಸುತ್ತಾರೆ.

ಇದೀಗ ಅನೇಕ ದಾಖಲೆಗಳನ್ನು ಸರ್ಕಾರ ಗಣಕೀಕೃತವಾಗಿ ತರುವಂತೆ ಹೇಳಿದ್ದು, ಗಣಕೀಕೃತ ದಾಖಲೆ ಪಡೆಯಲು ಹರಸಾಹಕ ಪಡುವಂತಾಗಿದೆ. ಒಂದು ಇನ್ ಕಮ್ ಸರ್ಟಿಫೀಕೇಟ್ ಮಾಡಿಸಲು ೮ ರಿಂದ ೧೦ ದಿನವಾಗುತ್ತಿದೆ. ಪಟ್ಟಣದ ನಾಡಕಛೇರಿಯಲ್ಲಿ ಒಂದು ಕಂಫ್ಯೂಟರ್ ಹಾಗೂ ಒಬ್ಬ ಅಪರೇಟರ್ ಇದ್ದು ಕಾರ್ಯ ವಿಳಂಬವಾಗುತ್ತಿದೆ. ಇದರಿಂದ ದೂರದೂರುಗಳಿಂದ ಬರುವ ಪೋಷಕರು, ಸಾರ್ವಜನಿಕರು ದಿನವಿಡಿ ಕಾಯುವಂತಾಗಿದೆ. ಈ ಬಗ್ಗೆ ತಹಸೀಲ್ದಾರ್ ಅವರು ಶೀಘ್ರವೇ ಗಮನ ಹರಿಸಿ ಮತ್ತೊಂದು ಕಂಪ್ಯೂಟರ್ ಹಾಗೂ ಕಂಪ್ಯೂಟರ್ ಅಪರೇಟರನ್ನು ನೇಮಕ ಮಾಡಿಕೊಟ್ಟು ಈ ಭಾಗದ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಮರಾಠಿಪಾಳ್ಯದ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...